ಬೆಳಗಾವಿ, : ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾನೆಹಿನ್ನೆಲೆ ಜಿಲ್ಲೆಯಲ್ಲಿ ಶೋಭಾಯಾತ್ರೆಗೆ ಅನುಮತಿ ಕೊರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ನ ಧಾರವಾಡ ವಿಭಾಗೀಯ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ. ಶ್ರೀರಾಮ ಸೇನೆ ಹಿಂದೂಸ್ತಾನ್ ವತಿಯಿಂದ ನಾಳೆ ಮಧ್ಯಾಹ್ನ ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಬೃಹತ್ ಶೋಭಾಯಾತ್ರೆ ಆಯೋಜಿಸಲಾಗಿತ್ತು. ಶ್ರೀರಾಮ ಸೇನೆ ಹಿಂದೂಸ್ತಾನ್ ಸಂಘಟನೆ ಸಂಸ್ಥಾಪಕ ರಮಾಕಾಂತ ಕೊಂಡುಸ್ಕರ ನೇತೃತ್ವದಲ್ಲಿ ನಗರದ ಸಂಭಾಜಿ ವೃತ್ತದಿಂದ ಶಹಾಪೂರ ವರೆಗೂ ಶೋಭಾಯಾತ್ರೆ ನಡೆಸಲು ಮುಂದಾಗಿದ್ದರು. ಆದರೆ ಕಾನೂನು …
Read More »Daily Archives: ಜನವರಿ 21, 2024
ದೇವರು ದೊಡ್ಡವನು ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಡಿಕೆಶಿ ವಿರುದ್ಧ ಜಾರಕಿಹೊಳಿ ವಾಗ್ದಾಳಿ
ಬೆಳಗಾವಿ, : ಸಿದ್ದರಾಮಯ್ಯ (Siddaramaiah) ಒಳ್ಳೆಯ ಸಿಎಂ ಆದ್ರೆ 2018ರಲ್ಲಿದ್ದಂತೆ ಈಗ ಇಲ್ಲ. ಕೊತ್ವಾಲ್ ಶಿಷ್ಯ ಡಿಸಿಎಂ ಆಗಿದ್ದಾರೆ. ಹೀಗಾಗಿ ಸಿದ್ದರಾಮಯ್ಯಗೆ ಬೆಲೆ ಇಲ್ಲ. ಕೊತ್ವಾಲ್ ಶಿಷ್ಯ ಸಿಎಂ ಆಗಿದ್ದರೆ ನಮ್ಮ ಆಸ್ತಿ ಎಲ್ಲಾ ಅವರ ಹೆಸರಿಗೆ ಆಗ್ತಿತ್ತು. ದೇವರು ದೊಡ್ಡವನು ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಆಗಿದ್ದಾರೆ. ಕೊತ್ವಾಲ್ ಶಿಷ್ಯ ನನ್ನ ವಿರುದ್ಧ 420 ಕೇಸ್ ಹಾಕಿಸಿದ್ದಾರೆ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಹೆಸರು ಹೇಳದೇ ಡಿಕೆ ಶಿವಕುಮಾರ್ …
Read More »ಹುಬ್ಬಳ್ಳಿ | ಎಲ್ಲೆಡೆ ರಾಮಮಯ; ಗುಡಿ-ಮಂದಿರ ಕೇಸರಿಮಯ
