Breaking News

Daily Archives: ಡಿಸೆಂಬರ್ 21, 2023

ಬೆಳಗಾವಿಯಲ್ಲಿ ಶನಿವಾರ ಭಗವದ್ಗೀತೆ ಮಹಾಸಮರ್ಪಣೆ: ಶ್ರೀಮದ್ ಗಂಗಾಧರೇಂದ್ರ ಸ್ವಾಮೀಜಿ ಮಾಹಿತಿ

ಬೆಳಗಾವಿ: ಕಳೆದ ಒಂದು ತಿಂಗಳಿನಿಂದ ಬೆಳಗಾವಿ ಕೇಂದ್ರಿತವಾಗಿ ರಾಜ್ಯಾದ್ಯಂತ ನಡೆಯುತ್ತಿರುವ ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ ಶನಿವಾರ ಬೆಳಗಾವಿಯಲ್ಲಿ ನಡೆಯಲಿದೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾಹಿತಿ ನೀಡಿದರು. ಈ ಕುರಿತು ಬೆಳಗಾವಿಯಲ್ಲಿ ಶ್ರೀಗಳು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಳಗಾವಿಯ ಕಾಲೇಜು ರಸ್ತೆಯ ಲಿಂಗರಾಜ ಕಾಲೇಜು ಮೈದಾನದಲ್ಲಿ ಅಂದು ಸಂಜೆ 4 ಗಂಟೆಯಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು ಸಾನ್ನಿಧ್ಯ …

Read More »

ರಕ್ತದಾನದ ಮೂಲಕ ಅತಿಥಿ ಉಪನ್ಯಾಸಕರ ವಿನೂತನ ಪ್ರತಿಭಟನೆ

ಚಿಕ್ಕೋಡಿ(ಬೆಳಗಾವಿ): ಸೇವಾ ಖಾಯಮಾತಿಗಾಗಿ ಒತ್ತಾಯಿಸಿ ಕಳೆದ 28 ದಿನಗಳಿಂದ ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರಿದಿದೆ. ಈ ನಿಟ್ಟಿನಲ್ಲಿ ಸರ್ಕಾರ ಗಮನ ಸೆಳೆಯಲು ರಕ್ತದಾನ ಮಾಡಿ ವಿನೂತನವಾಗಿ ಚಿಕ್ಕೋಡಿಯಲ್ಲಿ ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಾದ್ಯಂತ ಕಳೆದ ಒಂದು ತಿಂಗಳಿನಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಆಯಾ ತಾಲೂಕು ತಹಶೀಲ್ದಾರ್ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ 14 ಸಾವಿರ ಅತಿಥಿ …

Read More »

ಅಥರ್ವ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

.ಗೋಕಾಕ : ನಗರದಲ್ಲಿರುವ ಡಾ ಬೀರನಗಡ್ಡಿ ಅವರ ಅಥರ್ವ ಆಸ್ಪತ್ರೆಯ ನೂತನ ಕಟ್ಟಡದ ವಾಸ್ತು ಶಾಂತಿ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಡಾ.ಬೀರನಗಡ್ಡಿ ಅವರ ಅಥರ್ವ ಆರ್ಥೋ ಮತ್ತು ಟ್ರಾಮಾ ಕೇರ್ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿದೆ. ಈ ಸಂದರ್ಭದಲ್ಲಿ ಸಚಿವರ ಆಪ್ತ ಸಹಾಯಕರಾದ ಪಾಂಡು ಮನ್ನಿಕೇರಿ, ಕಾಂಗ್ರೆಸ್ ಮುಖಂಡರಾದ ಅಶೋಕ್ ಪೂಜಾರಿ, ಡಾ. ಮಲ್ಲಿಕಾರ್ಜುನ ಬಿರಣಗಡ್ಡಿ, ಡಾ.ಕೀರ್ತಿ ಬೀರಣಗಡ್ಡಿ, ವಕೀಲರಾದ ರಮೇಶ್ …

Read More »

‘ಟೆಂಡರ್ ಹಂತದ ಕೋಟ್ಯಂತರ ಕಾಮಗಾರಿ ಪ್ರಭಾವ ಬಳಸಿ ಸ್ಥಗಿತ’: ಶೆಟ್ಟರ್ ವಿರುದ್ದ ಟೆಂಗಿನಕಾಯಿ ಆರೋಪ

ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ವಿಧಾನಸಭಾ ಮತ ಕ್ಷೇತ್ರದಲ್ಲಿ ಟೆಂಡರ್ ಹಂತದಲ್ಲಿರುವ ಕೋಟ್ಯಂತರ ರೂಪಾಯಿ ರಸ್ತೆ, ಸೇತುವೆ ಕಾಮಗಾರಿಯನ್ನು ಹಿಂದಿನ ಶಾಸಕರು ತಮ್ಮ ಪ್ರಭಾವ ಬಳಸಿ, ಕಾಮಗಾರಿಗಳನ್ನು ಸ್ಥಗಿತಗೊಳಿಸಿದ್ದು, ಅಭಿವೃದ್ಧಿ ಕಾಮಗಾರಿಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿ.ಪ ಸದಸ್ಯ ಜಗದೀಶ್ ಶೆಟ್ಟರ್ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಗಂಭೀರ ಆರೋಪ ಮಾಡಿದರು. 30 ಕೋಟಿ ರೂ ವೆಚ್ಚದ ಕಾಮಗಾರಿ ಸ್ಥಗಿತ: ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಹು-ಧಾ ಸೆಂಟ್ರಲ್ ವಿಧಾನಸಭಾ …

Read More »

ಧಾರವಾಡದಲ್ಲಿ ಕೊರೊನಾ ವರದಿಯಾಗಿಲ್ಲ, ಸಾರ್ವಜನಿಕರು ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಯಾವುದೇ ಸ್ವರೂಪದ ಕೊರೊನಾ ಪ್ರಕರಣಗಳು ವರದಿಯಾಗಿಲ್ಲ. ಸಾರ್ವಜನಿಕರು ಕೊರೊನಾ ಬಗ್ಗೆ ಗಾಬರಿಪಡದೇ ಆರೋಗ್ಯ ಸುರಕ್ಷತೆಗಾಗಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋವಿಡ್ 19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯು ಕೋವಿಡ್ 19 ರ ಅಂಕಿಅಂಶಗಳು, ಕೇರಳದಲ್ಲಿನ ಕೋವಿಡ್-19 ಪ್ರಕರಣಗಳ ಹೆಚ್ಚಳ, ತಮಿಳುನಾಡು ಹಾಗೂ ಕೇರಳ ರಾಜ್ಯದಲ್ಲಿ ಕೋವಿಡ್-19 ರ ಉಪತಳಿ ಜೆಎನ್.1 (JN.1) …

Read More »

ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್​: ಎಂಎಲ್​ಸಿ ಸ್ಥಾನ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಸೂರಜ್ ರೇವಣ್ಣ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನವನ್ನು ಅನೂರ್ಜಿತಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಇಂದು ವಜಾಗೊಳಿಸಿ ಆದೇಶಿಸಿದೆ. ಡಾ.ಸೂರಜ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೋರಿ ಹೊಳೆನರಸೀಪುರದ ಕಾಮಸಮುದ್ರ ಗ್ರಾಮದ ಎಲ್.ಹನುಮೇಗೌಡ ಅವರು ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಹಾಸನ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ …

Read More »

ವ್ಯಕ್ತಿಯ ಹೊಟ್ಟೆಯಲ್ಲಿತ್ತು 99 ಕೊಕೇನ್ ಕ್ಯಾಪ್ಸುಲ್!

Cocaine smuggling: ಬೆಂಗಳೂರು ಡಿಆರ್‌ಐ ಅಧಿಕಾರಿಗಳು ಅತಿದೊಡ್ಡ ಕೊಕೇನ್ ಕಳ್ಳಸಾಗಣೆ ಭೇದಿಸಿದ್ದು, ಕಳ್ಳಸಾಗಾಣಿಕೆದಾರನ ಹೊಟ್ಟೆಯಲ್ಲಿದ್ದ 99 ಕೊಕೇನ್ ಕ್ಯಾಪ್ಸುಲ್ ವಶಕ್ಕೆ ಪಡೆದಿದ್ದಾರೆ. ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ನಿಲ್ದಾಣ ಮೂಲಕ ಸುಮಾರು 20 ಕೋಟಿ ರೂಪಾಯಿ ಮೌಲ್ಯದ 2 ಕೆ.ಜಿ ಕೋಕೆನ್ ಕ್ಯಾಪ್ಸುಲ್ ಸಾಗಿಸುತ್ತಿದ್ದ ನೈಜಿರಿಯಾ ಮೂಲದ‌ ಪ್ರಯಾಣಿಕನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಬೆಂಗಳೂರು ಘಟಕದ (Directorate of Revenue Intelligence) ಅಧಿಕಾರಿಗಳು ಬಂಧಿಸಿದ್ದಾರೆ.   ಫ್ಲೈ ಇಥಿಯೋಪಿಯಾ ವಿಮಾನದಲ್ಲಿ …

Read More »

