Breaking News

Yearly Archives: 2023

ಬೆಂಗಳೂರಿನಿಂದ ವಿಜಯಪುರ, ಬೆಳಗಾವಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಹೆಚ್ಚುತ್ತಿರುವ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು ನೈಋತ್ಯ ರೈಲ್ವೆಯು ಬೆಂಗಳೂರಿನಿಂದ ವಿಜಯಪುರ ಮತ್ತು ಬೆಳಗಾವಿಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಲ್ಪಿಸುತ್ತಿದೆ. ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ವಿಜಯಪುರ ಮತ್ತು ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳು ಸಂಚರಿಸಲಿದ್ದು, ಪ್ರಯಾಣಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ನೈಋತ್ಯ ರೈಲ್ವೆ ಮನವಿ ಮಾಡಿದೆ‌. ರೈಲು ಸಂಖ್ಯೆ 06231/06232 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ (ಒಂದು ಟ್ರಿಪ್): ರೈಲು ಸಂಖ್ಯೆ 06231 ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ನವೆಂಬರ್ 10ರಂದು …

Read More »

ಹಣದ ಬೇಡಿಕೆ ಆರೋಪ: ಕರವೇ ಜಿಲ್ಲಾಧ್ಯಕ್ಷನ ವಿರುದ್ಧ ದೂರು.. ಆರೋಪ – ಪ್ರತ್ಯಾರೋಪ

ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವ ಆಚರಣೆಗೆ 2 ಲಕ್ಷ ನೀಡಬೇಕು. ಇಲ್ಲದಿದ್ದರೆ ಅಂಗಡಿ ನಡೆಸದಂತೆ ಮಾಡುತ್ತೇನೆ ಎಂದು ಬೆದರಿಸಿದ ಆರೋಪದ ಮೇಲೆ ಕರವೇ ಪ್ರವೀಣ ಶೆಟ್ಟಿ ಬಣದ ಜಿಲ್ಲಾಧ್ಯಕ್ಷ ಮಂಜುನಾಥ ಲೂತಿಮಠ ಸೇರಿದಂತೆ ಎಂಟು ಮಂದಿ ವಿರುದ್ದ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಂಟಿಕೇರಿಯ ಅಳಗುಂಡಗಿ ಓಣಿಯ ಉದ್ಯಮಿ ವಿಜಯ ಅಳಗುಂಡಗಿ ಎಂಬುವವರು ಮಂಜುನಾಥ ಲೂತಿಮಠ, ರಾಹುಲ್‌, ಅಮಿತ್‌, ಪ್ರವೀಣ, ಬಸವರಾಜ, ಬಾಲು, ಪ್ರಕಾಶ ಮತ್ತು ವಿಜಯ ವಿರುದ್ದ ದೂರು ನೀಡಿದ್ದಾರೆ. ಮಂಜುನಾಥ …

Read More »

ಅಂಗಾಂಗ ಕಸಿಗೆ ಹೆಚ್ಚಿನ ಬೇಡಿಕೆ: ಕೊರತೆ ನಿವಾರಿಸಲು ”ಆರ್ಗನ್ ಡೋನರ್ಸ್ ನೀತಿ” ಜಾರಿಗೆ ಸರಕಾರದ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಅಂಗಾಂಗ ಕಸಿಗೆ ಸಾವಿರಾರು ಜನ ರೋಗಿಗಳು ಹಲವಾರು ವರ್ಷಗಳಿಂದ ಕಾಯತೊಡಗಿದ್ದು, ಸಾರ್ವಜನಿಕರಲ್ಲಿ ಅಂಗಾಂಗ ದಾನ ವನ್ನು ಪ್ರೇರೇಪಿಸಲು ”ಆರ್ಗನ್ ಡೋನರ್ಸ್ ನೀತಿ” ಅನುಷ್ಠಾನಕ್ಕೆ ತರಲು ರಾಜ್ಯ ಸರಕಾರ ಸಿದ್ಧತೆ ನಡೆಸಿದ್ದು ಅದಕ್ಕಾಗಿ ರೂಪುರೇಷೆ ಅಂತಿಮಗೊಳಿಸುತ್ತಿದೆ.   ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಕಿಡ್ನಿ, ಲಿವರ್, ಹೃದಯ, ಶ್ವಾಸಕೋಶ, ಸಣ್ಣ ಕರಳು, ಕಾರ್ನಿಯಾ ಸೇರಿದಂತೆ ಜೀವ ರಕ್ಷಕ ಅಂಗಾಂಗಳ ಕಸಿಗಾಗಿ ರಾಜ್ಯದಲ್ಲಿ ಸುಮಾರು 8000 ರೋಗಿಗಳು …

Read More »

ಈ ವಾರದ ರಾಶಿ ಭವಿಷ್ಯ ಹೀಗಿದೆ..

