Breaking News

Daily Archives: ಫೆಬ್ರವರಿ 9, 2024

ಭಾವನೆ ಶುದ್ದವಾಗಿದ್ದರೆ ಭಾಗ್ಯಕ್ಕೆ ಕೊರತೆ ಇರುವುದಿಲ್ಲ: ನ್ಯಾಯಾಧೀಶರು ಎಂ.ಬಿ.ಕುಡವಕ್ಕಲಿಗೇರ

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ ಉದ್ಘಾಟನಾ ಸಮಾರಂಭ   ಗೋಕಾಕ : ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ, ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಪಾಲ್ಗೊಂಡು ಆರೋಗ್ಯವಂತರಾಗಿರೆಂದು ಬೆಳಗಾವಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಂ.ಬಿ.ಕುಡವಕ್ಕಲಿಗೇರ ಹೇಳಿದರು. ಶುಕ್ರವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಕಾನೂನು ಮಹಾವಿದ್ಯಾಲಯದ ಸಾಂಸ್ಕೃತಿಕ, ಕ್ರೀಡಾ ಹಾಗೂ ಕಾನೂನು ಸೇವಾ ಘಟಕದ …

Read More »

ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ವರ್ಷದಲ್ಲಿ ಐವರಿಗೆ ‘ಭಾರತ ರತ್ನ’ ಪ್ರಶಸ್ತಿ

ನವದೆಹಲಿ : ಮಾಜಿ ಪ್ರಧಾನಿಗಳಾದ ಚೌಧರಿ ಚರಣ್ ಸಿಂಗ್, ಪಿ.ವಿ.ನರಸಿಂಹ ರಾವ್ ಮತ್ತು ಖ್ಯಾತ ವಿಜ್ಞಾನಿ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಮರಣೋತ್ತರವಾಗಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಘೋಷಿಸಿದ್ದಾರೆ. ಕೆಲವು ದಿನಗಳ ಹಿಂದೆ ಮೋದಿ ಸರ್ಕಾರ ಎಲ್.ಕೆ ಅಡ್ವಾಣಿ ಮತ್ತು ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡುವುದಾಗಿ ಘೋಷಿಸಿತ್ತು. ಭಾರತ ರತ್ನ ಪ್ರಶಸ್ತಿ ಪಡೆಯುವ ಆ ವಿಶೇಷ ಸಾಧಕರು …

Read More »

ನಾನು ಸುಳ್ಳು ಹೇಳಿದ್ದರೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ: ಸಿಎಂ

ಬೆಂಗಳೂರು: ನಾನು ಸುಳ್ಳು ಹೇಳುತ್ತಿದ್ದೇನೆ ಎಂದಾದರೇ ನಾನು ರಾಜಕೀಯದಿಂದ ನಿವೃತ್ತಿಯಾಗುತ್ತೇನೆ. ಕರ್ನಾಟಕ ತೆರಿಗೆ ಕಟ್ಟುವುದರಲ್ಲಿ 2ನೇ ಸ್ಥಾನದಲ್ಲಿದೆ. ನಮಗೆ ಸರಿಯಾಗಿ ಅನುದಾನ ಹಂಚಿಕೆಯಾಗಿಲ್ಲ. ಈ ವಿಷಯವನ್ನು ನಾವು ಕೇಳದೇ ಸುಮ್ಮನಿರಬೇಕಾ? ಎಂದು ತೆರಿಗೆ ವಿಷಯದಲ್ಲಿ ಅನ್ಯಾಯದ ಬಗ್ಗೆ ಸಿಎಂ ಸಿದ್ದರಾಮಯ್ಯ(CM Siddaramaiah) ಕಿಡಿ ಕಾರಿದರು.   ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರದ ಪ್ರತಿಭಟನೆ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿಂದು ಟೀಕೆ ವ್ಯಕ್ತಪಡಿಸಿದ್ದರು. ಈ ಬಗ್ಗೆ …

Read More »

ಕುಮಾರಸ್ವಾಮಿ ಲೋಕಸಭೆಗೆ ಸ್ಪರ್ಧಿಸುವ ಸುಳಿವು ನೀಡಿದ ದೇವೇಗೌಡ,

ಹುಬ್ಬಳ್ಳಿ, (ಫೆಬ್ರವರಿ 09): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Loksabha Elections 2024) ರಾಜಕೀಯ ಗರಿಗೆದರಿದ್ದು, ಈ ಬಾರಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ (BJP And JDS Alliance) ಮಾಡಿಕೊಂಡು ರಾಜ್ಯದಲ್ಲಿ ಕಾಂಗ್ರೆಸ್​ ಪಕ್ಷವನ್ನು ಮಕಾಡೆ ಮಲಗಿಸುವ ತಂತ್ರರೂಪಿಸುತ್ತಿವೆ. ಆದ್ರೆ, ಜೆಡಿಎಸ್​ಗೆ ಯಾವೆಲ್ಲಾ ಕ್ಷೇತ್ರ ಎನ್ನುವ ಬಗ್ಗೆ ಇನ್ನೂ ಅಂತಿಮವಾಗಿಲ್ಲ. ಇದರ ಮಧ್ಯೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ(HD Kumaraswamy) ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಜಿಟಿ ದೇವೇಗೌಡ(GT Devegowda) ಸುಳಿವು …

