Breaking News

Daily Archives: ಏಪ್ರಿಲ್ 10, 2024

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೆ ರ್‍ಯಾಂಕ್‌ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಗೌರಿ ಸಂಜೀವ ಸೂರ್ಯವಂಶಿ ಅವರು 596 ಅಂಕ ಪಡೆದಿದ್ದಾರೆ. ಕನ್ನಡ, ಭೌತವಿಜ್ಞಾನ, ರಸಾಯನ ವಿಜ್ಞಾನ, ಜೀವ ವಿಜ್ಞಾನ ಹಾಗೂ ಗಣಿತ ವಿಷಯಗಳಲ್ಲಿ ನೂರಕ್ಕೆ 100, ಇಂಗ್ಲಿಷ್‌ನಲ್ಲಿ ಮಾತ್ರ 96 ಅಂಕ ಗಳಿಸಿದ್ದಾರೆ. ಇವರ ತಂದೆ ಪಿಡಿಒ, ತಾಯಿ ಶಿಕ್ಷಕಿ ಆಗಿದ್ದಾರೆ. ಇದೇ ಕಾಲೇಜಿನ ಜಿ.ಕೆ.ದಿವ್ಯಾ …

Read More »

ಬೆಳಗಾವಿಯಲ್ಲಿ ಒಟ್ಟು 10,175 ಮಕ್ಕಳು ಫೇಲ್‌!

ಬೆಳಗಾವಿ: ಅಖಂಡ ಜಿಲ್ಲೆ ಸೇರಿ ಈ ಬಾರಿ ಒಟ್ಟು 10,175 ವಿದ್ಯಾರ್ಥಿಗಳು ಫೇಲಾಗಿದ್ದಾರೆ! ಬೆಳಗಾವಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು 4,742 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಅತಿ ಹೆಚ್ಚು ಮಕ್ಕಳು ಅಂದರೆ; 2,490 ಮಕ್ಕಳು ಅನುತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಿಂದ 1,352 ಹಾಗೂ ವಿಜ್ಞಾನ ವಿಭಾಗದಲ್ಲಿ 900 ಫೇಲಾಗಿದ್ದಾರೆ. ಅದೇ ರೀತಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 5,433 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 3,606, ವಾಣಿಜ್ಯ ವಿಭಾಗದಲ್ಲಿ 927 ಹಾಗೂ ವಿಜ್ಞಾನ ವಿಭಾಗದಲ್ಲಿ …

Read More »

ಮಠಾಧೀಶರ ಆಶೀರ್ವಾದ ಪಡೆದ ನಿಂಬಾಳ್ಕರ್

ಶಿರಸಿ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರು ತಾಲ್ಲೂಕಿನ ವಿವಿಧ ಮಠಗಳಿಗೆ ತೆರಳಿ ಮಠಾಧೀಶರ ಆಶೀರ್ವಾದ ಪಡೆದರು. ಸ್ವರ್ಣವಲ್ಲಿ ಮಹಾಸಂಸ್ಥಾನಕ್ಕೆ ಭೇಟಿ ನೀಡಿ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಠದ ಅಧ್ಯಕ್ಷ ವಿ.ಎನ್.ಹೆಗಡೆ ಬೊಮ್ಮನಳ್ಳಿ, ಕೆಪಿಸಿಸಿ ವಕ್ತಾರ ದೀಪಕ್ ದೊಡ್ಡೂರು, ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ರಮೇಶ ದುಬಾಶಿ, ಶ್ರೀಪಾದ ಹೆಗಡೆ ಕಡವೆ ಹಾಗೂ ಪ್ರಮುಖರು ಇದ್ದರು. …

Read More »

ಸ್ವರ್ಣವಲ್ಲೀ ಸ್ವಾಮೀಜಿ ಆಶೀರ್ವಾದ ಪಡೆದ ಕಾಗೇರಿ

ಶಿರಸಿ : ಯುಗಾದಿಯ ಶುಭದಿನದಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವರ್ಣವಲ್ಲೀ ಮಠಕ್ಕೆ ಭೇಟಿ ನೀಡಿ, ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ದಂಪತಿ ಸಮೇತವಾಗಿ ಕಾಗೇರಿ ಅವರು ಮಠಕ್ಕೆ ಭೇಟಿ ನೀಡಿ, ಸ್ವರ್ಣವಲ್ಲೀ ಗಂಗಾಧರೇಂದ್ರ ಸ್ವಾಮಿಜಿ ಅವರಿಂದ ಮತ್ತು ಆನಂದಬೋಧೇಂದ್ರ ಸರಸ್ವತಿ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಹಾಗೂ ಆಶೀರ್ವಾದ ಪಡೆದರು.   ಈ ವೇಳೆ ಕಾಗೇರಿ ಅವರ ಪುತ್ರಿ ಶ್ರೀಲಕ್ಷ್ಮೀ ಹೆಗಡೆ, …

Read More »

ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್ ನೀಡಿದ್ದಾರೆ.

