ನವದೆಹಲಿ: ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿಯಿದ್ದು, ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಬಿಜೆಪಿ ಪಟ್ಟಿಯನ್ನು ಬಿಡುಗಡೆ ಮಾಡಿದರು. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸುವುದಾಗಿ ತಿಳಿಸಿದರು. ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಭ್ಯರ್ಥಿಗಳ ಹೆಸರು ಘೋಷಿಸಿದರು. 52 ಹೊಸ ಮುಖಗಳಿಗೆ ಅವಕಾಶ. ಒಬಿಸಿ -32, ಎಸಿ …
Read More »Yearly Archives: 2023
ಕೆಲಸದ ಆಮಿಷವೊಡ್ಡಿ ವಂಚನೆ: ಇಂಡಿಯನ್ ಮನಿ ಫ್ರೀಡಂ ಕಂಪನಿ ಸಿಇಒ ಸುಧೀರ್ ವಿಚಾರಣೆ
ಬೆಂಗಳೂರು: ಅರೆಕಾಲಿಕ ಕೆಲಸ ಕೊಡುವ ಆಮಿಷವೊಡ್ಡಿ ತಮ್ಮ ಆಯಪ್ ಪ್ರಚಾರಕ್ಕೆ ಬಳಸಿಕೊಂಡು ಹಣ ನೀಡದೇ ವಂಚಿಸಿರುವ ಆರೋಪದಡಿ ಇಂಡಿಯನ್ ಮನಿ ಫ್ರೀಡಂ ಕಂಪನಿ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸಿ.ಎಸ್. ಸುಧೀರ್ ಅವರನ್ನು ಬನಶಂಕರಿ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ‘ವಂಚನೆಗೀಡಾಗಿರುವ ಯುವತಿ ಸೇರಿ 21 ಮಂದಿ ದೂರು ನೀಡಿದ್ದಾರೆ. ಅದರನ್ವಯ ಕಂಪನಿಯ ಸಂಸ್ಥಾಪಕರಾದ ಸುಧೀರ್ ಸೇರಿ 23 ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು. ‘ಪ್ರಕರಣ …
Read More »ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ:3 ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀ
ಹುಬ್ಬಳ್ಳಿ: ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿ ವರಿಷ್ಠರು ಟಿಕೆಟ್ ನಿರಾಕರಿಸಿರುವುದು ಆಶ್ವರ್ಯ ತಂದಿದೆ. ಪಕ್ಷ ಮತ್ತು ರಾಜ್ಯಕ್ಕೆ ಅವರು ದೊಡ್ಡ ಸೇವೆ ಸಲ್ಲಿಸಿದ್ದಾರೆ. ಅಂತಹವರಿಗೆ ಅನ್ಯಾಯವಾಗಬಾರದು ಎಂದು ನಗರದ ಮೂರು ಸಾವಿರ ಮಠದ ಗುರುಸಿದ್ಧರಾಜ ಯೋಗೀಂದ್ರ ಸ್ವಾಮೀಜಿ ಹೇಳಿದರು. ಶೆಟ್ಟರ್ ಅವರಿಗೆ ಪಕ್ಷದ ವರಿಷ್ಠರು ಟಿಕೆಟ್ ನಿರಾಕರಿಸಿರುವ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಶೆಟ್ಟರ್ ಅವರ ಸೇವೆಯನ್ನು ಗಣನೆಗೆ ತೆಗೆದುಕೊಂಡು ಟಿಕೆಟ್ ನೀಡಲು ಪರಿಗಣಿಸಬೇಕು ಎಂದರು
Read More »ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವಾಗ ಮಂಗಳೂರಿನ ಯುವತಿ ಸಾವು
ಮಂಗಳೂರು: ನಗರದ ಯುವತಿಯೊಬ್ಬರು ಥಾಯ್ಲೆಂಡ್ನಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರನ್ನು ನಗರದ ಗೋರಿಗುಡ್ಡೆ ನಿವಾಸಿ ಓಷಿನ್ ಪಿರೇರ (28) ಎಂದು ಗುರುತಿಸಲಾಗಿದೆ. ಗೋರಿಗುಡ್ಡೆ ‘ಹಿಲ್ ಸ್ಟೀಕ್’ ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿ ವಾಸವಿದ್ದ ಓಷಿನ್ ಪಿರೇರ ಅವರು ಒಲಿವಿಯಾ ಪಿರೇರ- ದಿ. ಆಸ್ಕರ ಮಾರ್ಟಿನ್ ಪಿರೇರ ದಂಪತಿಯ ಮಗಳು. ರಜೆ ಕಳೆಯಲು ಎರಡು ದಿನಗಳ ಹಿಂದಷ್ಟೇ ಅವರು ಥಾಯ್ಲೆಂಡ್ಗೆ ತೆರಳಿದ್ದರು. ಮಗಳ ಸಾವಿನ ಸುದ್ದಿ …
Read More »B.S.Y. ಅವರು ಬಿಜೆಪಿ ಬಳಸಿ ಬಿಸಾಡುವ ‘ಟಿಶ್ಯೂ’ ಪೇಪರ್ : ಕಾಂಗ್ರೆಸ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಅವಮಾನಿಸಿದೆ ಎಂದು ಕಾಂಗ್ರೆಸ್ ಹೇಳಿದೆ. ಯಡಿಯೂರಪ್ಪನವರನ್ನು ‘ಟಿಶ್ಯೂ’ ಪೇಪರ್ ರೀತಿಯಲ್ಲಿ ಬಳಸಿ ಬಿಜೆಪಿ ನಾಯಕರು ಅವಮಾನ ಮಾಡಿದ್ದಾರೆ ಎಂದು ಹೇಳಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಅಭ್ಯರ್ಥಿಗಳ ಪಟ್ಟಿ ಅಖೈರುಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ …
