Breaking News

Monthly Archives: ಡಿಸೆಂಬರ್ 2023

ಬೆಳಗಾವಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಸಿಎಂ ಘೋಷಣೆ

ಬೆಳಗಾವಿ ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುತ್ತದೆ‌. ದಿನ ದಿನಕ್ಕೆ ಕುಂದಾನಗರಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಆದರೆ, ಅದಕ್ಕೆ ತಕ್ಕುದಾಗಿ ಬೃಹತ್ ಕೈಗಾರಿಕೆಗಳು ಇಲ್ಲಿಲ್ಲ. ಪರಿಣಾಮ ಜಿಲ್ಲೆಯ ಯುವಕರು ಉದ್ಯೋಗ ಅರಸಿ ಬೆಂಗಳೂರು, ಮುಂಬೈ, ಪುಣೆ ಸೇರಿ ಇನ್ನಿತರ ಕಡೆ ವಲಸೆ ಹೋಗುವ ದುಸ್ಥಿತಿಯಿದೆ. ಹಾಗಾಗಿ, ಬೆಳಗಾವಿಯಲ್ಲಿ ಬೃಹತ್ ಕೈಗಾರಿಕೆಗಳನ್ನು ಆರಂಭಿಸುವ ನಿಟ್ಟಿನಲ್ಲಿ ಫೌಂಡ್ರಿ ಪಾರ್ಕ್ ನಿರ್ಮಿಸುವಂತೆ ಆಗ್ರಹಿಸಿದ್ದ ಈ ಭಾಗದ ಉದ್ಯಮಿಗಳಿಗೆ ಸಾಥ್ ಕೊಟ್ಟಿತ್ತು. ಫೈವ್ ಸ್ಟಾರ್ ಇಂಡಸ್ಟ್ರೀಸ್ …

Read More »

ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ

ಬೆಳಗಾವಿ: ಮಗ ಮದುವೆಯಾಗಿ ಯುವತಿಯನ್ನು ಮನೆಗೆ ಕರೆ ತಂದಿದ್ದಕ್ಕೆಯುವತಿಯ ಸಂಬಂಧಿಕರು ಯುವಕನ ತಂದೆಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಡಿಸೆಂಬರ್​ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಅಂತದ್ದೇ ಮತ್ತೊಂದು ಪ್ರಕರಣ ವರದಿಯಾಗಿದೆ. ಯುವಕ ಪುಣೆ ಮೂಲದ ಯುವತಿಯನ್ನು ಪ್ರೀತಿಸಿ ಮದುವೆ ಮಾಡಿಕೊಂಡು ಮನೆಗೆ ಬಂದಿದ್ದ. ಮನೆಗೆ ಬರುತ್ತಿದ್ದಂತೆ ಯುವತಿಯ ಕಡೆಯವರು ಯುವಕನನ್ನು ಹುಡುಕಿ ಮನೆಗೆ …

Read More »

ಭೂತಾಯಿಯ ರಕ್ಷಣೆಗೆ 12, 13ರಂದು ಕೊಲ್ಹಾಪುರ ಜಿಲ್ಲೆಯ ಕನ್ಹೇರಿ ಮಠದ ಆವರಣದಲ್ಲಿ ಸಂತರ-ರೈತರ ಸಮಾವೇಶ

ಚಿಕ್ಕೋಡಿ: ಮನುಷ್ಯನ ಜೀವನ ಶೈಲಿಯ ಬದಲಾವಣೆಯಿಂದ ನಿಸರ್ಗ ತನ್ನ ಗುಣಮಟ್ಟ ಕಳೆದುಕೊಳ್ಳುತ್ತಿದೆ. ಮಣ್ಣು, ಗಾಳಿ ಹಾಗು ನೀರಿನಲ್ಲಿ ರಾಸಾಯನಿಕ ಸೇರಿಕೊಂಡು ಹೊಸ ಸಮಸ್ಯೆಗಳಿಗೆ ನಿಸರ್ಗ ಜನ್ಮ ನೀಡುತ್ತಿದೆ. ಹೀಗಾಗಿ ಮಣ್ಣು, ನೀರು, ಗಾಳಿ, ಇಂಧನ ರಕ್ಷಣೆಗೆ ಜನವರಿ 12, 13ರಂದು ಭೂತಾಯಿಯ ರಕ್ಷಣೆಗೆ ಸಂತರ-ರೈತರ ಮಹಾಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ಹೇರಿ ಸಿದ್ಧಗಿರಿ ಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ …

