ಧಾರವಾಡ: ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆ (ಯುಪಿಎಸ್ಸಿ) ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ನಗರದ ಕೃಷಿ ವಿಶ್ವವಿದ್ಯಾಲಯದ ಪದವೀಧರೆ ಸೌಭಾಗ್ಯ ಬೀಳಗಿಮಠ ಅವರು 101ನೇ ರ್ಯಾಂಕ್ ಪಡೆದಿದ್ದಾರೆ. ಸೌಭಾಗ್ಯ ಅವರು ದಾವಣಗೆರೆಯವರು. ಶರಣಯ್ಯ ಸ್ವಾಮಿ ಮತ್ತು ಶರಣಮ್ಮ ದಂಪತಿಯ ಪುತ್ರಿ. ಶರಣಯ್ಯ ಅವರು ನರ್ಸರಿ ನಡೆಸುತ್ತಿದ್ದಾರೆ, ಶರಣಮ್ಮ ಅವರು ಗೃಹಿಣಿ. ಸೌಭಾಗ್ಯ ಅವರು ಎರಡನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಯಶಸ್ವಿಯಾಗಿದ್ದಾರೆ. ‘ಬುದಕಿನಲ್ಲಿ ದೊಡ್ಡ ಗುರಿ ಇಟ್ಟುಕೊಂಡು ಅದನ್ನು ಸಾಧಿಸಬೇಕು ಎಂದು ನಮ್ಮ …
Read More »Daily Archives: ಏಪ್ರಿಲ್ 16, 2024
ಡಿಕೆಶಿ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ: ಯತ್ನಾಳ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ರೈತರ ವಿಚಾರವಾಗಿ ಹಗುರವಾಗಿ ಮಾತನಾಡಿದ ಸಚಿವ ಶಿವಾನಂದ ಪಾಟೀಲ ಅತ್ಮಹತ್ಯೆ ಮಾಡಿಕೊಂಡರೆ ನಾನು ₹5 ಕೋಟಿ ಪರಿಹಾರ ಕೊಡುತ್ತೇನೆ. ಅವರ ಮಾತನ್ನು ಬೆಂಬಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡರೆ ₹50 ಕೋಟಿ ಕೊಡುತ್ತೇನೆ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಪಟ್ಟಣದಲ್ಲಿ ಸೋಮವಾರ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ‘ರೈತರು ಪರಿಹಾರದ ಆಸೆಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಸಚಿವ ಶಿವಾನಂದ ಅವರು ವಿಧಾನಸೌಧದಲ್ಲೇ ಹೇಳಿದ್ದಾರೆ. …
Read More »ಸ್ಯಾಂಡಲ್ ವುಡ್ ಹಿರಿಯ ನಟ ದ್ವಾರಕೀಶ್ ನಿಧನ : ಕಂಬನಿ ಮಿಡಿದ ರಾಜಕೀಯ ಗಣ್ಯರು..!
ಬೆಂಗಳೂರು : ಹೃದಯಾಘಾತದಿಂದ ಇಂದು ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದು, ವಿವಿಧ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ಬಿ.ಎಸ್ ಯಡಿಯೂರಪ್ಪ ಸಂತಾಪ ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ …
Read More »ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ
ವಿಜಯಪುರ : ಕಾಂಗ್ರೆಸ್ ಪಕ್ಷದಲ್ಲಿ ಭಾರತ ಮಾತಾಕಿ ಜೈ ಎನ್ನಲು ಶಾಸಕ ಲಕ್ಷ್ಮಣ ಸವದಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪರವಾನಿಗೆ ಕೇಳುತ್ತಾರೆ. ಪಾಕಿಸ್ಥಾನ ಜಿಂದಾಬಾದ್ ಎನ್ನಲು ಇವರಿಗೆ ಯಾರ ಪರವಾನಿಗೆ ಬೇಕಿಲ್ಲ. ಪಂಚಾಯತ್ನಿಂದ ಪಾರ್ಲಿಮೆಂಟ್ ವರೆಗೆ ಅವರು ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ ಮಾಜಿ ಸಚಿವ ಸಿ.ಟಿ.ರವಿ ಕುಟುಕಿದ್ದಾರೆ. ಮಂಗಳವಾರ ವಿಜಯಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ರಮೇಶ ಜಿಗಜಿಣಗಿ ಪರ ಬಹಿರಂಗ ನಗರದ ದರ್ಬಾರ ಮೈದಾನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಮಾವೇಶದಲ್ಲಿ …
Read More »