Breaking News

Daily Archives: ಏಪ್ರಿಲ್ 24, 2024

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …

Read More »

ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಬೇಸಗೆ ಝಳದಲ್ಲಿ ಬೇಯುತ್ತಿರುವ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಲೋಕಸಭೆ ಚುನಾವಣೆಯ ಕಾವೂ ಹೆಚ್ಚಿದ್ದು, ರಾಜಧಾನಿಯ ಗದ್ದುಗೆ ಹಿಡಿಯಲು ನಡೆಯುತ್ತಿರುವ ಗುದ್ದಾಟವೂ ಬಿರುಸಾಗಿಯೇ ಇದೆ. ಕಳೆದೆರಡು ಲೋಕಸಭೆ ಚುನಾವಣೆಗಳಲ್ಲಿ ಎಲ್ಲ 7 ಕ್ಷೇತ್ರಗಳಲ್ಲಿಯೂ ವಿಜಯ ಪತಾಕೆ ಹಾರಿಸಿದ್ದ ಬಿಜೆಪಿ ಈ ಬಾರಿಯೂ ಗೆಲುವಿನ ನಗೆ ಬೀರುವ ಹುಮ್ಮಸ್ಸಿನಲ್ಲಿದೆ. ಇತ್ತ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದರೂ ಕಳೆದ 10 ವರ್ಷಗಳಿಂದಲೂ ಲೋಕಸಭೆಯ ಒಂದೂ ಸ್ಥಾನವನ್ನೂ ಗೆಲ್ಲಲಾಗದ ಆಮ್‌ ಆದ್ಮಿ ಪಕ್ಷ ಈ …

Read More »

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಕೆಸಿಇಟಿ -2024ರ ಪರೀಕ್ಷೆಯಲ್ಲಿ ಆಗಿರುವ ಪಠ್ಯಂತರ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಎ. 27ರ ಒಳಗೆ ಸೂಕ್ತ ಪರಿಹಾರ ಘೋಷಿಸದಿದ್ದರೆ ರಾಜ್ಯಾದ್ಯಂತ ಹೋರಾಟಕ್ಕೆ ಕರೆ ಜತೆಗೆ ಕೆಇಎಗೆ ಮುತ್ತಿಗೆ ಹಾಗೂ ಕೋರ್ಟ್‌ ಮೊರೆ ಹೋಗಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನಿರ್ಧರಿಸಿದೆ.   ಮಲ್ಲೇಶ್ವರದ ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಸಂಘದ ಆವರಣದಲ್ಲಿ ಎಬಿವಿಪಿ ನೇತೃತ್ವದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಮಾಲೋಚನ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದ ಬಗ್ಗೆ …

Read More »

ಯುವ ಮತದಾರರ ಚುನಾವಣೆ ಉತ್ಸಾಹ

ಯುವ ಮತದಾರರ ಚುನಾವಣೆ ಉತ್ಸಾಹ ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಯುವ ಮತದಾರರ ಪಾತ್ರವೂ ಮಹತ್ವದ್ದಾಗಿದೆ. ಕ್ಷೇತ್ರದಲ್ಲಿ ಈ ವರ್ಷ 29 ಸಾವಿರಕ್ಕೂ ಅಧಿಕ ಯುವ ಮತದಾರರಿದ್ದಾರೆ.ಹೊರ ಜಿಲ್ಲೆ, ವಿದೇಶಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದ ಯುವ ಜನತೆ ನೆಲೆಸಿದ್ದಾರೆ.   ಇದರಲ್ಲಿ ಶೇ. 20-30ರಷ್ಟು ಪಕ್ಷಗಳ ಜತೆಗೆ ಗುರುತಿಸಿಕೊಂಡು ಪ್ರಚಾರ ಪ್ರಕ್ರಿಯೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಉಳಿದವರು ಮತದಾರರಾಗಿ ಮಗುಮ್ಮಾಗಿದ್ದಾರೆ. ಇನ್ನು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿ …

Read More »

