Breaking News

Yearly Archives: 2023

ಲಿಂಗಾಯತ ಸಿಎಂ ಬೇಕಾದರೆ ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೆ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು.   ಶುಕ್ರವಾರ ನಾಗನೂರ ಪಟ್ಟಣದ ಹೊರವಲಯದಲ್ಲಿರುವ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ ಅರಭಾವಿ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬರುವ ಚುನಾವಣೆಯಲ್ಲಿ ಸಮಾಜ ಬಾಂಧವರು …

Read More »

ಮಹಾರಾಷ್ಟ್ರ ಮಹಿಳೆಯರಿಗೆ ಬಸ್‌ ಶುಲ್ಕದಲ್ಲಿ ರಿಯಾಯತಿ

ಮುಂಬೈ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (ಎಂಎಸ್‌ಆರ್‌ಟಿಸಿ) ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಟಿಕೆಟ್‌ ಶುಲ್ಕದಲ್ಲಿ ಶೇ.50 ರಿಯಾಯತಿ ನೀಡುವ ನಿಯಮವನ್ನು ಮಾ.17ರ ಶುಕ್ರವಾರದಿಂದ ಜಾರಿಗೊಳಿಸಲಾಗಿದೆ. ರಿಯಾಯತಿಯು ಮಹಿಳಾ ಸಮ್ಮಾನ್‌ ಯೋಜನೆಯ ವಿಸ್ತರಣೆಯ ಭಾಗವಾಗಿದ್ದು, ಸಾರಿಗೆ ನಿಗಮಗಳಿಗೆ ರಿಯಾಯತಿ ಹಣವನ್ನು ಸರ್ಕಾರ ಪಾವತಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.   ಮಾರ್ಚ್‌ 9ರಂದು ಉಪಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ದೇವೇಂದ್ರ ಫ‌ಡ್ನವೀಸ್‌ ಮಂಡಿಸಿದ 2023-24ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ, ಮಹಿಳೆಯರಿಗೆ ಶೇ.50 …

Read More »

125 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮ: ಕಾಂಗ್ರೆಸ್ ಮೊದಲ ಪಟ್ಟಿ ಯುಗಾದಿಗೆ?

ನವದೆಹಲಿ: ಕರ್ನಾಟಕ ವಿಧಾನಸಭೆಯ ಮುಂಬರುವ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್‌ ಕೇಂದ್ರ ಚುನಾವಣಾ ಸಮಿತಿ ಶುಕ್ರವಾರ ಅಂತಿಮಗೊಳಿಸಿದ್ದು, ಮೊದಲ ಪಟ್ಟಿ ಇದೇ 22ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲಾಯಿತು. ಪಕ್ಷದ ಹಾಲಿ ಶಾಸಕರಿರುವ ಕ್ಷೇತ್ರಗಳೂ ಸೇರಿದಂತೆ 125 ಕ್ಷೇತ್ರಗಳಿಗೆ ಒಬ್ಬ ಸಂಭವನೀಯ ಅಭ್ಯರ್ಥಿಗಳ …

Read More »

ಹುಬ್ಬಳ್ಳಿಯಲ್ಲಿ ಮಾ.19ಕ್ಕೆ ವಿಪ್ರ ಮಹಾ ಸಮಾವೇಶ-2023

ಹುಬ್ಬಳ್ಳಿ: ‘ವಿಪ್ರ ಮಹಾ ಸಮಾವೇಶ-2023’ ಹುಬ್ಬಳ್ಳಿಯ ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ನಲ್ಲಿ ಮಾರ್ಚ್‌ 19ರಂದು ನಡೆಯಲಿದೆ ಎಂದು ವಿಪ್ರ ಸೇವಾ ಟ್ರಸ್ಟಿನ ಅಧ್ಯಕ್ಷ ಲಕ್ಷ್ಮಣ ಕುಲಕರ್ಣಿ ಹೇಳಿದರು. ಶುಕ್ರವಾರ ಪ‍ತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಪಂಗಡದ ಹಂಗಿಲ್ಲದೆ ಸಮಸ್ತ ವಿಪ್ರ ಸಮುದಾಯ ಒಂದು ಎಂಬ ಸಂದೇಶ ನೀಡುವುದು, ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಪ್ರಾತಿನಿಧ್ಯಕ್ಕೆ ಹಕ್ಕೊತ್ತಾಯ ಮಾಡುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ. ಈ ಬಗ್ಗೆ ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು …

