Breaking News

Daily Archives: ಡಿಸೆಂಬರ್ 2, 2023

ಪ್ರೊ ಕಬಡ್ಡಿ ಲೀಗ್‌ನ ಹತ್ತನೇ ಆವೃತ್ತಿಗೆ ಇಂದು ಚಾಲನೆ

ಅಹಮದಾಬಾದ್: ಒಂಬತ್ತು ಆವೃತ್ತಿಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಪ್ರೊ ಕಬಡ್ಡಿ ಲೀಗ್‌ನ ಹತ್ತನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಅಹಮದಾಬಾದ್​​ನ ಅಕ್ಷರ್ ರಿವರ್ ಕ್ರೂಸ್​​ನಲ್ಲಿ ಶುಕ್ರವಾರ ಪ್ರೊ ಕಬಡ್ಡಿ ಲೀಗ್ 10ನೇ ಆವೃತ್ತಿಗೆ ಸಾಂಕೇತಿಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪಿಕೆಎಲ್ 9ನೇ ಆವೃತ್ತಿಯ ವಿಜೇತ ತಂಡದ ನಾಯಕ ಸುನಿಲ್ ಕುಮಾರ್ (ಜೈಪುರ ಪಿಂಕ್ ಪ್ಯಾಂಥರ್ಸ್) ಮತ್ತು 10ನೇ ಆವೃತ್ತಿಯ ಆರಂಭಿಕ ಪಂದ್ಯದ ನಾಯಕರಾದ ಪವನ್ ಶೆಹ್ರಾವತ್ (ತೆಲುಗು ಟೈಟಾನ್ಸ್) ಮತ್ತು ಫಜಲ್ …

Read More »

ರಾಜ್ಯಾದ್ಯಂತ ಸಂಚಲನ ಮೂಡಿಸಿರುವ ಹುಸಿ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕು

ಬೆಂಗಳೂರು: ರಾಜಧಾನಿ ಹಾಗೂ ಗ್ರಾಮಾಂತರ ಜಿಲ್ಲೆ‌ ಸೇರಿ 60 ಶಾಲೆಗಳಿಗೆ ಹುಸಿ ಬಾಂಬ್ ಕರೆ ಸಂಬಂಧ ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹುಸಿ ಬಾಂಬ್ ಇಮೇಲ್ ಸಂದೇಶ‌ ಎಲ್ಲಿಂದ ಬಂದಿದೆ? ಎಂಬುದರ ಬಗ್ಗೆ ಪತ್ತೆ ಹಚ್ಚುವ ಕಾಯಕದಲ್ಲಿ ಪೊಲೀಸರು ತೊಡಗಿಸಿಕೊಂಡಿದ್ದಾರೆ. ವಿಶೇಷ ತಂಡ ರಚಿಸಿ ಇಮೇಲ್​ನ ಐಪಿ ಅಡ್ರೆಸ್ ಟ್ರೇಸ್ ಮಾಡುತ್ತಿದ್ದಾರೆ. ಈಗಾಗಲೇ ಸರ್ವರ್ ಪ್ರೊವೈಡರ್​ಗಳಿಗೆ ಪತ್ರ ಬರೆದು ಮಾಹಿತಿ ಕೇಳಿದ್ದಾರೆ. ತನಿಖೆ ಕೈಗೊಂಡಿರುವ ಸ್ಥಳೀಯ …

Read More »

ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ

ಬೈಲಹೊಂಗಲ: ತಾಲ್ಲೂಕಿನ ಮುರಗೋಡ, ಸೊಗಲ, ಕಾರಿಮನಿ, ಹೊಸೂರ ಗ್ರಾಮಗಳ ಸುತ್ತಮುತ್ತ ಧಾರಾಕಾರ ಮಳೆ ಸುರಿಯಿತು. ತಾಸಿಗೂ ಹೆಚ್ಚು ಸಮಯ ಸುರಿದ ಮಳೆಯಿಂದ‌ ಹಳ್ಳ, ಕಾಲುವೆ, ಚರಂಡಿಗಳು ತುಂಬಿ ಹರಿದವು. ದಕ್ಷಿಣ ಕಾಶಿ ಎಂದೇ ಹೆಸರಾದ ‘ಸೊಗಲ ಸೋಮೇಶ್ವರ’ ಕ್ಷೇತ್ರದ ಎರಡು ಜಲಪಾತಗಳಿಗೆ ಮಳೆಯಿಂದಾಗಿ ಮತ್ತೆ ಜೀವಕಳೆ ಬಂದಿದೆ. ದೇವಸ್ಥಾನದ ಕಿರು ಕಾಲುವೆಗಳೂ ತುಂಬಿದವು. ಕೆಲ ಗ್ರಾಮಗಳಲ್ಲಿ ಬಿರಿಗಾಳಿಗೆ ಹಲವು ಕಡೆ ವಿದ್ಯುತ್ ಕಂಬಗಳ ವಾಲಿದವು. ಜಮೀನುಗಳಲ್ಲಿ ಮಳೆ ನೀರು ನಿಂತು …

Read More »

ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.   ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ …

Read More »