ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ತೆಲಂಗಾಣಕ್ಕೆ ತೆರಳಲಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಲಿರುವ ಅವರು ಕಾಂಗ್ರೆಸ್ ಪರ ಮತಯಾಚನೆ ಮಾಡುವರು. ಬೆಳಿಗ್ಗೆ 11.30ಗಂಟೆಗೆ ಸಿದ್ದರಾಮಯ್ಯ ಬೆಂಗಳೂರಿನಿಂದ ಹೈದರಾಬಾದ್ಗೆ ಹೊರಡಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳುವರು. ಕಾಮರೆಡ್ಡಿ ನಗರದಲ್ಲಿ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಮತಯಾಚಿಸುವರು. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಡಿ.ಕೆ.ಶಿವಕುಮಾರ್ ಕ್ಯಾಂಪೇನ್: ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ತೆಲಂಗಾಣದ ಕೋದಡ್ನಲ್ಲಿ ಪ್ರಚಾರ ನಡೆಸಲಿದ್ದಾರೆ. ಶುಕ್ರವಾರ …
Read More »Monthly Archives: ನವೆಂಬರ್ 2023
ಪಿಎಸ್ಐ ನೇಮಕಾತಿ ಹಗರಣ: ಇಂದು ಹೈಕೋರ್ಟ್ ತೀರ್ಪು,
ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ಕುರಿತ ತೀರ್ಪನ್ನು ಹೈಕೋರ್ಟ್ ಇಂದು ಪ್ರಕಟಿಸಲಿದೆ. ಸರ್ಕಾರದ ಆದೇಶ ರದ್ದು ಕೋರಿ ಎನ್.ವಿ.ಚಂದನ್ ಸೇರಿದಂತೆ ಪಿಎಸ್ಐ ಆಯ್ಕೆ ಪಟ್ಟಿಯಲ್ಲಿ ಹೆಸರಿದ್ದ 100 ಅಧಿಕ ಅಭ್ಯರ್ಥಿಗಳು ಸಲ್ಲಿಸಿರುವ ತಕರಾರು …
Read More »ಲೋಕಾಯುಕ್ತರಿಗೆ ದೂರು ನೀಡಬೇಕೇ? ಜಸ್ಟ್ ಇಷ್ಟು ಮಾಡಿ ಸಾಕು
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ (Karnataka Lokayukta) ನವೆಂಬರ್ 9 ರಂದು ವಿಜಯಪುರ ಜಿಲ್ಲೆಯ (Vijayapura News) ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ವಿಜಯಪುರ ಜಿಲ್ಲೆಯ ವ್ಯಾಪ್ತಿಯ ಸಾರ್ವಜನಿಕರು ತಮ್ಮಸಮಸ್ಯೆಯನ್ನ ಲಿಖಿತವಾಗಿ ಅಧಿಕಾತಿಗಳಿಗೆ ನೀಡಿ ಚರ್ಚಿಸಬಹುದಾಗಿದೆ. …
Read More »ಸರ್ಕಾರಿ ನಿವಾಸ, ಕಚೇರಿಗಳ ನವೀಕರಣಕ್ಕೆ ರಾಜ್ಯ ಸರ್ಕಾರದಿಂದ ದುಂದುವೆಚ್ಚ; ಯತ್ನಾಳ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ (Congress Govt) ಸರ್ಕಾರಿ ನಿವಾಸ ಮತ್ತು ಕಚೇರಿಗಳ ನವೀಕರಣದ ನೆಪದಲ್ಲಿ ದುಂದುವೆಚ್ಚ ಮಾಡುತ್ತಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಎಕ್ಸ್ನಲ್ಲಿ ಟ್ವೀಟ್ ಮಾಡಿರುವ ಬಸನ ಗೌಡ ಪಾಟೀಲ ಯತ್ನಾಳ್, ಭೀಕರ ಬರಗಾಲದ ನಡುವೆಯೂ ಸಿಎಂ ಮತ್ತು ಸಚಿವರದ್ದು ಬಿಂದಾಸ್ ದುನಿಯಾ ಎಂದು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಸಿಎಂ ಮತ್ತು …
