ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರನ್ನು ಬಿಜೆಪಿಯು ಹಣದ ಆಮಿಷವೊಡ್ಡಿ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪ ಬೆನ್ನಲ್ಲೇ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರತಿಕ್ರಿಯಿಸಿದ್ದಾರೆ. ಪ್ರಜಾಪ್ರಭುತ್ವ ದಮನ ಮಾಡುವುದೇ ಬಿಜೆಪಿ ಸಿದ್ಧಾಂತವಾಗಿದೆ. ವಾಮಮಾರ್ಗದ ಮೂಲಕ ಅಧಿಕಾರ ಚುಕ್ಕಾಣಿ ಹಿಡಿಯುವುದು ಹೊಸದೇನಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಶಾಸಕರನ್ನು ಬಿಜೆಪಿ ಸೆಳೆಯುತ್ತಿದೆ ಎಂಬ ಆರೋಪ ಕುರಿತು ಮಾತನಾಡಿದ ಸಚಿವರು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಶಾಸಕರನ್ನು ಖರೀದಿ ಮಾಡುತ್ತಿಲ್ಲ. 2008 ಹಾಗೂ 2019 …
Read More »Yearly Archives: 2023
ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ನಿರ್ಮಾಣ: ಗೃಹ ಸಚಿವ ಜಿ ಪರಮೇಶ್ವರ್
ಮಂಗಳೂರು: ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ನ್ನು ನಿರ್ಮಿಸಲಾಗುತ್ತಿದೆ. ಈ ಮೂಲಕ ರಾಜ್ಯದ ಎಲ್ಲಾ ಠಾಣೆಗಳಲ್ಲಿ ನಡೆಯುವ ಕೆಲಸವನ್ನು ಕಮಾಂಡ್ ಸೆಂಟರ್ ಮೂಲಕ ವೀಕ್ಷಿಸುವ ಕಾರ್ಯ ಆಗಲಿದೆ ಎಂದು ಗೃಹಸಚಿವ ಡಾ. ಜಿ ಪರಮೇಶ್ವರ್ ಹೇಳಿದರು. ನಗರದ ವಾಮಂಜೂರಿನಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, “ಪೊಲೀಸ್ ಠಾಣೆಗೆ ಬಂದು ಹೋದವರು ಯಾರು, ಪ್ರತೀ ದೂರುಗಳು ಎಫ್ಐಆರ್ ಆಗಿದೆಯೇ?, ಇಲ್ಲವೋ?, ದೂರು ನೀಡಲು ಬಂದವರಿಗೆ ಸರಿಯಾದ ಸ್ಪಂದನೆ ದೊರಕಿದೆಯೇ ಎಂಬಿತ್ಯಾದಿ ವಿಚಾರಗಳನ್ನು …
Read More »ಛತ್ತೀಸ್ಗಢದಲ್ಲಿ ರೈತರೊಂದಿಗೆ ಭತ್ತ ಕಟಾವು ಮಾಡಿದ ರಾಹುಲ್ ಗಾಂಧಿ!
ರಾಯ್ಪುರ (ಛತ್ತೀಸ್ಗಢ): ವಿಧಾನಸಭೆ, ಲೋಕಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜನರೊಂದಿಗೆ ಬೆರೆಯುವುದನ್ನು ಮುಂದುವರಿಸಿದ್ದಾರೆ. ಚುನಾವಣಾ ರಾಜ್ಯವಾದ ಛತ್ತೀಸ್ಗಢದಲ್ಲಿ ಪ್ರಚಾರ ನಡೆಸುತ್ತಿರುವ ಸಂಸದ, ಅಲ್ಲಿನ ರೈತರೊಂದಿಗೆ ಬೆಳೆ ಕಟಾವು ಮಾಡುವ ಮೂಲಕ ಗಮನ ಸೆಳೆದರು. ರಾಜಧಾನಿ ರಾಯ್ಪುರದ ಸಮೀಪದಲ್ಲಿರುವ ಕಥಿಯಾ ಗ್ರಾಮಕ್ಕೆ ಭೇಟಿ ನೀಡಿದ ಅವರು, ಭತ್ತದ ಗದ್ದೆಗಳಲ್ಲಿ ಬೆಳೆ ಕೊಯ್ಲು ಮಾಡುತ್ತಿದ್ದ ರೈತರ ಜೊತೆ ಸೇರಿಕೊಂಡ ಬೆಳೆ ಕಟಾವು ಮಾಡಿದರು. ಬಳಿಕ ಅವರ ಜೊತೆ …
Read More »ಆಧಾರ್ ಮೂಲಕ ಸೈಬರ್ ಬಳಸಿ ಲಕ್ಷಾಂತರ ರೂಪಾಯಿ ವಂಚನೆ.. ಬಿಹಾರದ ಮೂವರು ಆರೋಪಿಗಳ ಬಂಧನ
