Breaking News

Daily Archives: ಮಾರ್ಚ್ 22, 2024

ಬೆಳಗಾವಿ | ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಲೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ‘ನಾವು ನಡೆಸಿರುವ ಎಲ್ಲ ಸಮೀಕ್ಷೆಗಳಲ್ಲೂ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಕುರಿತು ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿ. ಉತ್ತರಕನ್ನಡ ಜಿಲ್ಲೆ ಸೇರಿ ಬೆಳಗಾವಿಯ ಜಿಲ್ಲೆಗಳಿಗೆ ಒಳಪಡುವ ಮೂರೂ ಲೋಕಸಭಾ ಕ್ಷೇತ್ರಗಳಲ್ಲೂ ಖಚಿತವಾಗಿ ಗೆಲುವು ಸಾಧಿಸಬಹುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಬೆಂಗಳೂರಿನ ಕಾವೇರಿಯಲ್ಲಿ ಶುಕ್ರವಾರ ನಡೆದ ಬೆಳಗಾವಿ ಜಿಲ್ಲೆಯ ಸಚಿವರು, ಶಾಸಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, …

Read More »

ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇರರಾಗಿ ಸ್ಪರ್ಧಿಸಿ: ಅಭಿಮಾನಿಗಳ ಆಕ್ರೋಶ

ಬಾಗಲಕೋಟೆ: ಕಾಂಗ್ರೆಸ್‌ ಹೈಕಮಾಂಡ್‌, ರಾಜ್ಯ ನಾಯಕರು ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ನೀಡಿದರೆ ಸರಿ, ಇಲ್ಲದಿದ್ದರೆ ಪಕ್ಷೇತರಾಗಿ ಸ್ಪರ್ಧಿಸಿರಿ. ನಿಮ್ಮೊಂದಿಗೆ ನಾವಿದ್ದೇವೆ ಎಂದು ಮುಖಂಡರು, ಕಾರ್ಯಕರ್ತರು ಶುಕ್ರವಾರ ಚರಂತಿಮಠದಲ್ಲಿ ನಡೆದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅಭಿಮಾನಿಗಳ ಬಳಗದಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಆಗ್ರಹಿಸಿದರು. ‘ಬೇಕೇ, ಬೇಕೇ ಬೇಕು, ನ್ಯಾಯ ಬೇಕು’ ಎಂದು ಘೋಷಣೆ ಕೂಗಿದ ಬೆಂಬಲಿಗರು, ಐದು ವರ್ಷಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಿ ಸಂಘಟನೆ …

Read More »

ತೇಗೂರು ಚೆಕ್‌ಪೋಸ್ಟ್‌: 776 ಗ್ರಾಂ ಚಿನ್ನಾಭರಣ ವಶ

ಧಾರವಾಡ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (ನಿಪ್ಪಾಣಿ-ಗಂಗಾವತಿ) ಒಯ್ಯುತ್ತಿದ್ದ 776 ಗ್ರಾಂ ( ₹ 38.5 ಲಕ್ಷ) ಚಿನ್ನಾಭರಣಗಳನ್ನು ತೇಗೂರು ಚೆಕ್ ಪೋಸ್ಟ್‌ ಸಿಬ್ಬಂದಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಗುರುವಾರ ರಾತ್ರಿ 11.30 ವೇಳೆಯಲ್ಲಿ ಸಿಬ್ಬಂದಿ ಬಸ್‌ ತಪಾಸಣೆ ಮಾಡಿದಾಗ ಚಿನ್ನಾಭರಣ ಸಿಕ್ಕಿವೆ. ಮಹಾರಾಷ್ಟ್ರ ಕೊಲ್ಲಾಪುರದ ಪ್ರಕಾಶಕುಮಾರ ಹುಕುಮಜಿ ಮಾಲಿ ಅವರು ಚಿನ್ನದ ಸರ, ಗುಂಡು, ಲಾಕೆಟ್‌ಗಳನ್ನು ಬಸ್‌ನಲ್ಲಿ ಸಿಂಧನೂರಿಗೆ ಒಯ್ಯುತ್ತಿದ್ದರು. ಅವರು ತೋರಿಸಿದ ಆಭರಣ ಖರೀದಿ ಬಿಲ್‍ಗಳಲ್ಲಿ ನಮೂದಾಗಿರುವ ತೂಕ …

Read More »

ಬಾಯಿ ಆರೋಗ್ಯ ವಿವಿಧೆಡೆ ಜಾಗೃತಿ ಶಿಬಿರ

ಬೆಳಗಾವಿ: ಭಾರತೀಯ ದಂತ ವೈದ್ಯರ ಸಂಘದ ಬೆಳಗಾವಿ ಘಟಕ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಜಿಲ್ಲೆಯ ಐದು ಶಾಲೆಗಳಲ್ಲಿ ‘ವಿಶ್ವ ಬಾಯಿ ಆರೋಗ್ಯ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಬೆಳಗಾವಿ ತಾಲ್ಲೂಕು ವಂಟಮೂರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದ ಶಿಬಿರದಲ್ಲಿ ಸಂಘದ ಡಾ.ಅಶ್ವಿನಿ ಅಂಗಡಿ, ಸದಸ್ಯರಾದ ಡಾ.ಸುಧಾ ಕುಂಬಾರ, ಡಾ.ಅನುರಾಧ ಮತ್ತು ಡಾ.ಸುಶೀಲ್ ನಂದಗಾವಿ ಅವರು ಭಾಗವಹಿಸಿ, ಗರ್ಭಿಣಿಯರು ಮತ್ತು ಹದಿಹರೆಯದ ಬಾಲಕಿಯರಲ್ಲಿ ‘ಪೆರಿಯೊಡಾಂಟಲ್ ಕಾಯಿಲೆಗಳ ತಡೆಗಟ್ಟುವಿಕೆ’ ಕುರಿತು ಜಾಗೃತಿ ಮೂಡಿಸಿದರು. …

