ಗೋಕಾಕ ಜಿಲ್ಲೆಯಾದರೆ ಶಾಂತಿ ಇಲ್ಲವಾದರೆ ಕ್ರಾಂತಿ ,ಗೋಕಾಕ ಜಿಲ್ಲೆಗಾಗಿ ಬೃಹತ್ ಹೋರಾಟ. ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, …
Read More »Daily Archives: ಡಿಸೆಂಬರ್ 13, 2023
ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿ
ಬೆಳಗಾವಿ: ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. 30 ವರ್ಷಗಳಿಂದ ಕುಟುಂಬದೊಂದಿಗೆ ಶೆಡ್ನಲ್ಲಿ ವಾಸವಿದ್ದ ವಿಕಲಚೇತನನ ಮನೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿ ಅಟ್ಟಹಾಸ ಮೆರೆದಿರುವ ಆರೋಪ ಗೋಕಾಕ ತಾಲೂಕಿನ ಉದಗಟ್ಟಿ ಗ್ರಾಮದಿಂದ ತಡವಾಗಿ ಬೆಳಕಿಗೆ ಬಂದಿದೆ. ಹಾಡಹಗಲೇ ಬಡಿಗೆ ಕೋಲುಗಳಿಂದ ಮನೆ ಒಡೆದು ಧ್ವಂಸಗೊಳಿಸಲಾಗಿದೆ. ಉದಗಟ್ಟಿ ಗ್ರಾಮದ ಸಿದ್ದಪ್ಪ ಅಪ್ಪಯ್ಯ ತುರಬಿ (44) ವಾಸವಿದ್ದ ಪತ್ರಾಸ್ ಶೆಡ್ ಇದಾಗಿದೆ. ಆಸ್ತಿ ವಿವಾದದ ಕಲಹಕ್ಕೆ ವಿಕಲಚೇತನನ ಮನೆ ಬಲಿಯಾಗಿದೆ ಎಂದು ಸಂತ್ರಸ್ತ ಸಿದ್ದಪ್ಪ …
Read More »ಏಕವಚನದಲ್ಲಿ ಬೈದಾಡಿಕೊಂಡ ಜನಾರ್ದನ್ ರೆಡ್ಡಿ, ಭರತ್ ರೆಡ್ಡಿ
ಬೆಳಗಾವಿ: ವಿಧಾನಸಭೆಯಲ್ಲಿ ಮಂಗಳವಾರ ಬಳ್ಳಾರಿ ರಾಜಕೀಯ ಗುದ್ದಾಟ ಜೋರಾಗಿತ್ತು. ಸದನ ಜನಾರ್ದನ ರೆಡ್ಡಿ ಹಾಗೂ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಉತ್ತರ ಕರ್ನಾಟಕ ಚರ್ಚೆಯ ವೇಳೆ ಮಾತನಾಡುವಾಗ ಕಾಂಗ್ರೆಸ್ ಶಾಸಕ ನಾ ರಾ ಭರತ್ರೆಡ್ಡಿ, ಬ್ರಾಹ್ಮಿಣಿ ಸ್ಟೀಲ್ಸ್ ಸಂಸ್ಥೆ, ಬಳ್ಳಾರಿ ಜಿಲ್ಲೆಯಲ್ಲಿ 10 ಸಾವಿರ ಎಕರೆ ಜಮೀನನ್ನು ಬಲವಂತವಾಗಿ ರೈತರಿಂದ ವಶಪಡಿಸಿಕೊಂಡಿತ್ತು. ರೈತರ ಮೇಲೆ ಗೂಂಡಾಗಿರಿ ಮಾಡಿ ಭೂಮಿಯನ್ನ ಕಿತ್ತುಕೊಂಡಿದ್ದ ವ್ಯಕ್ತಿಗಳು ಈಗ ನಮ್ಮಿಂದಲೇ ಬಳ್ಳಾರಿ ಅಭಿವೃದ್ಧಿಯಾಗಿದೆ ಎನ್ನುತ್ತಿದ್ದಾರೆ. …
Read More »”ಸಕ್ಕರೆ ಕಾರ್ಖಾನೆಗಳಲ್ಲಿ ತೂಕದ ಯಂತ್ರ ಡಿಜಿಟಲೀಕರಣಗೊಳಿಸಲು ಸರ್ಕಾರ ಸೂಚನೆ ನೀಡಿದೆ”
ಬೆಳಗಾವಿ: ”ಕಬ್ಬಿನ ತೂಕದಲ್ಲಿ ಆಗುತ್ತಿರುವ ಮೋಸವನ್ನು ನಿಯಂತ್ರಿಸಲು ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿನ ತೂಕದ ಯಂತ್ರಗಳ ಡಿಜಿಟಲೀಕರಣಕ್ಕೆ ಸರ್ಕಾರ ಸೂಚನೆ ನೀಡಿದೆ. ಈ ಸಂಬಂಧ ಕಾರ್ಖಾನೆಗಳ ಮಾಲೀಕರಿಗೆ 15 ದಿನಗಳ ಗಡುವು ನೀಡಲಾಗಿದೆ” ಎಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವ ಕೆ ಹೆಚ್ ಮುನಿಯಪ್ಪ ತಿಳಿಸಿದರು. ಸುವರ್ಣಸೌಧಲ್ಲಿ ಮಂಗಳವಾರ ಸಚಿವ ಶಿವಾನಂದ ಪಾಟೀಲ್, ಶಾಸಕ ಲಕ್ಷ್ಮಣ ಸವದಿ ಸೇರಿದಂತೆ ಕಬ್ಬು ಬೆಳೆಯುವ ಪ್ರದೇಶಗಳ ವ್ಯಾಪ್ತಿಯ ಜನಪ್ರತಿನಿಧಿಗಳು, ಕಾನೂನು …
