Breaking News

Yearly Archives: 2023

ಐಪಿಎಲ್​ನ ದೆಹಲಿ ಕ್ಯಾಪಿಟಲ್ ತಂಡದ ಕಳುವಾಗಿದ್ದ ಕ್ರಿಕೆಟ್ ಕಿಟ್ ಅಲ್ಲದೇ ಆರೋಪಿಗಳನ್ನು ಬೆಂಗಳೂರು ಪೊಲೀಸರು ಸೆರೆ ಹಿಡಿದಿದ್ದಾರೆ.

ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್ (ಐಪಿಎಲ್‌)​ ಯಶಸ್ವಿಯಾಗಿ ನಡೆಯುತ್ತಿದೆ. ಇದೇ ಐಪಿಎಲ್​ ಪಂದ್ಯದ ವೇಳೆ ಕೆಲ ಕಿಡಿಗೇಡಿಗಳು ಕ್ರಿಕೆಟ್​ ಕಿಟ್​ ಅನ್ನು ಕದ್ದಿದ್ದರು. ಇದೀಗ ಬೆಂಗಳೂರು ಪೊಲೀಸರು ಕ್ರಿಕೆಟ್​ ಕಿಟ್​ ಸಮೇತ ಇಬ್ಬರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಹೌದು, ಕಳೆದ 10 ದಿನಗಳ ಹಿಂದೆ ದೆಹಲಿ ಹಾಗೂ ಆರ್ ಸಿಬಿ ಪಂದ್ಯದ ವೇಳೆ ಡೆಲ್ಲಿ ಕ್ಯಾಪಿಟಲ್ ತಂಡದ ಕ್ರಿಕೆಟ್ ಕಿಟ್ ಕಳುವಾಗಿತ್ತು. ಈ ಬಗ್ಗೆ ದೆಹಲಿ ಪೊಲೀಸರಿಗೆ ದೆಹಲಿ ತಂಡದ ಮ್ಯಾನೇಜ್ಮೆಂಟ್ …

Read More »

ಜಗದೀಶ್ ಶೆಟ್ಟರ್ ಬಿಜೆಪಿ ತೊರೆದಿರುವುದರಿಂದ ಪಕ್ಷಕ್ಕೆ ಯಾವುದೇ ಧಕ್ಕೆ ಇಲ್ಲ:ಶಂಕರಪಾಟೀಲ ಮುನೇನಕೊಪ್ಪ

ಕರ್ನಾಟಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಪಕ್ಷ ಬರಲಿದೆ. ರಾಜ್ಯದ ಜನರು ಮತ್ತೆ ಭಾರತೀಯ ಜನತಾ ಪಾರ್ಟಿಗೆ ಮತ ನೀಡಿ ಗೆಲ್ಲಿಸಲಿದ್ದಾರೆ ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದ್ದಾರೆ. ಶಂಕರ ಪಾಟೀಲ ಮುನೇನಕೊಪ್ಪಹುಬ್ಬಳ್ಳಿ: ಬಿಜೆಪಿಯಿಂದ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯದ ವರಿಷ್ಠರ ಮೇಲೆ ಒತ್ತಡ ಹೇರುತ್ತೇವೆ. ಹೀಗಾಗಿ ಮತದಾರರು ಲಿಂಗಾಯತ ನಾಯಕರನ್ನು ಹಚ್ಚೆಚ್ಚು ಆಯ್ಕೆ ಮಾಡಬೇಕು ಎಂದು ಸಚಿವ ಶಂಕರಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿ ಉದ್ದೇಶಿಸಿ …

Read More »

ಬೇರೆ ಯುವಕನ ಜೊತೆ ರೀಲ್ಸ್ ಮಾಡಿದ್ದಕ್ಕೆ ಪ್ರಿಯತಮನೇ ತನ್ನ ಪ್ರೇಯಸಿಯನ್ನು ಕೊಂದು ಸುಟ್ಟುಹಾಕಿದ

ಯಾದಗಿರಿ : ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನೊಂದರಲ್ಲಿ ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿಯನ್ನು ಕೊಲೆಗೈದು, ಮೃತದೇಹವನ್ನು ಸುಟ್ಟು ಹಾಕಿರುವ ಘಟನೆ (ಏ.3 ರಂದು) ನಡೆದಿತ್ತು. ಈ ಘಟನೆ ಯಾದಗಿರಿ ಜಿಲ್ಲೆಯನ್ನೇ ಬೆಚ್ಚಿಬೀಳಿಸಿತ್ತು. ಮೃತ ಯುವತಿ ಅಂತಿಮಾ ವರ್ಮಾ (25) ಎಂದು ಗುರುತಿಸಲಾಗಿದ್ದು, ಬೇರೆ ಯುವಕನೊಂದಿಗೆ ರೀಲ್ಸ್ ಮಾಡಿದ್ದಾಳೆ ಎನ್ನುವ ಕಾರಣಕ್ಕೆ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿ ಮಾರುತಿಯನ್ನು ಬಂಧಿಸಿ ನ್ಯಾಯಂಗ …

