ಬೆಳಗಾವಿ, ಮಾ.16: ಧಾರವಾಡ ಮತ್ತು ಹಾವೇರಿ ಲೋಕಸಭಾ ಕ್ಷೇತ್ರಗಳ ಬಿಜೆಪಿ ಟಿಕೆಟ್ ಕೈತಪ್ಪಿದ್ದಿಂದ ಗೊಂದಲಕ್ಕೀಡಾಗಿದ್ದಜಗದೀಶ್ ಶೆಟ್ಟರ್ (Jagadish Shettar)ಅವರಿಗೆ ಬೆಳಗಾವಿ (Belagavi) ಕ್ಷೇತ್ರದ ಟಿಕೆಟ್ ಫೈನಲ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕ್ಷೇತ್ರದ ಹಾಲಿ ಸಂಸದೆ ಮಂಗಳಾ ಅಂಗಡಿ ಕೂಡ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಜಿಲ್ಲೆಯ ಬಿಜೆಪಿಯಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಹೈಕಮಾಂಡ್ ಘೋಷಣೆಗಾಗಿ ಸ್ಥಳೀಯ ನಾಯಕರು ಕಾಯುತ್ತಿದ್ದಾರೆ. ಯಾರು ಏನು ಹೇಳಿದ್ದಾರೋ ಗೊತ್ತಿಲ್ಲ, ನಾನು ಟಿವಿ ನೋಡಿಲ್ಲ ಎಂದು ಹೇಳಿದ ಬಿಜೆಪಿ ಶಾಸಕ …
Read More »Daily Archives: ಮಾರ್ಚ್ 19, 2024
ಬೆಳಗಾವಿಯಲ್ಲಿ ಆಸ್ತಿ ವಿವಾದ: ಅಳಿಯನ ಮೇಲೆಯೇ ಮಾವನಿಂದ ಫೈರಿಂಗ್
ಬೆಳಗಾವಿ, ಮಾರ್ಚ್ 18: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಅಳಿಯನ ಮೇಲೆ ಮಾವನಿಂದ ಫೈರಿಂಗ್(firing)ಮಾಡಿರುವಂತಹ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮೊರಬ ಗ್ರಾಮದ ಬಳಿ ಕೃತ್ಯ ನಡೆದಿದೆ. 30 ಗುಂಟೆ ಜಮೀನಿಗಾಗಿ ಶಾಂತಿನಾಥ ಆಲಗೂರು (32) ಮೇಲೆ ಮಾವ ಧನಪಾಲ್ ಆಸಂಗಿ (54) ಫೈರಿಂಗ್ ಮಾಡಿದ್ದಾರೆ. ಆತ್ಮರಕ್ಷಣೆಗಾಗಿ ಪಡೆದಿದ್ದ ರಿವಾಲ್ವರ್ದಿಂದಲೇ ಒಂದು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ ಧನಪಾಲ್. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಆರೋಪಿ ಧನಪಾಲ್ ಬಂಧಿಸಿ ವಿಚಾರಣೆ …
Read More »ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವೆ: ಶ್ಯಾಮ್ಸುಂದರ್ ಗಾಯಕವಾಡ್
