Breaking News

Yearly Archives: 2023

91ನೇಹುಟ್ಟುಹಬ್ಬದ ಜನ್ಮದಿನದ ಸಂಭ್ರಮದಲ್ಲಿ ದೇವೇಗೌಡರು

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಹೆಚ್. ಡಿ. ದೇವೇಗೌಡ ಅವರು ಇಂದು ತಮ್ಮ 91 ನೇ ವರ್ಷದ ಹುಟ್ಟುಹಬ್ಬವನ್ನು ಪದ್ಮನಾಭನಗರದ ತಮ್ಮ ನಿವಾಸದಲ್ಲಿ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ದೇವೇಗೌಡರ ಪುತ್ರಿಯರು ಸೇರಿದಂತೆ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಗೌಡರು ಹುಟ್ಟುಹಬ್ಬ ಆಚರಿಸಿಕೊಂಡರು. ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ …

Read More »

ಬಿಜೆಪಿಯಲ್ಲಿ ಸರ್ಕಾದಲ್ಲಿ ಆದ ಲೂಟಿಯೇ ಈ ಸರ್ಕಾರದಲ್ಲೂ ನಡೆಯಲಿದೆ.:H.D.K.

ರಾಮನಗರ: ಬಿಜೆಪಿಯಲ್ಲಿ ಸರ್ಕಾದಲ್ಲಿ ಆದ ಲೂಟಿಯೇ ಈ ಸರ್ಕಾರದಲ್ಲೂ ನಡೆಯಲಿದೆ. ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಆತಂಕ ಬೇಡ. ಇನ್ನು ಎರಡು ಮೂರು ತಿಂಗಳಲ್ಲಿ ಹೊಸ ರಾಜಕೀಯ ಬದಲಾವಣೆ ಆಗುತ್ತೆ ಎಂದು ಚನ್ನಪಟ್ಟಣದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾಜಿ ಸಿಎಂ ‌ಹೆಚ್​ ಡಿ ಕುಮಾರಸ್ವಾಮಿ ಭವಿಷ್ಯ ನುಡಿದರು. ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯ ಇಲ್ಲ. ಪಕ್ಷಕ್ಕೆ ಈ ರೀತಿಯ ಸೋಲು ಹೊಸದೇನಲ್ಲ. ಪ್ರಾಮಾಣಿಕ ಕಾರ್ಯಕರ್ತರ …

Read More »

ಕುರಿ ಲೆಕ್ಕ ಹಾಕಲು ಬಾರದವ ಅನ್ನಿಸಿಕೊಂಡಿದ್ದ ಸಿದ್ದರಾಮಯ್ಯ.. ಈಗ 24ನೇ ಮುಖ್ಯಮಂತ್ರಿ

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪದಗ್ರಹಣ ಸನ್ನಿಹಿತವಾಗಿದೆ. ಮೇ 20ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಸಮಾರಂಭ ನೆರವೇರಲಿದ್ದು, ಸಿದ್ದರಾಮಯ್ಯ ಸಿಎಂ ಆಗಿ ಹಾಗೂ ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಅಗಿ ಪದಗ್ರಹಣ ಮಾಡಲಿದ್ದಾರೆ. ಒಂದು ಸಂದರ್ಭದಲ್ಲಿ ಕುರಿ ಲೆಕ್ಕ ಹಾಕಲು ಬಾರದವ, ಹೇಗೆ ಹಣಕಾಸು ಸಚಿವನಾಗಿ ಬಜೆಟ್ ಮಂಡಿಸುತ್ತಾನೆ ಎಂದು ಟೀಕೆಗೆ ಒಳಗಾಗಿದ್ದರು. ಆದರೆ ಇದುವರೆಗೂ ಯಶಸ್ವಿಯಾಗಿ 13 ಹಣಕಾಸು ಬಜೆಟ್ ಮಂಡಿಸಿದ್ದು, 14ನೇ ಬಜೆಟ್​ …

Read More »

