Breaking News

Yearly Archives: 2023

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ

ಶಹಾಪುರ ಎಸ್ ಬಿಐ ವೃತ್ತದಿಂದ ಹಳೆ ಪಿಬಿ ರಸ್ತೆಯ ಅವೈಜ್ಞಾನಿಕವಾಗಿ ರಸ್ತೆ ಅಗಲೀಕರಣ ಮಾಡಿದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಶುಕ್ರವಾರ ರಾಜಕುಮಾರ ಟೋಪಣ್ಣವರ ಮತ್ತು ಸುಜೀತ ಮುಳಗುಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಶಹಾಪುರದ ಎಸ್ ಬಿಐ ವೃತ್ತದಿಂದ ಹಳೆ ಪಿ.ಬಿ.ರಸ್ತೆಯ ಅಗಲೀಕರಣದ ಸಂದರ್ಭದಲ್ಲಿ ಬಿಜೆಪಿ ನಾಯಕರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಸ್ಮಾಟ್೯ ಸಿಟಿಯಿಂದ ರಸ್ತೆ ಅಗಲೀಕರಣ ಮಾಡಲಾಗಿದೆ. ಕೋಟ್ಯಂತರ ರೂ. ವೆಚ್ಚ ಮಾಡಿ ರಸ್ತೆ ನಿರ್ಮಾಣ …

Read More »

ಬಿಜೆಪಿ ಮತ್ತು ಜೆಡಿಎಸ್​ನಿಂದ 10 ರಿಂದ 15 ಮಂದಿ ಕಾಂಗ್ರೆಸ್​ ಸೇರಲಿದ್ದಾರೆ: ಚಲುವರಾಯಸ್ವಾಮಿ

ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್ ಸೇರ್ಪಡೆಯಾಗುವವರ ಹೆಸರನ್ನು ಹೇಳಲು ಸಾಧ್ಯವಿಲ್ಲ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಇಂದು ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ 10 …

Read More »

ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ

ಬೆಂಗಳೂರು : ನಮ್ಮ ಕುಟುಂಬದ ಯಾವೊಬ್ಬ ವ್ಯಕ್ತಿ ಹೆಸರಲ್ಲಿ ನೈಸ್ ಆಸ್ತಿ ಇಲ್ಲ. ಒಂದು ವೇಳೆ ನಮ್ಮ ಕುಟುಂಬದ ಒಬ್ಬರ ಹೆಸರಲ್ಲಿ ಜಮೀನು ಇದ್ದರೂ ಇಡೀ ಕುಟುಂಬ ರಾಜಕೀಯ ನಿವೃತ್ತಿ ಪಡೆಯುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ಜೆಡಿಎಸ್​​ ಕಚೇರಿ ಜೆಪಿ ಭವನದಲ್ಲಿ ಇಂದು ನಡೆಯುತ್ತಿರುವ ಕೋರ್ ಕಮಿಟಿ ಸಭೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನೈಸ್ ವಿಚಾರವಾಗಿ ಸಂಸದ ಡಿ ಕೆ ಸುರೇಶ್ …

Read More »

ಕಾಂಗ್ರೆಸ್​ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭ

ಬೆಂಗಳೂರು: ಕಾಂಗ್ರೆಸ್​ನಲ್ಲಿ ಮತ್ತೆ ಪತ್ರ ಸಮರ ಪ್ರಾರಂಭವಾಗಿದೆ. ಈ ಬಾರಿ ವಿಧಾನ ಪರಿಷತ್ ನಾಮನಿರ್ದೇಶನ ವಿಚಾರದಲ್ಲಿ ಜಟಾಪಟಿ ಶುರುವಾಗಿದ್ದು, ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಕ್ಷೇಪಿಸಿ ಎಐಸಿಸಿ ಅಧ್ಯಕ್ಷರಿಗೆ ನಾಲ್ವರು ಸಚಿವರು ಪತ್ರ ಬರೆದಿದ್ದಾರೆ. ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಹೆಚ್.ಸಿ.ಮಹದೇವಪ್ಪ ಹಾಗು ಆರ್.ಬಿ.ತಿಮ್ಮಾಪುರ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಸುಧಾಮ್ ದಾಸ್ ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಯಾಗಿ ಇದ್ದವರು. ಕೆಲ ವರ್ಷಗಳ ಹಿಂದೆ ಏಕಾಏಕಿ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮಾರ್ಚ್ 2023ಕ್ಕೆ ಮಾಹಿತಿ ಆಯುಕ್ತರ …