Read More »34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ :ಎಂ.ಬಿ.ಪಾಟೀಲ
ಬೆಳಗಾವಿ:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಒಟ್ಟು 34,115 ಕೋಟಿ ರೂ ಮೊತ್ತದ ಬಂಡವಾಳ ಹೂಡಿಕೆ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಯಿತು. ಸಿಎಂ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ, ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ ಕಂಪನಿ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ …
Read More »ಬೆಳಗಾವಿ ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲಿಸಲಾಗುವುದು ಎಂದ ಸಿಎಂ
ಬೆಳಗಾವಿ : ಸುವರ್ಣಸೌಧದಲ್ಲಿ ಕ್ಯಾಬಿನೆಟ್ ಸಭೆ ನಡೆಸುವ ಬೇಡಿಕೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಲ್ಲಿ ಕ್ಯಾಬಿನೆಟ್ ಸಭೆಗಳನ್ನು ನಡೆಸಬೇಕು ಎನ್ನುವುದೂ ಸೇರಿ ಬಿ.ಎಲ್.ಶಂಕರ್ ಅವರು ನೀಡಿದ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಆ ಬಗ್ಗೆ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು. ಸುವರ್ಣ ಸೌಧದ ವೈಭವದ ಹೊರ ಆವರಣದಲ್ಲಿ ನಡೆದ “ಕರ್ನಾಟಕ” ನಾಮಕರಣ ಸುವರ್ಣ ಮಹೋತ್ಸವದಲ್ಲಿ ಮಾತನಾಡಿದ ಸಿಎಂ, ತ್ಯಾಗ ಮತ್ತು ಬಲಿದಾನದ ಮೂಲಕ ನಾಡು ಏಕೀಕರಣಗೊಂಡು ಕನ್ನಡ …
Read More »ಬರ, ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಚರ್ಚಿಸಬೇಕು, ಧರಣಿ ಕೈಬಿಡಿ: ಪ್ರತಿಪಕ್ಷಗಳಿಗೆ ಪರಮೇಶ್ವರ್ ಮನವಿ
ಬೆಂಗಳೂರು / ಬೆಳಗಾವಿ:ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಯನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ನಿನ್ನೆಯಿಂದ ನಡೆಸುತ್ತಿದ್ದ ಧರಣಿ ಹಿಂಪಡೆದರು. ವಿಧಾನಸಭೆಯ ಕಲಾಪದ ಆರಂಭದಲ್ಲೇ ಪ್ರತಿಪಕ್ಷಗಳ ಶಾಸಕರು ಧರಣಿಯನ್ನು ಮುಂದುವರೆಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಮಾತನಾಡಿ, ಇಡೀ ದೇಶವೇ ನಮ್ಮನ್ನು ನೋಡುತ್ತಿದೆ. ಇಲ್ಲಿ ಗಂಭೀರ ಚರ್ಚೆಗಳು ನಡೆಯಬೇಕು. ನಿನ್ನೆಯಿಂದಲೂ ಧರಣಿ ನಡೆಸುತ್ತಿದ್ದೀರಿ. ಇದರಿಂದಾಗಿ ಪ್ರಶ್ನೋತ್ತರ ಕಲಾಪ, ಶೂನ್ಯವೇಳೆ ಗಮನ ಸೆಳೆಯುವ …
Read More »