Breaking News

Yearly Archives: 2023

ಹಗರಣ ಮುಚ್ಚಿಕೊಳ್ಳಲು ಬೊಮ್ಮಾಯಿಯಿಂದ ಸುಳ್ಳು ಆರೋಪ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ‘ಬಿಜೆಪಿ ಸರ್ಕಾರದ ವಿರುದ್ಧದ ಶೇಕಡ 40ರಷ್ಟು ಕಮಿಷನ್‌ ಆರೋಪ ಹಾಗೂ ಸಾಲು ಸಾಲಾಗಿ ಹೊರಬರುತ್ತಿರವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸದನದಲ್ಲಿ ಅವರು ಮಾಡಿರುವ ಯಾವ ಆರೋಪಗಳಿಗೂ ಆಧಾರವಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅರ್ಕಾವತಿ ಬಡಾವಣೆ ನಿರ್ಮಾಣ ಪ್ರಾರಂಭವಾದದ್ದು 2003ರಲ್ಲಿ. ನಾನು ಅಧಿಕಾರಕ್ಕೆ ಬರುವ ಮೊದಲೇ 2,750 …

Read More »

ಧಾರವಾಡದಲ್ಲಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಮೃತ್ಯು

ಧಾರವಾಡ : ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯ ತೇಗೂರ ಗ್ರಾಮದ ಬಳಿ ಗುರುವಾರ ರಾತ್ರಿ ಸಂಭವಿಸಿದ ಭೇಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿಯಿಂದ ಧಾರವಾಡದ ಕಡೆಗೆ ಬರುತ್ತಿದ್ದ ಕಾರು ಲಾರಿಗೆ ಹಿಂಬದಿಯಿಂದ ಗುದ್ದಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.   ಮೃತ ದುರ್ದೈವಿಗಳು ನಾಗಪ್ಪ ಈರಪ್ಪ ಮುದ್ದೊಜಿ(29)ಮಹಂತೇಶ್ ಬಸಪ್ಪ ಮುದ್ದೊಜಿ (40) ಬಸವರಾಜ್ ಶಿವಪುತ್ರಪ್ಪ ನರಗುಂದ(35) ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ (05) …

Read More »

ಕಾಂಗ್ರೆಸ್ ಪ್ರಮುಖ ಸಭೆಗೆ ಗಾಂಧಿ ಕುಟುಂಬದ ಗೈರು; ಖರ್ಗೆಗೆ ಫುಲ್ ಪವರ್

ಹೊಸದಿಲ್ಲಿ: ಛತ್ತೀಸ್‌ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್‌ ಸೇ ಹಾಥ್‌ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.   ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಸ್ವಾತಂತ್ಯ ನೀಡುವ ಉದ್ದೇಶದಿಂದ ಗಾಂಧಿ ಕುಟುಂಬ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದಾಗ್ಯೂ ಸಮಾವೇಶದ ಉಳಿದ ಭಾಗಕ್ಕೆ ಹಾಜರಾಗುತ್ತಾರೆ. …

Read More »

ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ನಿಧನ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್‌ ಪಾಟೀಲ್‌ ಅವರ ಪತಿ ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಪ್ರತಿಭಾ ದೇವಿ ಸಿಂಗ್‌ ಪಾಟೀಲ್‌, ಪುತ್ರ, ಕಾಂಗ್ರೆಸ್‌ ನಾಯಕ ರಾಜೇಂದ್ರ ಸಿಂಗ್‌ ಶೆಖಾವತ್‌ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.   ಫೆ.12 ರಂದು ತನ್ನ ಪುಣೆಯ ನಿವಾಸದಲ್ಲಿ ಹುಲ್ಮಾಲುಹಾಸಿನ ಮೇಲೆ ಕುಸಿದುಬಿದ್ದಿದ್ದರು ಎಂದು ಹೇಳಲಾಗಿದೆ. ಆ ಬಳಿಕ …

Read More »

ಕಾಂಗ್ರೆಸ್ ಮೂರನೇ ಗ್ಯಾರಂಟಿ: ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಮೊದಲು ಕಾಂಗ್ರೆಸ್ ಮೂರನೇ ಗ್ಯಾರಂಟಿಯನ್ನು ಪ್ರಕಟಿಸಿದ್ದು, ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ನೆರವಾಗುವ ಉದ್ದೇಶದಿಂದ ಈಗಾಗಲೇ ಎರಡು ಗ್ಯಾರಂಟಿ ಯೋಜನೆ ಘೋಷಿಸಿದ್ದೇವೆ. ಈಗ ಮೂರನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್ ಕಾರ್ಡ್ ಕುಟುಂಬದ …

Read More »

ಬರ್ಬರವಾಗಿ ಹೆಂಡತಿಯನ್ನೇ ಕೊಲೆಗೈದ ಗಂಡ

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಹೆಂಡತಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಸಾದಪುರದಲ್ಲಿ ನಡೆದಿದೆ. ಪವಿತ್ರಾ ಅಲಿಯಾಸ್ ಮಮತಾ (22) ಮೃತ ಮಹಿಳೆ. ಆರೋಪಿ ನಾಗರಾಜ್ ಪತ್ನಿಯನ್ನೇ ಕೊಂದ ಪತಿ. ಕಳೆದ ವರ್ಷವಷ್ಟೇ ವಿವಾಹವಾಗಿದ್ದ ಮಮತಾ ಹಾಗೂ ನಾಗರಾಜ್ ಮಾನ್ವಿ ಬಳಿಯ ಇಟ್ಟಿಗೆ ತಯಾರಿಕಾ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದರು. ನಾಗರಾಜ್ ಗೆ ಪತ್ನಿ ಮಮತಾ ಮೇಲೆ ಅನುಮಾನ. ಅನುಮಾನ ವಿಪರೀತಕ್ಕೆ ಹೋಗಿ ಈಗ ಹೆಂಡತಿಯನ್ನೇ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾ ರೋಹಣ ಕಾರ್ಯಕ್ರಮ