Read More »

ಹಂಸಲೇಖಗೆ ‘ವಿಶ್ವ ಚೇತನ’ ಪ್ರಶಸ್ತಿ

ಚಿಕ್ಕೋಡಿ : ತಾಲ್ಲೂಕಿನ ಯಡೂರು ಗ್ರಾಮದ ಕಾಡ ಸಿದ್ಧೇಶ್ವರ ಮಠ ನೀಡುವ ವಿಶ್ವ ಚೇತನ ಪ್ರಶಸ್ತಿಗೆ ಸಂಗೀತ ನಿರ್ದೇಶಕ ಹಂಸಲೇಖ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ₹ 51 ಸಾವಿರ ನಗದು ಮತ್ತು ಸ್ಮರಣಿಕೆ ಹೊಂದಿದೆ. ಮಾರ್ಚ್ 25ರಂದು ನಡೆಯುವ ವೀರಭದ್ರದೇವ ಕಾಡಸಿದ್ದೇಶ್ವರ ಮಠ ಮತ್ತು ಭದ್ರಕಾಳಿ ವೀರಭದ್ರೇಶ್ವರ ಕಲ್ಯಾಣ ಮಹಾಮಹೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Read More »

ಕಾಂಗ್ರೆಸ್‌ನಲ್ಲಿ ಹೊಸ ನೀರಿನ ಹೊಳೆ; ಹಿರಿಯರ ಎದುರು ಹೊಸ ಚಿಗುರು

ಬೆಳಗಾವಿ: ಜಿಲ್ಲೆಯ ಕಾಂಗ್ರೆಸ್‌ ಪಾಳೆಯದಲ್ಲಿ ಕಳೆದ 15 ದಿನಗಳಿಂದ ತೀವ್ರ ಗುಮಾನಿಗೆ ಕಾರಣವಾಗಿದ್ದ ಟಿಕೆಟ್‌ ವಿಚಾರ ಈಗ ನಿರಾಳವಾಗಿದೆ. ಇಬ್ಬರೂ ಸಚಿವರ ಮಕ್ಕಳಿಗೇ ಟಿಕೆಟ್‌ ‘ಗ್ಯಾರಂಟಿ’ ಎಂದು ಕಾಂಗ್ರೆಸ್‌ ಘೋಷಿಸಿದೆ. ತಂದೆ-ತಾಯಿ ಅಧಿಕಾರದಲ್ಲಿ ಇದ್ದಾಗಲೇ ಎಳೆ ವಯಸ್ಸಿನ ರಾಜಕಾರಣಿಗಳು ಅಖಾಡಕ್ಕೆ ಧುಮುಕಿದ್ದಾರೆ. ಕಾಂಗ್ರೆಸ್‌ನಲ್ಲಿ ‘ಹೊಸ ನೀರಿನ’ ಹೊಳೆ ಹರಿಯಲಾರಂಭಿಸಿದೆ. ಎರಡೂ ಕ್ಷೇತ್ರಗಳಲ್ಲಿ ಹಿರಿಯರ ಎದುರು ಹೊಸ ಚಿಗುರು ಮೂಡಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ …

Read More »

ಮಲಪ್ರಭೆ ಮಡಿಲಲ್ಲೇ ನೀರಿನ ಬವಣೆ

ಸವದತ್ತಿ: ಇಲ್ಲಿನ ಪುರಸಭೆ ವ್ಯಾಪ್ತಿಯ ಒಟ್ಟು 27 ವಾರ್ಡ್‌ಗಳ ಪೈಕಿ ಐದು ವಾರ್ಡ್‌ಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ತಲೆದೋರಿದೆ. ವಾರಕ್ಕೊಮ್ಮೆ ನೀರು ಪೂರೈಸಲಾಗುತ್ತಿದ್ದು, ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಪಟ್ಟಣದ ಇತರ ವಾರ್ಡ್‌ಗಳಿಗೂ ಬವಣೆ ತಪ್ಪಿದ್ದಲ್ಲ ಎಂಬುದು ನಾಗರಿಕರ ಗೋಳು.   ಪಟ್ಟಣದ ಮ‌ಗ್ಗುಲಲ್ಲೇ ಮಲಪ್ರಭೆ ಹರಿಯುತ್ತಾಳೆ, ನವಿಲುತೀರ್ಥ ಜಲಾಶಯ ಇದೆ ಎಂಬ ಭರವಸೆ ಜನರಿಗೆ ಇದೆ. ಆದರೆ, ಜಲಾಶಯದಲ್ಲೂ ನೀರಿನ ಪ್ರಮಾಣ ದಿನೇದಿನೇ ಕ್ಷೀಣಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. 20 ಬಡಾವಣೆಗಳಲ್ಲಿ ಆದ್ಯತೆ …

Read More »