Breaking News

Daily Archives: ಜನವರಿ 19, 2024

ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಂದು ಅವಧಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸಂಜೆ ನಗರದ ಬ್ಯಾಳಿ ಕಾಟಾ ಹತ್ತಿರ ಇರುವ ಎನ್ಎಸ್ಎಫ್ ಕಛೇರಿಯಲ್ಲಿ ಜರುಗಿದ ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಸಮೀಕ್ಷೆಗಳು ಕೂಡ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು …

Read More »

ಬಳ್ಳಾರಿ: ಗುತ್ತಿಗನೂರು ಗ್ರಾಮದಲ್ಲಿ ಹೊಟೇಲ್​ನಲ್ಲಿ ದಲಿತರಿಗೆ ಊಟ ನೀಡಲು ನಿರಾಕರಣೆ, ಅಸ್ಪೃಶ್ಯತೆ ವಿಡಿಯೋ ವೈರಲ್

ಬಳ್ಳಾರಿ, : ಧಾರವಾಡದಲ್ಲಿ ಹೋಟೆಲ್, ಕಟಿಂಗ್ ಶಾಪ್ ಹಾಗೂ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶ ನಿರ್ಬಂಧಿಸಿರುವ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಬಳ್ಳಾರಿ (Ballari)ಅಸ್ಪೃಶ್ಯತೆ (Untouchability)ಆಚರಣೆ ಪ್ರಕರಣ ಬೆಳಕಿಗೆ ಬಂದಿದೆ. ಊಟಕ್ಕೆಂದು ಹೊಟೇಲ್​ಗೆ ಬಂದ ದಲಿತ (Dalit) ಯುವಕರಿಗೆ “ಹೊಟೇಲ್ ಮುಚ್ಚುತ್ತೇನೆ, ಆದರೆ, ನಿಮಗೆ ಊಟ ಕೊಡಲ್ಲ” ಎಂದು ಮಹಿಳೆಯೊಬ್ಬಳು ಹೇಳಿರುವ ವಿಡಿಯೋ ವೈರಲ್ ಆಗುತ್ತಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಗುತ್ತಿಗನೂರು ಗ್ರಾಮದ ಹೊಟೇಲ್‌ನಲ್ಲಿ ಆಹಾರ ನೀಡಲು ಮಹಿಳೆ ನಿರಾಕರಣೆ ಮಾಡಿದ್ದಾರೆ. ಅಸ್ಪೃಶ್ಯತೆ ವಿರುದ್ಧ ಗರಂ ಆದ …

Read More »

ರಾಮಮಂದಿರಕ್ಕೆ ಕರ್ನಾಟಕದಿಂದ 51 ಅಡಿ ಕೇಸರಿ ಧ್ವಜ ಅರ್ಪಣೆ

ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ಕನ್ನಡಿಗರು ರಾಮಮಂದಿರಕ್ಕೆ ಅತೀ ದೊಡ್ಡ ಕೇಸರಿ ಧ್ವಜವನ್ನು ಅರ್ಪಣೆ ಮಾಡಿದ್ದಾರೆ. ಕರ್ನಾಟಕದಿಂದ ಅಯೋಧ್ಯೆಗೆ ಜೀಪ್​ನಲ್ಲಿ ತೆರಳಿ 51 ಅಡಿ ಭಗವಾ ಧ್ವಜವನ್ನು ಶ್ರೀರಾಮಜನ್ಮ ಭೂಮಿ ಟ್ರಸ್ಟ್​ಗೆ ನೀಡಿದ್ದಾರೆ.   ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರಕ್ಕೆ ಕರ್ನಾಟಕದ ಕೊಡುಗೆ ಅಧಿಕವಾಗಿದೆ. ಪ್ರಮುಖವಾಗಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ರಾಮಲಲ್ಲಾ ವಿಗ್ರಹ ಮೈಸೂರಿನಲ್ಲಿ ತಯಾರಾಗಿದೆ. ಅಲ್ಲದೇ ಕರ್ನಾಟಕದ ಅನೇಕ ಕಲಾವಿದರು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. …

Read More »

ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ್ದ ವಕೀಲರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.

