Breaking News

Monthly Archives: ನವೆಂಬರ್ 2023

ಐಟಿ ದಾಳಿ ವೇಳೆ 42 ಕೋಟಿ ರೂ. ಪತ್ತೆ ಪ್ರಕರಣ: ಹೃದಯಾಘಾತದಿಂದ ಗುತ್ತಿಗೆದಾರ ಅಂಬಿಕಾಪತಿ ಸಾವು

ಬೆಂಗಳೂರು: ಐಟಿ ದಾಳಿಯ ವೇಳೆ ಕೋಟಿ ಕೋಟಿ ಹಣ ಪತ್ತೆಯಾದ ವಿಚಾರದಲ್ಲಿ ಭಾರೀ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 6.40 ಸುಮಾರಿಗೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯಲ್ಲಿ ಅಂಬಿಕಾಪತಿ ಮೃತಪಟ್ಟಿದ್ದಾರೆ. ಕಳೆದ ತಿಂಗಳಷ್ಟೇ ಅಂಬಿಕಾಪತಿ ಮನೆಯ ಮೇಲೆ ಐಟಿ ದಾಳಿ ನಡೆದಾಗ 42 ಕೋಟಿ ರೂ. ಹಣ ಪತ್ತೆಯಾಗಿತ್ತು. ಈ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಯಾಗಿ ಆರೋಪ-ಪ್ರತ್ಯಾರೋಪಗಳಿಗೆ ಎಡೆಮಾಡಿಕೊಟ್ಟಿತ್ತು. ತಮ್ಮ ಮನೆಯಲ್ಲಿದ್ದ ಹಣ …

Read More »

ಜಾನಪದ ಲೋಕ ವಿದೇಶಗಳಿಗೂ ಮಾದರಿ: ಚಂದ್ರಶೇಖರ ಕಂಬಾರ ಬಣ್ಣನೆ

ಬೆಂಗಳೂರು ರಾಮನಗರದಲ್ಲಿ ನಾಗೇಗೌಡರು ನಿರ್ಮಿಸಿರುವ ಜಾನಪದ ಲೋಕವು ರಾಜ್ಯ, ದೇಶಕ್ಕೆ ಮಾತ್ರವಲ್ಲದೆ, ವಿದೇಶಗಳಿಗೂ ಮಾದರಿಯಾಗಿದೆ. ಇತ್ತೀಚೆಗೆ ಸ್ಪೇನ್, ಇಂಗ್ಲೆಂಡಿನಿಂದಲೂ ಜಾನಪದ ತಜ್ಞರು ಭೇಟಿ ಮಾಹಿತಿ ಪಡೆದಿದ್ದಾರೆಂದು ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಶ್ಲಾಘನೆ ವ್ಯಕ್ತಪಡಿಸಿದರು.   ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಜಾನಪದ ಪರಿಷತ್ತು ಆಯೋಜಿಸಿದ್ದ ನಾಡೋಜ ಎಚ್.ಎಲ್. ನಾಗೇಗೌಡ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಹಿಂದೊಮ್ಮೆ ಜಾನಪದ ಲೋಕದ ಬಗ್ಗೆ ರಷ್ಯಾದಲ್ಲಿ ಉಲ್ಲೇಖಿಸಿದ್ದ ಸಂದರ್ಭದಲ್ಲಿ ಅಲ್ಲಿನ ಕಲಾವಿದರು …

Read More »

ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ

ಬೆಂಗಳೂರು:ವಿಧಾನಸೌಧ ಸಚಿವಾಲಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಚಿತ್ತ ಬೆಳಗಾವಿಯತ್ತ ಹರಿದಿದೆ. ಜ.4ರಿಂದ ಪ್ರಾರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕೆ ತೆರಳಲು ಸಿದ್ಧತೆಗಳು ನಡೆದಿದ್ದು, ಆಫೀಸ್‌ನಲ್ಲಿ ಅಗತ್ಯವಿರುವುದನ್ನು ಪ್ಯಾಕಿಂಗ್ ಮಾಡಲಾಗುತ್ತಿದೆ. ಬೆಳಗಾವಿಗೆ ಏನೇನು ತೆಗೆದುಕೊಂಡು ಹೋಗಬೇಕು ಎನ್ನುವುದನ್ನು ಎರಡೆರಡು ಬಾರಿ ಖಚಿತಪಡಿಸಿಕೊಂಡು ಮೇಲಾಧಿಕಾರಿಗಳ ಅನುಮತಿ ಪಡೆದು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೆಳಗಾವಿಗೆ ಕಡತಗಳನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಂಕ್‌ಗಳನ್ನು ಮಾಡಿಸಿದ್ದು, ಆ ಮೂಲಕವೇ ಪ್ಯಾಕಿಂಗ್ ಮಾಡಲಾಗುತ್ತಿದೆ ಎಂದು ವಿಧಾನಸಭಾಧ್ಯಕ್ಷರ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ವಿಭಾಗಕ್ಕೂ ಪ್ರತ್ಯೇಕ …

