ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್ಡಬ್ಬ್ಯೂ, ಯುಆರ್ಡಬ್ಬ್ಯೂ, ಎಂಆರ್ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು. ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. …
Read More »Yearly Archives: 2023
ಸುವರ್ಣ ಸೌಧಕ್ಕೆ ರೈತರ ಮುತ್ತಿಗೆ ಯತ್ನ
ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧ ಬಳಿ ರೈತರು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಆಗಮಿಸಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಮತ್ತು ಕೃಷಿ ಸಚಿವ ಚೆಲುವರಾಯಸ್ವಾಮಿ ಸಮಸ್ಯೆ ಆಲಿಸಿದರು. ಸಾಲ ಮನ್ನಾ, ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಚನ್ನಮ್ಮ ವೃತ್ತದಿಂದ ಪಾದಯಾತ್ರೆ ಮೂಲಕ ಸುವರ್ಣ ಗಾರ್ಡನ್ ಬಳಿಯ ಟೆಂಟ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಂಜೆ 6 …
Read More »ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ. ಬಿಡುಗಡೆಗೆ ಆಗ್ರಹಿಸಿದ ಹೆಚ್ಡಿಕೆ
ಬೆಳಗಾವಿ: ತೀವ್ರ ಬರದಿಂದ ಕಂಗೆಟ್ಟಿರುವ ರೈತರ 2 ಲಕ್ಷ ರೂಪಾಯಿವರೆಗಿನ ಕೃಷಿ ಸಾಲ ಮನ್ನಾ ಮಾಡಬೇಕು. ರಾಜ್ಯ ಕೃಷಿ ವಲಯವನ್ನು ಬರದ ಸಂಕಷ್ಟದಿಂದ ಪಾರು ಮಾಡಲು ತಕ್ಷಣವೇ 10,000 ಕೋಟಿ ರೂ. ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿಂದು ಬರದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಸರ್ಕಾರಕ್ಕೆ ಪ್ರಚಾರದ ಮೇಲೆ ಇರುವ ಹುಚ್ಚು ರೈತರ ಬಗ್ಗೆ ಇಲ್ಲ ಎಂದು ಹೆಚ್ಡಿಕೆ …
Read More »ಕುಡಿಯುವ ನೀರಿಗಾಗಿ ಜಿ.ಪಂ.ಗಳಿಗೆ ಪ್ರತ್ಯೇಕ ಅನುದಾನ: ಪ್ರಿಯಾಂಕ್ ಖರ್ಗೆ
ಬೆಳಗಾವಿ/ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂತರ್ಜಲಮಟ್ಟ ಕುಸಿತಗೊಂಡಿದೆ. ಈ ಕುರಿತಾಗಿ ಅಧ್ಯಯನ ಮಾಡಿ ಸೂಕ್ತ ಶಿಫಾರಸು ಮಾಡಲು ತಜ್ಞರನ್ನು ಒಳಗೊಂಡ ವಾಟರ್ ಆಡಿಟ್ ಕಮಿಟಿ ರಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಗೆ ತಿಳಿಸಿದರು. ಇಂದು ಬರ ವಿಷಯದ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ರಾಜ್ಯ ಸರಕಾರವು ಎಲ್ಲಾ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದೆ. ಎಲ್ಲ ಜಿಲ್ಲಾ …
Read More »ಆರ್ಥಿಕ ಹೊರೆ ಹಿನ್ನೆಲೆ: ಕೃಷಿ ಪಂಪ್ ಸೆಟ್ಗಳ ಮೂಲಸೌಕರ್ಯ ವೆಚ್ಚ ಭರಿಸುವ ಪ್ರಸ್ತಾವನೆ ಮುಂದೂಡಿದ ಸಂಪುಟ ಸಭೆ
ಬೆಳಗಾವಿ: ಕೃಷಿ ಪಂಪ್ ಸೆಟ್ಗಳಿಗೆ ಮೂಲಸೌಕರ್ಯ ಒದಗಿಸುವ ವೆಚ್ಚನ್ನು ರೈತರೇ ಭರಿಸಬೇಕು ಎಂಬ ಆದೇಶ ಪರಿಷ್ಕರಿಸುವ ಪ್ರಸ್ತಾವನೆ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಹೀಗಾಗಿ ಈ ಪ್ರಸ್ತಾವನೆಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ. ಈ ಹಿಂದೆ ಕೃಷಿ ಪಂಪ್ ಸೆಟ್ಗಳಿಗೆ ಮೂಲಸೌಕರ್ಯ ಕಲ್ಪಿಸಲು, ವೆಚ್ಚವನ್ನು ರೈತರೇ ಭರಿಸಬೇಕು …
Read More »ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ ಟೆಂಟ್ವರೆಗೆ ರೈತರ ಬೃಹತ್ ಪಾದಯಾತ್ರೆ