ಹುಬ್ಬಳ್ಳಿ: ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಮತ್ತು ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಅದಕ್ಕೆ ಪೂರಕವಾಗಿ ವಾಣಿಜ್ಯ ನಗರಿಯೂ ಸಂಭ್ರಮದಿಂದ ಸಿದ್ಧಗೊಂಡಿದೆ. ನಗರದ ಪ್ರಮುಖ ವೃತ್ತ ಸೇರಿದಂತೆ ಗಲ್ಲಿಗಲ್ಲಿಯೂ ಕೇಸರಿ ಬಾವುಟಗಳಿಂದ ಸಿಂಗಾರಗೊಂಡಿದೆ. ನಗರದ ದೇವಸ್ಥಾನಗಳು, ಮಠ-ಮಂದಿರಗಳು ರಾಮಧ್ವಜ, ಕೇಸರಿ ಬಾವುಟ ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿವೆ. ಗ್ರಾಮೀಣ ಭಾಗದ ಗುಡಿ, ಮಂದಿರಗಳನ್ನು ಸಹ ತಳಿರು-ತೋರಣಗಳಿಂದ ಸಿಂಗರಿಸಲಾಗಿದೆ. ವಿವಿಧ ಸಂಘ- ಸಂಸ್ಥೆಗಳು ಬಡಾವಣೆಗಳಲ್ಲಿ ರಾಮೋತ್ಸವಕ್ಕೆ ಸಿದ್ಧತೆ ಮಾಡಿಕೊಂಡಿವೆ. ದುರ್ಗದಬೈಲ್, ಗಣೇಶಪೇಟೆ, …
Read More »ಜಾನುವಾರು ಜಾತ್ರೆ: ಭರ್ಜರಿ ವ್ಯಾಪಾರ
ಕಕ್ಕೇರಾ: ಪಟ್ಟಣದ ಸೋಮನಾಥ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಾನುವಾರು ಜಾತ್ರೆ ಭರ್ಜರಿಯಾಗಿ ನಡೆಯುತ್ತಿದೆ. ಭಾನುವಾರದವರೆಗೆ ಜಾನುವಾರು ಜಾತ್ರೆ ಇರಲಿದೆ. ರಾಯಚೂರು, ಕೊಪ್ಪಳ, ಬಾಲಗಕೋಟೆ, ವಿಜಯಪುರ, ಮಾನ್ವಿ, ಲಿಂಗಸುಗೂರು, ದೇವದುರ್ಗ, ತಾವರಗೇರಾ, ಕುಷ್ಟಗಿ, ತಾಳಿಕೋಟೆ, ಇಂಡಿ ಸೇರಿದಂತೆ ವಿವಿಧೆಡೆಯಿಂದ ರೈತಾಪಿ ವರ್ಗ ಹೆಚ್ಚಿನ ಸಂಖ್ಯೆಯಲ್ಲಿ ದನಗಳೊಂದಿಗೆ ಜಾತ್ರೆಗೆ ಆಗಮಿಸಿರುವುದು ಕಂಡುಬಂದಿತು. ಜವಾರಿ ದೊಡ್ಡ ಪಡಿ, ಮೈಸೂರು ಕಿಲಾರಿ, ಕಿಲಾರಿ ತಳಿ, ದೇವಣಿ ಹೀಗೆ ನಾನಾ ತಳಿಗಳ ಎತ್ತುಗಳು ಇಲ್ಲಿ …
Read More »ಕಲಬುರಗಿ | ಅಘೋಷಿತ ಸ್ಲಂ ನಿವಾಸಿಗಳಿಗೆ ತ್ರಿಶಂಕು ಸ್ಥಿತಿ
ಕಲಬುರಗಿ: ನಗರದಲ್ಲಿರುವ ಘೋಷಿತ ಕೊಳೆಗೇರಿಗಳಲ್ಲಿ ಕೆಲ ಪ್ರದೇಶಗಳ ಅರ್ಧದಷ್ಟು ಭಾಗ ಅಘೋಷಿತವಾಗಿ ಉಳಿದಿದ್ದು, ಜನರಿಗೆ ಹಲವು ಸಮಸ್ಯೆಗಳನ್ನು ತಂದೊಡ್ಡಿದೆ. ಸಂಜೀವನಗರ ಕೊಳೆಗೇರಿ ಪ್ರದೇಶ ಇದಕ್ಕೆ ಉತ್ತಮ ಉದಾಹರಣೆ. ಇದು ಖಾಸಗಿಯವರ ಜಾಗದಲ್ಲಿದೆ. ಕೆಲ ಭಾಗವನ್ನು ಕೊಳೆಗೇರಿ ಎಂದು ಘೋಷಿಸಲಾಗಿದೆ. 80 ಮನೆಗಳಿರುವ ಪ್ರದೇಶ ಅಘೋಷಿತವಾಗಿ ಉಳಿದಿದೆ. ಇಲ್ಲಿಯ ಜನರಿಗೆ ಹಕ್ಕುಪತ್ರಗಳಿಲ್ಲದ ಕಾರಣ ಸರ್ಕಾರದ ಸೌಲಭ್ಯಗಳೂ ದಕ್ಕುತ್ತಿಲ್ಲ. ಕೊಳೆಗೇರಿ ಅಭಿವೃದ್ಧಿ ಮಂಡಳಿಯೂ ಅಭಿವೃದ್ಧಿಗೆ ಮುಂದಾಗುತ್ತಿಲ್ಲ. ಇಲ್ಲಿನ ಜನಕ್ಕೆ ಸಮಸ್ಯೆಯ ಸರಪಳಿಯಿಂದ ಕಳಚಿಕೊಂಡು …
Read More »