ಬೆಂಗಳೂರು: ಚುನಾವಣೆ ಸಮೀಪಿಸುತ್ತಿರುವಾಗ ಪಕ್ಷಗಳ ವಿರುದ್ಧ ಕೆಲವು ನಾಯಕರಿಂದ ಅಸಮಾಧಾನ ವ್ಯಕ್ತವಾಗುವುದು ಸಹಜ. ಇದೀಗ ಬಿಜೆಪಿ ವಿರುದ್ಧ ಮಾಜಿ ಸಚಿವ ಅನಂತಕುಮಾರ್ ಕುಟುಂಬದಿಂದ ಬೇಸರವೊಂದು ವ್ಯಕ್ತವಾಗಿದೆ. ಆದರೆ ಇದು ಚುನಾವಣೆ ವಿಚಾರಕ್ಕಾಗಿ ಅಲ್ಲ. ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅನಂತಕುಮಾರ್ ಬಿಜೆಪಿ ವಿರುದ್ಧ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಭಾರತೀಯ ಜನತಾ ಪಕ್ಷವು ನನ್ನ ತಂದೆಯನ್ನು ಮರೆಯುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕಿದೆ ಎಂದೂ …
Read More »Yearly Archives: 2023
ಚರಂಡಿ ಯಾವಾಗ ಮಾಡಿಸ್ತೀರಾ ಶಾಸಕರೇ? ದಿಗ್ಬಂಧನ ಹಾಕಿ ತರಾಟೆಗೆ ತೆಗೆದುಕೊಂಡ ಮಹಿಳೆಯರು!
ಗದಗ: ಈ ನಾರಿಮಣಿಯರು, ಶಾಸಕರಿಗೆ ತಕ್ಕ ಪಾಠ ಕಲಿಸಿದ್ದು ಭೂಮಿ ಪೂಜೆಗೆ ಬಂದವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡರು. ಈ ಅಪರೂಪದ ಘಟನೆ ನಡೆದದ್ದು ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದ ಕೇರಿ ಮತ್ತು ಕರೆ ಗೋರಿ ಆಶ್ರಯ ಪ್ಲಾಟ್ನಲ್ಲಿ. ಲಕ್ಷ್ಮೇಶ್ವರ ಪಟ್ಟಣದ ಹಳ್ಳದ ಕೇರಿ ಮತ್ತು ಕೆರೆ ಗೋರಿ ಆಶ್ರಯ ಪ್ಲಾಟ್ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಮಾಡಲು ಶಾಸಕರಾದ ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಆಗಮಿಸಿದ್ದರು. ಈ …
Read More »ಗದಗ ಜಿಲ್ಲೆಯಲ್ಲೂ ಶುರುವಾಯ್ತು ಒಳ ಮೀಸಲಾತಿ ಕಿಚ್ಚು; ಚುನಾವಣಾ ಬಹಿಷ್ಕಾರಕ್ಕೆ ತಾಂಡಾ ನಿರ್ಧಾರ!
ಗದಗ: ಗದಗ ಜಿಲ್ಲೆಯಲ್ಲೂ ಒಳ ಮೀಸಲಾತಿ ಕಿಚ್ಚು ಆರಂಭವಾಗಿದ್ದು ಹಳ್ಳಿ ಹಳ್ಳಿಗೂ ವ್ಯಾಪ್ತಿಸುತ್ತಿದೆ. ಒಳ ಮೀಸಲಾತಿಯನ್ನು ವಿರೋಧಿಸಿ ಬೆಳಧಡಿ ಗ್ರಾಮದಲ್ಲಿ ಲಂಬಾಣಿ ಸಮುದಾಯ ರೊಚ್ಚಿಗೆದ್ದಿದ್ದು ಗದಗ ತಾಲೂಕಿ ಬೆಳಧಡಿ ತಾಂಡ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಚುನಾವಣೆ ಬಹಿಷ್ಕಾರಕ್ಕೆ ಬೆಳಧಡಿ ತಾಂಡಾ ನಿವಾಸಿಗಳು ನಿರ್ಧಾರ ಮಾಡಿದ್ದು ಜನರು ಬೆಳಧಡಿ ಗ್ರಾಮದಲ್ಲಿ ಬೀದಿಗಿಳಿದು ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಳ ಮೀಸಲಾತಿ ವಿಚಾರದಲ್ಲಿ ತಾಂಡಾ ನಿವಾಸಿಗಳು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ. ತಾಂಡಾ …
Read More »ಅಂಗವಿಕಲರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ
ನವದೆಹಲಿ: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ. 80 ವರ್ಷ ಮೇಲ್ಪಟ್ಟವರು, ಅಂಗವಿಕಲರು ಮತ್ತು …
Read More »ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸಿ;
ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಇದೀಗ ನಟ, ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಟ್ವಿಟರ್ನಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ …
Read More »ಈ ಬಾರಿ M3 EVM ಬಳಕೆ, ಎಲ್ಲ ಪಕ್ಷಗಳ ಜತೆ ಹೊಸ ಯಂತ್ರ ಪರಿಶೀಲನೆ: ರಾಜ್ಯ ಚುನಾವಣಾ ಆಯೋಗ ಮಾಹಿತಿ
ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಇಂದು (ಮಾ.29) ಸುದ್ದಿಗೋಷ್ಠಿ ನಡೆಸಿ, ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟಿಸಿದ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ, ಚುನಾವಣಾ ಪೂರ್ವ ತಯಾರಿ ಹಾಗೂ ನೀತಿ ಸಂಹಿತೆಯ ಎಚ್ಚರಿಕೆ ಸೇರಿದಂತೆ ಅನೇಕ ಮಾಹಿತಿಗಳನ್ನು ತಿಳಿಸಿದೆ. ಬಹುನಿರೀಕ್ಷಿತ ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯ ಚುನಾವಣಾ …
