Breaking News

Yearly Archives: 2023

ನಿರುದ್ಯೋಗ ಇದೆ ಅಂತ ಹೇಳಿ ನಾನು ಯಾರನ್ನೋ ಎಂಪಿಯನ್ನೋ, ಎಂಎಲ್‌ಎಯನ್ನೋ ಹೋಗಿ ಕೊಲೆ ಮಾಡ್ತೀನಿ ಅಂದ್ರೆ ಆಗುತ್ತಾ ಎಂದ: ಜೋಶಿ

ಹುಬ್ಬಳ್ಳಿ: ನಿರುದ್ಯೋಗ ಇದೆ ಅಂತ ಹೇಳಿ ನಾನು ಯಾರನ್ನೋ ಎಂಪಿಯನ್ನೋ, ಎಂಎಲ್‌ಎಯನ್ನೋ ಹೋಗಿ ಕೊಲೆ ಮಾಡ್ತೀನಿ ಅಂದ್ರೆ ಆಗುತ್ತಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಪ್ರಶ್ನಿಸಿದ್ದಾರೆ. ಸಂಸತ್‌ನಲ್ಲಿ ಭದ್ರತಾ ಲೋಪ ವಿಚಾರದಲ್ಲಿ ನಿರುದ್ಯೋಗವೂ (Unemployment) ಕಾರಣ ಎಂಬ ರಾಹುಲ್ ಗಾಂಧಿ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಪ್ರಹ್ಲಾದ್ ಜೋಶಿ, ನಿರುದ್ಯೋಗ ಇದೆ ಅಂತ ಹೇಳಿ ನಾನು ಯಾರನ್ನೋ ಎಂಪಿಯನ್ನೋ, ಎಂಎಲ್‌ಎಯನ್ನೋ ಹೋಗಿ ಕೊಲೆ ಮಾಡ್ತೀನಿ ಅಂದ್ರೆ ಆಗುತ್ತಾ? …

Read More »

ವಂಟಮೂರಿ ದೌರ್ಜನ್ಯ ನಡೆಸಿದ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.

ಬೆಳಗಾವಿ: ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಮೆರವಣಿಗೆ ಮಾಡಿ, ಹಲ್ಲೆಗೈದ ಅಮಾನವೀಯ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದೆ. ಈ ಬಗ್ಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ಡಿಜಿಪಿ ಅವರಿಗೆ ಪತ್ರ ಬರೆದಿದ್ದು, ಸಿಐಡಿ ಅಧಿಕಾರಿಗಳು ಕೈಗೊಳ್ಳುವ ತನಿಖೆಗೆ ಬೆಳಗಾವಿ ನಗರ ಪೊಲೀಸ್‌ ಆಯುಕ್ತರು ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ. ಮಹಿಳೆಯ ಮೇಲಿನ ಅಮಾನವೀಯ ಕೃತ್ಯಕ್ಕೆ ಇಡೀ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಹೈಕೋರ್ಟ್‌ ಕೂಡ ಸ್ವಯಂಪ್ರೇರಿತ ಪ್ರಕರಣ …

Read More »

ಶಿರಸಿ: ಶಾಲ್ಮಲಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ಶಿರಸಿ: ರಜೆಯ ದಿನ ಕಳೆಯಲು ತೆರಳಿದ್ದ ಒಂದೇ ಕುಟುಂಬದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಾಲ್ಮಲಾ ನದಿಯಲ್ಲಿ ಇಂದು ನಡೆದಿದೆ. ಇತ್ತೀಚೆಗೆ ಶಿರಸಿಯ ಬಂಡಲದಲ್ಲಿ ಸಂಭವಿಸಿದ್ದ ಬಸ್​ ಮತ್ತು ಕಾರು ನಡುವಿನ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಜರುಗಿದೆ.‌ ಶಿರಸಿಯ ಭೈರುಂಭೆ ಸಮೀಪ ಶಾಲ್ಮಲಾ ನದಿಯಲ್ಲಿ ಘಟನೆ ಸಂಭವಿಸಿದೆ.‌ ಮೃತರೆಲ್ಲರೂ ಶಿರಸಿ ನಗರದವರು. ರಾಮನಬೈಲಿನ ಮೌಲಾನಾ ಅಹಮ್ಮದ್ …