ಹಿರೆನಂದಿ: ಸಂತೋಷ್ ಜಾರಕಿಹೊಳಿ ಅವರ ನೇತೃತ್ವದ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಲಕ್ಷ್ಮಿ ದೇವಿ ಮೂರ್ತಿ ಪ್ರತಿಷ್ಠಾಪನೆ, ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗಿ, ಹಾಗೂ ಜೊತೆಗೆ ಸೂರ್ಯ ಶ್ರೇಷ್ಠ ಜಾರಕಿಹೊಳಿ ಸಣ್ಣ ಸಾಹುಕಾರರು ಶ್ರೀಮತಿ ಜಯಶ್ರೀ ರಮೇಶ್ ಜಾರಕಿಹೊಳಿ, ಹಾಗೂ ಜಯಶ್ರೀ ನಾಯಿಕ ಈ ಒಂದು ಸಮಾರಂಭಕ್ಕೆ ಹಾಜರ್ ಇದ್ದರೂ ಹೌದು ತಮ್ಮ ಫ್ಯಾಕ್ಟರಿ ಆವರಣ ದಲ್ಲಿ ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ಅಧ್ಬ್ಬೂತ …

Read More »

ಇನ್ನೊಂದು ತಿಂಗಳಲ್ಲಿ ಬಿಜೆಪಿ ಅಂಗಡಿ ಬಂದ್ ಆಗಲಿದೆ :ಎಂ. ಬಿ. ಪಾಟೀಲ

ವಿಜಯಪುರ: ಇನ್ನೊಂದು ತಿಂಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದ್ದು, ಬಿಜೆಪಿ ಅಂಗಡಿ ಬಂದ್ ಆಗಲಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಇಲ್ಲಿನ ಶಾಸಕರು ಮೊದಲು ದೇವರ ಹಿಪ್ಪರಗಿಯಲ್ಲಿ ಇದ್ದರು. ಇಲ್ಲಿಗೆ ಗುಳೆ ಬಂದಿದ್ದಾ. ಮುಂದೆ ಎಲ್ಲಿ ಹೋಗುತ್ತಾರೋ ಗೊತ್ತಿಲ್ಲ. ರಾಜಕಾರಣದಲ್ಲಿ ರಾಜಕೀಯವಾಗಿ ರಾಜಕಾರಣ ಮಾಡೋಣ. ಅವರದ್ದು ಒಂದು ಪಕ್ಷ, ನಮ್ಮದು ಒಂದು …

Read More »

ಆಪರೇಶನ್‌ ಕಮಲದ ಮೂವರು ಬಾಂಬೆ ಫ್ರೆಂಡ್ಸ್‌ ಮತ್ತೆ ಕಾಂಗ್ರೆಸ್ಸಿಗೆ?

ರಾಜಕೀಯ ನಿಂತ ನೀರಲ್ಲ, ಇಲ್ಲಿ ಯಾರೂ ಶತ್ರುಗಳಿಲ್ಲ, ಮಿತ್ರರೂ ಇಲ್ಲ ಎನ್ನುವ ಮಾತನ್ನು ನಾಡಿನ ರಾಜಕಾರಣಿಗಳು ಚುನಾವಣೆಯ ವೇಳೆ ನಿಜವೆಂದು ರುಜುವಾತು ಪಡಿಸುತ್ತಾರೆ. ಇದಕ್ಕೆ ಪೂರಕವಾದ ರಾಜಕೀಯ ವಿದ್ಯಮಾನಗಳು ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವುದು ಗೊತ್ತಿರುವ ವಿಚಾರ. ಈಗಾಗಲೇ ಹಲವರು ಪಕ್ಷ ನಿಯತ್ತನ್ನು ಬದಲಿಸಿಯಾಗಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಗೆ ದಿನಗಣನೆ ಆರಂಭವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇನ್ನೇನು ಹದಿನೈದು ದಿನಗಳಲ್ಲಿ ಚುನಾವಣಾ ಆಯೋಗ ತಾರೀಕು ನಿಗದಿ ಪಡಿಸುತ್ತದೆ …

Read More »

ಮುಂದಿನ ತಿಂಗಳಲ್ಲೇ 7ನೇ ವೇತನ ಆಯೋಗ ಜಾರಿ – ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನಗಳ ಬೇಡಿಕೆಗೆ ಈಡೇರಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಅಸ್ತು ಎಂದಿದ್ದಾರೆ. 7ನೇ ವೇತನ ಆಯೋಗದಿಂದ ಮಧ್ಯಂತರ ವರದಿ ಪಡೆದು ಮಾರ್ಚ್ ಗೆ ಜಾರಿಗೊಳಿಸೋದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ.   ಈ ಬಗ್ಗೆ ಗುರುವಾರ ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆಯಲ್ಲಿ ಮಾತನಾಡಿದಂತ ಅವರು, ಈಗಾಗಲೇ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ …

Read More »