Read More »

‘ಆರೋಗ್ಯ ಚಿಂತನ ಮಾಲಿಕೆ’ 12 ಕೃತಿಗಳ ಬಿಡುಗಡೆ

ಬೆಂಗಳೂರು: ವಸಂತ ಪ್ರಕಾಶನ ವತಿಯಿಂದ ಡಾ. ವಸುಂಧರಾ ಭೂಪತಿ ಅವರ ಸಂಪಾದಕತ್ವದಲ್ಲಿ ಮೂಡಿಬಂದಿರುವ ‘ಆರೋಗ್ಯ ಚಿಂತನ ಮಾಲಿಕೆ’ ಯ 4ನೇ ಕಂತಿನ 12 ಕೃತಿಗಳ ಲೋಕಾರ್ಪಣೆ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ಸಿ.ಆರ್. ಚಂದ್ರಶೇಖರ್ ಅವರ ಅಭಿನಂದನಾ ಸಮಾರಂಭ ಏ. 13ರಂದು ಆಯೋಜಿಸಲಾಗಿದೆ.   ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಕೆ. ಮರುಳಸಿದ್ದಪ್ಪ ಕೃತಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಲೇಖಕಿಯರಾದ …

Read More »

ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕೆ ಚಾನ್ಸೇ ಇಲ್ಲ

ಹಾವೇರಿ : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಎಲ್ಲಾ ಪಕ್ಷದ ನಾಯಕರುಗಳು ಅಭ್ಯರ್ಥಿಗಳು ಪರಸ್ಪರ ಟೀಕೆ ವಾಗ್ದಾಳಿ ನಡೆಸುವುದು ಸಹಜ ಇದೀಗ ರಾಜ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ್ದು ದೇಶದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬರುವುದು ಚಾನ್ಸೇ ಇಲ್ಲ ಎಂದು ಭವಿಷ್ಯ ನಡೆದಿದ್ದಾರೆ.   ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 543 ಸ್ಥಾನಗಳ ಪೈಕಿ ಕಾಂಗ್ರೆಸ್ ಸ್ಪರ್ಧಿಸಿರುವುದು 200 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರ ಗ್ಯಾರಂಟಿಯನ್ನು …

Read More »

ಎಂಪಿ ಚುನಾವಣೆ ಫಲಿತಾಂಶ ಬಳಿಕ ಕಾಂಗ್ರೆಸ್ ಧೂಳಿಪಟ; ವಿಜಯೇಂದ್ರ

ಹಾವೇರಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಗಿರುವ ಬಸವರಾಜ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಧೂಳಿಪಟವಾಗುತ್ತದೆ ಎಂದು ಭವಿಷ್ಯ ನುಡಿದರು ರಾಜ್ಯದಲ್ಲಿ ಮುಂದೆ ಚುನಾವಣೆ ನಡೆದರೆ ಬಿಜೆಪಿಗೆ ಸ್ಪಷ್ಟ ಬಹುಮತ ಬರಬೇಕು. ಬಿಜೆಪಿಗೆ ಸ್ಪಷ್ಟ ಬಹುಮತ ಬರುವವರೆಗೂ ಮನೆಯಲ್ಲಿ ಕೂರುವುದಿಲ್ಲ ಎಂದು ಹಾವೇರಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ …

Read More »

ತೋಟದಲ್ಲಿ ಬಾಡೂಟ ವ್ಯವಸ್ಥೆ: ಶಾಮಿಯಾನ, ಕುರ್ಚಿ ತೆಗೆಸಿದ ಅಧಿಕಾರಿಗಳು

ರಾಮನಗರ: ತಾಲ್ಲೂಕಿನ ಬಿಡದಿ ಹೋಬಳಿಯ ಕೇತಗಾನಹಳ್ಳಿಯಲ್ಲಿರುವ ಜೆಡಿಎಸ್ ಅಧ್ಯಕ್ಷ ಹಾಗೂ ಮಂಡ್ಯ ಕ್ಷೇತ್ರದ ಅಭ್ಯರ್ಥಿ ಎಚ್‌.ಡಿ. ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ರಾಜಕೀಯ ಮುಖಂಡರಿಗೆ ಬಾಡೂಟ ವ್ಯವಸ್ಥೆ ಮಾಡಲಾಗಿದೆ ಎಂಬ ಆರೋಪದ ಮೇಲೆ, ಚುನಾವಣಾ ಅಧಿಕಾರಿಗಳ ತಂಡ ಬುಧವಾರ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.   ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ, ಕ್ಷಿಪ್ರ ಕಾರ್ಯಪಡೆ ತಂಡ (ಎಫ್‌ಎಸ್‌ಟಿ) ಹಾಗೂ ವಿಡಿಯೊ ಪರಿವೀಕ್ಷಣಾ ತಂಡ (ವಿಡಿಯೊ ಪರಿವೀಕ್ಷಣಾ ತಂಡ) ಸ್ಥಳಕ್ಕೆ …

Read More »

ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಈ ವೆಬ್ ಗೆ ಲಾಗಿನ್ ಆಗಿ.!

ಬೆಂಗಳೂರು : ದ್ವಿತೀಯ ಪಿಯುಸಿ ಬರೆದ ವಿದ್ಯಾರ್ಥಿಗಳು ಮರುಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಇಂದಿನಿಂದಲೇ ಅವಕಾಶ ನೀಡಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು …

Read More »