ಮೈಸೂರು: ತೊಂದರೆ ಕೊಟ್ಟು ಓಡಾಡುತ್ತಿದ್ದ ಹುಲಿಯನ್ನು ಸೆರೆ ಹಿಡಿದಿಲ್ಲ ಎಂದು ಕೋಪಗೊಂಡ ನಂಜನಗೂಡು ತಾಲೂಕಿನ ಮಹಾದೇವ ನಗರದ ಕೆಲವರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಹಲ್ಲೆ ಮಾಡಿದ್ದಾರೆ. ಏನಿದು ಘಟನೆ?: ನಂಜನಗೂಡು ತಾಲೂಕಿನ ಮಲ್ಕುಂಡಿ ಸಮೀಪದ ಹೆಡಿಯಾಲ ಕುದುರೆಗುಂಡಿ ಹಿನ್ನೀರು ಪ್ರದೇಶದಲ್ಲಿ ರೈತರೊಬ್ಬರು ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ಸಂದರ್ಭದಲ್ಲಿ ಹುಲಿಯೊಂದು ದಾಳಿ ಮಾಡಿ ಹಸುವನ್ನು ಕೊಂದು ಹಾಕಿತ್ತು. ಹಸುವನ್ನು ರಕ್ಷಿಸಲು ಹೋಗಿದ್ದ ರೈತ ವೀರಭದ್ರ ಭೋವಿ (71) ಅವರ ಮೇಲೂ ದಾಳಿ …
Read More »Yearly Archives: 2023
ಎರಡನೇ ಬಾರಿಗೆ ದಾಖಲೆಯ 1.72 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹ: ಕರ್ನಾಟಕದಿಂದ ಕೋಟಿ ಆದಾಯ ಗೊತ್ತಾ?
ನವದೆಹಲಿ: ಅಕ್ಟೋಬರ್ ತಿಂಗಳಲ್ಲಿ ಒಟ್ಟು 1.72 ಲಕ್ಷ ಕೋಟಿ ರೂ. ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) (GST Revenue Collection) ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಇಂದು ತಿಳಿಸಿದೆ. ಕಳೆದ ವರ್ಷ ಇದೇ ಅಕ್ಟೋಬರ್ ತಿಂಗಳ ಜಿಎಸ್ಟಿ ಆದಾಯಕ್ಕೆ ಹೋಲಿಸಿದರೆ, ಈ ಬಾರಿ ಶೇ.13ರಷ್ಟು ಅಧಿಕ ಆದಾಯ ಸಂಗ್ರಹವಾಗಿದೆ ಎಂದು ಹೇಳಿದೆ. ಅಕ್ಟೋಬರ್ನಲ್ಲಿ ಒಟ್ಟಾರೆ 1,72,003 ಕೋಟಿ ರೂ. ಜಿಎಸ್ಟಿ ಆದಾಯ ಸಂಗ್ರಹವಾಗಿದೆ. ಇದರಲ್ಲಿ ಕೇಂದ್ರ ಜಿಎಸ್ಟಿ (CGST) …
Read More »ನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮನವಿ
ಬೆಂಗಳೂರು: ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲಿ ಪ್ರವೇಶ ಪರೀಕ್ಷೆ ನಡೆಸುವಂತೆ ಈ ಹಿಂದೆ ಒತ್ತಾಯಿಸಿದ್ದೆ. ಅಗತ್ಯ ಬಿದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಷಾ ಮಾಧ್ಯಮವನ್ನು ಮರುಪರಿಶೀಲಿಸುವಂತೆ ಪ್ರಧಾನಿ ಮೋದಿಗೆ ಮತ್ತೊಮ್ಮೆ ಪತ್ರ ಬರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಆಯೋಜನೆ ಮಾಡಿದ್ದ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ …
Read More »ಅರಣ್ಯ ಸಿಬ್ಬಂದಿ ಗಾಯಗೊಳಿಸಿ ಪರಾರಿಯಾಗಿದ್ದ ಚಿರತೆ ಕೊನೆಗೂ ಸೆರೆ