ಮಂಗಳೂರು: ಆಧಾರ್ ಮೂಲಕ ಸೈಬರ್ ಬಳಸಿ ವಿವಿಧ ಬ್ಯಾಂಕ್ಗಳಿಂದ ಲಕ್ಷಾಂತರ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಿರುವ ಪ್ರಕರಣದಡಿ AEPS (Aadhar Enabled Payment System) ಬಿಹಾರದ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಬಿಹಾರ ರಾಜ್ಯದ ಸುಪೌಲ್ ನ ದೀಪಕ್ ಕುಮಾರ್ ಹೆಂಬ್ರಮ್ (33) ಅರಾರಿ ಜಿಲ್ಲೆಯ ವಿವೇಕ್ ಕುಮಾರ್ ಬಿಶ್ವಾಸ್ (24) ಮದನ್ ಕುಮಾರ್ (23) ಬಂಧಿತರು. 6 ತಿಂಗಳಿನ ಅವಧಿಯಲ್ಲಿ ಮಂಗಳೂರು ನಗರದ ಸಬ್ ರಿಜಿಸ್ಟ್ರಾರ್ …
Read More »S.B.I. ಬ್ರಾಂಡ್ ಅಂಬಾಸಿಡರ್ ಆದ ಕ್ರಿಕೆಟರ್ ಎಂಎಸ್ ಧೋನಿ
ಮುಂಬೈ : ಭಾರತದ ಅತಿದೊಡ್ಡ ವಾಣಿಜ್ಯ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಕ್ರಿಕೆಟ್ ಲೆಜೆಂಡ್ ಮಹೇಂದ್ರ ಸಿಂಗ್ ಧೋನಿ ಅವರನ್ನು ತನ್ನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದಾಗಿ ಘೋಷಿಸಿದೆ. ಈ ಕುರಿತು ಮಾಹಿತಿ ನೀಡಿದ ಎಸ್ಬಿಐ ಅಧ್ಯಕ್ಷ ದಿನೇಶ್ ಖರಾ, “ಎಂಎಸ್ ಧೋನಿ ಅವರನ್ನು ಎಸ್ಬಿಐನ ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿಕೊಂಡಿರುವುದನ್ನು ತಿಳಿಸಲು ನಮಗೆ ಸಂತೋಷವಾಗುತ್ತಿದೆ. ಎಸ್ಬಿಐನ ಸಂತೃಪ್ತ ಗ್ರಾಹಕರಾಗಿ ಬ್ಯಾಂಕ್ನೊಂದಿಗೆ ಧೋನಿ ಒಡನಾಟ ಹೊಂದಿದ್ದು, …
Read More »ನ.9 ರಿಂದ ಮೈಸೂರಿನಲ್ಲಿ ಮುಖ್ಯಮಂತ್ರಿ ನಿವಾಸದ ಮುಂದೆ ರೈತರಿಂದ ಧರಣಿ ಸತ್ಯಾಗ್ರಹ: ಕುರುಬೂರು ಶಾಂತಕುಮಾರ್
ಮೈಸೂರು : ಇನ್ನು ಹತ್ತು ದಿನದಲ್ಲಿ ರೈತರಿಗೆ ಕಬ್ಬಿನ ಹೆಚ್ಚುವರಿ ದರ ಕೊಡಿಸದಿದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೈಸೂರಿನ ಮನೆಯ ಎದುರು ನ.9 ರಿಂದ ಬೃಹತ್ ಧರಣಿ ಸತ್ಯಾಗ್ರಹ ನಡೆಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘ ತೀರ್ಮಾನಿಸಿದೆ. ನಗರದ ಪಿಡಿಡಬ್ಲ್ಯೂ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಹಿಂದಿನ ಸಾಲಿನಲ್ಲಿ ನಿಗದಿ ಮಾಡಿದ್ದ ಕಬ್ಬಿನ ಹೆಚ್ಚುವರಿ …
Read More »ಟಗರು ಪಲ್ಯ’ಗೆ ಫುಲ್ ಡಿಮ್ಯಾಂಡ್; ಸಿನಿಮಾ ರಿಮೇಕ್ಗೂ ಹೆಚ್ಚಾಯ್ತು ಬೇಡಿಕೆ
ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿರುವ ಡಾಲಿ ಧನಂಜಯ್ ನಿರ್ಮಾಣದ ‘ಟಗರು ಪಲ್ಯ’ ಸಿನಿಮಾದ ರಿಮೇಕ್ಗೂ ಬೇಡಿಕೆ ಹೆಚ್ಚಿದೆ. ಕನ್ನಡ ಚಿತ್ರರಂಗದಲ್ಲಿ ಕರ್ಮಷಿಯಲ್ ಹಾಗೂ ಪ್ಯಾನ್ ಇಂಡಿಯಾ ಸಿನಿಮಾಗಳ ಅಬ್ಬರದ ನಡುವೆ ಈ ವಾರ ತೆರೆಗೆ ಬಂದ ಹಳ್ಳಿ ಸೊಗಡಿನ ‘ಟಗರು ಪಲ್ಯ’ವನ್ನು ಪ್ರೇಕ್ಷಕರು ಚಪ್ಪರಿಸಿಕೊಂಡು ಸವಿಯುತ್ತಿದ್ದಾರೆ. ಕಳೆದ ಶುಕ್ರವಾರ (ಅ.27) ರಾಜ್ಯಾದ್ಯಂತ ಬಿಡುಗಡೆಯಾದ ಚಿತ್ರ ಎಲ್ಲೆಡೆ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ದಿನದಿಂದ ದಿನಕ್ಕೆ ಶೋಗಳ ಸಂಖ್ಯೆ ಕೂಡ ಹೆಚ್ಚಾಗಿದೆ. ಸಂಬಂಧ, …