Read More »

”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ”: ವಿ. ಸೋಮಣ್ಣ

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ. ಸೋಮಣ್ಣ ಲೇವಡಿ ಮಾಡಿದರು. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ವಿರುದ್ಧ ಕಿಡಿಕಾರಿದರು. ಸಚಿವ ವಿ.ಸೋಮಣ್ಣ ಮಾತನಾಡಿದರುಚಾಮರಾಜನಗರ: ”ಸಿದ್ದರಾಮಯ್ಯ ಹೆದರಿಕೊಳ್ಳಲು ನಾನು ಭೂತನೂ ಅಲ್ಲಾ, ಪಿಶಾಚಿಯೂ ಅಲ್ಲ” ಎಂದು ಸಚಿವ ವಿ. ಸೋಮಣ್ಣ ಹೇಳಿದರು.   ವರುಣಾದಲ್ಲಿ ಸೋಲಿನ ಭೀತಿಯಿಂದ ಸಿದ್ದರಾಮಯ್ಯ ಹೆಚ್ಚು ಪ್ರಚಾರ ಮಾಡುತ್ತಿರುವ ಬಗ್ಗೆ ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ಅವರ ಕರ್ತವ್ಯ ಅವರು ಮಾಡುತ್ತಿದ್ದಾರೆ. ನಾನು ಭೂತನೂ ಅಲ್ಲ, …

Read More »

ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲ

ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ​ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ಧಾರೆ. ರಾಮನಗರ/ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನಿರಂತರ ಪ್ರವಾಸ ಹಾಗೂ ಕಾರ್ಯಕ್ರಮಗಳ ಒತ್ತಡದಿಂದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವೈದ್ಯರ ಸಲಹೆಯ ಮೇರೆಗೆ ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಶ್ರಾಂತಿ ಇಲ್ಲದೆ ನಿರಂತರ ಪ್ರವಾಸದಿಂದ ಮಾಜಿ ಸಿಎಂ ಜ್ವರದಿಂದ ಬಳಲುತ್ತಿದ್ದು, ವಿಶ್ರಾಂತಿ ಅಗತ್ಯವಿದೆ ಎಂದು ವೈದ್ಯರು …

Read More »

502 ನಾಮಪತ್ರಗಳು ತಿರಸ್ಕೃತ, 3130 ಅಭ್ಯರ್ಥಿಗಳ ಉಮೇದುವಾರಿಕೆ ಕ್ರಮಬದ್ಧ: ಚುನಾವಣಾ ಆಯೋಗ ಮಾಹಿತಿ

ಬಿಜೆಪಿ 224, ಕಾಂಗ್ರೆಸ್ 223, ಜೆಡಿಎಸ್ 211, ಎಎಪಿ 212, ಬಿಎಸ್‌ಪಿ 137, ಸಿಪಿಐಎಂ 4, ಎನ್‌ಸಿಪಿ 4 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ ಆಗಿವೆ. ಮಾನ್ಯತೆ ಪಡೆಯದ ಪಕ್ಷಗಳ 736 ಅಭ್ಯರ್ಥಿಗಳು, 1379 ಪಕ್ಷೇತರ ಅಭ್ಯರ್ಥಿಗಳ ನಾಮಪತ್ರಗಳು ಸರಿಯಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.   ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಲ್ಲಿಕೆಯಾಗಿದ್ದ ಉಮೇದುವಾರಿಕೆಯ ಪರಿಶೀಲನೆಯಲ್ಲಿ 502 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ನಿನ್ನೆ ನಾಮಪತ್ರ ಸಲ್ಲಿಕೆ …

Read More »

ಪೋನ್ ಪೇನಲ್ಲಿ ಲಂಚ ಪಡೆದ P.S.I. ಲೋಕಾಯುಕ್ತ ಬಲೆಗೆ

ಪೋನ್ ಪೇನಲ್ಲಿ ಲಂಚ ಪಡೆದ ಪಿಎಸ್​ಐ ಶಿವನಗೌಡ ಹಾಗೂ ಪೊಲೀಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ: ಕಾಣೆಯಾದ ಮಹಿಳೆಯನ್ನು ಪತ್ತೆ ಹಚ್ಚಿ ಮನೆಗೆ ಕಳುಹಿಸಲು 50 ಸಾವಿರ ರೂಪಾಯಿ ಲಂಚ ಪಡೆಯುವ ವೇಳೆ ಪಿಎಸ್​ಐ ಹಾಗೂ ಪೊಲೀಸ್​ ಕಾನಸ್ಟೇಬಲ್ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್​ಐ ಶಿವನಗೌಡ ಹಾಗೂ ಪೋಲಿಸ್ ಕಾನಸ್ಟೇಬಲ್ ಲಿಂಗರಾಜ್ ನಾಯ್ಕ ಲೋಕಾಯುಕ್ತ ಬಲೆಗೆ ರೆಡ್​ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ.

Read More »

ಪುರಸಭೆಯ ಗದ್ದುಗೆಗೆ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆಯುತ್ತಿದೆ.

