Breaking News

Daily Archives: ಏಪ್ರಿಲ್ 26, 2024

ಗೃಹ ಸಚಿವರ ತವರು ಕ್ಷೇತ್ರದಲ್ಲಿ 10 ಗುಡಿಸಲುಗಳಿಗೆ ಬೆಂಕಿ

ಬೆಂಗಳೂರು, ಏಪ್ರಿಲ್ 26: ರಾಜ್ಯದಲ್ಲಿ ಎಲ್ಲರ ಚಿತ್ತ ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನದತ್ತ ನೆಟ್ಟಿದೆ. ತುಮಕೂರು ಕ್ಷೇತ್ರದಲ್ಲಿ ಇಂದು ಮತದಾನ ನಡೆದಿದೆ. ಇದೇ ವೇಳೆ ಗೃಹ ಸಚಿವರ ತವರು ಕ್ಷೇತ್ರದಲ್ಲಿ ಹಲವು ಗುಡಿಸಲುಗಳಿಗೆ ಬಂಕಿ ಬಿದ್ದು, ಎಲ್ಲವು ಸುಟ್ಟು ಭಸ್ಮವಾಗಿವೆ. ಹೌದು, ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪ್ರತಿನಿಧಿಸುವ ತುಮಕೂರು ಜಿಲ್ಲೆಯ ಕೊರಟಗೆರೆ (ತಾಲೂಕು) ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಂಪುಗಾನಹಳ್ಳಿ ಗ್ರಾಮದಲ್ಲಿ ಸುಮಾರು 10 ಗುಡಿಸಲುಗಳಿಗೆ ಬೆಂಕಿಗೆ ಆಹುತಿಯಾಗಿವೆ. …

Read More »

ಕೋಳಿ ಮಾಂಸಕ್ಕಿಂತ ಬೀನ್ಸ್‌ ದುಬಾರಿ!

ಹೊಸಕೋಟೆ: ಮಾರುಕಟ್ಟೆಯಲ್ಲಿ ಆವಕ ಕುಸಿದ ಕಾರಣ ಈ ವಾರ ಬೀನ್ಸ್‌ ಬೆಲೆ ಏಕಾಏಕಿ ಏರಿಕೆಯಾಗಿದ್ದು ಕೆ.ಜಿ. ಬೀನ್ಸ್‌ ಬೆಲೆ ₹250 ಗಡಿ ತಲುಪಿದೆ. ಮಾರುಕಟ್ಟೆಯಲ್ಲಿ ಕೋಳಿಮಾಂಸಕ್ಕಿಂತ ಬೀನ್ಸ್‌ ದುಬಾರಿಯಾಗಿದೆ. ಕೆ.ಜಿ ಕೋಳಿ ಮಾಂಸ ₹240 ಇದ್ದರೆ, ಬೀನ್ಸ್‌ ₹250ರಂತೆ ಮಾರಾಟವಾಗುತ್ತಿದೆ. ಕಳೆದ ವಾರ ₹130-₹140 ಆಸುಪಾಸಿನಲ್ಲಿದ್ದ ಕೆ.ಜಿ ಬೀನ್ಸ್‌ ಈ ವಾರ ದಿಢೀರ್‌ ನೂರು ರೂಪಾಯಿ ಏರಿಕೆಯಾಗಿದೆ. ಈ ಮೊದಲು ಕೆ.ಜಿ ಲೆಕ್ಕದಲ್ಲಿ ಬೀನ್ಸ್‌ ಖರೀದಿಸುತ್ತಿದ್ದ ಗ್ರಾಹಕರು ಈಗ ಗ್ರಾಂ …

Read More »

ರೈತನ ಕೈಹಿಡಿದ ಪಪ್ಪಾಯಿ; ಉತ್ತಮ ಆದಾಯ

ಧಾರವಾಡ: ತಾಲ್ಲೂಕಿನ ಮಾದನಭಾವಿಯ ಎಂಜಿನಿಯರಿಂಗ್‌ ಪದವೀಧರ ದಯಾನಂದ ಹೊಳೆಹಡಗಲಿ ಅವರು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪ್ರಯೋಜನ ಪಡೆದು ಥೇವಾನ್ ರೆಡ್ ಲೇಡಿ ತಳಿ ಪಪ್ಪಾಯಿ ಲಾಭ ಗಳಿಸಿದ್ದಾರೆ. ಕೊಲ್ಲಾಪುರ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಅವರು ಕೋವಿಡ್‌ ತಲ್ಲಣದ ಕಾಲಘಟ್ಟದಲ್ಲಿ ಉದ್ಯೊಗ ತೊರೆದು ಊರು ಸೇರಿ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. 15 ಎಕರೆ ಜಮೀನಿನಲ್ಲಿ ಮಿಶ್ರ ಬೇಸಾಯ (ಕಬ್ಬು, ಗೋವಿನಜೋಳ, ಕಡಲೆ, ತರಕಾರಿ, ಸೋಯಾಬಿನ್…) ಮಾಡುತ್ತಿದ್ದಾರೆ. ಹೊಸ ಬೆಳೆ …