Read More »

ರಾಮನಿಗಿಂತ ಮುಂಚೆ ವಾಲ್ಮೀಕಿ ಮಂದಿರ ನಿರ್ಮಿಸಬೇಕಿತ್ತು: ಕೆ ಎನ್ ರಾಜಣ್ಣ

ದಾವಣಗೆರೆ: ‘ಶ್ರೀರಾಮನಿಗೆ ಜಗತ್ತಿನ ಬಗ್ಗೆ ತಿಳಿಸಿದ್ದೇ ವಾಲ್ಮೀಕಿ. ರಾಮಮಂದಿರಕ್ಕೂ ಮೊದಲು ವಾಲ್ಮೀಕಿ ಮಂದಿರ ಕಟ್ಟಬೇಕಿತ್ತು’ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ(K. N. Rajanna) ಹೇಳಿದ್ದಾರೆ. ಈ ಬಗ್ಗೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 100 ದೇವಸ್ಥಾನಗಳ ಜೀರ್ಣೋದ್ಧಾರ ಮಾಡಲಾಗುತ್ತಿದೆ. ಅಲ್ಲದೇ ಮೂವರು ವಾಲ್ಮೀಕಿ ಸಮುದಾಯದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ರಾಜಣ್ಣ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಗೃಹ ಇಲಾಖೆ …

Read More »

ಜೈನ ನಿಗಮ ಸ್ಥಾಪನೆಗೆ ಸಲ್ಲೇಖನ ವ್ರತಕ್ಕೂ ಸಿದ್ಧ’

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರಾಜ್ಯದ ಜೈನ ಸಮುದಾಯದ ಏಳ್ಗೆಗಾಗಿ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಇದಕ್ಕಾಗಿ ನಾನು ಸಲ್ಲೇಖನ ವೃತ ಕೈಗೊಂಡು ಪ್ರಾಣತ್ಯಾಗಕ್ಕೂ ಸಿದ್ಧ’ ಎಂದು ಆಚಾರ್ಯ ಗುಣಧರನಂದಿ ಮಹಾರಾಜ ಹೇಳಿದರು. ತಾಲ್ಲೂಕಿನ ಶಮನೇವಾಡಿಯಲ್ಲಿ ತಮ್ಮ 33ನೇ ದೀಕ್ಷಾ ಜಯಂತಿ ಪ್ರಯುಕ್ತ ಗುರುವಾರ ನಡೆದ ಜೈನ ಸಮ್ಮೇಳನದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ‘ಜೈನರ ಸಮಸ್ಯೆಗಳ ನಿವಾರಣೆಗೆ ಮುಂದಾಗುವ ನಾಯಕರಿಗೆ ನಿಮ್ಮ ಮತ ನೀಡಿ. ಇನ್ನುಳಿದ ಧರ್ಮಗಳ ಮೇಲೆ ಗೌರವ ಇರಲಿ. …

Read More »

ಕೃಷಿಯಲ್ಲಿ ಬದುಕು ಕಟ್ಟಿಕೊಂಡ ಪದವೀಧರ

ರಾಯಬಾಗ: ಬೆಂಗಳೂರಿನ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿ ಶಾಖಾಧಿಕಾರಿಯಾಗಿ ಮಾಡುತ್ತಿದ್ದ ಕೆಲಸ ತೊರೆದ ಇಲ್ಲಿನ ಎಂಬಿಎ ಪದವೀಧರ ಆಶೀಷ್‌ ದೇಶಪಾಂಡೆ, ಈಗ ಕೃಷಿಯಲ್ಲಿ ನೆಮ್ಮದಿ ಕಂಡುಕೊಂಡಿದ್ದಾರೆ. ತಂದೆ ಕಲ್ಯಾಣರಾವ್‌ ಹಾಗೂ ಸಹೋದರ ಅನ್ಶುಮನ್‌ ಸಹಕಾರದಿಂದ ಒಕ್ಕಲುತನ ಮಾಡುತ್ತ ಉತ್ತಮ ಆದಾಯ ಗಳಿಸುತ್ತಿದ್ದಾರೆ.   ‘ಕೃಷಿಯಲ್ಲಿ ಭವಿಷ್ಯವಿಲ್ಲ’ ಎಂದು ಇಂದು ಅನೇಕ ಯುವಕರು ಕೊರಗುತ್ತಿದ್ದಾರೆ. ಆದರೆ, ನಾಲ್ಕು ವರ್ಷಗಳ ಹಿಂದೆ ಆಶೀಷ್‌ ಬ್ಯಾಂಕಿನ ಕೆಲಸಕ್ಕೆ ವಿದಾಯ ಹೇಳಿ ಕೃಷಿ ರಂಗದಲ್ಲೇ ಯಶಸ್ಸು ಕಾಣುತ್ತಿದ್ದಾರೆ. ಸಾವಯವ ಕೃಷಿ: …