ಸೈಕಲ್ ಮೂಲಕ ದೇಶ ಪರ್ಯಟನೆ: ಹಾವೇರಿಗೆ ಆಗಮಿಸಿದ ಯುಪಿ ಯುವಕ​

ಹಾವೇರಿ: ಪರಿಸರ ಸಂರಕ್ಷಣೆಗಾಗಿ ಉತ್ತರ ಪ್ರದೇಶ ಇಟಾವಾ ನಗರದ ರಾಬಿನಸಿಂಗ್ ಸೈಕಲ್ ಮೇಲೆ ದೇಶ ಪರ್ಯಟನೆ ಕೈಗೊಂಡಿದ್ದಾರೆ. 2022 ಆಕ್ಟೋಬರ್ 6 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಿರುವ ಇವರ ಸೈಕಲ್ ಯಾತ್ರೆ ಈಗಾಗಲೇ 26 ಸಾವಿರ ಕಿಲೋ ಮೀಟರ್ ಪ್ರವಾಸ ಪೂರ್ಣಗೊಂಡಿದೆ. ಸೈಕಲ್ ಜಾಥಾ ಆರಂಭಿಸಿ ಇಂದಿಗೆ 440 ದಿನವಾಗಿದ್ದು, ಈ ದಿನ ಹಾವೇರಿಗೆ ಆಗಮಿಸಿದ್ದಕ್ಕೆ ರಾಬಿನಸಿಂಗ್ ಸಂತಸ ವ್ಯಕ್ತಪಡಿಸಿದರು. ತಮಿಳನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ಒಡಿಶಾ, ಜಾರ್ಖಂಡ್​, ಪಶ್ಚಿಮ ಬಂಗಾಳ, …

Read More »

ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಮಂಗಳೂರು: ಹಿರಿಯ ಚಿಂತಕ, ಲೇಖಕ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಈ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಇವರ ‘ಮಹಾಭಾರತ ಅನುಸಂಧಾನದ ಭಾರತಯಾತ್ರೆ’ ಎಂಬ ಪ್ರಬಂಧ ಕೃತಿಗೆ ಪ್ರಶಸ್ತಿ ಸಂದಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದವರಾದ ಲಕ್ಷ್ಮೀಶ ತೋಳ್ಪಾಡಿಯವರದ್ದು ಸಂತನಂತಹ ಬದುಕು. ಸದಾ ಆಧ್ಯಾತ್ಮಿಕ ಚಿಂತನೆ ಹೊಂದಿರುವವರು. ಜೊತೆಗೊಂದಿಷ್ಟು ಬರಹ, ಮಾತು, ಮೌನ ಎಲ್ಲವನ್ನೂ ಒಳಗಿಟ್ಟುಕೊಂಡವರು. ಇವರು ಬರೆದಿರುವ ಅನೇಕ ಲೇಖನಗಳು ನಾಡಿನ …

Read More »

ದುನಿಯಾ ವಿಜಿ ಬಂಧಿಸಿದ ಖಾಕಿ ಪಡೆ..! ಇದು ‘ಭೀಮ’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ

ಅಕ್ಕ ಪಕ್ಕದ ಏರಿಯಾಗಳಲ್ಲಿ ನಡೆಯುವ ರೌಡಿಸಂ ಕಥೆಯನ್ನು ಒಳಗೊಂಡಿರುವ ಭೀಮ ಚಿತ್ರದ ಚಿತ್ರೀಕರಣ ಭಾಗಶಃ ಮುಗಿದಿದೆ. ‘ಸಲಗ’ ನಟ ದುನಿಯಾ ವಿಜಯ್​ ಅವರ ನಿರ್ದೇಶನದ ಬತ್ತಳಿಕೆಯಿಂದ ಹೊರಬಂದ ಮೊದಲ ಚಿತ್ರ. ಅವರಿಗೆ ಸ್ಯಾಂಡಲ್​​ವುಡ್ ಅಲ್ಲದೇ ಪರಭಾಷೆಯಲ್ಲಿಯೂ ಬೇಡಿಕೆ ತಂದುಕೊಟ್ಟ ಸೂಪರ್​ ಹಿಟ್​ ಸಿನಿಮಾ ಕೂಡ ಹೌದು. ಈ ಚಿತ್ರದ ಯಶಸ್ಸಿನ ಬಳಿಕ ವಿಜಯ್, ಇದೀಗ ‘ಭೀಮ’ ಚಿತ್ರದಲ್ಲಿ ಬ್ಯುಸಿಯಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಚಿತ್ರದ ಚಿತ್ರೀಕರಣ ಭಾಗಶಃ ಮುಗಿದಿದ್ದು ಕ್ಲೈಮ್ಯಾಕ್ಸ್ …

Read More »