Read More »ಕ್ರಾಸಿಂಗ್ ವೇಳೆ ಎರಡು ಪ್ಯಾಸೆಂಜರ್ ರೈಲುಗಳ ಡಿಕ್ಕಿ
ವಿಜಯನಗರ (ಆಂಧ್ರಪ್ರದೇಶ): ರಾಜ್ಯದ ವಿಜಯನಗರ ಜಿಲ್ಲೆಯ ಕೊತ್ತವಲಸ ಮಂಡಲದ ಕಂಟಕಪಲ್ಲಿಯಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದೆ. ಕ್ರಾಸಿಂಗ್ ಸಂದರ್ಭದಲ್ಲಿ 2 ಪ್ಯಾಸೆಂಜರ್ ರೈಲು ಮುಖಾಮುಖಿ ಡಿಕ್ಕಿ ಹೊಡೆದಿವೆ. ಹಳಿ ದಾಟುವ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, 6 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಪರಿಣಾಮ ರಾಯಗಡ ಪ್ಯಾಸೆಂಜರ್ ರೈಲಿನ 3 ಬೋಗಿಗಳು ಹಳಿ ತಪ್ಪಿವೆ. ಇನ್ನು ವಿದ್ಯುತ್ ತಂತಿಗಳು ತುಂಡಾಗಿ ಬಿದ್ದು ಘಟನಾ …
Read More »2025ರ ಚಾಂಪಿಯನ್ಸ್ ಟ್ರೋಫಿಗೆ ವಿಶ್ವಕಪ್ ಮಾನದಂಡ: ಹಲವು ತಂಡಗಳಿಗೆ ಅಚ್ಚರಿ ಮೂಡಿಸಿದ ಐಸಿಸಿ ನಿರ್ಧಾರ
ನವದೆಹಲಿ: 2013 ಮತ್ತು 2017ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಭಾಗವಹಿಸುವಿಕೆಗೆ ಅನುಸರಿಸಿದ್ದ ಮಾನದಂಡವನ್ನು ಐಸಿಸಿ 2025ರ ಟೂರ್ನಿಗೆ ಬದಲಾಯಿಸಿದೆ. ಇದು ಈಗ ಹಲವು ಕ್ರಿಕೆಟ್ ಮಂಡಳಿಗಳ ಬೇಸರಕ್ಕೆ ಕಾರಣವಾದರೆ, ಇನ್ನೂ ಕೆಲ ಮಂಡಳಿಗಳಿಗೆ ಸಂತಸ ತರಲಿದೆ. 2025ಕ್ಕೆ ಪಾಕಿಸ್ತಾನದ ಆಥಿತ್ಯದಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. 2013 ಮತ್ತು 2017 ರಲ್ಲಿ ಐಸಿಸಿ ನೀಡುವ ಶ್ರೇಯಾಂಕದಲ್ಲಿ 8 ಸ್ಥಾನಗಳನ್ನು ಪಡೆದುಕೊಂಡ ತಂಡಗಳು ಎರಡು ಗುಂಪಾಗಿ ಲೀಗ್ನಲ್ಲಿ ಸ್ಪರ್ಧಿಸುತ್ತಿದ್ದವು. ಮುಂದಿನ ಬಾರಿಯ ಚಾಂಪಿಯನ್ಸ್ …
Read More »100 ರನ್ಗಳಿಂದ ಗೆದ್ದ ಭಾರತ; ವಿಶ್ವಕಪ್ನಿಂದ ಹೊರಬಿದ್ದ ಹಾಲಿ ಚಾಂಪಿಯನ್ …
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಂಗ್ಲರು ರೋಹಿತ್ ಪಡೆಯ ಅಬ್ಬರಕ್ಕೆ 100 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಇಂಗ್ಲೆಂಡ್ ತಂಡವನ್ನು 100 ರನ್ಗಳಿಂದ ಮಣಿಸಿದ ಟೀಂ ಇಂಡಿಯಾಕ್ಕೆ ಏಕದಿನ ವಿಶ್ವಕಪ್ನಲ್ಲಿ ಆಂಗ್ಲರ ವಿರುದ್ಧ ದಾಖಲೆಯ ಗೆಲುವಾಗಿದೆ. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಸತತ ಸೋಲುಗಳಿಂದ ತತ್ತರಿಸಿರುವ ಇಂಗ್ಲೆಂಡ್ ಐದನೇ ಸೋಲಿನೊಂದಿಗೆ ಪಾಯಿಂಟ್ …
Read More »
Laxmi News 24×7