ಕಲಬುರ್ಗಿ: ಮನುಷ್ಯನಿಗೆ ಅನುಮಾನ ಎನ್ನುವುದು ಶುರುವಾದರೆ ಎಂಥಹ ಕೃತ್ಯವೆಸಗಲೂ ಹಿಂದೆಮುಂದೆ ನೋಡಲ್ಲ ಎಂಬುದಕ್ಕೆ ಈ ಘಟನೆ ಸಾಕ್ಷಿ. ಪತ್ನಿ ಮೇಲಿನ ಅನುಮಾನಕ್ಕೆ ಶಿಕ್ಷಕ ಮಹಾಶಯನೊಬ್ಬ ಆಕೆಯನ್ನೇ ಕೊಲೆಗೈದಿರುವ ಘಟನೆ ಕಲಬುರ್ಗಿಯ ಅಂಬಿಕಾ ನಗರದಲ್ಲಿ ನಡೆದಿದೆ. ಫರಿದಾ ಬೇಗಂ ಪತಿಯಿಂದ ಕೊಲೆಯಾದ ಮಹಿಳೆ. ಏಜಾಜ್ ಅಹ್ಮದ್ ಹಾಗೂ ಫರೀದಾ ಬೇಗಂ 13 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳು ಕೂಡ ಇದ್ದಾರೆ. ಅಲ್ಲದೇ ಪತಿ-ಪತ್ನಿ ಇಬ್ಬರೂ ಸರ್ಕಾರಿ ಶಾಲೆಯ ಶಿಕ್ಷಕರು. ಪತ್ನಿ …
Read More »Yearly Archives: 2023
ಮಾ.4ರಿಂದ ರಾಷ್ಟ್ರೀಯ ಲಿಂಗಾಯತ ಅಧಿವೇಶನ
ಬೆಳಗಾವಿ: ‘ಜಾಗತಿಕ ಲಿಂಗಾಯತ ಮಹಾಸಭೆ ಹಾಗೂ ಲಿಂಗಾಯತ ಮಠಾಧೀಶರ ಒಕ್ಕೂಟದ ಸಹಯೋಗದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮಾರ್ಚ್ 4 ಹಾಗೂ 5ರಂದು ರಾಷ್ಟ್ರೀಯ ಲಿಂಗಾಯತ ಅಧಿವೇಶನ ಹಮ್ಮಿಕೊಳ್ಳಲಾಗಿದೆ’ ಎಂದು ಗದಗ- ಡಂಬಳ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಪಡೆಯುವುದು ನಮ್ಮ ಉದ್ದೇಶ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಧಿವೇಶನ ನಡೆಸಲಾಗುತ್ತಿದೆ. ನಮ್ಮ …
Read More »ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತೆ ಅನ್ನೋದಕ್ಕೆ ಪುಲ್ವಾಮಾ ದಾಳಿ ಉದಾಹರಣೆ! ಕೊಪ್ಪಳ ಸರ್ಕಾರಿ ಶಿಕ್ಷಕನ ವಿವಾದ
ಕೊಪ್ಪಳ: ಪುಲ್ವಾಮಾ ದಾಳಿಯು ಒಂದು ವ್ಯವಸ್ಥಿತ ಪಿತೂರಿ ಎಂದು ವಾಟ್ಸ್ಆಯಪ್ ಸ್ಟೇಟಸ್ ಹಾಕುವ ಮೂಲಕ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಈ ರೀತಿಯಾಗಿ ಸ್ಟೇಟಸ್ ಹಾಕಿಕೊಂಡಿದ್ದು, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿಯಾಗಿದೆ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲಾ ನಡೆಯುತ್ತದೆ ಎನ್ನುವುದಕ್ಕೆ ಜ್ವಲಂತ ಉದಾಹರಣೆಯಾಗಿದೆ. ಘಟನೆಯಲ್ಲಿ ಮಡಿದ ವೀರರಿಗೆ …
Read More »ಜಡ್ಜ್ ಸ್ಥಾನಕ್ಕೆ ರಾಜೀನಾಮೆ; ಜೆಡಿಎಸ್ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ಎಂಟ್ರಿ
ಗದಗ: ರಾಜ್ಯದಲ್ಲಿ ವಿಧಾಸಭಾ ಚುನಾವಣಾ ಸಮಯ ಸಮೀಪಿಸುತ್ತಿದ್ದಂತೆ ಹೊಸ ಹೊಸ ಅಭ್ಯರ್ಥಿಗಳು ವಿವಿಧ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅದರಲ್ಲೂ ಸರ್ಕಾರಿ ನೌಕರಿಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಪ್ರವೇಶಿಸುತ್ತಿರುವವರ ಸಂಖ್ಯೆ ಈ ಬಾರಿ ಹೆಚ್ಚಿದೆ. ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ, ಚುನಾವಣೆ ಎದುರಿಸುವ ಸಿದ್ಧತೆಯಲ್ಲಿದ್ದಾರೆ. ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿ, ರಾಜೀಯಕ್ಕೆ ಎಂಟ್ರಿ ಪಡೆದುಕೊಂಡಿದ್ದಾರೆ. ಗದಗ ನಗರದ ಜೆಎಂಎಫಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿದ್ದ ಸುಭಾಷಚಂದ್ರ …
