Breaking News

Yearly Archives: 2023

ಹಾವೇರಿ: ಕಲ್ಯಾಣಿ ಚಾಲುಕ್ಯರ ಕಾಲದ ಶಿಲ್ಪಕಲೆಗೆ ಪ್ರಸಿದ್ಧಿ ‘ಮುಕ್ತೇಶ್ವರ ದೇವಸ್ಥಾನ’

ಹಾವೇರಿ: ಹಾವೇರಿ ಹಲವು ರಾಜಕುಟುಂಬಗಳ ಆಡಳಿತಕ್ಕೆ ಒಳಗಾದ ಜಿಲ್ಲೆ. ಇಲ್ಲಿ ಕದಂಬರಿಂದ ಹಿಡಿದು ಇತ್ತಿಚೀನ ಮೈಸೂರು ಅರಸರ ಆಳ್ವಿಕೆಯ ಕುರುಹುಗಳಿವೆ. ಅಷ್ಟೇ ಅಲ್ಲದೆ ಅನೇಕ ಸಾಮಂತರು ಸವಣೂರು ನವಾಬರು ಸಹ ಇಲ್ಲಿ ಆಡಳಿತ ಮಾಡಿದ್ದಾರೆ. ಈ ರೀತಿ ಆಡಳಿತ ನಡೆಸಿದ ರಾಜಮನೆತನಗಳು ಸಾಮಂತರು ಹಲವು ಸ್ಮಾರಕಗಳನ್ನು ಕಟ್ಟಿಸಿದ್ದಾರೆ. ಅಂತಹ ಪುರಾತನ ಸ್ಮಾರಕದಲ್ಲೊಂದು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚೌಡಯ್ಯದಾನಪುರದ ಮುಕ್ತೇಶ್ವರ ದೇವಾಲಯ. ಮುಕ್ತೇಶ್ವರ ದೇವಾಲಯ ಈ ಗ್ರಾಮದಲ್ಲಿ ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ …

Read More »

ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಸಮುದಾಯದ ಬಗ್ಗೆ ಮಾತನಾಡುವಾಗ ಎಚ್ಚರ ವಹಿಸಲಿ ಎಂದ :B.S.Y.

ಶಿವಮೊಗ್ಗ: ಮುಸ್ಲಿಂ ಸಮುದಾಯಕ್ಕೆ ಅನುದಾನ ನೀಡುವ ಕುರಿತು ಸಿಎಂ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯನ್ನು ಮಾಜಿ ಸಿಎಂ ಬಿ.ಎಸ್.​ ಯಡಿಯೂರಪ್ಪ ಅವರು ಟೀಕಿಸಿದ್ದಾರೆ. ಅವರು ರಾಜ್ಯದ ಸಿಎಂ ಆಗಿದ್ದುಕೊಂಡು ಒಂದು ಸಮುದಾಯವನ್ನು ಓಲೈಕೆ ಮಾಡುತ್ತಿರುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದರು. ನಗರದಲ್ಲಿನ ಅವರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರರಿಗೆ ಹಣ ಕೊಡಲು ಅಭ್ಯಂತರವಿಲ್ಲ. ಆದರೆ, ಹಣದ ಹೆಸರಲ್ಲಿ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿರೋದು ತರವಲ್ಲ. ಈ …

Read More »