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ರಾಮನಗರ: ಇತ್ತೀಚೆಗೆ ಮೈಸೂರಿನಲ್ಲಿ ಆಯೋಜಿಸಿದ್ದ ಒಕ್ಕಲಿಗರ ಸಭೆಯಲ್ಲಿ “ಸಿಎಂ ಬದಲಾವಣೆ’ ಸುಳಿವು ನೀಡಿದ್ದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಈಗ ಮತ್ತೆ ಸಿಎಂ ಹುದ್ದೆ ಕುರಿತು ಹೇಳಿಕೆ ನೀಡುವ ಮೂಲಕ ಚರ್ಚೆ ಮುಂದುವರಿಸಿದ್ದಾರೆ. “ನಾನು ಸಿಎಂ ಆಗುತ್ತೇನೆ ಎಂಬ ಭಾವನೆ ಇಟ್ಟು ಕೊಂಡು ನೀವು ನನ್ನನ್ನು ಗೆಲ್ಲಿಸಿದ್ದೀರಿ, ಆ ನಂಬಿಕೆಗೆ ಮೋಸ ಆಗುವುದಿಲ್ಲ’ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಮಂಗಳವಾರ ಹಾರೋ ಹಳ್ಳಿಯಲ್ಲಿ ಬೆಂಗಳೂರು ಗ್ರಾಮಾಂತರ …

Read More »

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಬೆಂಗಳೂರು/ಹೊಸದಿಲ್ಲಿ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಮತ್ತೆ ಜೈಲು ಪಾಲಾಗಲಿದ್ದಾರೆ. ಕರ್ನಾಟಕ ಹೈಕೋರ್ಟ್‌ ನೀಡಿದ್ದ ಜಾಮೀನು ಆದೇಶವನ್ನು ಅಮಾನತುಗೊಳಿಸಿದ ಸುಪ್ರೀಂ ಕೋರ್ಟ್‌, ಒಂದು ವಾರದೊಳಗೆ ಶರಣಾಗುವಂತೆ ಶರಣರಿಗೆ ಸೂಚಿಸಿದೆ. ಕಳೆದ ವರ್ಷ ನ. 8ರಂದು ಕರ್ನಾಟಕ ಹೈಕೋರ್ಟ್‌ ಶರಣರಿಗೆ ಜಾಮೀನು ನೀಡಿತ್ತು. ಈಗ ಈ ಆದೇಶವನ್ನು 4 ತಿಂಗಳ ಕಾಲ ಅಮಾನತಿನಲ್ಲಿಟ್ಟಿರುವ ಸುಪ್ರೀಂ ಕೋರ್ಟ್‌, 4 ತಿಂಗಳೊಳಗೆ ಪ್ರಮುಖ ಸಾಕ್ಷ್ಯಗಳ ವಿಚಾರಣೆ ನಡೆಸಬೇಕು …

Read More »

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಬೆಂಗಳೂರು: ಒಂದು ತಿಂಗಳಿಂದ ನಡೆಯುತ್ತಿದ್ದ ಅಬ್ಬರದ ಪ್ರಚಾರಕ್ಕೆ ಬುಧವಾರ ತೆರೆ ಬೀಳಲಿದೆ. ಚುನಾವಣೆ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ರಾಜಕೀಯ ನಾಯಕರು, ಅಭ್ಯರ್ಥಿಗಳು ಪ್ರಚಾರ ಕಣಕ್ಕಿಳಿದು ತಂತಮ್ಮ ಸಾಮರ್ಥ್ಯ, ಸಾಧನೆ, ಎದುರಾಳಿಯ ಅಸಾಮರ್ಥ್ಯ, ವೈಫ‌ಲ್ಯಗಳನ್ನು ಹೇಳುವ ಮೂಲಕ ಮತದಾರರ ಮನವೊಲಿಸಲು ಶತಪ್ರಯತ್ನ ನಡೆಸಿದ್ದರು. ಮೊದಲ ಹಂತದ ಮತದಾನ ನಡೆಯಲಿರುವ 14 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಹಿ ರಂಗ ಪ್ರಚಾರಕ್ಕೆ ಬುಧವಾರ ತೆರೆ ಬೀಳ ಲಿದ್ದು, ಧ್ವನಿವರ್ಧಕ, ಪ್ರಚಾರ ವಾಹನ, ಭಾಷಣ, ಬಹಿರಂಗ ಸಮಾವೇಶ, …

