ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ನೂತನ ಸಂಸತ್ ಭವನಕ್ಕೆ ದಿಢೀರ್ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು ಹಾಗೂ ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.ಕಟ್ಟಡದೊಳಗೆ ಪ್ರಧಾನಿ ಒಂದು ಗಂಟೆಗೂ ಹೆಚ್ಚು ಕಾಲ ಕಳೆದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮೋದಿ ಅವರು ಸಂಸತ್ತಿನ ಉಭಯ ಸದನಗಳಲ್ಲಿನ ಸೌಲಭ್ಯಗಳನ್ನು ವೀಕ್ಷಿಸಿದರು. ಕಟ್ಟಡ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಈ ಹಿಂದೆ ಕಳೆದ ವರ್ಷ …
Read More »Yearly Archives: 2023
ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿ ಓರ್ವ ಸಾವು
ಖಾನಾಪುರ: ತಾಲೂಕಿನ ದೇವಟ್ಟಿಯಿಂದ ಪಾರಿಷ್ವಾಡಕ್ಕೆ ಇಟ್ಟಿಗೆ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ದಾವಲ್ ಸಾಬ್ ಫಯಾಜ್ ಮುನವಳ್ಳಿ ಮೃತಪಟ್ಟವರು. ಚಾಲಕ ಮಂಜುನಾಥ ಚಂದ್ರು ಕುಕಡೊಳ್ಳಿ ಹಾಗೂ ಕಾರ್ಮಿಕ ಮಂಜುನಾಥ ಗುರನ್ನವರ ಗಾಯಗೊಂಡವರು. ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ಪಕ್ಕದಲ್ಲಿ ಪಲ್ಟಿಯಾಯಿತು. ಅಪಘಾತದಲ್ಲಿ ವಾಹನದಲ್ಲಿದ್ದ ಇಟ್ಟಿಗೆಗಳು ಸಹ ನಷ್ಟಕ್ಕೀಡಾಗಿವೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »ರಾಮನವಮಿ ಮೆರವಣಿಗೆಯಲ್ಲಿ ಕನ್ನಡ ಬಾವುಟ ಹಾರಿಸಿದ್ದಕ್ಕೆ ಗಂಭೀರ ಹಲ್ಲೆ
ಬೆಳಗಾವಿ: ರಾಮನವಮಿ ಮೆರವಣಿಗೆ ವೇಳೆ ಕನ್ನಡ ಬಾವುಟ ಪ್ರದರ್ಶಿಸಿದ್ದಕ್ಕಾಗಿ ಯುವಕನೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ. ನಗರದ ರಾಮಲಿಂಗಖಿಂಡಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ ಮೆರವಣಿಗೆ ಶಿವಸೇನೆ ಕಚೇರಿ ಎದುರಿನಿಂದ ಹಾದು ಹೋಗುತ್ತಿದ್ದ ವೇಳೆ ಕೈಯ್ಯಲ್ಲಿ ಕನ್ನಡ ಬಾವುಟ ಹಿಡಿದಿದ್ದ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಇದರಿಂದಾಗಿ ಕನ್ನಡಿಗ ಯುವಕನ ಬೆನ್ನು, ಹೊಟ್ಟೆಗೆ ತೀವ್ರ ಗಾಯಗಳಾಗಿವೆ. …
Read More »ಎಸೆಸೆಲ್ಸಿ ಪರೀಕ್ಷೆ :ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಗೊತ್ತ?
ಬೆಂಗಳೂರು: ರಾಜ್ಯಾದ್ಯಂತ ಎಸೆಸೆಲ್ಸಿ ಮುಖ್ಯ ಪರೀಕ್ಷೆ ಇಂದಿನಿಂದ (ಶುಕ್ರವಾರ) ಎ.15ರ ವರೆಗೆ ನಡೆಯಲಿದ್ದು, 3,305 ಪರೀಕ್ಷಾ ಕೇಂದ್ರಗಳಲ್ಲೂ ಸಕಲ ಸಿದ್ಧತೆ ನಡೆದಿದೆ. ಪರೀಕ್ಷೆಗೆ 15,498 ಶಾಲೆಗಳಿಂದ 8,42,811 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 5,833 ಸರಕಾರಿ ಶಾಲೆಗಳು, 3,605 ಅನುದಾನಿತ ಹಾಗೂ 6,060 ಅನುದಾನರಹಿತ ಶಾಲೆಗಳಾಗಿವೆ. ಅಕ್ರಮ ತಡೆಗೆ ನಿಗಾ ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷಾ ಕೇಂದ್ರಗಳಲ್ಲಿ ನಿಗಾ ವಹಿಸಿದೆ. …
Read More »ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!