Read More »ಶಾಲೆಯಲ್ಲಿ ಕುಕ್ಕರ್ ಬ್ಲಾಸ್ಟ್; ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಡುಗೆ ಸಿಬ್ಬಂದಿ
ಗ್ಯಾಸ್ ಒಲೆ ಮೇಲೆ 20 ಲೀಟರ್ ಕುಕ್ಕರ್ನಲ್ಲಿ 3 ಸೇರು ತೊಗರಿಬೇಳೆ ಬೇಯಿಸುತ್ತಿದ್ದಾಗ ವಿಜಿಲ್ ಬಾರದೇ ಏಕಾಏಕಿ ಸ್ಫೋಟಗೊಂಡಿದೆ. ಅದರಿಂದ ಕೊಠಡಿಯ ಚಾವಣಿ, ಅಕ್ಕಪಕ್ಕದ ಗೋಡೆಗೆ ತೊಗರಿಬೇಳೆ ಸಿಡಿದಿರುವುದು ಕಂಡು ಬಂದಿದೆ. ಸದ್ಯ ಬಿಸಿಯೂಟ ತಯಾರಿಸುವ ಪಾತ್ರೆ, ಇತರ ಸಾಮಾನುಗಳು ತುಂಬಾ ಹಳೆದಾಗಿವೆ. ಸುಸ್ಥಿತಿಯಲ್ಲಿ ಇಲ್ಲದ ಕಾರಣ ಒಂದಿಲ್ಲೊಂದು ಸಮಸ್ಯೆ ಎದುರಿಸುವಂತಾಗಿದೆ. 600 ವಿದ್ಯಾರ್ಥಿಗಳು ಇಲ್ಲಿ ಅಭ್ಯಾಸ ಮಾಡುತ್ತಿದ್ದು, ಶಿಕ್ಷಕರು ಪಾಠದ ಕಡೆ ಗಮನಹರಿಸಲು ಆಗದೇ ಬಿಸಿಯೂಟದ ಕಡೆಗೆ ಹೆಚ್ಚಿನ ಲಕ್ಷ್ಯ …
Read More »ಆಡಳಿತ ವೈಫಲ್ಯ ಖಂಡಿಸಿ ಸರ್ಕಾರದ ವಿರುದ್ಧ 3 ದಿನ ಧರಣಿ;B.S.Y.
ಬೆಂಗಳೂರು: ಶಾಸಕ ಮುನಿರತ್ನ ವಿರುದ್ಧ ಕಾಂಗ್ರೆಸ್ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಖಂಡಿಸಿ ಹಾಗು ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ವಿರೋಧಿಸಿ ತಿಂಗಳಾಂತ್ಯಕ್ಕೆ ಮೂರು ದಿನ ಸರ್ಕಾರದ ವಿರುದ್ಧ ಧರಣಿ ನಡೆಸಲಿದ್ದು ಬೆಳಗಾವಿ ಅಧಿವೇಶನದಲ್ಲಿಯೂ ಈ ವಿಚಾರವನ್ನು ಇರಿಸಿಕೊಂಡು ಬಿಜೆಪಿ ಹೋರಾಟ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ. ಆರ್.ಆರ್. ನಗರದಲ್ಲಿ ಅರ್ಧಕ್ಕೆ ನಿಂತಿರುವ ಕಾಮಗಾರಿಗಳ ವೀಕ್ಷಣೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಈ ರೀತಿಯ …
Read More »ಒಂಟಿ ಮಹಿಳೆ ರಕ್ಷಣೆ, ಸಾಂತ್ವನ ಕೇಂದ್ರದಲ್ಲಿ ಆಶ್ರಯ
ಕೊಪ್ಪಳ : ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಮಧ್ಯರಾತ್ರಿ ಒಂಟಿ ಮಹಿಳೆಯೊಬ್ಬರು ಸಹಾಯ ಕೋರಿ ನಿಂತಿದ್ದು, ಸ್ಥಳೀಯರು ಮಹಿಳೆಯನ್ನು ರಕ್ಷಣೆ ಮಾಡಿ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಮಾರುತಿ ವೃತ್ತದಲ್ಲಿ ನ. 8ರ ಬುಧವಾರ ತಡರಾತ್ರಿ ನಡೆದಿದೆ. ಟ್ರಕ್ ಚಾಲಕನೊಬ್ಬ ಮಧ್ಯ ವಯಸ್ಕ ಮಹಿಳೆಯನ್ನ ಶೌಚಕ್ಕೆ ಇಳಿಸಿ, ಪುನಃ ಹತ್ತಿಸಿಕೊಳ್ಳದೇ ಆಕೆಯನ್ನು ಬಿಟ್ಟು ಹೋಗಿದ್ದಾನೆ. ಮಹಿಳೆಯನ್ನು ವಿಚಾರಿಸಿದಾಗ ಓಡಿಶಾ ಮೂಲದ ಮಹಿಳೆ ಸಂಗೀತಾ ಎಂಬುವುದನ್ನು ಹೇಳಿಕೊಂಡಿದ್ದು, ಆಕೆ, ಪತಿಯೊಂದಿಗೆ …
