Breaking News

Yearly Archives: 2023

40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ‌ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.   ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ …

Read More »

ಪಂಚಮಸಾಲಿ ಮೀಸಲಾತಿ | ನಾಳೆ ಹೆದ್ದಾರಿಗಳು, ಗ್ರಾಮ ರಸ್ತೆಗಳು ಬಂದ್‌

ಬೆಂಗಳೂರು: ಹಿಂದುಳಿದ ವರ್ಗಗಳ ‘2ಎ’ ಮೀಸಲಾತಿಗೆ ಪಂಚಮಸಾಲಿ ಸಮಾಜ ಸೇರ್ಪಡೆಗೊಳಿಸಲು ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿರುವ ಧರಣಿ ಸತ್ಯಾಗ್ರಹ ಮಾರ್ಚ್ 4ಕ್ಕೆ 50 ದಿನಗಳನ್ನು ಪೂರೈಸುತ್ತಿದ್ದು, ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲು ಪಂಚಮಸಾಲಿ ಸಮಾಜ ನಿರ್ಧರಿಸಿದೆ.   ಮಾರ್ಚ್‌ 4 ರಂದು ಪಂಚಮಸಾಲಿ ಸಮಾಜದ ಜನರು ರಾಜ್ಯದ ಎಲ್ಲೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ಹಾಗೂ ಗ್ರಾಮ ರಸ್ತೆಗಳನ್ನು ಬಂದ್‌ ಮಾಡಬೇಕು. ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದು …

Read More »

ಹಾವೇರಿ | ಸಂತ ಶಿಶುನಾಳ‌ ಶರೀಫರ ಥೀಮ್ ಪಾರ್ಕ್ ಸ್ಥಾಪನೆ: ಸಿಎಂ ಬೊಮ್ಮಾಯಿ

ಹಾವೇರಿ: ‘ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು’ ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.   ‘ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈಗ ₹ 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ …

Read More »

ಜಿ.ಪಂ, ತಾ.ಪಂ ಕ್ಷೇತ್ರ ಪುನರ್‌ವಿಂಗಡಣೆ: ಅಧಿಸೂಚನೆ ಹೊರಡಿಸಿದ ಸರ್ಕಾರ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳನ್ನು ಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿ ಮಾಡಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ಕ್ಷೇತ್ರಗಳನ್ನುಪುನರ್‌ವಿಂಗಡಿಸಿ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಿ ಮಾಡಿದ್ದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ.   ರಾಜ್ಯದ ಹಲವು ಗ್ರಾಮಗಳು ನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಸೇರಿವೆ. ಕೆಲ ಗ್ರಾಮಗಳನ್ನು ಸೇರಿಸಿ ಪಟ್ಟಣ …

Read More »

10 ನಿಮಿಷದಲ್ಲೇ ಆಸ್ತಿ ನೋಂದಣಿ: ಕಾವೇರಿ-2ಗೆ ಕಂದಾಯ ಸಚಿವ ಆರ್‌.ಅಶೋಕ್‌ ಚಾಲನೆ

ಬೆಂಗಳೂರು: ಆಸ್ತಿಗಳ ನೋಂದಣಿ ಪ್ರಕ್ರಿಯೆ ಸರಳಗೊಳಿಸುವ, ಕೇವಲ 10 ನಿಮಿಷದಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವ ನಾಗರಿಕ ಸ್ನೇಹಿ ಕಾವೇರಿ-2 ತಂತ್ರಾಂಶಕ್ಕೆ ಕಂದಾಯ ಸಚಿವ ಆರ್‌.ಅಶೋಕ್‌ ಗುರುವಾರ ಚಾಲನೆ ನೀಡಿದರು. ಕಲಬುರಗಿಯ ಚಿಂಚೋಳಿ, ಬೆಳಗಾವಿ ದಕ್ಷಿಣ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಈಗಾಗಲೇ ಆರಂಭವಾಗಿರುವ ಸೇವೆ, ದೇವನಹಳ್ಳಿ, ರಾಮನಗರ ಸೇರಿದಂತೆ ಇನ್ನೂ ಕೆಲ ಕಚೇರಿಗಳಲ್ಲಿ ಇದೇ ತಿಂಗಳು ಸೇವೆ ಲಭ್ಯವಾಗಲಿದೆ. ಮೂರು ತಿಂಗಳ ಒಳಗೆ ರಾಜ್ಯದ ಎಲ್ಲೆಡೆ ಜಾರಿಗೊಳಿಸಲಾಗುವುದು ಎಂದು ಅಶೋಕ್‌ ಹೇಳಿದರು. ನಾಗರಿಕರು …

