Breaking News

Yearly Archives: 2023

ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆ- ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಅವರ ವಿಡಿಯೋವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಿಡುಗಡೆ ಮಾಡಿರುವ ಕುರಿತಂತೆ ಸಿಎಂ ಪ್ರತಿಕ್ರಿಯೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ. ಪಟ್ಟಿಯಲ್ಲಿ ಐದು ಹೆಸರು ಇದ್ದರೆ ಅದು ವರ್ಗಾವಣೆಯಾಗುತ್ತದೆಯೇ ಎಂದು …

Read More »

ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾ ಶ್ರೀ ಜೈಲಿನಿಂದ ಬಿಡುಗಡೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಇಂದು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಶ್ರೀಗಳ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷದ ಡಿಸೆಂಬರ್​ನಿಂದ ಶ್ರೀಗಳು ಚಿತ್ರದುರ್ಗಾ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ನವೆಂಬರ್ 8ರಂದು ಒಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಜಾಮೀನು ನೀಡಿದ್ದರೂ, ಇನ್ನೊಂದು ಪ್ರಕರಣದ ವಿಚಾರಣೆ ಬಾಕಿ ಉಳಿದಿದ್ದ ಕಾರಣ ಮುರುಘಾ ಶರಣರ ಬಿಡುಗಡೆಯಾಗಿರಲಿಲ್ಲ. ಇದೀಗ ಚಿತ್ರದುರ್ಗದ …

Read More »

ಬಿಗ್ ಬಾಸ್ ಸ್ಪರ್ಧಿ ತನಿಷಾ ವಿರುದ್ಧ ಜಾತಿನಿಂದನೆ ದೂರು ದಾಖಲ

ಬಿಗ್ ಬಾಸ್ (Bigg Boss Kannada 10) ಸ್ಪರ್ಧಿ ತನಿಷಾ (Tanisha Kuppanda) ವಿರುದ್ಧ ಜಾತಿನಿಂದನೆ ದೂರು ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸ್ಟುಡಿಯೋಗೆ ಕುಂಬಳಗೋಡು ಪೊಲೀಸರು ಎಂಟ್ರಿ ಕೊಟ್ಟಿದ್ದಾರೆ. ತನಿಷಾ ಕುಪ್ಪಂಡ- ಪ್ರತಾಪ್ ಇಬ್ಬರನ್ನೂ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಜಾತಿ ನಿಂದನೆ ವಿಚಾರವಾಗಿ ಎಸ್‌ಸಿಎಸ್ಟಿ ಕಾಯ್ದೆಯಡಿ ಅಟ್ರಾಸಿಟಿ ಕೇಸ್ ದಾಖಲಾದ ಬೆನ್ನಲ್ಲೇ ಬಿಗ್ ಬಾಸ್ ಸೆಟ್‌ಗೆ ತೆರಳಿ ಕುಂಬಳಗೋಡು ಪೊಲೀಸರಿಂದ ವಿಚಾರಣೆ ಮಾಡಲಾಗಿದ್ದು, ತನಿಷಾ ಧ್ವನಿ ಸ್ಯಾಂಪಲ್ ತೆಗೆದುಕೊಳ್ಳಲಾಗಿದೆ. …

Read More »

ಆಹಾರ ಉದ್ಯಮಗಳ ಮೇಲೆ ಐಟಿ ದಾಳಿ

ಬೆಂಗಳೂರು: ಜ್ಯುವೆಲ್ಲರಿ‌ ಅಂಗಡಿ ಮಾಲೀಕರು, ಗುತ್ತಿಗೆದಾರರ ಮನೆ-ಕಚೇರಿಗಳ‌ ಮೇಲೆ‌ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿತ್ತು. ಇಂದು ಆಹಾರ ಉದ್ಯಮಗಳ‌ ಮೇಲೆ ದಾಳಿ‌ ನಡೆಸಿ‌, ಕಡತಗಳ ಪರಿಶೀಲನೆ ನಡೆಸುತ್ತಿದೆ. ರಾಜಾಜಿನಗರದ ಇಂಡಸ್ಟ್ರಿಯಲ್‌ ಎಸ್ಟೇಟ್ ಬಳಿಯಿರುವ ಪಿ.ಎಸ್.ಆಗ್ರೋ ಫುಡ್ ಎಲ್​ಎಲ್​ಪಿ ಕಾರ್ಖಾನೆ, ಬಿ.ವಿ.ಕೆ.ಅಯ್ಯಂಗಾರ್ ರಸ್ತೆಯಲ್ಲಿರುವ ಮಾಣಿಕ್ ಮೇವಾ ಸ್ಟೋರ್ ಮೇಲೆ ದಾಳಿ ನಡೆದಿದೆ. ಈ ಎರಡು ಆಹಾರ ಕಂಪನಿಗಳು ಒಣ ಹಣ್ಣುಗಳ ವ್ಯಾಪಾರ ನಡೆಸುತ್ತಿವೆ‌. ಆದಾಯಕ್ಕೆ ಪ್ರತಿಯಾಗಿ ತೆರಿಗೆ ಪಾವತಿಸದ …