Read More »

1,142 ಕುಕ್ಕರ್ ಬಾಕ್ಸ್‌ಗಳನ್ನು ವಶಕ್ಕೆಪಡೆದ ಪೊಲೀಸರು

ಕುಣಿಗಲ್: ತಾಲ್ಲೂಕಿನ ಅಂಚೇಪಾಳ್ಯದ ಚೆಕ್‌ಪೋಸ್ಟ್ ಬಳಿ ಶುಕ್ರವಾರ ಕಂಟೇನರ್ ತಪಾಸಣೆ ವೇಳೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ಅವರ ಭಾವಚಿತ್ರವಿದ್ದ 1,142 ಕುಕ್ಕರ್ ಬಾಕ್ಸ್‌ಗಳನ್ನು ಕಂದಾಯ ಇಲಾಖೆ ಅಧಿಕಾರಿಗಳು ನೀಡಿದ ದೂರಿನ ಮೇರೆಗೆ ಕುಣಿಗಲ್ ಪೊಲೀಸರು ವಶಕ್ಕೆಪಡೆದಿದ್ದಾರೆ.   ಕನಕಪುರದಿಂದ ಹೆಬ್ಬೂರಿಗೆ ಕಂಟೇನರ್ ಹೋಗುತ್ತಿತ್ತು. ಕುಕ್ಕರ್‌ಗಳ ಬಿಲ್‌ ಬೇರೆ ವ್ಯಕ್ತಿಯ ಹೆಸರಿನಲ್ಲಿದೆ. ಶಾಸಕರ ಬೆಂಬಲಿಗರು ಖರೀದಿ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಕುಕ್ಕರ್‌ ಬೆಲೆ ₹ …

Read More »

ಸಾಂಸ್ಕೃತಿಕ ಭವನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಅನಿಲ ಬೆನಕೆ

ಬೆಳಗಾವಿ: ಬೆಳಗಾವಿ ಉತ್ತರ ಕ್ಷೇತ್ರಕ್ಕೆ ಬರುವ ಅಂಬೇಡ್ಕರ್‌ ಉದ್ಯಾನದಲ್ಲಿ ಸುಸಜ್ಜಿತ ಗ್ರಂಥಾಲಯ, ಸಾಂಸ್ಕೃತಿಕ ಭವನ ಹಾಗೂ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಐಎಎಸ್‌, ಕೆಎಎಸ್, ಐಪಿಎಸ್ ಕೋಚಿಂಗ್‌ ತರಬೇತಿ ಕೇಂದ್ರ ನಿರ್ಮಾಣಕ್ಕೆ ಶಾಸಕ ಅನಿಲ ಬೆನಕೆ ಶುಕ್ರವಾರ ಚಾಲನೆ ನೀಡಿದರು.   ₹ 1.30 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಸಮಾಜದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರಿಗೆ ನೀಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ಸುಸಜ್ಜಿತ ಡಿಜಿಟಲ್ ಗ್ರಂಥಾಲಯ, ಸಾಂಸ್ಕೃತಿಕ ಭವನ, …

Read More »

BJP ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ನಾಯಿಕ ವಿರುದ್ಧ ಶುಕ್ರವಾರ F,I,R, ದಾಖಲ

ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂತಿ ಬಸ್ತವಾಡ ಗ್ರಾಮದಲ್ಲಿ ಮಾರ್ಚ್‌ 15ರಂದು ಮಾಂಸಾಹಾರ ಊಟದ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ, ಬಿಜೆಪಿ ಟಿಕೆಟ್‌ ಆಕಾಂಕ್ಷಿ ನಾಗೇಶ ಮನ್ನೋಳಕರ ಹಾಗೂ ನಾಗೇಂದ್ರ ಬಾಳಪ್ಪ ನಾಯಿಕ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್‌ ದಾಖಲಿಸಲಾಗಿದೆ.   ಮತದಾರರಿಗೆ ಆಮಿಷ ಒಡ್ಡುವ ಉದ್ದೇಶದಿಂದ ಅಂದು ರಾತ್ರಿ 9ಕ್ಕೆ ಸುಮಾರು 3,000 ಮಂದಿಗೆ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಚುನಾವಣಾ …

Read More »

ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’: RCU ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ

ಬೆಳಗಾವಿ: ‘ಪ್ರಸ್ತುತ ಮಾರುಕಟ್ಟೆ ಅಪೇಕ್ಷಿಸುವ ವೃತ್ತಿ ಕೌಶಲಗಳನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಶಿವಾನಂದ ಗೊರನಾಳೆ ಹೇಳಿದರು. ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವೃತ್ತಿ ಮಾರ್ಗದರ್ಶನ, ತರಬೇತಿ ಮತ್ತು ವಿದ್ಯಾರ್ಥಿ ಉದ್ಯೋಗ ಕೋಶ ಹಾಗೂ ಟಿಸಿಎಸ್ ಸಾಫ್ಟವೇರ್ ಸಂಸ್ಥೆ ಹಮ್ಮಿಕೊಂಡಿದ್ದ ನೇಮಕಾತಿ ಸಂದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.   ‘ನಮ್ಮ ಜ್ಞಾನ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ವೃತ್ತಿ …

Read More »

ಯಲ್ಲಮ್ಮನಗುಡ್ಡದಲ್ಲಿಎರಡೇ ತಿಂಗಳಲ್ಲಿ ₹1.81 ಕೋಟಿ ಕಾಣಿಕೆ ಸಂಗ್ರಹ

ಯಲ್ಲಮ್ಮನಗುಡ್ಡ :ಯಲ್ಲಮ್ಮನಗುಡ್ಡದಲ್ಲಿ ಮಾರ್ಚ್‌ 13ರಿಂದ 17ರವರೆಗೆ ಹುಂಡಿ ಎಣಿಕೆ ಮಾಡಲಾಗಿದ್ದು, ₹1.81 ಕೋಟಿಗಿಂತ ಅಧಿಕ ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. 2023ರ ಜನವರಿ ಹಾಗೂ ಫೆಬ್ರುವರಿಯಲ್ಲಿ ನಡೆದ ಬನದ ಹುಣ್ಣಿಮೆ ಮತ್ತು ಭಾರತ ಹುಣ್ಣಿಮೆ ಜಾತ್ರೆಗೆ ಬಂದಿದ್ದ ಭಕ್ತರು, ಯಲ್ಲಮ್ಮ ದೇವಿ ದೇವಸ್ಥಾನ ಹುಂಡಿಯಲ್ಲಿ ಹಾಕಿದ್ದ ₹1.66 ಕೋಟಿ ನಗದು, ₹12.83 ಲಕ್ಷ ಮೌಲ್ಯದ 235 ಗ್ರಾಂ ಚಿನ್ನಾಭರಣ ಹಾಗೂ ₹2.46 ಲಕ್ಷ ಮೌಲ್ಯದ 3.7 ಕೆ.ಜಿ ಬೆಳ್ಳಿ ಆಭರಣ ಸಂಗ್ರಹವಾಗಿವೆ. …

Read More »

ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ಹೊಸ ರೂಪಕೊಟ್ಟಿದ್ದಾರೆ.

ಮೂಡಲಗಿ: ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದ ಬಳಿ ಹಾಳುಬಿದ್ದ ತಂಗುದಾಣಕ್ಕೆ ಶುಕ್ರವಾರ ಸುಣ್ಣ ಬಣ್ಣ ಬಳೆದು ಪುನೀತ್‌ ರಾಜಕುಮಾರ್‌ ತಂಗುದಾಣವಾಗಿ ರೂಪಾಂತರಗೊಂಡು ಎಲ್ಲರ ಕಣ್ಮನ ಸೆಳೆಯಿತು. ಇಲ್ಲಿಯ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಹಾಗೂ ಗೆಳೆಯರು ಸೇರಿ ಪಾಳು ಬಿದ್ದ ತಂಗುದಾಣಕ್ಕೆ ಹೊಸ ರೂಪಕೊಟ್ಟಿದ್ದಾರೆ. ಪುನೀತ್‌ ರಾಜಕುಮಾರ್‌ ಜನ್ಮದಿನದ ಅಂಗವಾಗಿ ಶುಕ್ರವಾರ ನೂರಾರು ಅಭಿಮಾನಗಳೊಂದಿಗೆ ತಂಗುದಾಣದಲ್ಲಿ ಕೇಕ್‌ ಕತ್ತರಿಸಿ ಸಂಭ್ರಮಿಸಿದರು. ತಂಗುದಾಣವ್ನು ಕನ್ನಡ ಧ್ವಜಗಳು, ತಳಿರು ತೋರಣದಿಂದ ಅಲಂಕಾರ ಮಾಡಲಾಗಿತ್ತು. ಶಾಲಾ …

Read More »