Read More »ಸಿದ್ದರಾಮಯ್ಯ, ಸಚಿವರಿಗೆ ತಟ್ಟಿದ ನೀತಿ ಸಂಹಿತೆ ಬಿಸಿ*
ಬೆಂಗಳೂರು; ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ತಕ್ಷಣದಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರು, ವಿಪಕ್ಷ ನಾಯಕರಿಗೆ ನೀತಿ ಸಂಹಿತೆ ಬಿಸಿ ತಟ್ಟಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರಿನಲ್ಲಿ ವರುಣಾ ಕ್ಷೇತ್ರದ ಪ್ರವಾಸದಲ್ಲಿದ್ದರು. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಸರ್ಕಾರಿ ವಾಹನ ಬಿಟ್ಟು ಖಾಸಗಿ ವಾಹನದಲ್ಲಿ ಸಿದ್ದರಾಮಯ್ಯ ತೆರಳಿದ್ದಾರೆ. ಈ ನಡುವೆ ಸಚಿವರಾದ ಹಾಲಪ್ಪ ಆಚಾರ್, ಸಿ.ಸಿ.ಪಾಟೀಲ್ ಕೂಡ ಸರ್ಕಾರಿ ವಾಹನಗಳಿಗೆ ಗುಡ್ ಬೈ ಹೇಳಿದ್ದು, ಖಾಸಗಿ …
Read More »ನೀತಿಸಂಹಿತೆ ಉಲ್ಲಂಘಿಸಿದರೆ ಕಠಿಣ ಕ್ರಮ:D.C. ನಿತೇಶ್ ಪಾಟೀಲ
ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಯ ನೀತಿಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿರುವುದರಿಂದ ಸಾರ್ವಜನಿಕ ಸ್ಥಳದಲ್ಲಿರುವ ಎಲ್ಲ ಪೋಸ್ಟರ್, ಬ್ಯಾನರ್, ಗೋಡೆಬರಹಗಳನ್ನು ತೆರವುಗೊಳಿಸಬೇಕು. ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಎಲ್ಲ ತಂಡಗಳು ತಕ್ಷಣವೇ ಕಾರ್ಯಪ್ರವೃತ್ತಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದರು. ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ(ಮಾ.29) ನಡೆದ ಚುನಾವಣಾಧಿಕಾರಿಗಳ ಹಾಗೂ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮತಗಟ್ಟೆಗಳಲ್ಲಿ ಕನಿಷ್ಠ ಮೂಲಸೌಕರ್ಯವನ್ನು …
Read More »ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆ
ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು ಮೇ 10 ಕ್ಕೆ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ ಮೇ . 13 ಕ್ಕೇ ಫಲಿತಾಂಶ . ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆ ಕುರಿತು ಪೂರ್ವ ತಯಾರಿಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು ಏಪ್ರಿಲ್ 20 ಕ್ಕೆ ನಾಮಪತ್ರ ಸಲ್ಲಿಕೆ ಕೊನೆಯ ದಿನ. ಒಂದೇ ಹಂತದಲ್ಲಿ ಚುನಾವಣೆ.
Read More »ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ್ದ ಶಂಕಿತನನ್ನು ಬೆಳಗಾವಿಯಿಂದ ಕರೆದೊಯ್ದ ನಾಗ್ಪುರ ಪೊಲೀಸರು
ಮಹಾರಾಷ್ಟ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಬಾರಿ ಬೆದರಿಕೆ ಕರೆಗಳನ್ನು ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಜೈಲಿನಿಂದ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯನ್ನು ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ ಎಂದು ಗುರುತಿಸಲಾಗಿದೆ. ಈತನ ವಿರುದ್ಧ ನಗರದ ಧಾಂತೋಳಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಪೂಜಾರಿಯನ್ನು ಹಿಂಡಲಗಾ ಜೈಲಿನಿಂದ ಬಂಧಿಸಿ ಬೆಳಗ್ಗೆ ವಿಮಾನ ಮೂಲಕವಾಗಿ ನಾಗ್ಪುರಕ್ಕೆ ಕರೆದೊಯ್ಯಲಾಗಿದೆ. ‘ಕೇಂದ್ರ ಸಚಿವರಿಗೆ ಬೆದರಿಕೆ ಕರೆಗಳನ್ನು …
Read More »