ಕಳಪೆ ಮಟ್ಟದ ಡಾಂಬರೀಕರಣ ರಸ್ತೆ,-ಗುತ್ತಿಗೆದಾರ ಹಾಗೂ ಸಾರ್ವಜನಿಕರ ನಡುವೆ ವಾಗ್ವಾದ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ನಾದ ಕೆಡಿ ಕ್ರಾಸ್ ದಿಂದ ಶಿರಶ್ಯಾಡ ಗ್ರಾಮದವರೆಗೆ 2023 ನೇ ಸಾಲಿನಲ್ಲಿ ಡಾಂಬರೀಕರಣ ರಸ್ತೆ ಮಂಜೂರಾಗಿದ್ದು, ಪ್ರಸ್ತುತವಾಗಿ ಕಾಮಗಾರಿಯನ್ನು ಗುತ್ತಿಗೆದಾರ ಪ್ರಾರಂಭಮಾಡಿದ್ದು , ಶಿರಶ್ಯಾಡ ಗ್ರಾಮಸ್ಥರು ಈ ಕಾಮಗಾರಿ ಪರಿಶೀಲಿಸಿದಾಗ ಕಳಪೆ ಮಟ್ಟದ್ದು ಎಂದು ಕಂಡು ಬಂದಾಗ ದಿಢೀರನೆ ಗುತ್ತಿಗೆದಾರನಿಗೆ ವಿಚಾರಿಸಿದಾಗ ಗುತ್ತಿಗೆದಾರನು ಗ್ರಾಮಸ್ಥರಿಗೆ ಸರಿಯಾಗಿ ಸ್ಪಂದಿಸಿರುವುದಿಲ್ಲ. ಕಾರಣ ಗ್ರಾಮಸ್ಥರು ಸಂಬಂಧಿಸಿದ ಎಇಇ ಅವರಿಗೆ ಫೋನ್ ಕರೆ ಮಾಡಿದಾಗ ಸಾವ೯ಜನಿಕರಿಗೆ ಕೆಲವು ಗಂಟೆಗಳ ಕಾಲ …

Read More »

ಬೈಕ್‌ಗೆ ಲಾರಿ ಡಿಕ್ಕಿಲಾರಿ ಡಿಕ್ಕಿ ಮಹಿಳೆಯ ದುರ್ಮರಣ

ವಿಜಯಪುರ…  ಬೈಕ್‌ಗೆ ಹಿಂಬದಿಯಿಂದ ಲಾರಿ ಡಿಕ್ಕಿಲಾರಿ ಡಿಕ್ಕಿರುವ ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರದ ತೊರವಿ ರಸ್ತೆಯಲ್ಲಿ ಗುರುವಾರ ನಡೆದಿದೆ. ಇನ್ನು ಬೈಕ್‌ನಲ್ಲಿದ ಹಿಂಬದಿಯ ಮಹಿಳೆ ಮೃತಪಟ್ಟಿದ್ದಾಳೆ. ಆದ್ರೇ, ಮಹಿಳೆಯ ಹೆಸರು ತಿಳಿದುಬಂದಿಲ್ಲ. ಅಲ್ಲದೇ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. KA 28 EF 3015 ಬೈಕ್‌ಗೆ KA 28 C 5824 ಲಾರಿ ಡಿಕ್ಕಿಯಾಗಿದೆ. ಅಲ್ಲದೇ, ಎರಡು ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ವಿಜಯಪುರ ಗ್ರಾಮೀಣ …

Read More »

ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು:ಬೆಳಗಾವಿ ಜಿಲ್ಲೆಯ ವಿವಿದ ದಲಿತ ಪರ ಸಂಘಟನೆಗಳು ಮನವಿ

ಜಿಲ್ಲೆಯ ಅಹಿಂದ ನಾಯಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವಿವಿದ ದಲಿತ ಪರ ಸಂಘಟನೆಗಳು ಕಾಂಗ್ರೇಸ್ ರಾಷ್ಟೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು 135 ಸ್ಥಾನಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಇ ಹಿನ್ನಲೆಯಲ್ಲಿ ಕಾಂಗ್ರೇಸ್ ನ ಎಲ್ಲ ಹಿರಿಯ ನಾಯಕರ ಪರಿಶ್ರಮದಿಂದ ಇಂದು ಜಾತಿ ವಿರೋಧಿ ಬಿಜೆಪಿನ್ನು ಸೋಲಿಸಿದೆ ಉತ್ತರ ಕರ್ನಾಟಕದ ಪ್ರಭಾವಿ …

Read More »

ರಸ್ತೆಯಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ: ಕೆಲ ಹೊತ್ತು ಟ್ರಾಫಿಕ್ ಜಾಮ್

ಮೂಡಿಗೆರೆ: ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ ಒಂಟಿ ಸಲಗವೊಂದು ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ, ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ. ಸಂಜೆ 4.30 ಗಂಟೆ ಸಮಯದಲ್ಲಿ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಕಾಡಾನೆಯೊಂದು ರಸ್ತೆಗೆ ಪ್ರವೇಶಿಸಿದೆ ಈ ವೇಳೆ ಈ ಮಾರ್ಗದಲ್ಲಿ ಬರುತ್ತಿದ್ದ ಮಂಗಳೂರು ಹಾಸನ ಸರ್ಕಾರಿ ಬಸ್ ಚಾಲಕ ಆನೆಯನ್ನು ಗಮನಿಸಿ ಕೊಂಚ ದೂರದಲ್ಲಿ ಬಸ್ಸನ್ನು ನಿಲ್ಲಿಸಿದ್ದಾನೆ. ಕೆಲ ಸಮಯದ …

