ಹಾವೇರಿ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ಬದಲಾವಣೆ ಆಗಲಿದೆ ಎಂಬ ಚರ್ಚೆ ಮಂಗಳವಾರದಿಂದ ಕ್ಷೇತ್ರದ ವ್ಯಾಪ್ತಿಯಲ್ಲಿ ಹರಿದಾಡ ತೊಡಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗದ ಸಭೆಗೆ ಕೆ ಎಸ್ ಈಶ್ವರಪ್ಪನವರು ಚಕ್ಕರ ಹೊಡೆದ ನಂತರದಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯ ಚರ್ಚೆ ಮುನ್ನಲೆಗೆ ಬಂದಿದೆ.
Read More »Daily Archives: ಮಾರ್ಚ್ 20, 2024
ಪಕ್ಷದಿಂದ ಟಿಕೆಟ್ ಘೋಷಣೆಯ ಮರುದಿನವೇ ಪ್ರಚಾರ’- ಶೆಟ್ಟರ್
ಹುಬ್ಬಳ್ಳಿ:ಪಕ್ಷದಿಂದ ಟಿಕೆಟ್ ಅಧಿಕೃತವಾಗಿ ಘೋಷಣೆಯಾದ ಮರು ದಿನದಿಂದಲೇ ಬೆಳಗಾವಿಯಲ್ಲಿ ಪ್ರಚಾರ ಮಾಡಲಾಗುವುದು. ಒಂದೆರಡು ದಿನಗಳಲ್ಲಿಯೇ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಟಿಕೆಟ್ ತಪ್ಪಿಸುವ ಷಡ್ಯಂತ್ರ ನಡೆದಿತ್ತುಎಂದು ನನಗೆ ಅನಿಸಿಲ್ಲ. ಬೆಳಗಾವಿಯ ಮುಖಂಡರಾದ ಅಭಯ ಪಾಟೀಲ, ಪ್ರಭಾಕರ ಕೋರೆ, ಅನಿಲ ಬೆನಕೆ, ಈರಣ್ಣ ಕಡಾಡಿ ಇನ್ನಿತರ ಪ್ರಮುಖರ ಜತೆ ಮಾತುಕತೆ ನಡೆಸಿದ್ದು, ಎಲ್ಲರು ಸೇರಿ ಚುನಾವಣೆ ನಡೆಸೋಣ …
Read More »ಲೋಕಸಭಾ ಚುನಾವಣೆ-2024: ಇದೇ ಮೊದಲ ಬಾರಿಗೆ ಪತ್ರಕರ್ತರು ಸೇರಿದಂತೆ 11 ಇಲಾಖೆಗಳ ನೌಕರರಿಗೆ ಅಂಚೆ ಮತಪತ್ರ ಸೌಲಭ್ಯ
ನವದೆಹಲಿ : ಲೋಕಸಭಾ ಸಾರ್ವತ್ರಿಕ ಚುನಾವಣೆ -2024 ರಲ್ಲಿ ಸೇವಾ ಮತದಾರರ ಜೊತೆಗೆ, ಭಾರತದ ಚುನಾವಣಾ ಆಯೋಗವು 11 ಇಲಾಖೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ಮಾಡುವ ಸೌಲಭ್ಯವನ್ನು ಸಹ ನೀಡಿದೆ. ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಈ ವರ್ಗಕ್ಕೆ ಸೇರಿಸಲಾಗಿದೆ. ಈ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ವಿದ್ಯುತ್-ನೀರು, ರಸ್ತೆ-ಮೆಟ್ರೋ, ಡೈರಿ, ಅಗ್ನಿಶಾಮಕ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು …
Read More »ಮಾರ್ಚ್ 22ಕ್ಕೆ ಉಳಿದ 5 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ: B.S.Y.