  ಮೇಷ : ವಿವಾಹಿತ ವ್ಯಕ್ತಿಗಳು ಕೌಟುಂಬಿಕ ಬದುಕಿನ ಸಮಸ್ಯೆಗಳಿಂದ ಹೊರಬರಲಿದ್ದು ನಿರಾಳತೆಯನ್ನು ಅನುಭವಿಸಲಿದ್ದಾರೆ. ನೀವು ಮತ್ತು ನಿಮ್ಮ ಕುಟುಂಬದ ನಡುವೆ ಒಂದಷ್ಟು ಅಂತರ ಮತ್ತು ಕೆಲವೊಂದು ತಾತ್ವಿಕ ಭಿನ್ನಾಭಿಪ್ರಾಯಗಳು ಕಾಣಿಸಿಕೊಳ್ಳಬಹುದು. ಮನೆಗೆ ಸಂಬಂಧಿಸಿದಂತೆ ವೆಚ್ಚಗಳು ಉಂಟಾಗಬಹುದು. ನಿಮ್ಮ ಜವಾಬ್ದಾರಿಗಳು ನಿಮ್ಮ ಗಮನ ಸೆಳೆಯಲಿವೆ. ಇದೇ ವೇಳೆ ನಿಮ್ಮ ಕೆಲಸದಲ್ಲಿ ಸಮನ್ವಯ ಕಾಪಾಡಲು ಯತ್ನಿಸಲಿದ್ದೀರಿ. ಮನೆ ಮತ್ತು ಕಚೇರಿ ಎರಡೂ ಕಡೆಯಲ್ಲಿ ನಿಮ್ಮ ಅಗತ್ಯವಿದೆ. ಇವುಗಳನ್ನು ಚೆನ್ನಾಗಿ ನಿಭಾಯಿಸಿದಾಗಲೇ ಪರಿಸ್ಥಿತಿಯಲ್ಲಿ ಸುಧಾರಣೆ …

Read More »

ಬರಪೀಡಿತ ಪಟ್ಟಿಗೆ ಮತ್ತೆ 7 ತಾಲೂಕುಗಳು ಸೇರ್ಪಡೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದಲ್ಲಿ ಬರದ ತೀವ್ರತೆ ದಿನ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೆ ಏಳು ಹೆಚ್ಚುವರಿ ತಾಲೂಕುಗಳನ್ನು ಬರಪೀಡಿತ ಎಂದು ಶನಿವಾರ ಸರ್ಕಾರ ಘೋಷಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದಂತಾಗಿದೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿ ಸಮೀಕ್ಷೆಯ (Ground Truthing) ವರದಿಯನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ …

Read More »

ಡಿ.ಕೆ.ಶಿವಕುಮಾರ್‌ ಹೆಸರಲ್ಲಿ ಬಿಬಿಎಂಪಿ ಮುಖ್ಯ ಇಂಜಿನಿಯರ್ ದುಡ್ಡು ವಸೂಲಿ: ಕೆಂಪಣ್ಣ ಆರೋಪ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಇಂಜಿನಿಯರ್ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಲಂಚದ ಆರೋಪ ಮಾಡಿದ್ದಾರೆ. ಸದಾಶಿವನಗರದಲ್ಲಿ ಶನಿವಾರ ಖಾಸಗಿ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಬಳಿಕ ಮಾತನಾಡಿದ ಅವರು, “ನಾನು ಸಿನಿಯಾರಿಟಿ ಪ್ರಕಾರ ಹಣ ಕೊಡಿ ಅಂತ ಕೇಳಿದ್ದೇನೆ. ಸ್ವಲ್ಪ ಹಣ ರಿಲೀಸ್ ಮಾಡಿದ್ದಾರೆ. ನಮಗೆ ತೃಪ್ತಿ ಇದೆ ಅಂತ ಹೇಳಲ್ಲ, ಗುತ್ತಿಗೆದಾರರ ಹಣವನ್ನು ಪೂರ್ತಿಯಾಗಿ ಕ್ಲಿಯರ್ ಮಾಡೋಕೆ ಹೇಳಿದ್ದೇನೆ. ಡಿಸೆಂಬರ್‌ ಒಳಗಡೆ …

Read More »