Read More »

500 ಮಕ್ಕಳಿರುವ ಶಾಲೆಗಳನ್ನು ಕೆಪಿಎಸ್ ಎಂದು ಪರಿಗಣಿಸುವಂತೆ ಶಿಕ್ಷಣ ಇಲಾಖೆ ಸೂಚನೆ

ಒಂದೇ ಆವರಣದಲ್ಲಿ ಅಥವಾ 500 ಮೀ. ಅಂತರದಲ್ಲಿ 500 ವಿದ್ಯಾರ್ಥಿಗಳ ದಾಖಲಾತಿ ಹೊಂದಿರುವ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳೆಂದು ಪರಿಗಣಿಸುವಂತೆ ಸಮಗ್ರ ಶಿಕ್ಷಣ ಕರ್ನಾಟಕವು ನಿರ್ದೇಶನ ನೀಡಿದೆ. ರಾಜ್ಯದಲ್ಲಿ ಪ್ರಸ್ತುತ 285 ಕೆಪಿಎಸ್ ಶಾಲೆಗಳು ಕಾರ್ಯನಿರ್ವಹಿಸತ್ತಿವೆ. ಒಂದೇ ಸೂರಿನಡಿ ಪೂರ್ವ ಪ್ರಾಥಮಿಕದಿಂದ ಪದವಿ ಪೂರ್ವದವರೆಗೂ ಶಿಕ್ಷಣ ನೀಡುವ ಸಲುವಾಗಿ ಹಂತ ಹಂತವಾಗಿ ಒಂದು ಸಾವಿರ ಕೆಪಿಎಸ್ ಸ್ಥಾಪಿಸುವ ಗುರಿ ಹೊಂದಲಾಗಿದೆ. ಈ ಸಂಬಂಧ ಹಲವು ಜನಪ್ರತಿನಿಧಿಗಳು, ಸ್ಥಳೀಯ ಸಂಘ …

Read More »

ಪತ್ರಿಕಾ ವಿತರಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸ ಯೋಜನೆ ಜಾರಿ: ಸಚಿವ ಸಂತೋಷ್ ಲಾಡ್

ಬೆಂಗಳೂರು:ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂಧಿಸಿ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಭಿನಂದನೆ ಸ್ವೀಕರಿಸಿ …

Read More »

ಅರಭಾವಿ ಮಠಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ!

ಗೋಕಾಕ : ಅರಭಾವಿ ಮಠದ ಶ್ರೀ ದುರದುಂಡೇಶ್ವರ ಸಿದ್ಧಸಂಸ್ಥಾನ ಮಠಕ್ಕೆ ಇಂದು ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿದರು. ನಂತರ ಪೀಠಾಧಿಪತಿಗಳಾಗಿ ಶ್ರೀ ಮ.ನಿ.ಪ್ರ.ಸ್ವ. ಶ್ರೀ ಗುರು ಬಸವಲಿಂಗ ಮಹಾಸ್ವಾಮಿಜೀ ಅವರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಪ್ರಹ್ಲಾದ್ ನಾಡಿಗೇರ ಮುಖಂಡರಾದ ಶಂಕರ ಬಿಲಕುಂದಿ, ಮಾರುತಿ ವಿಜಯನಗರ ಹಾಗೂ ಮಠದ ಭಕ್ತರು ಉಪಸ್ಥಿತರಿದ್ದರು.

Read More »

ಗೋಕಾಕದಲ್ಲಿ ವ್ಯಾಪಾರ ವಹಿವಾಟು ಡೌನ್ ಆಯ್ತಾ…?

