ಬೆಳಗಾವಿ : ವಿವಿಧ ಸಂಘ ಸಂಸ್ಥೆಗಳು ತಮ್ಮ ಬೇಡಿಕೆ ಈಡೇರಿಸುವಂತೆ ಕಳೆದ 9 ದಿನಗಳಿಂದ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯುತ್ತಿವೆ. ಇಂದು ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ವಿವಿಧ ಬೇಡಿಕೆ ಮುಂದಿಟ್ಟರು. ಕಾರ್ಮಿಕ ಮಂಡಳಿಯ ಅಡಿ ಮಧ್ಯಪಾನ ಪ್ರಿಯರ ಕಲ್ಯಾಣ ನಿಧಿ ಸ್ಥಾಪಿಸಬೇಕು. ವಾರ್ಷಿಕ ಆದಾಯದಲ್ಲಿ ಶೇ.10ರಷ್ಟು ಕಲ್ಯಾಣ ನಿಧಿಗೆ ವರ್ಗಾಯಿಸಬೇಕು. ಮಧ್ಯಪಾನ …
Read More »Daily Archives: ಡಿಸೆಂಬರ್ 14, 2023
ಅರಣ್ಯಭೂಮಿ ಗಡಿ ಗುರುತಿಸಲು ಕಂದಾಯ ಅರಣ್ಯ ಇಲಾಖೆ ಜಂಟಿ ಸರ್ವೆ: ಸಚಿವ ಈಶ್ವರ್ ಖಂಡ್ರೆ
ಬೆಳಗಾವಿ(ಬೆಂಗಳೂರು) :ಅರಣ್ಯ ಭೂಮಿ ಗಡಿ ಗುರುತಿಸಿ ನಿಖರ ನಕ್ಷೆ ಮಾಡುವ ಸಲುವಾಗಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಜಂಟಿ ಸರ್ವೆ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಹರೀಶ್ ಪೂಂಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮೀಕ್ಷೆಯನ್ನು ಕಾಲಮಿತಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಕರ್ನಾಟಕ ಅರಣ್ಯ ನಿಯಮದ ಪ್ರಕಾರ ಜಿಲ್ಲಾ ಅರಣ್ಯ ಅಥವಾ ರಕ್ಷಿತ ಅರಣ್ಯಕ್ಕೆ ಹೊಂದಿಕೊಂಡಂತೆ ಇರುವ …
Read More »ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಸ್ತಾವನೆ: ದಿನೇಶ್ ಗುಂಡೂರಾವ್
ಬೆಂಗಳೂರು/ ಬೆಳಗಾವಿ : ರಾಜ್ಯದಲ್ಲಿ ಘೋಷಣೆಯಾದ ಹೊಸ ತಾಲೂಕು ಕೇಂದ್ರಗಳ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಯಲ್ಲಿ ಹೇಳಿದ್ದಾರೆ. ಗುರುವಾರ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಹೊಸದಾಗಿ ಘೋಷಣೆಯಾದ ತಾಲೂಕು ಕೇಂದ್ರಗಳ ಬಹಳಷ್ಟು ಆಸ್ಪತ್ರೆಗಳು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೆ ಏರಿಕೆಯಾಗಿಲ್ಲ. ಇದರೊಂದಿಗೆ ರಾಜ್ಯದಲ್ಲಿ 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಹ …
Read More »ಕೇಂದ್ರದ ಗೃಹ ಸಚಿವ ಹಾಗೂ ಪ್ರಧಾನಿ ಮೋದಿ ಪಾರ್ಲಿಮೆಂಟ್ನಲ್ಲಿ ಆಗಿರುವ ಭದ್ರತಾ ಲೋಪದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ಇರುವುದು ಆಶ್ಚರ್ಯ
ಬೆಳಗಾವಿ: ಸಂಸತ್ತಿನ ಇತಿಹಾಸದಲ್ಲಿ ಆಗದೇ ಇರುವ ಭದ್ರತಾ ಲೋಪವನ್ನು ಇಡೀ ವಿಶ್ವವೇ ನೋಡಿದೆ. ಈ ಬಗ್ಗೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ ಹೇಳಿಕೆ ನೀಡದೇ ಇರುವುದು ಆಶ್ಚರ್ಯವಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಹೊಸದಾಗಿ ಸಂಸತ್ ನಿರ್ಮಿಸಿದ್ದೇವೆ. ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಮಾಡಿದ್ದೇವೆ ಎಂದು ಹೇಳುವಾಗ ಇಬ್ಬರು ಯುವಕರು ಗ್ಯಾಲರಿಗೆ ಬಂದು, ಅಲ್ಲಿಂದ ಜಿಗಿದು ನೇರವಾಗಿ ಸದನದ …
Read More »ನಾನು ಸಿಎಲ್ಪಿ ಸಭೆಗೆ ಹೋಗಿಲ್ಲ, ನಾನು ಡಿಸಿಎಂ ಕರೆದ ಭೋಜನಕೂಟಕ್ಕೆ ಹೋಗಿದ್ದೆ
ಬೆಳಗಾವಿ : ನಾನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹೋಗಿಲ್ಲ. ನಾನು ಡಿಸಿಎಂ ಡಿಕೆ ಶಿವಕುಮಾರ್ ಕರೆದ ಭೋಜನಕೂಟಕ್ಕೆ ಮಾತ್ರ ಹೋಗಿದ್ದು ಎಂದು ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಹಾಜರಾದ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾನು ನಿನ್ನೆ 8 ಗಂಟೆಯಿಂದ 10 ಗಂಟೆ ತನಕ ವಿಜಯೇಂದ್ರ ಜೊತೆಗೆ ಇದ್ದೆ. ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಭೋಜನ ಕೂಟ ಇಟ್ಟುಕೊಂಡಿದ್ದರು. ಅವರ …
Read More »ವಿಧಾನ ಪರಿಷತ್ನಲ್ಲಿ ನಾಲ್ಕು ವಿಧೇಯಕಗಳಿಗೆ ಅಂಗೀಕಾರ
ಬೆಳಗಾವಿ/ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕ-2023, ಕರಾವಳಿ ಅಭಿವೃದ್ಧಿ ಮಂಡಳಿ ವಿಧೇಯಕ-2023 ಸೇರಿದಂತೆ ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ ನಾಲ್ಕು ವಿವಿಧ ವಿಧೇಯಕಗಳಿಗೆ ವಿಧಾನ ಪರಿಷತ್ನಲ್ಲಿ ಡಿಸೆಂಬರ್ 13ರಂದು ಅಂಗೀಕಾರ ದೊರೆಯಿತು. ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿರುವ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಪರ್ಯಾಯಲೋಸಲು ಮುಖ್ಯಮಂತ್ರಿಗಳ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಕೋರಿದರು. 2023ನೇ ಸಾಲಿನ …
Read More »