ಬೆಂಗಳೂರು, ಮಾರ್ಚ್ 20: ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಇಪ್ಪತ್ತು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಉಳಿದ 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಅಭ್ಯರ್ಥಿ ಆಯ್ಕೆ ನಡೆಯುತ್ತಿದೆ. ಹೀಗಾಗಿಯೇ ಐದು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಕಾತುರ ಹೆಚ್ಚಾಗಿಯೇ ಇದೆ.ಅಭ್ಯರ್ಥಿ ಘೋಷಣೆ ಬಳಿಕ ರಾಜ್ಯದಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಪ್ರಯತ್ನ ತುಸು ಹೆಚ್ಚಾಗಿಯೇ ಇದೆ. ಕುತೂಹಲಗಳ ಬೆನ್ನಲ್ಲೇ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ …
Read More »ಇನ್ಮುಂದೆ ಪೊಲೀಸರಿಗೆ ಹೆಲ್ಮೆಟ್ ಕಡ್ಡಾಯ: ಆದೇಶ ಹೊರಡಿಸಿದ ADGP ಅಲೋಕ್ ಕುಮಾರ್!
ಬೆಂಗಳೂರು: ರಾಜ್ಯಾದ್ಯಂತ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ ಮಾಡಿ ADGP ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರವಾಹನ ಸಂಚಾರದ ವೇಳೆ ಹೆಲ್ಮೆಟ್ ನಿರ್ದಿಷ್ಟತೆಯ ಪಾಲನೆ ಮಾಡುವಂತೆ ಅಲೋಕ್ ಕುಮಾರ್ ಸೂಚನೆ ನೀಡಿದ್ದಾರೆ.
Read More »ಲೋಕಸಭೆ ಚುನಾವಣೆ: ಕಂಡ ಕಂಡಲ್ಲಿ ಪೋಸ್ಟರ್ ಅಂಟಿಸಿದರೆ ಜೈಲು!
ಬೆಂಗಳೂರು, ಮಾರ್ಚ್ 20: ಲೋಕಸಭೆ ಚುನಾವಣೆ 2024ರ ವೇಳಾಪಟ್ಟಿ ಘೋಷಣೆಯಾಗಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ಪ್ರಚಾರ ಆರಂಭವಾಗಿದೆ.ಲೋಕಸಭೆ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವುಗಳನ್ನು ಪಾಲನೆ ಮಾಡಬೇಕಿದೆ. ಅದರಲ್ಲೂ ಗೋಡೆ ಮೇಲೆ ಕಂಡ ಕಂಡಲ್ಲಿ ಪೋಸ್ಟರ್ಗಳನ್ನು ಅಂಟಿಸುವಂತಿಲ್ಲ. ಸಾರ್ವಜನಿಕ ಆಸ್ತಿಯನ್ನಾಗಲೀ ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಸಾರ್ವಜನಿಕವಾಗಿ ಕಾಣುವಂತೆ ಗೋಡೆ ಬರಹ, …
Read More »ಸ್ಥಗಿತಗೊಂಡಿದ್ದ ಮಹಿಷವಾಡಗಿ ಸೇತುವೆ ಕಾಮಗಾರಿ ಪುನರಾರಂಭ: ಜನರಲ್ಲಿ ಮಂದಹಾಸ
ರಬಕವಿ-ಬನಹಟ್ಟಿ: ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ರಬಕವಿ-ಬನಹಟ್ಟಿ ಜಾಕವೆಲ್ನ ಸಮೀಪ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಮಹಿಷವಾಡಗಿ ಸೇತುವೆ ಕಾಮಗಾರಿ ನೀರಿನಿಂದಾಗಿ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಸದ್ಯ ನೀರು ಇಳಿಮುಖವಾದ ಹಿನ್ನಲೆಯಲ್ಲಿ ಅದು ಪುನರ್ ಪ್ರಾರಂಭವಾಗಿದ್ದು, ರಬಕವಿ-ಬನಹಟ್ಟಿ ಜನತೆಯಲ್ಲಿ ಮಂದಹಾಸ ಮೂಡುವಂತಾಗಿದೆ. 2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಟ್ರಕ್ಷನ್ಸ್ ಕಂಪನಿಗೆ ನೀಡಿತ್ತು. ಕಳೆದ ಐದು ವರ್ಷಗಳಲ್ಲಿ ಕೇವಲ …
