Breaking News

Daily Archives: ಡಿಸೆಂಬರ್ 16, 2023

ಮಹಿಳೆ ವಿವಸ್ತ್ರಗೊಳಿಸಿ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಅಮಾನತು

ಬೆಳಗಾವಿ: ಇಲ್ಲಿಯ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್​ ವಿಜಯಕುಮಾರ ಸಿನ್ನೂರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಆದೇಶ ಹೊರಡಿಸಿದ್ದಾರೆ.   ಹೈಕೋರ್ಟ್ ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಸರ್ಕಾರಕ್ಕೆ ಮತ್ತು ಪೊಲೀಸ್ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತ ಎಸ್ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಬಾಡಿಗೆಗೂ ಕೊಠಡಿ ಸಿಗದೆ ಗ್ರಾಮಸ್ಥರೇ ನಿರ್ಮಿಸಿದ್ರು ಅಂಗನವಾಡಿ ಕೇಂದ್ರ

ಕಾರವಾರ : ಬಾಲ್ಯ ಶಿಕ್ಷಣದಿಂದ ವಂಚಿತರಾಗುವುದನ್ನು ತಪ್ಪಿಸಲು ಸರ್ಕಾರ ಅಂಗನವಾಡಿಗಳನ್ನು ತೆರೆದಿದೆ. ಆದರೆ, ಉತ್ತರಕನ್ನಡ ಜಿಲ್ಲೆಯ ಅದೆಷ್ಟೋ ಕಡೆ ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳೇ ಇಲ್ಲ. ಇದ್ದ ಕೆಲ ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿ ಬಾಡಿಗೆ ಕಟ್ಟಡದಲ್ಲಿ ನಡೆಸುತ್ತಿದ್ದರೂ ಕೆಲ ತಿಂಗಳಿಂದ ಬಾಡಿಗೆ ಕೂಡ ಕಟ್ಟಿಲ್ಲ. ಹೀಗಾಗಿ, ಕಟ್ಟಡ ಮಂಜೂರಾಗುವುದೆಂದು ಕಾದು ಕುಳಿತಿದ್ದ ಗ್ರಾಮದ ಜನರು ಸರ್ಕಾರದ ವಿಳಂಬ ನೀತಿಗೆ ರೋಸಿ ಹೋಗಿ ಕೊನೆಗೆ ತಾತ್ಕಾಲಿಕ ಅಂಗನವಾಡಿಯೊಂದನ್ನು ನಿರ್ಮಿಸಿಕೊಂಡಿದ್ದಾರೆ. ಹೌದು, ಒಂದೆಡೆ ಶಿಥಿಲಾವಸ್ಥೆ ತಲುಪಿ …

Read More »

ಹೆಚ್ಚುವರಿ ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ

ಬೆಂಗಳೂರು : ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೆ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಪಾಲಿಕೆ ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೆ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, …

Read More »

ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್​-ಆಟೋ ಮಧ್ಯೆ ಅಪಘಾತ; ಐವರು ಸಾವು

ಮಲಪ್ಪುರಂ(ಕೇರಳ): ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ. ನಿನ್ನೆ ಸಂಜೆ ಆರು ಗಂಟೆಗೆ ಮಂಚೇರಿ-ಅರೀಕೋಡು ರಸ್ತೆಯ ಚೆಟ್ಟಿಅಂಗಡಿ ಎಂಬಲ್ಲಿ ಅಪಘಾತ ನಡೆದಿದೆ. ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಕರ್ನಾಟಕ ಬಸ್ ಮತ್ತು ಆಟೋ ಮಧ್ಯೆ ಅಪಘಾತವಾಗಿದೆ. ಆಟೋ ಚಾಲಕ ಮಜೀದ್, …

Read More »

ಮಧ್ಯಮಾವಧಿ, ದೀರ್ಘಾವಧಿ ಸಾಲದ ಅಸಲು ಕಟ್ಟಿದರೆ ಸಂಪೂರ್ಣ ಬಡ್ಡಿ ಮನ್ನಾ: ಸಿಎಂ

ಬೆಳಗಾವಿ/ಬೆಂಗಳೂರು: ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ. ಬಿಜೆಪಿಯವರು 2018ರ ತಮ್ಮ ಪ್ರಣಾಳಿಕೆಯಲ್ಲಿ “ನಮ್ಮ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕು ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು” …

Read More »

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ

ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಗೋಕಾಕ: ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು …

Read More »

ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ: ಬಾಲಚಂದ್ರ ಜಾರಕಿಹೊಳಿ

ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …

Read More »

ಡಿಕೆಶಿ ವಿರುದ್ಧದ ಪ್ರಕರಣದ ಸಿಬಿಐ ತನಿಖೆ ಚರ್ಚೆಗೆ ಅವಕಾಶ ನಿರಾಕರಿಸಿದ ಸಭಾಪತಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ವಾಪಸ್ ಪಡೆದ ರಾಜ್ಯ ಸರ್ಕಾರದ ಕ್ರಮದ ಕುರಿತು ಚರ್ಚಿಸಲು, ಅವಕಾಶ ಕೋರಿ ಬಿಜೆಪಿ ಮಂಡಿಸಿದ ನಿಲುವಳಿ ಸೂಚನೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ರೂಲಿಂಗ್ ನೀಡಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಡೆಯ ದಿನವಾದ ಇಂದು ವಿಧಾನ ಪರಿಷತ್​ನಲ್ಲಿ ಬಿಜೆಪಿ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ, ಸಾರ್ವಜನಿಕ ಮಹತ್ವದ ವಿಷಯದಡಿ ಡಿ.ಕೆ.ಶಿವಕುಮಾರ್ …

Read More »