Read More »

ಕನ್ನಡ ಧ್ವಜ ಹಾಕಿದ್ದಕ್ಕೆ ದುಷ್ಕರ್ಮಿಗಳು ಯುವಕರಿಗೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಚಿಕ್ಕೋಡಿ(ಬೆಳಗಾವಿ): ಕನ್ನಡ ಧ್ವಜ ಅಳವಡಿಸಿದ್ದಕ್ಕೆ ಇಬ್ಬರು ಯುವಕರಿಗೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ನಡೆದಿದೆ. ಹಲ್ಲೆ ನಡೆಸಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂಕಲಿ ಗ್ರಾಮದ ಬಸವರಾಜ ಪಾಟೀಲ, ಹಾಗೂ ಶುಭಂ ಕಿವುಂಡಾ ಎಂಬವರ ಮೇಲೆ ಹಲ್ಲೆಯಾಗಿದೆ. ಅಂಗತ ಕರಮೆ, ಅನಿಕೇತ್ ಕರಮೆ, ಶಾಹು ಮಗದುಮ್ ಸೇರಿದಂತೆ ಹಲವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಂಕಲಿ ಗ್ರಾಮದಲ್ಲಿ ಕೆಲವು ಯುವಕರು ಶಿವಾಜಿ …

Read More »

ನರ್ಸರಿ ಶಾಲೆ ಉದ್ಗಾಟಿಸಿದ ಶ್ರೀ ಮತಿ ಅಂಬಿಕಾ ಹಾಗೂ ಸುವರ್ಣಜಾರಕಿಹೊಳಿ ಅವರು

ಗೋಕಾಕ ನಗರದ ಝೆನ್ ಪಾರ್ಕ್ ನರ್ಸರಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಲಕ್ಷ್ಮೀ ಎಜುಕೇಷನ್ ಟ್ರಸ್ಟ್ ವಾಯ್ಸ್ ಚೇರಮನ್ ರಾದ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಹಾಗೂ ಶ್ರೀಮತಿ ಅಂಬಿಕಾ ಸಂ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಶ್ರೀಮತಿ ಸುವರ್ಣ ಭೀ ಜಾರಕಿಹೊಳಿ ಅವರು ಮಾತನಾಡಿ ಮಕ್ಕಳಿಗೆ ಪೋಷಕರು ತಮ್ಮ ಸಮಯವನ್ನು ನೀಡಬೇಕು, ಅವರೊಂದಿಗೆ ಸ್ನೇಹಿತರಂತೆ ಮಕ್ಕಳ ಭಾವನೆಗಳಿಗೆ ಸ್ಪಂದಿಸೋಣ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಶಾಲೆಯ ಚಿಕ್ಕ …

Read More »

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗಷ್ಟೇ ಕೆವೈಸಿ ಕಡ್ಡಾಯ

ಸುರತ್ಕಲ್, ಡಿ.20: ಇಲ್ಲಿನ ಗ್ಯಾಸ್ ಏಜೆನ್ಸಿಯೊಂದರಲ್ಲಿ ಕೆವೈಸಿ ಮಾಡಿಸಿಕೊಳ್ಳಲು ನೂರಾರು ಗ್ರಾಹಕರು ಜಮಾಯಿಸಿದ್ದು, ನೂಕುನುಗ್ಗಲಿಗೆ ಏಜೆನ್ಸಿಯವರು ಹೈರಾಣಾಗಿದ್ದಾರೆ. ಭಾರತ ಸರಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆಯಿಂದ 2023ರ ಅಕ್ಟೋಬರ್ 18ರಂದು ಹೊರಡಿಸಲಾಗಿದ್ದ ಆದೇಶ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದೇ ಈ ಗೊಂದಲಕ್ಕೆ ಕಾರಣ ಎಂದು ಆಹಾರ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿ ಡೇನಿಯಲ್ …

Read More »

ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು.