Read More »ಟ್ರಾಫಿಕ್ ಜಾಮ್: ವಿಶ್ವದಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿಗೆ 2ನೇ ಸ್ಥಾನ
ಶ್ರೀಮಂತ ಇತಿಹಾಸ ಹಾಗೂ ಅಭಿವೃದ್ಧಿ ಹೊಂದುತ್ತಿರುವ ಐಟಿ ಉದ್ಯಮಗಳ ಕಾರಣದಿಂದ ಬೆಂಗಳೂರನ್ನು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತಾರೆ. ಆದರೆ, ದುರಾದೃಷ್ಟವಶಾತ್ ಇದೇ ಬೆಂಗಳೂರು ಟ್ರಾಫಿಕ್ ಜಾಮ್ ಕುಖ್ಯಾತಿಯನ್ನು ಹೊಂದಿದೆ. ಸಾವಿಲ್ಲದ ಮನೆಯಿಲ್ಲ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಅನುಭವಿಸದ ವ್ಯಕ್ತಿಯಿಲ್ಲ ಎಂಬ ಪರಿಸ್ಥಿತಿ ನಮ್ಮ ಬೆಂದಕಾಳೂರದ್ದು. ಬಹುತೇಕ ಎಲ್ಲರು ಟ್ರಾಫಿಕ್ ಕಿರಿಕಿರಿಯನ್ನು ಅನುಭವಿಸಿದ್ದಾರೆ. ಇತ್ತೀಚೆಗೆ ಜಿಯೋಲೊಕೇಶನ್ ತಂತ್ರಜ್ಞಾನ ಸಂಸ್ಥೆ ಟಾಮ್ ಟಾಮ್, ನಡೆಸಿದ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ನಿಧಾನಗತಿಯ ನಗರಗಳಲ್ಲಿ …
Read More »ಶೀಘ್ರವೇ ನನಸಾಗಲಿದೆ ಧಾರವಾಡ- ಬೆಳಗಾವಿ ರೈಲ್ವೇ ಲೈನ್ ಕನಸು
ಹುಬ್ಬಳ್ಳಿ: ಬೆಳಗಾವಿ ಹಾಗೂ ಧಾರವಾಡ ಮಧ್ಯೆ ನೇರ ಸಂಪರ್ಕ ಕಲ್ಪಿಸುವ ಬಹುದಿನಗಳ ಕನಸು ನನಸಾಗುವ ಘಳಿಗೆ ಸಮೀಪಿಸಿದ್ದು ಮೊದಲ ಹಂತದಲ್ಲಿ ಕ್ಯಾರಕೊಪ್ಪ-ಮಮ್ಮಿಗಟ್ಟಿ ಮಧ್ಯೆ ಮಾರ್ಗ ನಿರ್ಮಾಣಕ್ಕೆ ನೈರುತ್ಯ ರೈಲ್ವೆ ನಿರ್ಧಾರ ತಳೆದಿದೆ. 2021-22ನೇ ಸಾಲಿನಲ್ಲಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಗೆ 463 ಕೋಟಿ ರೂ. ಘೋಷಿಸಲಾಗಿತ್ತು. ರೈಲ್ವೆ ಇಲಾಖೆ ಕಳೆದ ವರ್ಷ 20 ಕೋಟಿ ಹಾಗೂ ಪ್ರಸಕ್ತ ವರ್ಷ 10 ಕೋಟಿ ರೂ. ಒದಗಿಸುವುದಾಗಿ ಘೋಷಿಸಿದೆ. ಕ್ಯಾರಕೊಪ್ಪವರೆರೆಗೆ ಹಾಲಿ ಇರುವ …
Read More »ಜಾಕ್ವೆಲ್ ಮುತ್ತಿಗೆ ಯತ್ನ: ಲಘು ಲಾಠಿ ಪ್ರಹಾರ
ಸವದತ್ತಿ: ಬಾಕಿ ವೇತನ ಹಾಗೂ ನೇಮಕಾತಿ ಆದೇಶ ನೀಡಲು ಆಗ್ರಹಿಸಿ ಧಾರವಾಡದ ಜಲಮಂಡಳಿಯ ದಿನಗೂಲಿ ಕಾರ್ಮಿಕರು ಪಟ್ಟಣದಲ್ಲಿ ಬುಧವಾರ ನಡೆಸಿದ ಧರಣಿ ವೇಳೆ, ನೂಕಾಟ- ತಳ್ಳಾಟ ನಡೆದಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದರು. ಈ ಸಂದರ್ಭದಲ್ಲಿ 12 ಮಂದಿಗೆ ಸಣ್ಣಪುಟ್ಟ ಗಾಯಗಳಾದವು. ಹುಬ್ಬಳಿ- ಧಾರವಾಡ ನಗರಗಳಿಗೆ ನೀರು ಸರಬರಾಜು ಮಾಡುವ ಇಲ್ಲಿನ ಜಾಕ್ವೆಲ್ ಬಳಿ ಬೆಳಿಗ್ಗೆಯಿಂದ ಶಾಂತಿಯುತ ಧರಣಿ ನಡೆಸಲಾಯಿತು. ಮಧ್ಯಾಹ್ನದವರೆಗೂ ಅಧಿಕಾರಿಗಳು ಸ್ಥಳಕ್ಕೆ ಬಾರದ ಕಾರಣ, …
Read More »ಬೀದಿ ದೀಪ ಅಳವಡಿಸಿ ಇಂಥ ರೀತಿಯ ಪರಿಸ್ಥಿತಿ ಕಳೆದ ಐದು ವರ್ಷಗಳಿಂದಲೂ ಇದೆ.