ಬೆಂಗಳೂರು: ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. ಬೊಮ್ಮನಹಳ್ಳಿ ಕೃಷ್ಣಾರೆಡ್ಡಿ ಬಡಾವಣೆ ಸುತ್ತಮುತ್ತ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಬೋನಿನಲ್ಲಿ ಬಂಧಿಯಾಗಿದೆ. ಚಿರತೆ ಕಾಣಿಸಿಕೊಂಡ ಹಿನ್ನೆಲೆ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ ಟಾಸ್ಕ್ ಫೋರ್ಸ್ ಸಿಬ್ಬಂದಿ ಧನರಾಜ್ ಎಂಬುವರು ಚಿರತೆ ದಾಳಿಯಿಂದ ಗಾಯಗೊಂಡಿದ್ದರು. ಚಿರತೆ ದಾಳಿಯಿಂದ ಧನರಾಜ್ ಕಾಲು, ಹೊಟ್ಟೆ ಭಾಗಕ್ಕೆ ಗಾಯವಾಗಿದ್ದು, ಅವರನ್ನು …
Read More »ಪ್ರಸ್ತುತ ನಾವು ಬಳಕೆ ಮಾಡುತ್ತಿರುವ ಧ್ವಜ ಬೇರೊಂದು ಪಕ್ಷದ ಧ್ವಜವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕದ ಹೆಸರಿಗೆ ಇಂದು 50ರ ಸಂಭ್ರಮ. ನಾಡಿನೆಲ್ಲೆಡೆ ಸಡಗರ ಸಂಭ್ರಮದಿಂದ ಹಳದಿ ಮತ್ತು ಕೆಂಪು ಬಣ್ಣದ ನಾಡಧ್ವಜಗಳು ಹಾರಾಡುತ್ತಿವೆ. ಆದರೆ ಈ ಧ್ವಜ ಅಧಿಕೃತ ನಾಡಧ್ವಜವಾ? ಈ ಧ್ವಜವನ್ನು ಯಾರು ರಚಿಸಿದ್ದು, ಸರ್ಕಾರ ನಾಡಧ್ವಜದ ವಿಚಾರದಲ್ಲಿ ಏನೆಲ್ಲಾ ಮಾಡಿದೆ. ನಾಡಧ್ವಜ ಹೊಂದಲು ಸಾಂವಿಧಾನಿಕ ಮಾನ್ಯತೆ ಇದೆಯಾ ಎನ್ನುವ ಕುರಿತ ವರದಿ ಇಲ್ಲಿದೆ. 1956ರಲ್ಲಿಯೇ ಕನ್ನಡಿಗರ ವಾಸಿಸುವ ಪ್ರದೇಶಗಳನ್ನು ಒಳಗೊಂಡು ರಾಜ್ಯ ಏಕೀಕರಣಗೊಂಡರೂ ಕರ್ನಾಟಕದ ಹೆಸರು ಪಡೆಯಲು 17 ವರ್ಷ ಹೋರಾಟ …
Read More »ರಾಜ್ಯದಲ್ಲಿ ಸೈಬರ್ ಪ್ರಕರಣ ಹೆಚ್ಚಳ, ಸೈಬರ್ ಕ್ರೈಂ ತಡೆಗೆ ಹೊಸ ನಿಯಮ ತರಲು ಕ್ರಮ: ಡಾ. ಪರಮೇಶ್ವರ್
ತುಮಕೂರು: ರಾಜ್ಯದಲ್ಲಿ ಸೈಬರ್ ಪ್ರಕರಣಗಳು ಹೆಚ್ಚಾಗ್ತಿದ್ದು, ಇಂಥ ಪ್ರಕರಣಗಳ ತಡೆಗೆ ಎಚ್ಚರಿಕೆ ವಹಿಸ್ತಿದ್ದೇವೆ. ಇದಕ್ಕಾಗಿ ಹೋಂ ಡಿಪಾರ್ಟ್ಮೆಂಟ್ ಹಾಗೂ ಐಟಿ ಡಿಪಾರ್ಟ್ಮೆಂಟ್ ಸೇರಿ ಒಂದು ಹೊಸ ಸಮಿತಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆಯಂಟಿ ಸೈಬರ್ ಕಾನೂನು ಜಾರಿಗೆ ತರಲು ಒಂದು ಅಜೆಂಡಾ ರೂಪಿಸಲು ಜವಾಬ್ದಾರಿ ಕೊಟ್ಟಿದ್ದಾರೆ.ನಾವು ಸದ್ಯದಲ್ಲೇ ಅದನ್ನ ಪ್ರಕಟಣೆ ಮಾಡ್ತೀವಿ. ಸೈಬರ್ ಪ್ರಕರಣಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ …
Read More »ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕುರಿತು ಸರ್ಕಾರ ಸರ್ವಪಕ್ಷ ಸಭೆ
ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇಂದು ರಾಜಧಾನಿ ಮುಂಬೈನಲ್ಲಿ ಸರ್ವಪಕ್ಷ ಸಭೆ ನಡೆಸಿದೆ. ಮರಾಠ ಮೀಸಲಾತಿ ನೀಡಲು ಎಲ್ಲ ಪಕ್ಷಗಳು ಒಪ್ಪಿಗೆ ಸೂಚಿಸಿವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಭೆ ಬಳಿಕ ತಿಳಿಸಿದ್ದಾರೆ. ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ವಪಕ್ಷ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಎಲ್ಲರೂ ಒಪ್ಪಿಕೊಂಡಿದ್ದಾರೆ. ಅದು …