‘ನಾನಾಗಿ ದೆಹಲಿಗೆ ಹೋಗುತ್ತಿಲ್ಲ. ದೆಹಲಿ ಕರೆ ಬಂದ ಬಳಿಕ ಹೋಗುತ್ತೇನೆ.: ಯತ್ನಾಳ್

ಬೆಳಗಾವಿ: ”ನಾನಾಗಿ ದೆಹಲಿಗೆ ಹೋಗುತ್ತಿಲ್ಲ. ದೆಹಲಿ ಕರೆ ಬಂದ ಬಳಿಕ ಹೋಗುತ್ತೇನೆ. ಆಗ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿಯಾಗಲು ತೆರಳುತ್ತೇನೆ. ಪಕ್ಷದ ಕಚೇರಿಯಿಂದ ಕರೆ ಬಂದಿದೆ. ವಿ. ಸೋಮಣ್ಣ, ರಮೇಶ್ ಜಾರಕಿಹೊಳಿಗೂ ಹೇಳಿರಬಹದು. ಆದರೆ, ದೆಹಲಿಗೆ ಹೋಗುವುದಂತೂ ನಿಶ್ಚಿತ, ಖಚಿತ” ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಮಾತನಾಡಿದ ಅವರು, ”ಸೋಮಣ್ಣ ಕಾರಣಾಂತರಗಳಿಂದ ಅವರು ಅವರ ತೀರ್ಮಾನವನ್ನು ಮುಂದೂಡಿದ್ದಾರೆ. ಭೇಟಿಯಾದಾಗ ಕರ್ನಾಟಕದ ಪರಿಸ್ಥಿತಿಯನ್ನು ಹೇಳುತ್ತೇನೆ. ಕರ್ನಾಟಕದಲ್ಲಿ ಏನು …

Read More »

ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್​ ಕಲಾಪದಲ್ಲಿ ಧರಣಿ

ಬೆಳಗಾವಿ/ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಿಜೆಪಿ ಸದಸ್ಯರು ವಿಧಾನ ಪರಿಷತ್ ನಲ್ಲಿ ಧರಣಿ ಮುಂದುವರೆಸಿದ್ದು, ಸದನದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು 10 ನಿಮಿಷಗಳ ಕಾಲ ಸಭಾಪತಿ ಬಸವರಾಜ ಹೊರಟ್ಟಿ ಮುಂದೂಡಿಕೆ ಮಾಡಿದರು.   ಕುಂದಾನಗರಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಮೂರನೇ ದಿನದ ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ 7ನೇ ವೇತನ ಆಯೋಗ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ …

Read More »

ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚನೆಗೆ ಸಿಎಂ ಸೂಚನೆ

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್ ಹಾಗೂ ಹಿರಿಯ ಸಾಹಿತಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ವಿಚಾರಣೆಗೆ ವಿಶೇಷ ನ್ಯಾಯಾಲಯ ರಚಿಸಲು ಸಿಎಂ ಸಿದ್ದರಾಮಯ್ಯ ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.   ಈ ಎರಡೂ ಪ್ರಕರಣಗಳ ಚಾರ್ಜ್ ಶೀಟ್ ಸಲ್ಲಿಸಿ ವರ್ಷಗಳು ಕಳೆದರೂ ನ್ಯಾಯಾಲಯಗಳಲ್ಲಿ ನಿಧಾನಗತಿಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ತಮ್ಮ ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಪ್ರಕರಣ ಸಂಬಂಧ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ …

Read More »

ಬೆಳೆಹಾನಿಗೆ2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ

ಬೆಳಗಾವಿ/ಬೆಂಗಳೂರು: ಕೇಂದ್ರದಿಂದ ಬರ ಪರಿಹಾರದ ಹಣ ಬಿಡುಗಡೆಯಾಗುತ್ತಿದ್ದಂತೆ ರೈತರಿಗೆ ಪಾವತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿಯವರೆಗೂ ತಾತ್ಕಾಲಿಕವಾಗಿ ಭಾಗಶಃ ಪರಿಹಾರದ ಭಾಗವಾಗಿ 2 ಸಾವಿರ ರೂ.ಗಳ ಮೊದಲ ಕಂತನ್ನು ಮುಂದಿನ ವಾರ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷ ಬರ ಜನರಿಗೆ ಬಾಧೆಯಾಗುತ್ತಿದೆ, ಸರ್ಕಾರ ಏನೆಲ್ಲಾ ಮಾಡಬೇಕೋ …

Read More »

ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ …

Read More »

ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ಮನೆ ಇರಲ್ಲ:H.D.K.