ಬೆಳಗಾವಿ: ಇಲ್ಲಿನ ಆದರ್ಶ ನಗರದ ಆದರ್ಶ ಶಾಲೆಯಿಂದ ಹಿಡಿದು ವಡಗಾಂವಿ (ಗ್ರಾಮೀಣ ಪೊಲೀಸ್ ಠಾಣೆ ಹಿಂಭಾಗ) ಮಾರ್ಗದಲ್ಲಿ ವಿದ್ಯುತ್ ಕಂಬಗಳಿವೆ. ಆದರೆ, ವಿದ್ಯುತ್ ದೀಪಗಳೇ ಇಲ್ಲ. ಇದರಿಂದ ಈ ಪ್ರದೇಶ ದಿನವೂ ಕತ್ತಲು ಆವರಿಸಿರುತ್ತದೆ. ಇಂಥ ರೀತಿಯ ಪರಿಸ್ಥಿತಿ ಕಳೆದ ಐದು ವರ್ಷಗಳಿಂದಲೂ ಇದೆ. ಈ ಬಗ್ಗೆ ಹಲವು ಬಾರಿ ಮಹಾನಗರ ಪಾಲಿಕೆಯ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ್ದೇನೆ. ಆದರೂ ಯಾರೂ ಕಣ್ಣೆತ್ತಿ ನೋಡಿಲ್ಲ. ಸರ್ಕಾರದ ‘ಜನಹಿತ’ ವೆಬ್ಸೈಟ್ನಲ್ಲೂ …
Read More »ಮಕ್ಕಳ ಕ್ಯಾನ್ಸರ್ಗೆ ಪರಿಹಾರವಿದೆ
ಬೆಳಗಾವಿ: ‘ಮಕ್ಕಳಲ್ಲಿ ಕ್ಯಾನ್ಸರ್ ಕಾಣಿಸಿಕೊಂಡಿದೆ ಎಂದ ತಕ್ಷಣ ಪಾಲಕರು ಎದೆಗುಂದಬಾರದು. ಇದರಿಂದ ಮಕ್ಕಳೂ ಮಾನಸಿಕವಾಗಿ ಕುಂದುತ್ತಾರೆ. ಅವರ ಲವಲವಿಕೆಯೇ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಆಧುನಿಕ ವೈದ್ಯ ವಿಜ್ಞಾನದಲ್ಲಿ ಎಂಥ ಕ್ಯಾನ್ಸರ್ಗೂ ಚಿಕಿತ್ಸೆ ಇದೆ’ ಎಂದು ಲೋಕಾಯುಕ್ತ ಎಸ್ಪಿ ಯಶೋದಾ ವಂಟಗೋಡಿ ಸಲಹೆ ನೀಡಿದರು. ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ ಅಂಗವಾಗಿ, ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೆಂದ್ರದಲ್ಲಿ ಚಿಕ್ಕಮಕ್ಕಳ ಕ್ಯಾನ್ಸರ್ ವಿಭಾಗವು …
Read More »ಕಲುಷಿತ ನೀರು ಕುಡಿದು ಇಬ್ಬರು ಸಾವು; 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಗುರು ಮಠಕಲ್ ತಾಲ್ಲೂಕಿನ ಅನಪುರದಲ್ಲಿ ಕಲುಷಿತ ನೀರು ಕುಡಿದು ಬುಧವಾರ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದಾರೆ. ಸಾವಿತ್ರಮ್ಮ ವೆಂಕಟಪ್ಪ ನಕ್ಕ (35), ಸಾಯಮ್ಮ ಭೀಮಶಪ್ಪ ಮಿನಾಸ ಪುರಂ (72) ಮೃತರು. ‘ಅಸ್ವಸ್ಥರನ್ನು ತೆಲಂಗಾಣದ ನಾರಾಯಣಪೇಟೆ ಆಸ್ಪತ್ರೆ, ಮೆಹಬೂಬ್ ನಗರದ ಆಸ್ಪತ್ರೆ ಮತ್ತು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸ ಲಾಗಿದೆ’ ಎಂದು ವೈದ್ಯರು ತಿಳಿಸಿದ್ದಾರೆ. ‘ಇಬ್ಬರು ಮಹಿಳೆಯರು ಸಾವಿಗೆ ಮತ್ತು ಜನರು ಅಸ್ವಸ್ಥಗೊಳ್ಳಲು ಕಲುಷಿತ …
Read More »