Read More »

ವಂಟಮೂರಿ ಹಲ್ಲೆ ಪ್ರಕರಣ – ಸಂತ್ರಸ್ತ ಭೇಟಿಗೆ ಹೈಕೋರ್ಟ್‌ ನಿರ್ಬಂಧ

ಬೆಳಗಾವಿ : ವಂಟಮೂರಿಯಲ್ಲಿ (Vantamoori) ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ (Assault) ನಡೆಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್‌ (High court) ನಿರ್ಬಂಧ ವಿಧಿಸಿದೆ. ಶನಿವಾರವಷ್ಟೇ ಬಿಜೆಪಿ (BJP) ಮಹಿಳಾ ನಿಯೋಗ ತಂಡದೊಡನೆ ತೆರಳಿ ಮಹಿಳೆಯೊಡನೆ ಮಾತುಕತೆ ನಡೆಸಿತ್ತು.   ಇನ್ನು ಮುಂದೆ ಮಹಿಳೆಯನ್ನು ಭೇಟಿಯಾಗುವ ಮಾಧ್ಯಮದವರು, ರಾಜಕಾರಣಿಗಳು ಹಾಗೂ ಮಾನವಹಕ್ಕು ಹೋರಾಟಗಾರರಿಗೆ ಹೈಕೋರ್ಟ್‌ ಷರತ್ತುಬದ್ದ ನಿರ್ಬಂಧ ವಿಧಿಸಿದೆ. ಮಹಿಳೆಯನ್ನು ಭೇಟಿಯಾಗಲು ವೈದ್ಯರ ಲಿಖಿತ ಪೂರ್ವಾನುಮತಿ ಅವಶ್ಯ ಎಂದು ಹೈಕೋರ್ಟ್‌ …

Read More »

ಮುಖ್ಯಮಂತ್ರಿಯಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ನಲ್ಲಿ ಗೊಂದಲ

ಗದಗ: ಮುಖ್ಯಮಂತ್ರಿ (CM) ಸಿದ್ದರಾಮಯ್ಯ (siddaramaiah) ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ (helicopter landing) ವೇಳೆ ಗೊಂದಲವಾದ ಘಟನೆ ಗದಗದಲ್ಲಿ (gadag) ಭಾನುವಾರ ನಡೆದಿದೆ. ಬಾಲಕಿಯರ ಬಾಲ ಮಂದಿರ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ನಲ್ಲಿ ಆಗಮಿಸಿದ್ದರು. ಈ ವೇಳೆ ಎರಡು ಹೆಲಿಕಾಪ್ಟರ್ ಗಳಿದ್ದು, ಲ್ಯಾಂಡಿಂಗ್ ವೇಳೆ ಪೈಲೆಟ್ ಗಳಲ್ಲಿ ಗೊಂದಲ ಉಂಟಾಗಿತ್ತು. ಹೆಲಿಪ್ಯಾಡ್ ಗೆ ಮೊದಲು ಆಗಮಿಸಿದ ಒಂದು ಹೆಲಿಕಾಪ್ಟರ್ ಅರ್ಧ ಇಳಿಸಿ ಮತ್ತೆ ಮೇಲೆ ಹಾರಿತು. ಬಳಿಕ …

Read More »

ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು ಶಾಸಕ ಕೋನರೆಡ್ಡಿ

ಹುಬ್ಬಳ್ಳಿ, ಡಿ.17: ನವಲಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕಎನ್​ಎಚ್​ ಕೋನರೆಡ್ಡಿ(NH Konareddy) ಅವರು ಮತ್ತೊಮ್ಮೆ ಸಚಿವ ಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ. ನಾನು ಒಂದು ಬಾರಿ ಕೃಷಿ ಮಂತ್ರಿ ಆಗಬೇಕು. ಒಬ್ಬ ಶಾಸಕನಾಗಿ ನಾನು ನನ್ನ ಹಕ್ಕು ಕೇಳಿದ್ದೇನೆ. ಒಂದು ಸಾರಿ ಕೃಷಿ ಮಂತ್ರಿ ಮಾಡಿ ಎಂದು ಕೇಳಿದ್ದೇನೆ ಎಂದರು. ನಮಗೆ ಹೈಕಮಾಂಡ್ ಇದೆ, ಪಕ್ಷದ ಅಧ್ಯಕ್ಷರಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೋಡೆತ್ತು. ಕಾರ್ಪೋರೆಟ್​ಗಳು ಮೇಯರ್ ಆಗಬೇಕು ಅಂತಾರೆ. ಶಾಸಕರು ಮಂತ್ರಿ ಆಗಬೇಕು ಅಂತಾರೆ. ಆದರೆ …

Read More »

ಯತ್ನಾಳ್‌ ಹುಚ್ಚು ನಾಯಿಯಿದ್ದಂತೆ: ರೇಣುಕಾಚಾರ್ಯ

ದಾವಣಗೆರೆ: ಯತ್ನಾಳ್‌ (Basanagouda Patil Yatnal) ಹುಚ್ಚು ನಾಯಿಯಿದ್ದಂತೆ ಎಂದು ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್‌ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತದೆ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದ ಅವರು, ಸರ್ವಜ್ಞರ ವಚನ ಹೇಳುವ ಮೂಲಕ …

Read More »

ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪ ಚೇತನ್ ವಿರುದ್ಧ ದೂರು ದಾಖಲ

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇರೆಗೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಕೀಲ ಆರ್​ಎಲ್​ಎನ್ ಮೂರ್ತಿ ಎಂಬುವವರು ಶೇಷಾದ್ರಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೇತನ್ ಪೋಸ್ಟ್​​ನಲ್ಲೇನಿದೆ? ”ಇಬ್ಬರು ಯೋಧರ ಕಥೆ: ಕೆಂಪೇಗೌಡ – ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ …

Read More »

ಲೋಕಸಭೆ ಚುನಾವಣೆ: ಶೆಟ್ಟರ್‌ಗೆ ಕಾಂಗ್ರೆಸ್ ಟಿಕೆಟ್?

ಹುಬ್ಬಳ್ಳಿ: “ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಂಬಂಧ ಜಗದೀಶ್ ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಿದ್ದೀವಿ. ಅವರೂ ಆಕಾಂಕ್ಷಿ ಅಂತ ಅಂದುಕೊಂಡಿದ್ದೀವಿ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶೆಟ್ಟರ್ ನಿವಾಸದಲ್ಲಿಂದು ಮಾತನಾಡಿದ ಅವರು, “ನಮ್ಮ ಶಾಸಕರು, ಕಾರ್ಯಕರ್ತರು ಹಾಗೂ ಈ ಹಿಂದೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಯಾರಿಗೆ ಟಿಕೆಟ್​ ಕೊಡಬೇಕು ಎಂದು ಹೇಳ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ” ಎಂದರು. ಮುಂದುವರಿದು ಮಾತನಾಡಿದ ಸಿಎಂ, “ಪ್ರತಿ ಜಿಲ್ಲೆಯಲ್ಲೂ ಕೂಡ ಒಬ್ಬೊಬ್ಬ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದ್ದೇವೆ. ಅವರು …

Read More »

ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ.: ಜೋಶಿ

ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಹಾಲಿ ಕ್ಷೇತ್ರ ಹುಬ್ಬಳ್ಳಿ-ಧಾರವಾಡದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು. ವಸಂತ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾದರೂ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್​​ನಿಂದ ಸ್ಪರ್ಧಿಸಿದರೂ ಸಂತೋಷ. ಅವರ ಸ್ಪರ್ಧೆಯಿಂದ ನನಗೇನೂ ಭಯವಿಲ್ಲ. ಅದು ಅವರ ಪಾರ್ಟಿಯ …

Read More »