Read More »

ಬೆಳಗಾವಿ | ಗುಜರಿ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಅಪಾರ ಹಾನಿ

ಬೆಳಗಾವಿ: ಇಲ್ಲಿನ ವಡಗಾವಿಯ ಡೋಹರ ಗಲ್ಲಿಯಲ್ಲಿ‌ ಶುಕ್ರವಾರ ನಸುಕಿನಲ್ಲಿ ಕಿಡಿಗೇಡಿಗಳು ಗುಜರಿ ಅಂಗಡಿಗೆ ಬೆಂಕಿ‌ ಹಚ್ಚಿದ್ದಾರೆ. ಬೆಂಕಿ ನಾಲ್ಕು ಅಂಗಡಿಗಳಿಗೆ ಹತ್ತಿಕೊಂಡಿದ್ದರಿಂದ ಅಪಾರ ಪ್ರಮಾಣದ ಗುಜರಿ ವಸ್ತುಗಳು‌ ಸುಟ್ಟಿವೆ. ಹಳೆ ತಗಡಿನ ವಸ್ತುಗಳು, ಪ್ಲಾಸ್ಟಿಕ್ ಸಾಮಗ್ರಿ, ಗೋಣಿ ಚೀಲ, ವಾಹನಗಳ ಟೈರ್, ಡ್ಯೂಬ್, ರದ್ದಿಪೇಪರ್ ಮುಂತಾದ ವಸ್ತುಗಳು ಅಂಗಡಿಗಳಲ್ಲಿ ಇದ್ದವು. ಇದರಿಂದ ಬೆಂಕಿ‌ ಕೆನ್ನಾಲಿಗೆ ಬೇಗ ಹೊತ್ತಿಕೊಂಡಿತು. ಹೊತ್ತಿ ಉರಿಯುತ್ತಿರುವ ಗುಜರಿ ಅಂಗಡಿ ಎಚ್ಚರಗೊಂಡ‌ ಗುಜರಿ ವ್ಯಾಪಾರಿಗಳು ಬೆಂಕಿ‌ ನಂದಿಸಲು‌ ಯತ್ನಿಸಿದರೂ …

Read More »

ಸಿ.ಎಂ ಜನಸ್ಪಂದನ: ಆಮ್ಲಜನಕ ದುರಂತ ಸಂತ್ರಸ್ತರು ಭಾಗಿ

ಚಾಮರಾಜನಗರ: ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಸಂಭವಿಸಿದ ಆಮ್ಲಜನಕ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ಭಾಗಿಯಾಗಿ ಸಿ.ಎಂಗೆ ಮನವಿ ಸಲ್ಲಿಸಿದರು.   ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್‌ ಎಂ ನೇತೃತ್ವದಲ್ಲಿ ಜನಸ್ಪಂದನದಲ್ಲಿ ಭಾಗಿಯಾದ ಸಂತ್ರಸ್ತರು, ‘ಕಾಯಂ ಸರ್ಕಾರಿ ನೌಕರಿಯನ್ನು ನೀಡಬೇಕು’ ಎಂದು ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು. ‘ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರಿ ಉದ್ಯೋಗ …

Read More »

ರಾಜ್ಯಾದ್ಯಂತ ಇ-ಚಲನ್ ದಂಡ ವ್ಯವಸ್ಥೆ ಜಾರಿ, ಏನಿದು?

ರಾಜ್ಯಾದ್ಯಂತ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗ್ತಲೇ ಇದ್ದು, ಇದೀಗ ಪೆನ್ನು ಪೇಪರ್ ಹಿಡಿದು ಪೊಲೀಸರು ದಂಡ ವಿಧಿಸೋದಿಲ್ಲ. ಹೈಟೆಕ್ ದಂಡ ಪಾವತಿ ಬಗ್ಗೆ ಕರ್ನಾಟಕ ಟ್ರಾಫಿಕ್ ಪೊಲೀಸ್ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲೆಡೆ ಇನ್ಮುಂದೆ ಇ-ಚಲನ್ ಮೂಲಕ ದಂಡ ವ್ಯವಸ್ಥೆಗೆ ಚಾಲನೆ ಸಿಕ್ಕಿದೆ.   ಏನಿದು ಇ-ಚಲನ್? ರಾಜ್ಯದಲ್ಲಿ ಶೇ.100 ರಷ್ಟು ಪೇಪರ್‌ಲೆಸ್ ದಂಡ ಪಾವತಿ ವ್ಯವಸ್ಥೆ ಜಾರಿಯಾಗಿದೆ. ದೇಶದಲ್ಲಿ ಇದೇ ಮೊದಲ ರಾಜ್ಯವಾಗಿದ್ದು, ಸಂಚಾರ …

Read More »