40 ವರ್ಷಗಳ ಅನುಭವ ಹೊಂದಿದ ಭಾರತ ವಾಹನ ತರಬೇತಿ ಶಾಲೆ ಆರಂಭ

೪೦ ವರ್ಷಗಳ ಅನುಭವ ಹೊಂದಿದ್ದ ಭಾರತ ವಾಹನ ತರಬೇತಿ ಶಾಲೆ ಸಮಾಜಮುಖಿ ಕೆಲಸ ಮಾಡುತ್ತಿದೆ ಮುಂಚೆ ದೇಶಸೇವೆ ಮಾಡಿದ್ದೇನೆ ಈ ವೃತ್ತಿಯಲ್ಲಿ ಅನೇಕ ಏರಳಿತಗಳನ್ನು ನೋಡಿದ್ದೇನೆ ಅಪಘಾತ ರಹಿತ ತರಬೇತಿ ನೀಡುವ ಮುಖ್ಯ ಉದ್ದೇಶವನ್ನು ಇಟ್ಟುಕೊಂಡಿದ್ದೇನೆ ಎಂದು ಭಾರತ ವಾಹನ ತರಬೇತಿ ಮಾಲೀಕ ಬಸವರಾಜ ಕಡ್ಲಿ ಹೇಳಿದರು . ಬೆಳಗಾವಿ ನೆಹರು ನಗರದ ೨ ನೇ ಕ್ರಾಸನಲ್ಲಿ ಭಾರತ ವಾಹನ ತರಬೇತಿ ಶಾಲೆಯ ಭವ್ಯ ಉದ್ಘಾಟನೆಯನ್ನು ಬೆಳಗಾವಿ ನಾಗನೂರ ಮಠದ …

Read More »

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಅರಭಾವಿ ಶಾಸಕ ಮೂಡಲಗಿ : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ …

Read More »

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಅರಭಾವಿ ದುರದುಂಡೀಶ್ವರ ಮಠದ ಗುರುಬಸವಲಿಂಗ ಮಹಾಸ್ವಾಮಿಗಳ ಪೀಠಾರೋಹಣ ನ. 20 ಕ್ಕೆ ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿ ಮಠದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಡಾ. ಸಿದ್ಧರಾಮ ಮಹಾಸ್ವಾಮಿಗಳು ಸೇರಿದಂತೆ ಅನೇಕ ಶ್ರೀಗಳು ಭಾಗಿ. ಲಿಂ. ಸಿದ್ಧಲಿಂಗ ಮಹಾಸ್ವಾಮಿಗಳು ಭಕ್ತರ ಪಾಲಿಗೆ ಕಾಮಧೇನುವಾಗಿದ್ದರು- ಡಾ. ಸಿದ್ಧರಾಮ ಮಹಾಸ್ವಾಮಿಗಳ ಬಣ್ಣನೆ ಘಟಪ್ರಭಾ : ಅರಭಾವಿ ದುರದುಂಡೀಶ್ವರ ಮಠದ ಪೀಠಾಧಿಪತಿಯಾಗಿದ್ದ ಲಿಂಗೈಕ್ಯ ಸಿದ್ಧಲಿಂಗ ಮಹಾಸ್ವಾಮಿಗಳ ನಿಧನದಿಂದ ಅರಭಾವಿ ಮಠದ ನೂತನ ಪೀಠಾಧಿಪತಿಗಳ …

Read More »

50 ಶಾಸಕರು BJP ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ – ಕಾಂಗ್ರೆಸ್‌ ಸರ್ಕಾರದ ಪತನ ಗ್ಯಾರಂಟಿ: ನಿರಾಣಿ ಬಾಂಬ್‌

ವಿಜಯಪುರ: ಕಾಂಗ್ರೆಸ್‌ (Congress) ಹೇಳುವುದು ಒಂದು ಮಾಡುವುದು ಇನ್ನೊಂದು, ಈ ಸರ್ಕಾರ 5 ವರ್ಷ ಉಳಿಯಲ್ಲ. ಈಗಾಗಲೇ 50 ಕಾಂಗ್ರೆಸ್‌ ಶಾಸಕರು ಬಿಜೆಪಿ ಹೈಕಮಾಂಡ್‌ (BJP HighCommand) ಸಂಪರ್ಕದಲ್ಲಿದ್ದು, ಪತನ ಆಗೋದು ಗ್ಯಾರಂಟಿ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ (Murugesh Nirani) ಹೊಸ ಬಾಂಬ್‌ ಸಿಡಿಸಿದ್ದಾರೆ.ವಿಜಯಪುರದ ಜುಮನಾಳ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು‌, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎರಡು ಬಣವಿದ್ದರೂ, ಒಳಗೆ ನಾಲ್ಕು …

Read More »