Read More »

ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದಂತೆ ಸಂಘಟನಾತ್ಮಕ ಚಟುವಟಿಕೆಯನ್ನು ಅಧಿಕೃತವಾಗಿ ಆರಂಭಿಸಿರುವ ಬಿ ವೈ ವಿಜಯೇಂದ್ರ, ಮೊದಲನೆ ಸಭೆಯನ್ನಾಗಿ ಶುಕ್ರವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಪಕ್ಷದ ಎಲ್ಲಾ ಶಾಸಕರು ಮತ್ತು ಪರಿಷತ್ ಸದಸ್ಯರಿಗೆ ಆಹ್ವಾನ ನೀಡಿದ್ದಾರೆ.   ಇಂದು ಬೆಳಗ್ಗೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಬಿ. ವೈ ವಿಜಯೇಂದ್ರ ಅವರು ಪ್ರತಿಪಕ್ಷ ನಾಯಕರ ಆಯ್ಕೆ ಪ್ರಕ್ರಿಯೆ ನಡೆಸಲು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ …

Read More »

ರಾಷ್ಟ್ರೀಯ ಪತ್ರಿಕಾ ದಿನ: ಮುಕ್ತ, ನಿರ್ಭೀತ, ಮೌಲ್ಯಯುತ ಪತ್ರಿಕಾ ಸ್ವಾತಂತ್ರ್ಯಕ್ಕೆ ಬೆಂಬಲ

National Press Day: ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳಾಗುತ್ತಿದೆ. ನವೆಂಬರ್​ 16 ಅನ್ನು ರಾಷ್ಟ್ರೀಯ ಪತ್ರಿಕಾ ದಿನವನ್ನಾಗಿ ಆಚರಿಸಲಾಗುತ್ತದೆ. ಈ ದಿನದ ಇತಿಹಾಸ, ಮಹತ್ವದ ಕುರಿತ ವಿಶೇಷ ವರದಿ.   ಇಂದು ಸ್ವತಂತ್ರ ಮತ್ತು ಜವಾಬ್ದಾರಿಯುತ ಪತ್ರಿಕಾ ಉಪಸ್ಥಿತಿಯನ್ನು ಸೂಚಿಸುವ ರಾಷ್ಟ್ರೀಯ ಪತ್ರಿಕಾ ದಿನ. ಪ್ರತಿ ವರ್ಷ ನವೆಂಬರ್ 16ರಂದು ಸ್ವತಂತ್ರ ಪತ್ರಿಕಾ ಅಸ್ತಿತ್ವವನ್ನು ಸಾರುವ ಪ್ರೆಸ್ ಕೌನ್ಸಿಲ್ ಆಫ್ …

Read More »

ವಿಶ್ವಕಪ್‌ನಲ್ಲಿಂದು 2ನೇ ಸೆಮಿ ಫೈನಲ್‌

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕ್ರಿಕೆಟ್​ ಕಾಶಿ ಖ್ಯಾತಿಯ ಕೋಲ್ಕತ್ತಾದ ಈಡನ್​ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಇಂದು ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಎರಡನೇ ವಿಶ್ವಕಪ್‌ ಕ್ರಿಕೆಟ್‌ ಸೆಮಿಫೈನಲ್​ ಪಂದ್ಯ ನಡೆಯಲಿದೆ. ಇದುವರೆಗೆ ಒಟ್ಟು 12 ವಿಶ್ವಕಪ್​ ಕ್ರಿಕೆಟ್ ಆವೃತ್ತಿಗಳು ನಡೆದಿವೆ. ಆಸೀಸ್​ ಐದು ಬಾರಿ ಪ್ರತಿಷ್ಟಿತ ಪ್ರಶಸ್ತಿ ಗೆದ್ದುಕೊಂಡಿದೆ. ಈ ಪೈಕಿ ನಾಲ್ಕು ಪ್ರಶಸ್ತಿಗಳು ಕಳೆದ ಆರು ಆವೃತ್ತಿಗಳಲ್ಲಿ ಬಂದಿವೆ. ಇನ್ನೊಂದೆಡೆ, ದಕ್ಷಿಣ ಆಫ್ರಿಕಾ ನಾಲ್ಕು ಬಾರಿ ಸೆಮೀಸ್​ಗೆ ಬಂದರೂ ಸೋಲಿನ …