Read More »

ಗ್ರಾಮದೇವಿಯರ ಭವ್ಯ ಮೆರವಣಿಗೆ; ಅಸಂಖ್ಯಾತ ಭಕ್ತರು ಭಾಗಿ

ಕಲಘಟಗಿ: ಶ್ರೀ ಗ್ರಾಮದೇವಿಯರ 9 ದಿನಗಳ ಕಾಲ ಜರುಗಲಿರುವ ಜಾತ್ರಾ ಮಹೋತ್ಸವದ ದೇವಿಯರ ಮೆರವಣಿಗೆ ಬುಧವಾರ ಮಧ್ಯಾಹ್ನ ಶ್ರೀ ಗ್ರಾಮದೇವಿ ದೇವಸ್ಥಾನದಿಂದ ಆರಂಭಗೊಂಡಿತು. ಅಸಂಖ್ಯಾತ ಭಕ್ತಸಾಗರದ ಮಧ್ಯೆ ಸಾಗಿ ಬಂದ ಶ್ರೀ ದುರ್ಗವ್ವ ಮತ್ತು ಶ್ರೀ ದ್ಯಾಮವ್ವರ ಮೂರ್ತಿಗಳನ್ನು ಅಕ್ಕಿ ಓಣಿಯಲ್ಲಿರುವ ಚೌತ ಮನೆಕಟ್ಟೆಯ ಜಾತ್ರಾ ಮಂಟಪದಲ್ಲಿ ವಿರಾಜಮಾನಗೊಳಿಸಲಾಯಿತು.   ಶ್ರೀ ಗ್ರಾಮದೇವಿಯರನ್ನು ಸಂಭ್ರಮ ಸಡಗರ, ಸಕಲ ಮಂಗಲ ವಾದ್ಯ ಮೇಳಗಳೊಂದಿಗೆ ಮೆರವಣಿಗೆ ಮಾಡಲಾಯಿತು. ಜೋಳದ ಓಣಿ, ಮಾರ್ಕೆಟ್‌ ರೋಡ ಮುಖಾಂತರ …

Read More »

ಬೆಳವಡಿ ಇತಿಹಾಸದ ಸಂಶೋಧನೆ ಅಗತ್ಯ;ಡಾ| ನಿರ್ಮಲಾ ಭಟ್ಟಲ

ಬೈಲಹೊಂಗಲ: ಬೆಳವಡಿ ಸಂಸ್ಥಾನಗಳ ಇತಿಹಾಸ ಕುರಿತು ಹೆಚ್ಚಿನ ಸಂಶೋಧನೆಯ ಅಗತ್ಯವಿದೆ. ಇತಿಹಾಸಗಾರರು ಹಾಗೂ ಸರ್ಕಾರ ಬೆಳವಡಿ ಸಂಸ್ಥಾನದ ಸಮಗ್ರ ಇತಿಹಾಸ ಅಧ್ಯಯನ ಮಾಡಿ ಬೆಳವಡಿ ಮಲ್ಲಮ್ಮಳ ಕುರಿತ ಕುರುಹುಗಳ ಸಂರಕ್ಷಣೆಗೆ ಒತ್ತು ನೀಡಬೇಕಿದೆ ಎಂದು ಬೆಳಗಾವಿ ಮಹಾಂತೇಶ ನಗರ ರಹವಾಸಿಗಳ ಸಂಘದ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ| ನಿರ್ಮಲಾ ಭಟ್ಟಲ ಹೇಳಿದರು.   ಮಲ್ಲಮ್ಮನ ಬೆಳವಡಿ ಗ್ರಾಮದ ಸ್ಮಾರಕ ಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಳವಡಿ …

Read More »

ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತ : ಈಗ ಹೇಗಿದೆ ಹೆಲ್ತ್‌?

