Breaking News

Yearly Archives: 2023

ಬಿಗ್​ ಬಾಸ್​ ಮನೆಯಿಂದಲೇ ವರ್ತೂರು​ ಸಂತೋಷ್​ ಅರೆಸ್ಟ್​​.. ಕಾರಣವೇನು?

ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10ರ ಸ್ಪರ್ಧಿ ವರ್ತೂರು​ ಸಂತೋಷ್​ ಅವರನ್ನು ಬಿಗ್​ ಬಾಸ್​ ಮನೆಯಿಂದಲೇ ವಶಕ್ಕೆ ಪಡೆಯಲಾಗಿದೆ. ಹುಲಿ ಉಗುರಿನ ಡಾಲರ್​ ಧರಿಸಿದ್ದ ಆರೋಪದ ಮೇಲೆ ಅವರನ್ನು ಅರಣ್ಯಾಧಿಕಾರಿಗಳು ತಡರಾತ್ರಿ ಅರೆಸ್ಟ್​ ಮಾಡಿದ್ದಾರೆ. ಭಾನುವಾರ ರಾತ್ರಿ ಸಂತೋಷ್​ ಅವರನ್ನು ವಶಕ್ಕೆ ಪಡೆದಿದ್ದು, ಸದ್ಯ ಅವರು ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ಇಂದು ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಬಂಧನ: ಹುಲಿಯ ಉಗುರಿನ …

Read More »

ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ: ಶೋಭಾ ಕರಂದ್ಲಾಜೆ

ಮೈಸೂರು: ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ, ಅಲ್ಲಿಯೇ ಇರುತ್ತೇನೆ. ರಾಜ್ಯ ರಾಜಕಾರಣಕ್ಕೆ ಬರುವ ವಿಚಾರ ಇಲ್ಲ. ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದರು. ನಿನ್ನೆಯೇ ಮೈಸೂರಿಗೆ ಆಗಮಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ನಿನ್ನೆ ಸಂಜೆ ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲುಗಳ ಮೂಲಕ ಹತ್ತಿ, ಅಲ್ಲಿ ಚಾಮುಂಡೇಶ್ವರಿಯಲ್ಲಿ ಮತ್ತೇ ನರೇಂದ್ರ ಮೋದಿ ಪ್ರಧಾನಿಯಾಗಬೇಕು ಎಂದು ಬೇಡಿಕೊಂಡು, ಪೂಜೆ ಸಲ್ಲಿಸಿದರು. ಅಭಿಮನ್ಯು ಆನೆಗೆ …

Read More »

100 ಮೆಟ್ರಿಕ್ ​ಟನ್​ಗೂ ಅಧಿಕ ಅಕ್ರಮ ಮರಳು ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಲು ಸರ್ಕಾರ ಅಧಿಕೃತವಾಗಿ ಅನುಮತಿ ನೀಡಬೇಕೆಂಬ ಒತ್ತಾಯ ಕಳೆದ ಎರಡು ವರ್ಷಗಳಿಂದ ಕೇಳಿಬರುತ್ತಿದೆ. ಮತ್ತೊಂದೆಡೆ, ಜಿಲ್ಲೆಯ ಕಾಳಿ ನದಿಯಲ್ಲಿ ಎಗ್ಗಿಲ್ಲದೇ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ. ದಂಧೆಕೋರರು ಬೇಕಾಬಿಟ್ಟಿ ದರಕ್ಕೆ ಮರಳು ಮಾರಾಟ ಮಾಡುತ್ತಿರುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿ ಮರಳು ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಕರಾವಳಿ ಭಾಗದ ಕಾಳಿ, ಶರಾವತಿ, ಅಘನಾಶಿನಿ ಹಾಗೂ …

Read More »

ರಾಜ್ಯ ಮಟ್ಟದ ಚನ್ನಮ್ಮನ ಕಿತ್ತೂರು ಉತ್ಸವಕ್ಕೆ ಅದ್ಧೂರಿ ಚಾಲನೆ:

ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ಚನ್ನಮ್ಮನ ರಾಜ್ಯ ಮಟ್ಟದ ಕಿತ್ತೂರು ಉತ್ಸವ-2023ರ ಭವ್ಯ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಬೆಳಿಗ್ಗೆ ಚಾಲನೆ ನೀಡಿದರು. ರಾಜ್ಯದ ವಿವಿಧೆಡೆ ಸಂಚರಿಸಿ ಬೈಲಹೊಂಗಲದಲ್ಲಿ ಇರುವ ಚನ್ನಮ್ಮನ ಸಮಾಧಿ ಸ್ಥಳದಿಂದ ಆಗಮಿಸಿ ಬಂದ ವಿಜಯಜ್ಯೋತಿಯನ್ನು ಕಿತ್ತೂರಿನ ಚನ್ನಮ್ಮ ವೃತ್ತದಲ್ಲಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ವಿಜಯಜ್ಯೋತಿಯನ್ನು ಸ್ವಾಗತಿಸಿ, ಸಂಸ್ಥಾನದ ಧ್ವಜಾರೋಹಣವನ್ನು ಸತೀಶ್ ಜಾರಕಿಹೊಳಿ ನೆರವೇರಿಸಿದರು. ನಂತರ ಚನ್ನಮ್ಮ ಪುತ್ಥಳಿಗೆ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಸಂಸದೆ …

Read More »

ಎರಡು ಅವಧಿಗೆ ಅಧಿಕಾರದಲ್ಲಿದ್ದರೂ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವಲ್ಲಿ ಬಿಜೆಪಿ ವಿಫಲವಾಗಿದೆ ಎಂದ ದೆಹಲಿ ಸಿಎಂ

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು ದೇಶಭಕ್ತಿಯ ಶ್ರೇಷ್ಠ ಕಾರ್ಯ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್​ ಹೇಳಿದ್ದಾರೆ. ತಮ್ಮ ಚುನಾವಣಾ ಕ್ಷೇತ್ರವಾದ ನವದೆಹಲಿಯಲ್ಲಿ ಪಕ್ಷದ ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್​, ಕೇಸರಿ ಪಕ್ಷ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯಲು ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. “ನಮ್ಮ ಪಕ್ಷದ ಸ್ವಯಂಸೇವಕರು ಯಾರೂ ಯಾವುದೇ ರಾಜಕೀಯ ಹಿನ್ನೆಲೆಯಿಂದ ಬಂದವರಲ್ಲ. ಆದರೂ ನನ್ನ ಕ್ಷೇತ್ರದ ಜನರು ಸ್ವಯಂಸೇವಕರ …

Read More »

ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಾಜ್ ವೆಸ್ಟೆಂಡ್​​ನಲ್ಲಿ ಏತಕ್ಕಾಗಿ ಇದ್ದರು:C,M

ಬೆಂಗಳೂರು : ಕುಮಾರಸ್ವಾಮಿ ಸಿಎಂ ಆಗಿದ್ದಾಗ ಎಲ್ಲಿದ್ರು ಅಂತಾ ಗೊತ್ತಿದೆಯಲ್ಲ.?. ಇವರು ಇದ್ದದ್ದು ಎಲ್ಲಿ?. ಏತಕ್ಕಾಗಿ ಅಲ್ಲಿದ್ದರು ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಟೌನ್ ಹಾಲ್ ಬಳಿಯ ಕಿತ್ತೂರು ರಾಣಿ ಚೆನ್ನಮ್ಮ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ತಾಜ್​ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇದ್ರಲ್ವಾ ಯಾಕೆ ಇದ್ರು?. ಇವರು ಇದ್ದದ್ದು ಎಲ್ಲಿ?. ಏತಕ್ಕೋಸ್ಕರ …

Read More »

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಆಹಾರದಲ್ಲಿ ಹುಳು

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್‌ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಪಂದ್ಯದ ಸಂದರ್ಭದಲ್ಲಿ ಭದ್ರತೆಗಾಗಿ 970 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯೊಂದಕ್ಕೆ ವಹಿಸಿತ್ತು. ಈ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯು ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿರುವ …

Read More »