ಬೆಳಗಾವಿ/ಬೆಂಗಳೂರು : ವರ್ಗಾವಣೆ ದಂಧೆ ಸೇರಿ ಬೇರೆ ಬೇರೆ ವಿಚಾರಗಳ ಬಗ್ಗೆ ಮುಂದಿನ ಜಂಟಿ ಅಧಿವೇಶನದಲ್ಲಿ ಮಾತನಾಡುತ್ತೇನೆ. ಒಂದು ವೇಳೆ ವೈಯಕ್ತಿಕವಾಗಿ ಕೆಣಕಿದ್ರೆ ನಾನು ಸುಮ್ನೆ ಇರಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.   ಅಧಿವೇಶನಕ್ಕೆ ಆಗಮಿಸಿದ ಹೆಚ್.ಡಿ ಕುಮಾರಸ್ವಾಮಿ ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತ, ಬರ ನಿರ್ವಹಣೆ, ಉತ್ತರ ಕರ್ನಾಟಕ ಅಭಿವೃದ್ಧಿ ನನ್ನ ಆದ್ಯತೆ. ಈ ಬಗ್ಗೆ ಚಳಿಗಾಲ ಅಧಿವೇಶನದಲ್ಲಿ ಚರ್ಚೆ ಮಾತನಾಡುತ್ತೇನೆ. ಈ ಭಾಗದ …

Read More »

ಅಬಕಾರಿ ಸಿಎಲ್ 7 ಪರವಾನಗಿ ಅಕ್ರಮ: ಆಡಳಿತ-ಪ್ರತಿಪಕ್ಷಗಳ ಸದಸ್ಯರ ನಡುವೆ ಆರೋಪ-ಪ್ರತ್ಯಾರೋಪ

ಬೆಳಗಾವಿ/ ಬೆಂಗಳೂರು : ರಾಜ್ಯದ ಹಲವು ಕಡೆ ಅಬಕಾರಿ ಇಲಾಖೆಯಲ್ಲಿನ ಸಿಎಲ್ -7 ಪರವಾನಗಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ತನಿಖೆಯಾಗಬೇಕೆಂಬ ವಿಚಾರ ವಿಧಾನಸಭೆಯಲ್ಲಿ ಇಂದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ವಾಗ್ವಾದ ನಡೆಯಿತು. ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಅವರು, ಸಿಎಲ್ 7 ಪರವಾನಗಿಯಲ್ಲಿ ಅಕ್ರಮ ನಡೆದಿದೆ. ನಿಯಮಗಳನ್ನು ಗಾಳಿಗೆ ತೂರಿ ಪರವಾನಗಿ ನೀಡಲಾಗಿದೆ ಎಂದು ಸದನದಲ್ಲಿ ಪ್ರಸ್ತಾಪಿಸಿದರು. ಕೋಲಾರ ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ …

Read More »

ಧಾರವಾಡ ಜಿಲ್ಲೆಗೆ 50.298 ಕೋಟಿ ರೂ. ಗಳ ಮಧ್ಯಂತರ ಬೆಳೆ ವಿಮೆ ಮಂಜೂರು

ಧಾರವಾಡ: ಜಿಲ್ಲೆಯ 63,566 ಜನ ರೈತರಿಗೆ 50.298 ಕೋಟಿ ರೂ.ಗಳ ಮಧ್ಯಂತರ ವಿಮೆ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಗರುದತ್ತ ಹೆಗಡೆ ತಿಳಿಸಿದ್ದಾರೆ. 2023 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭಿಮಾ (ವಿಮಾ) ಯೋಜನೆ ಧಾರವಾಡ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಭತ್ತ, ಮೆಕ್ಕೆಜೋಳ, ಹತ್ತಿ, ಈರುಳ್ಳಿ, ಕೆಂಪು ಮೆಣಸಿನಕಾಯಿ ಮತ್ತು ಆಲೂಗಡ್ಡೆ ಬೆಳೆಗಳಡಿ ನೋಂದಾಯಿಸಿಕೊಂಡ ರೈತರಿಗೆ ಮಧ್ಯಂತರ ವಿಮೆ ಜಮಾವಣೆ ಪ್ರಾರಂಭವಾಗಿದೆ. ಅಳ್ನಾವರ ತಾಲೂಕಿನ 3,052 …

Read More »