Read More »

ಆಸ್ತಿಗಾಗಿ ಪತ್ನಿಯನ್ನೇ ಕೊಲೆಗೈದ ಪತಿ,

ಮಂಡ್ಯ: ಪತ್ನಿ ಹೆಸರಿನಲ್ಲಿದ್ದ ಕೋಟ್ಯಂತರ ರೂ. ವೌಲ್ಯದ ಆಸ್ತಿಗಾಗಿ ಮಲಗಿದ್ದ ಸಮಯದಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಪತಿಯೇ ಹತ್ಯೆಗೈದಿರುವ ಘಟನೆ ನಗರದ ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಎಸ್. ಶೃತಿ (32) ಕೊಲೆಯಾದವರು. ಟಿ.ಎನ್. ಸೋಮಶೇಖರ್ (41) ಕೊಲೆ ಮಾಡಿದ ಪತಿ. ಕೊಲೆಯಾದ ಎಸ್ ಶೃತಿ ಹೆಸರಿನಲ್ಲಿ ಮೈಸೂರಿನಲ್ಲಿ ಕೋಟ್ಯಂತರ ರೂ. ಬೆಲೆಬಾಳುವ ಆಸ್ತಿ ಇದ್ದು, ಈ ಆಸ್ತಿಯಲ್ಲಿ ಒಂದನ್ನು ಮಾರಾಟ ಮಾಡಲು ಅವರು ಪ್ರಯತ್ನಿಸುತ್ತಿದ್ದರು. ಒಪ್ಪದ ಪತಿ ಸೋಮಶೇಖರ್ ಎಲ್ಲಾ ಆಸ್ತಿಯನ್ನು …

Read More »

ತುಮಕೂರು ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ: ಸಚಿವ ರಾಜಣ್ಣ

ತುಮಕೂರು: “ನನಗೆ ತುಮಕೂರು ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಆಸೆ ಇದೆ. ಹೈಕಮಾಂಡ್​ನವರು ಸ್ಪರ್ಧೆಗೆ ಅವಕಾಶ ನೀಡಿದರೆ ನಿಲ್ಲುತ್ತೇನೆ. ಇಲ್ಲ ಎಂದರೆ ಸುಮ್ಮನ್ನೇ ಇರ್ತೇನಿ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ಮುಂದೆ ರಾಜ್ಯ ವಿಧಾನಸಭೆ ಸೇರಿದಂತೆ ಯಾವ ಚುನಾವಣೆಗೂ ನಿಲ್ಲಲ್ಲ, ಈಗ ಲೋಕಸಭೆಯ ಅನುಭವಕ್ಕಾಗಿ ಚುನಾವಣೆ ಸ್ಪರ್ಧಿಸಲು ಬಯಸಿದ್ದೇನೆ” ಎಂದು ತಿಳಿಸಿದರು. “ರಾಜ್ಯದಲ್ಲಿ ಬಹಳ ದಿನದಿಂದ ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು …

Read More »

ಯಾವುದೇ ಯೋಜನೆಗೆ ಅನುದಾನದ ಕೊರತೆ ಇಲ್ಲ ಗೃಹ ಲಕ್ಷ್ಮಿ ಯೋಜನೆ ಗೊಂದಲ ವಿಚಾರ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ​ಹೇಳೋದೇನು

ಧಾರವಾಡ : ಗೃಹಲಕ್ಷ್ಮಿ ಯೋಜನೆ ಗೊಂದಲ ವಿಚಾರ ಈಗ ಎಲ್ಲವೂ ಸರಳ ಮಾಡಿದ್ದೇವೆ. ಈಗಾಗಲೇ 1.9 ಕೋಟಿ ಜನರಿಗೆ ತಲುಪಿದ್ದೇವೆ. ಇನ್ನಾದರೂ ಐದಾರು ಲಕ್ಷ ಜನರದ್ದು ಕ್ಲಿಯರ್ ಆಗಬೇಕಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಅನುದಾನದ ಕೊರತೆ ಇಲ್ಲ. ಆದರೆ ತಾಂತ್ರಿಕ ತೊಂದರೆ ಕಾರಣಕ್ಕೆ ವಿಳಂಬ ಆಗಿದೆ. 15 ಲಕ್ಷ ಜನ ಆಧಾರ್ ಲಿಂಕ್ ಇಲ್ಲದ ಬ್ಯಾಂಕ್ ಖಾತೆ ನೀಡಿದ್ದರು. …

Read More »