ಬೆಂಗಳೂರು: ‘ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ’ ಎಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಶಾಮಸುಂದರ್ ಗಾಯಕವಾಡ್ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ 50 ಲಕ್ಷ ಜನಸಂಖ್ಯೆಯಿರುವ ಮರಾಠ ಸಮುದಾಯಕ್ಕೆ ಬಿಜೆಪಿ ಸರಿಯಾದ ಪ್ರಾತಿನಿಧ್ಯ ನೀಡುತ್ತಿಲ್ಲ. ರಾಜ್ಯದಲ್ಲಿ ಶೇ 52ರಷ್ಟು ಜನಸಂಖ್ಯೆ ಹೊಂದಿರುವ ಹಿಂದುಳಿದ ವರ್ಗದ ಕುರುಬರು, ನೇಕಾರರು, ಗೊಲ್ಲರು, ಮೀನುಗಾರರು, ತಿಗಳರು, ಗಾಣಿಗರು, ಕುಂಬಾರರು, ಮಡಿವಾಳ, ದೇವಾಡಿಗ ಸಮುದಾಯದವರಿಗೆ ಟಿಕೆಟ್ …
Read More »ರಾಜ್ಯದಲ್ಲಿ ಇನ್ಮೇಲೆ ಕೆಎಂಎಫ್ ಎಮ್ಮೆ ಹಾಲು ಸಿಗಲ್ಲ! ಮೂರೇ ತಿಂಗಳಿಗೆ ಮಾರಾಟಕ್ಕೆ ಬ್ರೇಕ್ ಹಾಕಲು ಚಿಂತನೆ
ಬೆಂಗಳೂರು: ಕಳೆದ ಮೂರು ತಿಂಗಳ ಹಿಂದಷ್ಟೇ ಕರ್ನಾಟಕ ಹಾಲು ಒಕ್ಕೂಟ (Karnataka Milk Federation) ರಾಜ್ಯಾಧ್ಯಂತ ಎಮ್ಮೆ ಹಾಲು ಮಾರಾಟಕ್ಕೆ (Selling buffalo milk) ಚಾಲನೆ ನೀಡಿತ್ತು. ಆದರೆ ಇದಾದ ಮೂರೇ ತಿಂಗಳಿಗೆ ಎಮ್ಮೆ ಹಾಲು ಮಾರಾಟಕ್ಕೆ ಬ್ರೇಕ್ ಹಾಕಲು ಕೆಎಂಎಫ್ (KMF) ಚಿಂತನೆ ನಡೆಸಿದೆಯಂತೆ. ಹೌದು, ಕಳೆದ ವರ್ಷ ಡಿಸೆಂಬರ್ ತಿಂಗಳಿಂದ ಎಮ್ಮೆ ಹಾಲು ಮಾರುಕಟ್ಟೆಗೆ (Market) ಕೆಎಂಎಫ್ ಬಿಡುಗಡೆ ಮಾಡಿತ್ತು, ಆದರೆ ಸದ್ಯ ಎಮ್ಮೆ ಹಾಲು ಮಾರಾಟ …
Read More »ಗೃಹಜ್ಯೋತಿ’ ಫಲಾನುಭವಿಗಳಿಗೆ ಬಿಗ್ ಶಾಕ್ : 200 ಯೂನಿಟ್ ಗಿಂತ ಜಾಸ್ತಿ ವಿದ್ಯುತ್ ಬಳಸಿದ್ರೆ ಕಟ್ಟಬೇಕು ದುಬಾರಿ ಶುಲ್ಕ!
ಬೆಂಗಳೂರು : ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್ ಎದುರಾಗಿದೆ. 200 ಯೂನಿಟ್ಗಿಂತ ಜಾಸ್ತಿ ವಿದ್ಯುತ್ ಬಳಸಿದರೆ, ಬಳಸಿದ ಅಷ್ಟು ಯೂನಿಟ್ಗಳಿಗೆ ದುಬಾರಿ ಶುಲ್ಕವನ್ನು ಭರಿಸಬೇಕಾಗಿದೆ. ಹೌದು, ಬರದ ಬೇಗೆಯಲ್ಲಿ ಬಸವಳಿದಿರುವ, ಬೇಸಿಗೆಯ ಝಳದಲ್ಲಿ ಮರುಗುತ್ತಿರುವ ಕರ್ನಾಟಕದ ಜನತೆಗೆ ಕಾಂಗ್ರೆಸ್ ಸರ್ಕಾರ ಶಾಕ್ ಮೇಲೆ ಶಾಕ್ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್ ಮಾಡಿದೆ. ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್ ಕರೆಂಟ್ ಫ್ರೀ ಎಂದು ಹೇಳಿದ್ದ …
Read More »