ಬೆಳಗಾವಿ: ತೀವ್ರ ಬರಗಾಲ ಹಿನ್ನೆಲೆ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಸುವರ್ಣ ಗಾರ್ಡನ್ ಟೆಂಟ್ವರೆಗೆ ರೈತರ ಬೃಹತ್ ಪಾದಯಾತ್ರೆ ಆರಂಭವಾಯಿತು. ರಾಣಿ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಸಾವಿರಾರು ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ರೈತರ ಪ್ರತಿಭಟನೆಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ಸಾಥ್ ಕೊಟ್ಟರು. ಚೆನ್ನಮ್ಮ ವೃತ್ತದಿಂದ ಪಾದಯಾತ್ರೆ ಆರಂಭಿಸಿದ ರೈತರು ರಾಜ್ಯ ಮತ್ತು ಕೇಂದ್ರ …
Read More »ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ: ದಿನೇಶ್ ಗುಂಡೂರಾವ್
ಬೆಳಗಾವಿ/ಬೆಂಗಳೂರು: ರಾಜ್ಯದಲ್ಲಿ 461 ಸರ್ಕಾರಿ ವೈದ್ಯರ ಹುದ್ದೆಗಳು ಖಾಲಿ ಇವೆ. ಸದ್ಯ ಗುತ್ತಿಗೆ ಆಧಾರದಲ್ಲಿ ವೈದ್ಯರನ್ನು ನೇಮಿಸಿಕೊಂಡು ಸೇವೆ ನೀಡಲಾಗುತ್ತಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯರ ನೇಮಕಾತಿ ಮಾಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ವಿಧಾನಸಭಾ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ವೈದ್ಯರ ಕೊರತೆ ನಿವಾರಿಸಲು ಎಂಬಿಬಿಎಸ್ ಪೂರ್ಣಗೊಳಿಸಿದವರಿಗೆ …
Read More »ಸುವರ್ಣಸೌಧದಿಂದ ಸಾವರ್ಕರ್ ಫೋಟೋ ತೆಗೆದರೆ ಸೂಕ್ತ, ನನಗೆ ಬಿಟ್ಟರೆ ಇವತ್ತೇ ತೆರವು ಮಾಡುವೆ: ಪ್ರಿಯಾಂಕ್ ಖರ್ಗೆ
ಬೆಳಗಾವಿ : ಸುವರ್ಣಸೌಧ ವಿಧಾನಸಭೆಯಿಂದ ಸ್ವಾತಂತ್ರ್ಯ ವೀರ ವಿನಾಯಕ ದಾಮೋದರ ಸಾವರ್ಕರ್ ಅವರ ಫೋಟೋ ತೆಗೆದರೆ ಸೂಕ್ತ. ನನಗೆ ಬಿಟ್ಟರೆ ಇವತ್ತೇ ತೆರವು ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ಇಂದು ಮಾತನಾಡಿದ ಅವರು, ಸಾವರ್ಕರ್ ಫೋಟೋ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯಿಸಿ, ಯಾವ ತತ್ವ ಸಿದ್ದಾಂತದಲ್ಲಿ ಸಮಾನತೆ ಇಲ್ಲವೋ, ಸ್ವಾಭಿಮಾನದ ಬದುಕಿಲ್ಲವೋ ಅದನ್ನು ನಾನು ಒಪ್ಪಲ್ಲ. ಗಾಂಧಿ ಹತ್ಯೆಗೆ ಪ್ರೇರಣೆಯಾದ ತತ್ವವನ್ನು ಒಪ್ಪಲ್ಲ. ಹೀಗಾಗಿ ವಿಧಾನಸಭೆಯಿಂದ …
Read More »ವಾಯುವ್ಯಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ.
ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ಮರುನಾಮಕರಣವಾಗಿ ಎರಡು ವರ್ಷಗಳಾದರೂ ಇನ್ನೂ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯೆಂದೇ ಕರೆಯಲಾಗುತ್ತಿದೆ.ಸಾರಿಗೆ ಸಂಸ್ಥೆಗೆ ಕಿತ್ತೂರು ಕರ್ನಾಟಕ ಸಾರಿಗೆ ಸಂಸ್ಥೆ ಎಂದು ಮರುನಾಮಕರಣ ಮಾಡಬೇಕೆಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಇಂದು ರಾಜ್ಯ ಸಾರಿಗೆ ಸಚಿವ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಆಗ್ರಹಿಸಿದೆ. ಇಂದು ಮುಂಜಾನೆ ಸುವರ್ಣ ಸೌಧದಲ್ಲಿ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ನೇತೃತ್ವದ ನಿಯೋಗವು, 2019 ರ …
Read More »ಯತ್ನಾಳ್ ಒಬ್ಬ ಮಹಾನ್ ಸುಳ್ಳುಗಾರ : ಸಿದ್ದರಾಮಯ್ಯ
ಬೆಳಗಾವಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಮೌಲ್ವಿ ಜೊತೆ ವೇದಿಕೆ ಹಂಚಿಕೊಂಡ ಕುರಿತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಮ್ಮ ವಿರುದ್ಧ ಮಾಡಿರುವ ಟೀಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಗುರುವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ದ್ವೇಷ ರಾಜಕಾರಣ ಮಾಡುವುದೇ ಬಸನಗೌಡ ಪಾಟೀಲ್ ಯತ್ನಾಳ ಕೆಲಸ. ಮೌಲ್ವಿ ತನ್ವೀರ ಪೀರ್ ಹಾಶ್ಮಿ ನನಗೆ ಬಹಳ ವರ್ಷಗಳಿಂದ ಪರಿಚಯ ಇದ್ದಾರೆ. ಒಂದು ವೇಳೆ ಅವರಿಗೆ ಐಸಿಸ್ ಜೊತೆ ನಂಟಿದ್ದರೆ, ಕೇಂದ್ರದಲ್ಲಿ …
Read More »