ಆಲ್ಕೋಹಾಲ್ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆಧುನಿಕ ಕಾಲದಲ್ಲಿ ಜನರು ವಾರಾಂತ್ಯ ಮತ್ತು ಹಬ್ಬ ಹರಿದಿನಗಳಲ್ಲಿ ಅತಿಯಾಗಿ ಮದ್ಯಪಾನ ಮಾಡುತ್ತಾರೆ. ಕೆಲವರು ಪ್ರತಿದಿನ ಸಾಕಷ್ಟು ಮದ್ಯವನ್ನು ಸೇವಿಸುತ್ತಾರೆ.   ಹೀಗೆ ಮಾಡುವುದರಿಂದ, ಯಕೃತ್ತು ವ್ಯವಸ್ಥೆಯು ಸಂಪೂರ್ಣವಾಗಿ ಹಾನಿಗೊಳಗಾಗುತ್ತದೆ. ಅಲ್ಲದೆ, ಇರುತ್ತದೆ. ಆದರೆ, ಎಷ್ಟೇ ಮದ್ಯ ಸೇವಿಸಿದರೂ ಲಿವರ್ ಡ್ಯಾಮೇಜ್ ಆಗುವುದನ್ನು ತಪ್ಪಿಸಲು ಪ್ರತಿದಿನ ಈ ಒಂದು ಹಣ್ಣನ್ನು ಸೇವಿಸಬೇಕು ಎನ್ನುತ್ತಾರೆ ಆರೋಗ್ಯ ತಜ್ಞರು. ಅಂಜೂರ ಹಣ್ಣನ್ನು …

Read More »

ಐಶ್ವರ್ಯಾ ರೈ ಇಷ್ಟವಿರಲಿಲ್ಲ

ಮಾಜಿ ವಿಶ್ವ ಸುಂದರಿ ಮತ್ತು ಬಾಲಿವುಡ್ ನಟಿ ಐಶ್ವರ್ಯಾ ರೈ ಮತ್ತು ನಟ ಅಭಿಷೇಕ್ ಬಚ್ಚನ್ ನಡುವಿನ ಸಂಬಂಧದ ಬಗ್ಗೆ ಅನೇಕ ವಿಷಯಗಳು ಬೆಳಕಿಗೆ ಬರುತ್ತಿವೆ. ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ನಡುವೆ ಭಿನ್ನಾಭಿಪ್ರಾಯವಿದೆ, ಇಬ್ಬರೂ ಶೀಘ್ರದಲ್ಲೇ ವಿಚ್ಛೇದನ ಪಡೆಯಲಿದ್ದಾರೆ ಎಂದು ಅನೇಕ ವರದಿಗಳು ಹೇಳುತ್ತಿವೆ.   ಇದರ ಜೊತೆಗೆ ಕೆಲ ದಿನಗಳಿಂದಬಚ್ಚನ್ಕುಟುಂಬ ಸೊಸೆ ಐಶ್ವರ್ಯಾ ರೈ ಅವರನ್ನು ಕಡೆಗಣಿಸುತ್ತಿದೆ ಎಂದು ಹೇಳಲಾಗುತ್ತಿದೆ. ಕೆಲ ಮೂಲಗಳ ಪ್ರಕಾರ, ಜಯಾ …

Read More »

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಪ್ರಕರಣವನ್ನು ​ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್​ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪದಲ್ಲಿ ಬಿಜೆಪಿಯ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ಇಂದು ರದ್ದುಪಡಿಸಿ ಆದೇಶಿಸಿತು. ತಮ್ಮ ವಿರುದ್ಧದ ಪ್ರಕರಣ ರದ್ದತಿ ಕೋರಿ ಮಾಡಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ಹೊರಹಾಕಿತು. ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ ಸೆ.17 ಎ …

Read More »

ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿಕೆಶಿ

ದೆಹಲಿ/ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಬೆಂಗಳೂರು ಸಂಬಂಧಿತ ಮೂರು ಪ್ರಮುಖ ಯೋಜನೆಗಳಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.   ಬೆಂಗಳೂರಿನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಹೆಚ್ಚಿನ ಆಸ್ಥೆ ವಹಿಸಿದ್ದು, ಈ ಸಂಬಂಧ ಕೆಲವು ಯೋಜನೆಗಳನ್ನು ರೂಪಿಸಲಾಗಿದೆ. ಇದರ ಅನುಷ್ಠಾನದಲ್ಲಿ ಹಣಕಾಸು, ಸಂಪನ್ಮೂಲ ಕ್ರೋಢೀಕರಣ, ಸಮನ್ವಯತೆ ಸೇರಿ ಹಲವು ತೊಡಕುಗಳಿವೆ. ಹೀಗಾಗಿ ಕೇಂದ್ರದ ನೆರವು ಅತ್ಯಗತ್ಯ ಎಂದು ಪತ್ರದಲ್ಲಿ ಕೋರಿದ್ದಾರೆ. …

Read More »