Read More »

ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ ಅಂದುಕೊಂಡ ಮಗು ಅಂತ್ಯಸಂಸ್ಕಾರ ಮಾಡುವ ವೇಳೆ ಜೀವಂತ

ಧಾರವಾಡ: ಮೃತಪಟ್ಟಿದ್ದಾನೆ ಅಂದುಕೊಂಡಿದ್ದ ಮಗುವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡುವಾಗ ಜೀವಂತವಾಗಿರುವುದು ಗೊತ್ತಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎಂಬ ಮಗು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ಕಿಮ್ಸ್ ವೈದ್ಯರು ಹೇಳಿದ್ದರು. ಹೀಗಾಗಿ ಆಕಾಶನನ್ನು ಊರಿನಲ್ಲಿಯೇ ಅಂತ್ಯಕ್ರಿಯೆ ಮಾಡಲು ಪಾಲಕರು ಬಸಾಪುರ ಗ್ರಾಮಕ್ಕೆ ತೆಗೆದುಕೊಂಡು …

Read More »

ಯಾರೂ ಪಕ್ಷ ಬಿಟ್ಟು ಹೋಗಲ್ಲ, ಮೈತ್ರಿ ಉಳಿಸಿಕೊಳ್ಳುವಲ್ಲಿ‌ ಕಾಂಗ್ರೆಸ್ ವಿಫಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪಗಳು ಕೇಳಿಬಂದಿವೆ. ದೂರು ಕೊಟ್ಟ ಗುತ್ತಿಗೆದಾರರನ್ನು ಪೊಲೀಸ್ ಠಾಣೆಗೆ ಕರೆಯಿಸಿ ವಿಚಾರಣೆ ನಡೆಸಲಾಗುತ್ತಿದೆ. ಆದ್ರೆ, ಗುತ್ತಿಗೆದಾರರನ್ನು ಹೆದರಿಸಿ, ಬೆದರಿಸಿ ಕೇಸ್​ ಉಲ್ಟಾ ಹೊಡೆಯುವ ಹಾಗೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, “ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ ಎಂದು ರಾಮಲಿಂಗಾರೆಡ್ಡಿಗೆ ಹೇಗೆ ಗೊತ್ತು?. ಅವರೇನು ಬಿಜೆಪಿ ಪಕ್ಷದಲ್ಲಿದ್ದಾರಾ?, ಸದ್ಯದಲ್ಲೇ ಪ್ರತಿಪಕ್ಷ ನಾಯಕನ ನೇಮಕವಾಗುತ್ತದೆ. ಚಲುವರಾಯಸ್ವಾಮಿ ಸೇರಿದಂತೆ …

Read More »

1,500 ಎಳನೀರು ಕಳ್ಳತನ! UPI ಪಾವತಿಯಲ್ಲಿ ಸಿಕ್ಕಿಬಿದ್ದ ‘ಎಳನೀರು ಕಳ್ಳರು’!

