ಬೆಂಗಳೂರು :ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್ 10 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ ಐದು ದಿನ ರಾಜ್ಯದ ಹಲವು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಐದು ದಿನಗಳ ಪೈಕಿ ಏಪ್ರಿಲ್ 8 ರವರೆಗೆ ಕರಾವಳಿ ಭಾಗದಲ್ಲಿ ಮಳೆ ಬಿರುಸಾಗಲಿದೆ. ದಕ್ಷಿಣ ಒಳನಾಡಿನ ಭಾಗದಲ್ಲಿ ಸಾಧಾರಣವಾಗಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. …
Read More »Yearly Archives: 2023
ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಯೋಜನೆ ವಿವಾದ
ಗಡಿ ವಿಷಯದಲ್ಲಿ ಕರ್ನಾಟಕದ ಜತೆ ಸದಾ ತಂಟೆ ತೆಗೆಯುವ ಮಹಾರಾಷ್ಟ್ರ ಸರ್ಕಾರ ಈ ಬಾರಿ ಸ್ವಲ್ಪ ಭಿನ್ನ ಹಾದಿ ಹಿಡಿದಿದೆ. ಕರ್ನಾಟಕ ವ್ಯಾಪ್ತಿಯ ಸುಮಾರು 865 ಹಳ್ಳಿಗಳಲ್ಲಿ ಆರೋಗ್ಯ ಯೋಜನೆ ಜಾರಿಗೊಳಿಸುವ ಮೂಲಕ ಜಾಣ ಕಾರ್ಯತಂತ್ರ ಬಳಸಲು ಮುಂದಾಗಿದೆ. ಆರೋಗ್ಯ ವಿಷಯವಾಗಿದ್ದರಿಂದ ಯಾರೂ ತಕರಾರು ತೆಗೆಯಲಾಗದು ಎಂಬುದು ಅವರ ಭಾವನೆಯಿರಬೇಕು. ಆದರೆ ಈ ತಂತ್ರದ ಹಿಂದೆ ಬೇರೆಯದೇ ಸಂಚನ್ನು ಗುರುತಿಸಿರುವ ರಾಜ್ಯದ ರಾಜಕೀಯ ಪಕ್ಷಗಳ ನಾಯಕರು ಒಗ್ಗಟ್ಟಾಗಿ ಏಕದನಿಯಲ್ಲಿ ವಿರೋಧ …
Read More »ಮನೋಸಂಕಲ್ಪ ಈಡೇರಿಸುವ ಮಾರುತಿ: ಇಂದು ಹನುಮ ಜಯಂತಿ
ವಾಯುವಿಗೆ ಎಲ್ಲವನ್ನೂ ಮೀರಿಹೋಗುವ ಶಕ್ತಿಯಿದೆ. ಇದನ್ನು ಮೀರಿಹೋಗುವ ಶಕ್ತಿ ಮನಸ್ಸಿಗಿದೆ. ಇದನ್ನೇ ಮನೋವೇಗ ಎನ್ನುವರು. ಮನೋವೇಗ ವುಳ್ಳವನೇ ಆಂಜನೇಯ. ಆದ್ದರಿಂದ ಇವನನ್ನು ಋಷಿಮುನಿ ಗಳು ‘ಮನೋವೇಗರ ಗಮನ’ ಎಂದಿರುವರು. ನಮ್ಮ ಮನಸ್ಸಿನಲ್ಲಿರುವ ಸಂಕಲ್ಪವನ್ನು ತಿಳಿದು ಅದಕ್ಕೆ ಸ್ಪಂದಿಸುವ ಹಾಗೂ ಭವಸಾಗರವನ್ನು ದಾಟಿಸುವ ಶಕ್ತಿಯೂ ಆಂಜನೇಯನಿಗಿದೆ. ಕೇಸರಿ ಎಂಬ ಕಪಿಶ್ರೇಷ್ಠನ ಪತ್ನಿಗೆ ಬಹುಕಾಲ ಮಕ್ಕಳಿರಲಿಲ್ಲ. ಕೇಸರಿಯು ಮತಂಗ ಮುನಿಗಳ ಬಳಿ ತನ್ನ ನೋವನ್ನು ಹೇಳಿಕೊಂಡನು. ಅದಕ್ಕೆ ಅವರು ‘ಪಂಪಾ ಸರೋವರಕ್ಕೆ ಪೂರ್ವದಲ್ಲಿರುವ …
Read More »10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ
ಆನೇಕಲ್: ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ, ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ. ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು. ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ …
Read More »ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್ಐ, ಪೇದೆ!
ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ರನ್ನು ಲೋಕಾಯುಕ್ತ ಪೊಲೀಸರು ರೆಡ್ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದಾರೆ. ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್ಐ ಶೀಲಾ ನ್ಯಾಮನ್ ಹಾಗು ಕಾನ್ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್ ಪಟೇಲ್ನಿಂದ 21 ಸಾವಿರ ರೂಪಾಯಿ …
Read More »ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ
ನವದೆಹಲಿ: ಕಳೆದ ಎರಡು ದಿನಗಳಿಂದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿಯ ಸಭೆ ನಡೆಯುತ್ತಿದೆ. ಅಂತಿಮವಾಗಿ ಪಟ್ಟಿ ಫೈನಲ್ ಮಾಡಲಾಗಿದ್ದು, ಇಂದು ಬೆಳಿಗ್ಗೆ 11 ಗಂಟೆಯೊಳಗೆ ಘೋಷಣೆಯಾಗಲಿದೆ. ಈ ಬಗ್ಗೆ ಎಐಸಿಸಿ ಚುನಾವಣಾ ಸಮಿತಿಯ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್ ಆಗಿದೆ. ಗುರುವಾರ …
Read More »ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಮೊಮ್ಮಗ ಬಿಜೆಪಿ ಸೇರ್ಪಡೆ
ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆಯೇ ಹಲವರು ತಮ್ಮ ತಮ್ಮ ಇಷ್ಟದ ಪಕ್ಷಗಳನ್ನು ಸೇರ್ಪಡೆಯಾಗುತ್ತಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಸೋದರ ಸಂಬಂಧಿ ಶಶಿಭೂಷಣ ಹೆಗಡೆ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸೋಮವಾರದಂದು ಬೆಂಗಳೂರಿನ ಬಿಜೆಪಿ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ, ಭಗವಂತರಾವ್ ಖೂಬಾ, ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸಮ್ಮುಖದಲ್ಲಿ ಶಶಿಭೂಷಣ ಸೇರ್ಪಡೆಗೊಂಡಿದ್ದಾರೆ.
Read More »5,8 ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ : ಯಾವುದೇ ವಿದ್ಯಾರ್ಥಿಯನ್ನು ಫೇಲ್ ಮಾಡುವಂತಿಲ್ಲ!
ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯು ರಾಜ್ಯ ಪಠ್ಯಕ್ರಮದ 5 ಮತ್ತು 8 ನೇ ತರಗತಿ ಮಕ್ಕಳಿಗೆ ನಡೆಸಿರುವ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ನಿಗಿದ ಮಾಡಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಿದೆ. ಮೌಲ್ಯಾಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮೌಲ್ಯಂಕನ ಮತ್ತು ಶಾಲಾ ಹಂತದಲ್ಲಿ 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ನಡೆಸಲಾಗಿದೆ. ಒಟ್ಟಾರೆ 50 ಅಂಕಗಳಲ್ಲಿ ವಿದ್ಯಾರ್ಥಿ ಗಳಿಸಿ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸಿ …
Read More »ಕೋಮು ದ್ವೇಷ ಭಾಷಣ: ವಿ.ಮುನಿರತ್ನ ವಿರುದ್ಧ FIR ದಾಖಲು
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ( Karnataka Assembly Election 2023 ) ಘೋಷಣೆಯ ನಂತ್ರ ನೀತಿ ಸಂಹಿತೆ ಜಾರಿಯಲ್ಲಿದೆ. ಈ ವೇಳೆಯಲ್ಲಿ ದ್ವೇಷ ಭಾಷಣ ಸೇರಿದಂತೆ ವಿವಿಧ ವಿಷಯಗಳಿಗೆ ಸಂಹಿತೆಯ ಕಾನೂನು ಅಡೆತಡೆ ಇದೆ. ಹೀಗಿದ್ದೂ ಕೋಮು ದ್ವೇಷ ಭಾಷಣ ಮಾಡಿದಂತ ಸಚಿವ ವಿ.ಮುನಿರತ್ನ ( Minister V Munirathna ) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದು, ಅಖಿಲ ಭಾರತ …
Read More »2023-24ನೇ ಸಾಲಿನ ಶಾಲಾ ‘ಶೈಕ್ಷಣಿಕ ವೇಳಾಪಟ್ಟಿ’ ಪ್ರಕಟ : ಮೇ.29ರಿಂದ ಶಾಲೆ ಆರಂಭ
ಬೆಂಗಳೂರು: 2023-24ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿಯನ್ನು ( Annual Academic Schedule ) ಸಾರ್ವಜನಿಕ ಶಿಕ್ಷಣ ಇಲಾಖೆಯು ( School Education Department ) ಪ್ರಕಟಿಸಿದೆ. ಅದರಂತೆ ಈ ಬಾರಿ ಬೇಸಿಗೆ ರಜೆಯ ( Summer Holiday ) ಮುಕ್ತಾಯದ ನಂತ್ರ ಮೇ.29ರಿಂದಲೇ ಶಾಲೆಗಳು ಆರಂಭಗೊಳ್ಳಲಿವೆ ( School Open ). ಅ.8ರಿಂದ ದಸರಾ ಹಾಗೂ ದಿನಾಂಕ 11-04-2024ರಿಂದ ಬೇಸಿಗೆ ರಜೆ ಆರಂಭಗೊಳ್ಳಲಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ …
Read More »