ಮಂಗಳೂರು: ನಗರದ ಕೆ.ಎಸ್.ರಾವ್ ರೋಡ್ ನ ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದು, ಹಣಕಾಸಿನ ಸಮಸ್ಯೆಯಿಂದ ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೈಸೂರಿನ ವಿಜಯನಗರದ ನಿವಾಸಿಗಳಾದ 46 ವರ್ಷದ ದೇವೆಂದ್ರ ಅವರು ಪತ್ನಿ ಮತ್ತು ಒಂಭತ್ತು ವರ್ಷ ಪ್ರಾಯದ ಅವಳಿ ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಮತ್ತು ಮಕ್ಕಳಿಗೆ ವಿಷ ಕೊಟ್ಟು …
Read More »ಐಪಿಎಲ್-2023: ಚಾಂಪಿಯನ್ ಗುಜರಾತ್ಗೆ ಚೆನ್ನೈ ಸವಾಲು
ಅಹ್ಮದಾಬಾದ್: ಕೋವಿಡ್ ನಂತರ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಶುಕ್ರವಾರ ಈ ಸಮಾರಂಭ ಮುಗಿದ ಕೂಡಲೇ ಉದ್ಘಾಟನಾ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಇನ್ನೊಂದು ರೀತಿಯಲ್ಲಿ ನೋಡುವುದಾದರೆ ಯುವ ನಾಯಕ ಹಾರ್ದಿಕ್ ಪಾಂಡ್ಯ ಮತ್ತು ಅನುಭವಿ ಮಹೇಂದ್ರ ಸಿಂಗ್ ಧೋನಿ ನಡುವಣ ಹೋರಾಟವೂ ಆಗಿದೆ. ಐಪಿಎಲ್ ನಾಯಕರಾಗಿ ಮೊದಲ ವರ್ಷವೇ ಹಾರ್ದಿಕ್ ಪಾಂಡ್ಯ ಮೈದಾನದ ಒಳಗೆ …
Read More »ಸದನದಲ್ಲಿ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ವೀಕ್ಷಿಸುದ್ದಾಗ ಸಿಕ್ಕಿಬಿದ್ದ ಬಿಜೆಪಿಶಾಸಕ
ಅಗರ್ತಲಾ: ಸದನದಲ್ಲಿ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೋ ವೀಕ್ಷಿಸುದ್ದಾಗ ಸಿಕ್ಕಿಬಿದ್ದು ಬಿಜೆಪಿಗೆ ಮುಖಭಂಗ ತಂದ ಶಾಸಕರೊಬ್ಬರು ವಿಡಿಯೊ ವೀಕ್ಷಿಸಿದ್ದಕ್ಕೆ ಕಾರಣವನ್ನೂ ಹೇಳಿಕೊಂಡಿದ್ದಾರೆ. ಶಾಸಕ ಜದಬ್ ಲಾಲ್ ದೇಬನಾಥ್ ಅವರು ಸದನದ ಕಲಾಪ ನಡೆಯುತ್ತಿದ್ದಾಗ ತಮ್ಮ ಮೊಬೈಲ್ ನಲ್ಲಿ ಸೆಕ್ಸ್ ವಿಡಿಯೊ ವೀಕ್ಷಿಸುತ್ತಿದ್ದರು. ಈ ವೇಳೆ ಸಿಸಿ ಕ್ಯಾಮರಾದಲ್ಲಿ ಕಳ್ಳಾಟದ ದೃಶ್ಯ ದಾಖಲಾಗಿ ಎಲ್ಲೆಡೆ ವೈರಲ್ ಆಗುತ್ತಲೇ ತ್ರಿಪುರಾ ರಾಜ್ಯದ ಬಿಜೆಪಿ ಇನ್ನಿಲ್ಲದ ಮುಜುಗರ ಅನುಭವಿಸುವಂತಾಯಿತು. “ನನಗೊಂದು ಕರೆ ಬಂತು, ನಾನು ಅದನ್ನು …
Read More »ಆಯುಷ್ಮಾನ್’ ಆರೋಗ್ಯ ಕಾರ್ಡ್ ವಿತರಣೆ ಸ್ಥಗಿತ : ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ( Karnataka Assembly Election 2023 ) ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಮೇ.10ರಂದು ಮತದಾನ, ಮೇ.13ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಗುರುತಿನ ಚೀಟಿ ( Arogya Karnataka ID Card ) ವಿತರಣೆಯನ್ನು ರದ್ದುಗೊಳಿಸಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದಂತ ರಂದೀಪ್ ಡಿ …
Read More »ಚಲಿಸುತ್ತಿದ್ದ ಕಾರಿನಲ್ಲೇ ಯುವತಿ ಮೇಲೆ ಗ್ಯಾಂಗ್ ರೇಪ್
ಬೆಂಗಳೂರು : ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ಆದರೆ ತಡವಾಗಿ ಬೆಳಕಿಗೆ ಬಂದಿದೆ. ದುರುಳರ ಪೈಶಾಚಿಕ ಕೃತ್ಯಕ್ಕೆ ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಸ್ನೇಹಿತನ …
Read More »ರಾಜ್ಯಕ್ಕೆ ಮತ್ತೆ ‘ಮೋದಿ’ ಆಗಮನ, ಏಪ್ರಿಲ್ 9 ರಂದು ‘ಬಂಡೀಪುರ’ಕ್ಕೆ ಪ್ರಧಾನಿ ಭೇಟಿ
ಗುಂಡ್ಲುಪೇಟೆ : ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಈಗಾಗಲೇ ಹಲವು ಬಾರಿ ಕರ್ನಾಟಕಕ್ಕೆ ಆಗಮಿಸಿದ್ದಾರೆ. ಇದೀಗ ಏಪ್ರಿಲ್ 9 ರಂದು ಮತ್ತೆ ಬಂಡೀಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ. ಹುಲಿ ಯೋಜನೆ 50 ವರ್ಷ ಪೂರೈಸಿದ ಹಿನ್ನೆಲೆ ಮೈಸೂರಿನಲ್ಲಿ ಏ 9 ರಂದು ನಡೆಯಲಿರುವ ಮೆಗಾ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸಲಿದ್ದಾರೆ. ಬಂಡೀಪುರಕ್ಕೆ ಆಗಮಿಸುವ ಮೋದಿ ‘ವಿದ್ಯುತ್ ಸ್ಪರ್ಶಿಸಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ …
Read More »