ಮುಂಬೈ: ಮಾಜಿ ವಿಶ್ವಸುಂದರಿ, ಬಾಲಿವುಡ್‌ ನಟಿ ಸುಶ್ಮಿತಾ ಸೇನ್‌ಗೆ ಹೃದಯಾಘಾತವಾಗಿರುವ ಬಗ್ಗೆ ಅವರು ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ತಮಗೆ ಎರಡು ದಿನಗಳ ಹಿಂದೆ ಹೃದಯಾಘಾತವಾಗಿದ್ದು ವೈದ್ಯರು ಆಂಜಿಯೋಪ್ಲಾಸ್ಟ್‌ ಮಾಡಿದ್ದಾರೆ ಎಂದು ಅವರು ಹೇಳಿಕೊಂಡಿದ್ದಾರೆ.   ಸದಾ ಫಿಟ್‌ ಆಗಿರುವ ಸುಶ್ಮಿತಾ ಸೇನ್‌ ಅವರ ಹೃದಯಾಘಾತ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಸದ್ಯಕ್ಕೆ ತಾವು ಆರಾಮವಾಗಿರುವುದಾಗಿ ಸುಶ್ಮಿತಾ ಸೇನ್‌ ಹೇಳಿದ್ದಾರೆ. ತಮ್ಮ ದೈಹಿಕ ಆರೋಗ್ಯಕ್ಕೇ ಹೆಚ್ಚು ಒತ್ತು ನೀಡುವ ಸುಶ್ಮಿತಾ ಸೇನ್‌ …

Read More »

‘ಕಾಂಗ್ರೇಸ್ ಪಕ್ಷದಲ್ಲಿ ದುಡ್ಡುಕೊಟ್ಟು ಜನ್ರು ಸೇರಿಸುವ ಪರಂಪರೆ ಇಲ್ಲಾ’

ಯಾದಗಿರಿ : ಕಾಂಗ್ರೇಸ್ ಪಕ್ಷದಲ್ಲಿ ದುಡ್ಡುಕೊಟ್ಟು ಜನ್ರು ಸೇರಿಸುವ ಪರಂಪರೆ ಇಲ್ಲಾ. ಬಿಜೆಪಿಯವರ ಬಗ್ಗೆ ಮಾತನಾಡುವಾಗಿನ ವಿಡಿಯೋ ಅದಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ವಿಡಿಯೋ ವೈರಲ್ ಗೆ ಸಂಬಂಧಿಸಿದಂತೆ ಪ್ರಕ್ರಿಯೆ ನೀಡಿದ್ದಾರೆ.   ಈ ಬಗ್ಗೆ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಮುಗಂದಪೂರ ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದಸತೀಶ್ ಜಾರಕಿಹೊಳಿ, ಮಾರ್ಚ್ 5ರಂದು ಜೆಡಿಎಸ್ ಶಾಸಕರೊಬ್ಬರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಾರೆ. ನಂತರ ಹಂತ ಹಂತವಾಗಿ ಜೆಡಿಎಸ್ ಕೆಲವು ಶಾಸಕರು …

Read More »

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಡಿಕೆ ಶಿವಕುಮಾರ್!

ಬೆಂಗಳೂರು : ನಿನ್ನೆ ಕೂಡ ಗ್ಯಾಸ್ ಬೆಲೆ ಏರಿಸಿದ್ದಾರೆ. ಪದೇ ಪದೇ ಏರಿಕೆಯಾಗ್ತಾನೇ ಇದೆ. ಈಗ ಚುನಾವಣೆ ಇದೆ ಅಂತ ಮೋದಿ ಬರುತ್ತಿದ್ದಾರೆ. ಸಾವು, ಪ್ರವಾಹ ಆದಾಗ ರಾಜ್ಯಕ್ಕೆ ಬರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮತ್ತೆ ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.   ಈ ಬಗ್ಗೆ ನಗರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದಡಿ.ಕೆ. ಶಿವಕುಮಾರ್, ಈ ಭ್ರಷ್ಟ ಸರ್ಕಾರ ತೆಗೆಯಬೇಕು. ಜನರೇ ಅಂತಹ ತೀರ್ಮಾನ ಮಾಡಿದ್ದಾರೆ. …

Read More »