ಬಾಗಲಕೋಟೆಯಲ್ಲಿ ಗಮನ ಸೆಳೆದ ಛಪ್ಪನ್ ಭೋಗ್​ ಆಚರಣೆ

ಬಾಗಲಕೋಟೆ : ದಸರಾ ಹಬ್ಬದ ನಿಮಿತ್ತ ನಗರದಲ್ಲಿರುವ ಜಗದಂಬಾ ದೇವಸ್ಥಾನದಲ್ಲಿ ಛಪ್ಪನ್ ಭೋಗ್​ ಎಂಬ ವಿಶೇಷ ಪೂಜೆ ನೆರವೇರಿಸಲಾಯಿತು. 56 ಬಗೆಯ ತಿಂಡಿ ತಿನಿಸು ಹಾಗೂ ಹಣ್ಣು ಹಂಪಲುಗಳನ್ನು ದೇವಿಯ ಮುಂದೆ ಇಟ್ಟು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಎಲ್ಲ ತಿಂಡಿಗಳನ್ನು ಒಂದೆಡೆ ಸೇರಿಸಿ ಪ್ರಸಾದ ವಿತರಣೆ ಮಾಡಲಾಯಿತು. ಯಾವುದೇ ಜಾತಿ, ಮತ, ಪಂಥ ಎನ್ನದೇ ಎಲ್ಲ ತರಹದ ಭಕ್ತರು ತಂದಿರುವ ಪ್ರಸಾದ ವಿತರಿಸುವ ಮೂಲಕ ಗಮನ ಸೆಳೆಯಲಾಯಿತು. ದಸರಾ ಹಬ್ಬ …

Read More »

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ: ಜನವರಿ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಸಲೀಂ ಅಹ್ಮದ್

ಧಾರವಾಡ: ಎರಡೂವರೆ ವರ್ಷದ ಬಳಿಕ ಸಚಿವ ಸಂಪುಟ ಪುನರ್‌ರಚನೆ ವಿಚಾರಕ್ಕೆ ಪರಿಷತ್​ ಮುಖ್ಯ ಸಚೇತಕ ಸಲೀಂ ಅಹ್ಮದ್ ಪ್ರತಿಕ್ರಿಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಈ ಬಗ್ಗೆ ಚರ್ಚೆ ಸೂಕ್ತವಲ್ಲ ಎಂದು ಹೇಳಿದ್ದಾರೆ. ಮುಖಂಡರು, ಶಾಸಕರು ಚರ್ಚಿಸಬೇಡಿ ಎಂದಿದ್ದಾರೆ. ಸಮಯ, ಸಂದರ್ಭ ಬಂದಾಗ ವರಿಷ್ಠರು ಹೇಳುತ್ತಾರೆ ಎಂದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ವಿಚಾರದ ಬಗ್ಗೆ ಮಾತನಾಡಿ, ಈಗಾಗಲೇ 28 ಲೋಕಸಭಾ ವೀಕ್ಷಕರ ನೇಮಕವಾಗಿದೆ. ಎಲ್ಲ ಜಿಲ್ಲೆಗಳಲ್ಲಿ ವೀಕ್ಷಕರು ಸಭೆಗಳನ್ನು ಮಾಡುತ್ತಿದ್ದಾರೆ. ಶಾಸಕರು, ಮಾಜಿ …

Read More »

ಕಸಾಪ ತಾಲ್ಲೂಕಾಧ್ಯಕ್ಷ ಸುರೇಶ ಸಿದ್ದಪ್ಪಾ ಹಂಜಿ ಅವರಿಗೆ ಸತ್ಕಾರ

ಬೆಳಗಾವಿ : ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುರೇಶ ಸಿದ್ದಪ್ಪಾ ಹಂಜಿ ಅವರು ಸಾಮಾಜಿಕ ಶೈಕ್ಷಣಿಕ ಸಾಂಸ್ಕೃತಿಕ ರಂಗಗಳಲ್ಲಿ ಮಾಡಿರುವ ಅಮೋಘ ಸೇವೆಯನ್ನು ಗುರುತಿಸಿ É ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಠಾನ ದ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಸಮಾಜ ಸೇವಾ ರತ್ನ ಪ್ರಶಸ್ತಿ ಲಭಿಸಿರುವ ಕಾರಣ ಬೆಳಗಾವಿ ತಾಲೂಕಿನ ನಿಂಗೆನಟ್ಟಿ ಗ್ರಾಮದ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಭೀಮರಾವ್ ಧನಪ್ಪಾ ನಾಯ್ಕ ಹಾಗೂ ಬಂಬರಗೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ …

Read More »