Read More »

ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಮಂಗಳವಾರ ರಾತ್ರಿ ಅದ್ಧೂರಿ ಚಾಲನೆ ಸಿಕ್ಕಿದ್ದು, ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ ಚಾಲನೆ ನೀಡಲಾಗಿದೆ. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಗಿದೆ. ಬಳಿಕ ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ …

Read More »

ಎಷ್ಟು ಪ್ರಮಾಣದಲ್ಲಿ ಮದ್ಯ ಸೇವಿಸಿದ್ರೆ ಲಿವರ್​ ಡ್ಯಾಮೇಜ್​ ಆಗುತ್ತದೆ?

ಬೆಂಗಳೂರು: ದೇಶದಲ್ಲಿ ಮದ್ಯ ಸೇವಿಸುವವರ ಸಂಖ್ಯೆ ಅಧಿಕವಾಗಿಯೇ ಇದೆ. ಲಿಕ್ಕರ್​ ಕುಡಿಯುವುದು ಸಹ ಒಂದು ಚಟವಾಗಿ ಮಾರ್ಪಟ್ಟಿದೆ ಎಂದರೆ ಖಂಡಿತ ತಪ್ಪಾಗಲಾರದು. ಮದ್ಯ ಪ್ರಿಯರಿಗೆ ಇದನ್ನು ಸೇವಿಸುವುದರಿಂದ ಅದೇನೋ ಒಂದು ರೀತಿಯ ಖುಷಿ, ಉತ್ಸಾಹ ಲಭಿಸುತ್ತದೆ. ಕೆಲವರು ಆಲ್ಕೋಹಾಲ್ ಸೇವಿಸುವುದನ್ನು ದಿನನಿತ್ಯ ಅಭ್ಯಾಸ ಮಾಡಿಕೊಂಡರೆ, ಇನ್ನೂ ಕೆಲವರು ಟಾನಿಕ್ ರೀತಿ ರಾತ್ರಿಯ ವೇಳೆ ಕುಡಿಯುತ್ತಾರೆ. ಈ ಮಧ್ಯೆ ಇತ್ತೀಚಿನ ವರದಿಯೊಂದು ಎಷ್ಟು ಪ್ರಮಾಣದಲ್ಲಿ ಕುಡಿಯುವುದರಿಂದ ಲಿವರ್ ಆರೊಗ್ಯ ಕಾಪಾಡಿಕೊಳ್ಳಬಹುದು ಹಾಗೂ ಎಷ್ಟು …

Read More »

HSRP ‘ ನಂಬರ್ ಪ್ಲೇಟ್ ಗುಡುವು ವಿಸ್ತರಣೆ ಇಲ್ಲ

ಬೆಂಗಳೂರು: ವಾಹನಗಳಿಗೆ ಹೈಸೆಕ್ಯುರಿಟಿ ನಂಬ‌ರ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಕೆಗೆ ನೀಡಲಾಗಿರುವ ಗಡುವನ್ನು ಮತ್ತೆ ವಿಸ್ತರಣೆ ಮಾಡುವ ಅವಕಾಶ ಇಲ್ಲ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಕಳೆದ ವರ್ಷ ನವೆಂಬರ್ ಮತ್ತು ಈ ಫೆಬ್ರವರಿಯಲ್ಲಿ ಎಚ್‌ಎಸ್‌ಆರ್‌ಪಿ ಪ್ಲೇಟ್ ಅಳವಡಿಕೆಗೆ ಎರಡು ಬಾರಿ ಗಡುವನ್ನು ವಿಸ್ತರಿಸಿದ್ದು ಇನ್ನು ಮುಂದೆ ಆದನ್ನು ವಿಸ್ತರಿಸಲು ಚಿಂತನೆ ನಡೆಸಿಲ್ಲ ಎಂದು ವರದಿಯಾಗಿದೆ.   ಕರ್ನಾಟಕದಲ್ಲಿ 2019 ರ ಏಪ್ರಿಲ್ 1ಕ್ಕಿಂತ ಹಿಂದೆ ನೋಂದಾಯಿಸಿದ ದ್ವಿಚಕ್ರ, ತ್ರಿಚಕ್ರ, ಲಘು …

Read More »