Read More »ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್. ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
ಬೆಳಗಾವಿ: ನಗರದ ಹಿಂಡಾಲ್ಕೋ ಫ್ಯಾಕ್ಟರಿಯ ಕಂಪೌಂಡ್ ಬಳಿ ಹುಲಿಯೊಂದು ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಹುಲಿ ಓಡಾಟದ ದೃಶ ಅಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಕೆ. ಕಲ್ಲೋಳಿಕರ, ಹುಲಿ ಪ್ರತ್ಯಕ್ಷ ಆಗಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ. ಸುದ್ದಿಗೆ ಸ್ಪಂದಿಸಿದ ನಮ್ಮ ಸಿಬ್ಬಂದಿಗಳು ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ ಆದರೆ …
Read More »ಅಪರಿಚಿತ ಯುವಕನ ಶವ ಪತ್ತೆ: ಕೊಲೆ ಶಂಕೆ
ಸಂಕೇಶ್ವರ: ಪಟ್ಟಣದ ಹೊರ ವಲಯದ ಬೈಪಾಸ್ ರಸ್ತೆ ಬಳಿ ಯುವಕನ ಶವವೊಂದು ಪತ್ತೆಯಾಗಿದ್ದು, ಯುವಕನ ಮುಖದ ತುಂಬೆಲ್ಲಾ ಗಾಯಗಳಾಗಿರುವ ಹಿನ್ನೆಲೆ ಕೊಲೆ ಮಾಡಿ ಬಿಸಾಕಿರುವ ಸಂಶಯ ವ್ಯಕ್ತವಾಗಿದೆ. ಸಂಕೇಶ್ವರ ಪಟ್ಟಣದ ಬೈಪಾಸ್ ರಸ್ತೆಯ ಗಡಹಿಂಗ್ಲಜ್ ರಸ್ತೆಯ ಬಳಿ ಸುಮಾರು 25-30 ವರ್ಷ ವಯಸ್ಸಿನ ಯುವಕನ ಶವ ಬುಧವಾರ ಬೆಳಿಗ್ಗೆ ಕಂಡು ಬಂದಿದೆ. ಯುವಕನ ಟಿ ಶರ್ಟ್ ಮೇಲೆ ಶಿವರಾಜ್ ಕಾಲೇಜ್ ಎಂದು ಬರೆಯಲಾಗಿದ್ದು, ಈತ ಮಹಾರಾಷ್ಟ್ರ ಮೂಲದವನಾಗಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. …
Read More »ಮಹದಾಯಿ ಉಳಿಸುವಲ್ಲಿ ಬಿಜೆಪಿ ಸಂಪೂರ್ಣ ವಿಫಲ: ಕಾಂಗ್ರೆಸ್ ಆರೋಪ
ಪಣಜಿ: ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ತಮ್ಮ ತಾಯಿ ಎಂದೇ ಕರೆಯುವ ಮಹದಾಯಿಗೆ ಐದು ವರ್ಷಗಳಲ್ಲಿ ನ್ಯಾಯ ನೀಡುವಲ್ಲಿ ವಿಫಲರಾಗಿದ್ದಾರೆ. ಮಹದಾಯಿ ಉಳಿಸಲು ಸರ್ಕಾರ ಏನು ಮಾಡಿದೆ ಎಂದು ಅವರು ಜನರಿಗೆ ಸ್ಪಷ್ಟವಾಗಿ ಹೇಳಿದ್ದಾರೆಯೇ? ಎಂದು ಗೋವಾ ಕಾಂಗ್ರೆಸ್ ಪ್ರಶ್ನೆ ಎತ್ತಿದೆ. ಕಾಂಗ್ರೆಸ್ ಭವನದಲ್ಲಿ ಕಾಂಗ್ರೇಸ್ ನಾಯಕ ತುಲಿಯೋ ಡಿಸೋಜಾ ಮತ್ತು ಸುನೀಲ್ ಕವಠಣಕರ್ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ಮಾಡಿದರು. ಮಹದಾಯಿ ಪ್ರಮುಖ ಸಮಸ್ಯೆ ಇತ್ಯರ್ಥವಾಗಬೇಕು, ಆದರೆ …
Read More »