ಗೋಕಾಕ : ನಗರದಲ್ಲಿ ಎಲ್ಲಿ ಹೋದರು ಒಂದೇ ಮಾತು ಏನ್ರೀ ಮಾರ್ಕೆಟ್ ಪುಲ್ ಡೌನ್ ಆಗಿದೆ, ಯಾವುದೇ ವ್ಯಾಪಾರ ವಹಿವಾಟು ಹೆಚ್ಚಾಗಿ ನಡೆಯುತ್ತಿಲ್ಲ. ಮೊದಲ ಗೋಕಾಕ ಎಂದರೆ ಸಾಕು ವ್ಯಾಪಾರಕ್ಕೆ ಜನವೋ ಜನ,‌ ಆದರೆ ಇತ್ತೀಚೆಗೆ ಗೋಕಾಕ ತಾಲೂಕು ಮೂಡಲಗಿ ನೂತನ ತಾಲೂಕು ಆಗಿ ವಿಭಜನೆಯಾಗಿದ್ದರಿಂದ ವ್ಯಾಪಾರ ವಹಿವಾಟು ಸ್ವಲ್ಪ ಮಟ್ಟಿಗೆ ಕಡಿಮೆ ಆಗಿದೆ.   ಸಣ್ಣ ಪಾನ್ ಮಸಾಲ ಅಂಗಡಿಯಿಂದ ದೊಡ್ಡ ದೊಡ್ಡ ಅಂಗಡಿಗಳಲ್ಲಿ ವ್ಯಾಪಾರ ಮಾಡುವ ಜನರೂ …

Read More »

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ

ಘಟಪ್ರಭಾ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರು ಉತ್ತಮ ಇಳುವರಿಯ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸುವ ಮೂಲಕ ಕಾರ್ಖಾನೆಯ …

Read More »

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಹಿರಂಗಪಡಿಸಬೇಕು ಎಂಬ ಸುಪ್ರೀಂ ಕೋರ್ಟ್ ನಿರ್ದೇಶನ ಪಾಲಿಸಲು ಅಭ್ಯರ್ಥಿಗಳು ಬಾಕಿಯಿರುವ ಕ್ರಿಮಿನಲ್ ಕೇಸ್‌ಗಳ ವಿವರ ನೀಡಲು ಪ್ರತ್ಯೇಕ ನಮೂನೆಯನ್ನು ಒದಗಿಸಬೇಕು ಎಂದು ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.   ಕ್ರಿಮಿನಲ್ ಪ್ರಕರಣಗಳ ಮಾಹಿತಿ ನೀಡುವಂತೆ ಆದೇಶಿಸಿದ್ದ ಏಕ ಸದಸ್ಯಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ಕೃಷ್ಣ ಎಸ್.ದೀಕ್ಷಿತ್ ಅವರಿದ್ದ …

Read More »

ಚಿತ್ರ ನಿರ್ದೇಶಕ ರಾಕ್​ಲೈನ್ ವೆಂಕಟೇಶ್‌ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ ನೇಪಾಳ ಮೂಲದ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ವಿದೇಶ ಪ್ರವಾಸಕ್ಕೆ ತೆರಳಿದ್ದ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಎಸಗಿದ್ದ 7 ಜನ ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನೇಪಾಳ ಮೂಲದ ಉಪೇಂದ್ರ ಬಹದ್ದೂರ್ ಶಾಹಿ, ನಾರಾ ಬಹದ್ದೂರ್ ಶಾಹಿ, ಖಾಕೇಂದ್ರ ಬಹದ್ದೂರ್ ಶಾಹಿ, ಕೋಮಲ್ ಶಾಹಿ, ಸ್ವಸ್ತಿಕ್ ಶಾಹಿ, ಪಾರ್ವತಿ ಶಾಹಿ ಹಾಗೂ ಶಾದಲ ಶಾಹಿ ಎಂದು ಗುರುತಿಸಲಾಗಿದೆ. ಬಂಧಿತರ ಪೈಕಿ ಆರೋಪಿಯೊಬ್ಬ ಭ್ರಮರೇಶ್ ಮನೆಯ ಪಕ್ಕದಲ್ಲೇ ನಿರ್ಮಾಣ …

Read More »