Read More »‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ
‘ಕನ್ನಡ’ ಫಿಲ್ಮ್ ಚೇಂಬರ್ನಲ್ಲಿ ಧ್ವಜಾರೋಹಣ ನೆರವೇರಿಸಿದ ನಟಿ ಲೀಲಾವತಿ ಇಂದು ಕರ್ನಾಟಕದಲ್ಲಿ ‘ರಾಜ್ಯೋತ್ಸವ’ದ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸುವರ್ಣ ವರ್ಷವನ್ನು ಆಚರಿಸಲಾಯಿತು. ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ ಸುರೇಶ್, ಉಪಾಧ್ಯಕ್ಷೆ ಪ್ರಮೀಳಾ ಜೋಷಾಯ್, ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಕಾರ್ಯದರ್ಶಿ ಭಾ.ಮಾ ಗೀರಿಶ್ ಸಮ್ಮುಖದಲ್ಲಿ ಹಿರಿಯ ನಟಿ ಅಭಿನೇತ್ರಿ ಲೀಲಾವತಿ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಅವರಿಗೆ …
Read More »ಬೆಳಗಾವಿಯಲ್ಲಿ ಸಚಿವ ಜಾರಕಿಹೊಳಿ ಧ್ವಜಾರೋಹಣ; ಕರ್ನಾಟಕ ಭಾವೈಕ್ಯತೆ ತವರು ಮನೆ ಎಂದು ಬಣ್ಣನೆ
ಬೆಳಗಾವಿ : ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಭುವನೇಶ್ವರಿ ದೇವಿ ಮೂರ್ತಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಪೂಜೆ ಸಲ್ಲಿಸಿದರು. ಬಳಿಕ ಹಳದಿ-ಕೆಂಪು ಬಣ್ಣದ ಬಲೂನ್ಗಳನ್ನು ಹಾರಿಸುವ ಮೂಲಕ ಚಾಲನೆ ನೀಡಿ, ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು ವಿವಿಧ ಧರ್ಮ ಮತ್ತು ಸಂಸ್ಕೃತಿಗಳ ಸಂಗಮವಾಗಿದೆ. ಪ್ರಾಚೀನ ಕಾಲದಿಂದಲೂ ತನ್ನದೇ ಆದ ಭವ್ಯ ಸಾಂಸ್ಕೃತಿಕ ಪರಂಪರೆಯನ್ನು ಬೆಳೆಸಿಕೊಂಡು ಬಂದಿದೆ. ಸಾಮರಸ್ಯವೇ ಕನ್ನಡ ಸಂಸ್ಕೃತಿಯ ಜೀವಾಳ. ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲು …
Read More »ಶಿವಸೇನೆ ಕಾರ್ಯಕರ್ತರನ್ನು ಗಡಿಯಲ್ಲೇ ತಡೆದು ವಾಪಸ್ ಕಳುಹಿಸಿದ ಬೆಳಗಾವಿ ಪೊಲೀಸರು
ಚಿಕ್ಕೋಡಿ: ರಾಜ್ಯಾದ್ಯಂತ ಇಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕುಂದಾನಗರಿ ಬೆಳಗಾವಿಯಲ್ಲಿ ಹಬ್ಬದ ವಾತಾವರಣ ಕಾಣುತ್ತಿದೆ. ಇದರ ನಡುವೆ ಶಿವಸೇನೆಯ ಕೆಲವು ಕಾರ್ಯಕರ್ತರು ಗಡಿ ಮೂಲಕ ಬೆಳಗಾವಿಗೆ ನುಗ್ಗಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿದ ಕೂಡಲೇ ಎಚ್ಚೆತ್ತುಕೊಂಡ ಕರ್ನಾಟಕ ಪೊಲೀಸರು, ಅವರನ್ನು ಮರಳಿ ಮಹಾರಾಷ್ಟ್ರಕ್ಕೆ ಕಳುಹಿಸಿದ್ದಾರೆ. ಕೊಲ್ಲಾಪುರ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ ದೇವಣೆ, ಬೆಳಗಾವಿಗೆ ಆಗಮಿಸಿ ಕರಾಳ ದಿನ ಆಚರಣೆ ಮಾಡಲು ನಿನ್ನೆ (ಮಂಗಳವಾರ) ಕೊಲ್ಲಾಪುರದಲ್ಲಿ ಕರೆ ನೀಡಿದ್ದರು. ಇಂದು (ಬುಧವಾರ) ನಿಪ್ಪಾಣಿ …
Read More »