Read More »ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆ ತೀವ್ರ ಅಸಮಾಧಾನ
ಬೆಂಗಳೂರು: ಮಾಜಿ ಸಿಎಂ ಹಾಗೂ ಹುಬ್ಬಳ್ಳಿ ಕೇಂದ್ರ ಬಿಜೆಪಿ ಶಾಸಕ ಜಗದೀಶ್ ಶೆಟ್ಟರ್ ಅವರಿಗೆ ಹೈಕಮಾಂಡ್ ಟಿಕೆಟ್ ನಿರಾಕರಿಸಿರುವ ಸುದ್ದಿ ಹಿನ್ನೆಲೆಯಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪಕ್ಷದ ವರಿಷ್ಠರಿಂದ ಬೆಳಗ್ಗೆ ಫೋನ್ ಬಂದಿತ್ತು. ನೀವು ಸೀನಿಯರ್, ಬೇರಿಯವರಿಗೆ ಅವಕಾಶ ಕೊಡಿ ಎಂದು ಹೇಳಿದ್ದಾರೆ. ನಾನು ಮೂವತ್ತು ವರ್ಷಗಳಿಂದ ಪಕ್ಷ ಕಟ್ಟಿ ಬೆಳೆಸಿದ್ದೇನೆ. ನೂರಾರು ಜನರಿಗೆ ಟಿಕೆಟ್ ಕೊಟ್ಟಿದ್ದೇನೆ. ಆರು ಸಾರಿ ಸ್ಪರ್ಧಿಸಿ ಗೆದ್ದು ಬಂದಿದ್ದೇನೆ. …
Read More »ಸಂತೋಷ್ ಆಟಕ್ಕೆ ಬಿಎಸ್ವೈ ಬಲಿ, ಜೋಶಿ ಆಟಕ್ಕೆ ಶೆಟ್ಟರ್ ಗಲಿಬಿಲಿ: ಕಾಂಗ್ರೆಸ್
ಬೆಂಗಳೂರು: ರಾಜ್ಯ ಬಿಜೆಪಿ ಹಿರಿಯ ನಾಯಕರಾದ ಕೆ.ಎಸ್.ಈಶ್ವರಪ್ಪ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರಾಕರಿಸಿರುವ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ವ್ಯಂಗ್ಯವಾಡಿದೆ. ಬಿಜೆಪಿ ಟಿಕೆಟ್ ಹಂಚಿಕೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಯಡಿಯೂರಪ್, ಈಶ್ವರಪ್ಪ, ಜಗದೀಶ್ ಶೆಟ್ಟರ್.. ಬಿಜೆಪಿ ಎಂಬ ಕಳೆಗೆ ನೀರು ಗೊಬ್ಬರ ಹಾಕಿ ಬೆಳೆಸಿದ ನಾಯಕರನ್ನು ಅಗೌರವದ ನಿರ್ಗಮನ ದಾರಿ ತೋರಿಸಿದೆ ಬಿಜೆಪಿ’ ಲೇವಡಿ ಮಾಡಿದೆ. ‘ನಾವೇ ಎಲ್ಲ’ ಎನ್ನುತ್ತಿದ್ದವರಿಗೆ ‘ನೀವೇನೂ ಅಲ್ಲ’ ಎನ್ನುತ್ತಿದೆ …
Read More »ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದಿದಕ್ಕೆ ಕಟ್ಟಡದಿಂದ ಹಾರಿ ಆತ್ಮಹತ್ಯೆ
ಮೊಬೈಲ್ ಹೆಚ್ಚು ನೋಡಲು ಬಿಡಲಿಲ್ಲ ಎಂದು ಮನ ನೊಂದ 15 ವರ್ಷದ ಬಾಲಕಿಯೊಬ್ಬಳು 7 ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಂಬೈನ್ ಮಲಾಡ್ನ ಉಪನಗರದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಬಾಲಕಿಯ ಕುಟುಂಬಸ್ಥರು ಬಾಲಕಿಯ ಮೊಬೈಲ್ ಫೋನ್ ಅನ್ನು ಕಿತ್ತುಕೊಂಡಿದ್ದರಿಂದ ಆಕೆ ಅಸಮಾಧಾನಗೊಂಡಿದ್ದಳು ಎಂದು ಪೊಲೀಸರು …
Read More »ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್ ಪ್ರೇಮಿ
ಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ. ಶಿವಲೀಲಾ (18) ಕೊಲೆಗೀಡಾಗಿರುವ ಯುವತಿ. ಈಕೆ ಬ್ರೀಮ್ಸ್ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ …
Read More »ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ
ಶಿವಮೊಗ್ಗ : ಶಿವಮೊಗ್ಗ ನಗರದ ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ದಾಖಲೆ ಇಲ್ಲದ 5.83 ಕೋಟಿ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ. ಸುಮಾರು 5.83 ಕೋಟಿ ಮೌಲ್ಯದ 9 ಕೆಜಿ 565 ಗ್ರಾಂ ಚಿನ್ನವನ್ನ ಶಿವಮೊಗ್ಗದ ಕೋಟೆ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಜಿಲ್ಲೆಯ ವಿವಿಧೆಡೆ ದಾಖಲೆ ಇಲ್ಲದ ಲಕ್ಷಾಂತರ ಹಣ ಜಪ್ತಿ ಮಾಡಲಾಗಿದೆ. ಶಿವಮೊಗ್ಗ ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹30.64 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Read More »