  ದೇವನಹಳ್ಳಿ: ಬೆಂಗಳೂರು ಗ್ರಾಮಾಂತರದ ವಿಜಯಪುರ ಪುರಸಭೆಯ ಗದ್ದುಗೆಗೆ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ ನಡೆಯುತ್ತಿದೆ. ಪುರಸಭೆಯಿಂದ ವರ್ಗಾವಣೆಯಾಗಿದ್ದ ಮುಖ್ಯಾಧಿಕಾರಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರೆ, ಮತ್ತೊಬ್ಬ ಅಧಿಕಾರಿ ವರ್ಗಾವಣೆಗೆ ಮಾತ್ರ ತಡೆಯಾಜ್ಞೆ ತಂದಿರುವುದು ಎಂದು ಹುದ್ದೆ ಬಿಟ್ಟುಕೊಡಲು ನಿರಾಕರಿಸಿದ್ದಾರೆ. ವಿಜಯಪುರ ಪುರಸಭೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಮೋಹನ್ ​ಕುಮಾರ್​ ಮುಖ್ಯಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಚುನಾವಣೆ ನಿಮಿತ್ತ ಮಾರ್ಚ್ 4 ರಂದು ಮುಖ್ಯಾಧಿಕಾರಿ ಮೋಹನ್​ ಕುಮಾರ್​ರನ್ನು ವರ್ಗಾವಣೆ ಮಾಡಿ ಆ ಜಾಗಕ್ಕೆ ಗಂಗಾಧರ್​ …

Read More »

ಕನ್ನಡ ಕಾದಂಬರಿ ಕ್ಷೇತ್ರದ ಪಿತಾಮಹ ಗಳಗನಾಥರು

ಕನ್ನಡ ಸಾಹಿತ್ಯಲೋಕದಲ್ಲಿ ಕಾದಂಬರಿಗಳ ಪ್ರವೇಶವಾದದ್ದೇ ಗಳಗನಾಥರಿಂದ. ಗಳಗನಾಥ ಎನ್ನುವದು ಒಂದು ಗ್ರಾಮ. ಅಲ್ಲಿಯ ಅಧಿದೇವತೆ ಗಳಗನಾಥೇಶ್ವರ. 1868 ರ ಜನೆವರಿ ಐದರಂದು ಜನಿಸಿದ ವೆಂಕಟೇಶ ತಿರಕೋ ಕುಲಕರ್ಣಿಯವರೇ ಗಳಗನಾಥ ಎಂಬ ಹೆಸರಿನಿಂದ ಪ್ರಸಿದ್ಧವಾದವರು. ಏಳನೇ ಇಯತ್ತೆಯತನಕ ಕಲಿತ ಅವರು ಶಿಕ್ಷಕ ತರಬೇತಿಯನ್ನೂ ಪಡೆದು ಶಿಕ್ಷಕರಾಗಿ ಕೆಲಸ ಮಾಡುವುದರೊಂದಿಗೆ ಶತಮಾನದ ಇತಿಹಾಸವುಳ್ಳ “ಸದ್ಬೋಧಚಂದ್ರಿಕೆ” ಎಂಬ ಮಾಸಪತ್ರಿಕೆಯನ್ನೂ ಪ್ರಾರಂಭಿಸಿ ನಡೆಸಿದರು. ಅಗಡಿ ಶೇಷಾಚಲ ಸದ್ಗುರುಗಳ ಪ್ರಭಾವಕ್ಕೊಳಗಾಗಿ ಸಾತ್ವಿಕ ಬದುಕು ಸಾಗಿಸಿದ ಅವರು ಕನ್ನಡಕ್ಕೆ …

Read More »

2 ಕ್ಷೇತ್ರಗಳ ಗಡಿಯಲ್ಲಿ ತೋಟದ ಮನೆಯಲ್ಲಿ ಅಕ್ರಮ ಕುಕ್ಕರ್ ದಾಸ್ತಾನು ಪತ್ತೆ

ಬೆಳಗಾವಿ : ಸವದತ್ತಿ ತಾಲೂಕಿನ ತೆಗ್ಗಿಹಾಳ ಗ್ರಾಮಕ್ಕೆ ಹೊಂದಿಕೊಂಡಂತೆ ಸವದತ್ತಿ ಹಾಗೂ ರಾಮದುರ್ಗ ತಾಲ್ಲೂಕಿನ ಗಡಿ ಅಂಚಿನಲ್ಲಿರುವ ತೋಟದ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ‌ ಇಡಲಾಗಿದ್ದ ಕುಕ್ಕರ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಹಾಗೂ ಎಫ್.ಎಸ್.ಟಿ. ತಂಡವು ಶನಿವಾರ(ಏ.22) ಮಧ್ಯಾಹ್ನ ತೋಟದ ಮನೆಯ ತಗಡಿನ ಷೆಡ್ ನಲ್ಲಿದ್ದ ಸುಮಾರು 1600 ಕುಕ್ಕರ್ ಗಳನ್ನು ಪತ್ತೆ ಮಾಡಿರುತ್ತದೆ. ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದಂತೆ …

Read More »