Read More »

ಸಿದ್ದರಾಮಯ್ಯ ಬ್ಲ್ಯಾಕ್‌ಮೇಲ್‌ ತಂತ್ರ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿಯಾಗುವುದಕ್ಕೆ ಸಿದ್ದರಾಮಯ್ಯ ಬ್ಲ್ಯಾಕ್‌ವೆುàಲ್‌ ತಂತ್ರ ಅನುಸರಿಸುತ್ತಿದ್ದಾರೆ. ಸೋನಿಯಾ ಗಾಂಧಿಯವರಿಗೆ ಫೋನ್‌ ಮಾಡಿ ತಮ್ಮನ್ನೇ ಸಿಎಂ ಮಾಡಬೇಕು. ಇಲ್ಲವಾದರೆ ತಮ್ಮ ದಾರಿ ತಾವು ನೋಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿಯ ವಿಧಾನಪರಿಷತ್‌ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.   ಪತ್ರಕರ್ತರೊಂದಿಗೆ ಅವರು ಮಾತನಾಡಿ, 2009ರಲ್ಲಿ ಸಂಸತ್ತಿನ ಚುನಾವಣೆಗೆ ಮೊದಲು ಅವರು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಬೆದರಿಸಿದ್ದರು. ವಿಪಕ್ಷ ನಾಯಕ ಸ್ಥಾನ ಸಿಗದೆ ಇದ್ದರೆ ನನ್ನ ದಾರಿ ನನಗೆ ಎಂದಿದ್ದರು. …

Read More »

2 PU: ಹಾಜರಾತಿ ಕೊರತೆ ಇದ್ದರೂ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು: ತರಗತಿ ಹಾಜರಾತಿ ಕೊರತೆಯಿಂದ 2023ರ ಮಾರ್ಚ್‌ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾಗಿರುವ ಕಲಾ ಮತ್ತು ವಾಣಿಜ್ಯ ವಿಭಾಗದ 12,385 ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅನುವು ಮಾಡಿಕೊಟ್ಟಿದೆ.   ಈ ಸಂಬಂಧ ಪತ್ರಿಕಾ ಪ್ರಕಟನೆ ನೀಡಿರುವ ಮಂಡಳಿ ಅಧ್ಯಕ್ಷ ಆರ್‌.ರಾಮಚಂದ್ರನ್‌ ಅವರು, 2022-23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿಗೆ ತರಗತಿ ವಿದ್ಯಾರ್ಥಿಗಳಾಗಿ ನೋಂದಾ ಯಿಸಿಕೊಂಡಿದ್ದ ಸಾವಿರಾರು ವಿದ್ಯಾರ್ಥಿಗಳು …

Read More »

ಡಿಕೆಶಿ ಅಕ್ರಮ ಆಸ್ತಿ ವಿಚಾರಣೆ ಜುಲೈ 14ಕ್ಕೆ ಮುಂದೂಡಿಕೆ

ಹೊಸದಿಲ್ಲಿ: ಡಿ.ಕೆ.ಶಿವಕುಮಾರ್‌ ಅಕ್ರಮ ಆಸ್ತಿಗಳ ತನಿಖೆ ಮುಂದುವರಿಸಲು ಅವಕಾಶ ನೀಡಬೇಕೆಂದು ಸಿಬಿಐ ಸರ್ವೋಚ್ಚ ಪೀಠದಲ್ಲಿ ಸಲ್ಲಿರುವ ಅರ್ಜಿ ವಿಚಾರಣೆ ಜು.14ಕ್ಕೆ ಮುಂದೂಡಲ್ಪಟ್ಟಿದೆ. ಮೇ 23ಕ್ಕೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್‌ ಅಕ್ರಮ ಆಸ್ತಿ ಹೊಂದಿದ್ದಾರೆ, ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಪ್ರಕರಣಗಳನ್ನು ಸಿಬಿಐ ವಿಚಾರಣೆ ನಡೆಸುತ್ತಿದೆ. ಶಿವಕುಮಾರ್‌ ಮನವಿಯಂತೆ ಫೆ.10ರಂದು ಉಚ್ಚ ನ್ಯಾಯಾಲಯ ವಿಚಾರಣೆಗೆ ತಡೆ ನೀಡಿತ್ತು. ಇದರ ವಿರುದ್ಧ ಸಿಬಿಐ …

Read More »