ಬೆಂಗಳೂರು : ರಸ್ತೆಬದಿಯಲ್ಲಿ ಮಾರಾಟಕ್ಕಿಡುತ್ತಿದ್ದ ಎಳನೀರನ್ನು ಕದ್ದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಜಯನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಟಾಟಾ ಏಸ್ ವಾಹನದಲ್ಲಿ ಬಂದು 1,500 ಎಳನೀರು ಕದ್ದು ತಲೆಮರೆಸಿಕೊಂಡಿದ್ದ ಗೌತಮ್, ರಘು ಹಾಗೂ ಮಣಿಕಂಠ ಬಂಧಿತ ಆರೋಪಿಗಳು. ಪ್ರಕರಣದ ಸಂಪೂರ್ಣ ವಿವರ: ಜಯನಗರ ರಾಷ್ಟ್ರೀಯ ವಿದ್ಯಾಲಯ ಮೆಟ್ರೊ ನಿಲ್ದಾಣದ ಸಮೀಪ ರಾತ್ರೋರಾತ್ರಿ ಟಾಟಾ ಏಸ್ ವಾಹನದ ನಂಬರ್ ಪ್ಲೇಟಿಗೆ ಮಸಿ ಬಳಿದು ಬರುತ್ತಿದ್ದ ಆರೋಪಿಗಳು ಎಳನೀರು ಅಂಗಡಿಗಳಲ್ಲಿ ನಿರಂತರವಾಗಿ ಕಳ್ಳತನ ಮಾಡುತ್ತಿದ್ದರು. ಆಗಸ್ಟ್ …

Read More »

ಸದ್ಯಕ್ಕೆ ಎಪಿಎಲ್, ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ- ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಕೆಗೆ ನಾವು ಅವಕಾಶ ಕೊಟ್ಟಿಲ್ಲ. ಕಾರಣವೇನು ಅಂತ ಸದ್ಯದಲ್ಲೇ ಹೇಳುತ್ತೇವೆ. ಇನ್ನೂ ಒಂದಿಷ್ಟು ದಿನ ಎಪಿಎಲ್, ಬಿಪಿಎಲ್ ಕಾರ್ಡ್​ಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು. ವಿಧಾನಸೌಧದಲ್ಲಿಂದು ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ಮುಂದಿನ ತಿಂಗಳು ಪಡಿತರದಲ್ಲಿ ಅನ್ನಭಾಗ್ಯದಡಿ 5 ಕೆಜಿ ಅಕ್ಕಿ ಸಿಗುತ್ತೆ ಅಂತ ಡೆಡ್‌ಲೈನ್ ಕೊಡುವುದಕ್ಕೆ ಆಗಲ್ಲ. ಅಧಿಕಾರಿಗಳ ಜತೆ …

Read More »

ಆರ್​ಜೆಡಿ ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅಪರಾಧಿ; ಸುಪ್ರೀಂ ಕೋರ್ಟ್​ ತೀರ್ಪು

ನವದೆಹಲಿ : 1995 ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖಂಡ ಮತ್ತು ಮಾಜಿ ಸಂಸದ ಪ್ರಭುನಾಥ್ ಸಿಂಗ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತೀರ್ಪು ನೀಡಿದೆ. ಸಿಂಗ್ ಅವರನ್ನು ಖುಲಾಸೆಗೊಳಿಸಿದ ಪಾಟ್ನಾ ಹೈಕೋರ್ಟ್ ಆದೇಶವನ್ನು ನ್ಯಾಯಾಲಯ ರದ್ದುಗೊಳಿಸಿತು. ಜೋಡಿ ಕೊಲೆ ಪ್ರಕರಣದಲ್ಲಿ ಪ್ರಭುನಾಥ್ ಸಿಂಗ್ ದೋಷಿ ಎಂದು ತೀರ್ಪು ನೀಡಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎ.ಎಸ್. ಓಕಾ ಮತ್ತು ವಿಕ್ರಮ್ …

Read More »

ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ.

ಬೆಳಗಾವಿ: ಯಾವ ಬಿಜೆಪಿ ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಎಂಬ ಬಗ್ಗೆ ನಿಖರವಾಗಿ ಹೇಳಿಲ್ಲ. ಕೇವಲ ಮಾಧ್ಯಮಗಳಲ್ಲಿ ಊಹಾಪೋಹಗಳು ಸೃಷ್ಟಿ ಆಗುತ್ತಿವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ‌. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನನ್ನ ಮಾಹಿತಿ ಪ್ರಕಾರ ಯಾರು ಪಕ್ಷ ಬಿಟ್ಟು ಹೋಗುವವರಿಲ್ಲ. ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಹಾಗಾಗಿ ಬಿಜೆಪಿ ಬಿಟ್ಟು ಯಾಕೆ ಹೋಗುತ್ತಾರೆ ಎಂದು …

Read More »