Read More »ಸಚಿವ ಸತೀಶ್ ಜಾರಕಿಹೊಳಿ ಭೇಟಿ ಬಳಿಕ ಸಂಸದ ಡಿ ಕೆ ಸುರೇಶ್ ಹೇಳಿದ್ದೇನು?
ಬೆಂಗಳೂರು: ಸಂಸದ ಡಿ ಕೆ ಸುರೇಶ್ ಅವರು ಇಂದು ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ತೆರಳಿ ಅವರನ್ನು ಭೇಟಿ ಮಾಡಿದ್ದಾರೆ. ಮೊನ್ನೆಯಷ್ಟೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಠಾತ್ ಆಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದರು. ಇದೀಗ ಸಂಸದ ಸುರೇಶ್ ಅವರ ಭೇಟಿ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಅವರು, ನಮ್ಮ ಕಾರ್ಯಾಧ್ಯಕ್ಷರ ಜೊತೆಗೆ ಮಹತ್ತರವಾದ ಖಾತೆ ಹೊಂದಿದ್ದಾರೆ. ಮಳೆಯಿಂದ ರಸ್ತೆಗೆ ಗುಂಡಿಗಳು ಬಿದ್ದು, …
Read More »ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ ತಂಗಡಗಿ
ಬೆಂಗಳೂರು:ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಮೀಕ್ಷಾ ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನು ಕಾಂತರಾಜು ವರದಿಯನ್ನು ಜಾತಿ ಗಣತಿ ಎಂದು ಕರೆಯಲಾಗುತ್ತಿದೆ. ಮೂಲವಾಗಿ ಇದು ಜಾತಿಗಣತಿ ಸಮೀಕ್ಷೆ ಅಲ್ಲವೇ, ಅಲ್ಲ. ಇದು ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕವಾಗಿ ಸರಿಪಡಿಸುವ ಹಿನ್ನೆಲೆಯಲ್ಲಿ ವರದಿ ಸಿದ್ಧಪಡಿಸಲಾಗಿದೆ. ಅದನ್ನು ಹೊರತುಪಡಿಸಿ ಜಾತಿ …
Read More »ಮಂಗಳೂರು: ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ, ಕಾರಣ ನಿಗೂಢ
ಮಂಗಳೂರು: ಬ್ಯಾಂಕ್ನ ಹಿರಿಯ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಗುರುವಾರ ನಡೆದಿದೆ. ಬ್ಯಾಂಕ್ ಅಧಿಕಾರಿ ವಾದಿರಾಜ್(55) ಆತ್ಮಹತ್ಯೆ ಮಾಡಿಕೊಂಡವರು. ವಾದಿರಾಜ್ ಅವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮನೆಯವರು ಬಂದು ನೋಡಿದಾಗ ಅವರು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ. ವಾದಿರಾಜ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಬೆಳಗ್ಗೆ ಮಕ್ಕಳು ಕಾಲೇಜಿಗೆ ತೆರಳಿದ್ದರು. ಪತ್ನಿ ಕೂಡಾ …
Read More »