ಮಂಡ್ಯ, ಜ.19: ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರ್​ಎಸ್​ಎಸ್​ ಮುಖಂಡಕಲ್ಲಡ್ಕ ಪ್ರಭಾಕರ್ ಭಟ್(Kalladka Prabhakar Bhat) ಅವರಿಗೆ ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತ ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಪ್ರಭಾಕರ್ ಭಟ್ ಪರ ನ್ಯಾಯಾಲಯದಲ್ಲಿ ವಲಾಕತ್ತು ವಹಿಸಿದ್ದ ಶ್ರೀರಂಗಪಟ್ಟಣ ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷರು ಎಂಬ ವಿಚಾರ ಬಹಿರಂಗವಾಗಿದೆ. ಇದೀಗ ಅವರನ್ನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ. ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ …

Read More »

ಫೆಬ್ರವರಿಯಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ತಮಿಳುನಾಡಿಗೆ ಬಿಡಲು ಕರ್ನಾಟಕಕ್ಕೆ ಸಿಡಬ್ಲ್ಯುಆರ್​ಸಿ ಸೂಚನೆ

ನವದೆಹಲಿ, ಜನವರಿ 19: ಕಾವೇರಿ ನೀರು ವ್ಯಾಜ್ಯ ನ್ಯಾಯಾಧಿಕರಣದ (CWDT) ಸುಪ್ರೀಂ ಕೋರ್ಟ್ ಮಾರ್ಪಡಿಸಿದ ಅಂತಿಮ ಆದೇಶದಲ್ಲಿ ಹೇಳಿದ ಪ್ರಮಾಣದಲ್ಲಿ ತಮಿಳುನಾಡಿಗೆ ಜನವರಿಯ ಬಾಕಿ ಉಳಿದಿರುವ ದಿನಗಳು ಹಾಗೂ ಫೆಬ್ರವರಿಯಲ್ಲಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಗುರುವಾರ ಆದೇಶ ನೀಡಿದೆ. ಸಿಡಬ್ಲ್ಯುಆರ್​ಸಿ ಅಧ್ಯಕ್ಷರಾದ ವಿನೀತ್ ಗುಪ್ತಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಾವೇರಿ ಜಲಾನಯನ ಪ್ರದೇಶದ ನೀರಿನ ಸ್ಥಿತಿಗತಿ ಮತ್ತು ಬೆಳೆಗಳ ಸ್ಥಿತಿಗತಿ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಜನವರಿಯ …

Read More »

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ

ನಕಲಿ ದಾಖಲೆ ನೀಡಿ ಸಾಲ ಪಡೆಯುವ ಖದೀಮರು: ಲೋನ್​​ ನೀಡಿದ 3 ಬ್ಯಾಂಕ್​ ಮ್ಯಾನೇಜರ್​ಗಳ​ ಬಂಧನ ಬೆಂಗಳೂರು, ಜನವರಿ 19: ಸರಿಯಾಗಿ ಪರಿಶೀಲಿಸದೆ ನಕಲಿ ಭೂ ದಾಖಲೆಗಳನ್ನು (Fake Documents) ಹೊಂದಿದ್ದವರಿಗೆಸಾಲ(Loan) ನೀಡಿದ್ದ ಮೂವರು ಬ್ಯಾಂಕ್​ ಮ್ಯಾನೆಜರ್​​ಗಳನ್ನು (Bank Manager) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ​ಐಸಿಐಸಿಐ ಬ್ಯಾಂಕ್ ಸೇಲ್ಸ್ ಮ್ಯಾನೇಜರ್ ರಾಕೇಶ್, ಸೆಂಟ್ ಮಾರ್ಕ್ಸ್ ರಸ್ತೆಯ ಎಸ್​ಬಿಐ ಬ್ಯಾಂಕ್​ನ ಎಜಿಎಂ ಮುರುಳಿಧರ್, ಬೆಂಗಳೂರು ಜಿಲ್ಲಾ ಕೋ ಅಪರೇಟಿವ್ ಬ್ಯಾಂಕ್​​ನ ಮಲ್ಲಿಕಾರ್ಜುನ ಬಂಧಿತ …

Read More »

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಸಾವು, 20

ಆನೇಕಲ್, ಜನವರಿ 18: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಮೃತಪಟ್ಟು 20 ಜನ ಗಾಯಗೊಂಡ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆ ಆನೇಕಲ್ (Anekal) ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಜಾರ್ಖಂಡ್​​ ಮೂಲದ ಮಿನರ್​ ಬಿಸ್ವಾಸ್​​, ಶಾಹೀದ್​ ಎಂದು ಗುರುತಿಸಲಾಗಿದೆ. ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಆರು ಮಂದಿಯ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ …

Read More »