Read More »

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ ನೀಡಲಾಗಿದೆ. ಮಗಳ ಕೊಲೆ ಪ್ರಕಣಕ್ಕೆ ಸಂಬಂಧಿಸಿ ತನಗೆ ಕೆಲವರಿಂದ ಜೀವ ಬೆದರಿಕೆಯಿದೆ ಎಂದು ನಿರಂಜನಯ್ಯ ಗುರುವಾರ ಹೇಳಿದ್ದರು. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿಯೂ ಬೆದರಿಕೆ ಕುರಿತು ಪ್ರಸ್ತಾವಿಸಿದ್ದರು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಘಟಕ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರ ಅವರಿಗೆ ಶಸ್ತ್ರಸಜ್ಜಿತ ಒಬ್ಬ ಅಂಗರಕ್ಷಕರನ್ನು ಭದ್ರತೆಗೆ ನಿಯೋಜಿಸಿದೆ. ಸಾಂತ್ವನ ಹೇಳುವ ನೆಪದಲ್ಲಿ …

Read More »

ರಾಹುಲ್‌ ಗಾಂಧಿ ‘ಇಂಡಿಯಾ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಆಗಲಿ: ಸುರ್ಜೇವಾಲಾ

ಬೆಳಗಾವಿ: ‘ರಾಹುಲ್‌ ಗಾಂಧಿ ಅವರೇ ಮುಂದಿನ ಪ್ರಧಾನಿ ಆಗಬೇಕು ಎಂಬ ನಿರೀಕ್ಷೆ ನಮಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಹೇಳಿದರು. ನಗರದಲ್ಲಿ ಗುರುವಾರ ಚೊಂಬು ಹಿಡಿದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಡಿ’ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು’ ಎಂಬ ಪ್ರಶ್ನೆಗೆ ಹೀಗೆ ಪ್ರತಿಕ್ರಿಯಿಸಿದರು. ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಕನ್ನಡಿಗರಿಗೆ ಅನ್ಯಾಯ ಮಾಡಿದ ಮೋದಿ ಚುನಾವಣಾ ಪ್ರವಾಸಕ್ಕೆ ಬರುವ …

Read More »

‘ತೇಜಸ್ವಿ ಸೂರ್ಯ’ ವಿರುದ್ಧ ಪ್ರಕರಣ ದಾಖಲು

‘ತೇಜಸ್ವಿ ಸೂರ್ಯ’ ವಿರುದ್ಧ ಪ್ರಕರಣ ದಾಖಲು ಬೆಂಗಳೂರು: ‘ಎಕ್ಸ್’ ಹ್ಯಾಂಡಲ್ನಲ್ಲಿ ವಿಡಿಯೋ ಪೋಸ್ಟ್ ಮಾಡಿ ಧರ್ಮದ ಆಧಾರದ ಮೇಲೆ ಮತಯಾಚಿಸಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಶುಕ್ರವಾರ ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಜಯನಗರ ಪೊಲೀಸ್ ಠಾಣೆಯ 123(3) ಸೆ.123(3)ರಲ್ಲಿ ಪ್ರಕರಣ ದಾಖಲಾಗಿದೆ.

Read More »

ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪುರ

ಬೆಳಗಾವಿ: ‘ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪ್ರಕಟಿಸಿದ 25 ಗ್ಯಾರಂಟಿಗಳಲ್ಲಿ ‘ರೈತರ ಸಾಲ ಮನ್ನಾ’ ಕೂಡ ಸೇರಿಸಲಾಗಿದೆ. ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿ ಇದ್ದರೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ರೈತರ ಸಾಲ ಮನ್ನಾ ಮಾಡಬಹುದಿತ್ತು ಅಲ್ಲವೇ?’ ಎಂದು ಜೆಡಿಎಸ್‌ ರಾಷ್ಟ್ರೀಯ ಕೋರ್‌ ಸಮಿತಿ ಸದಸ್ಯ ಬಂಡೆಪ್ಪ ಕಾಶೆಂಪುರ ಟೀಕಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯ …

Read More »

ಬಿಜೆಪಿ ಟೀಕಿಸಲು ಕಾಂಗ್ರೆಸ್‌ ಬಳಿ ವಿಷಯವಿಲ್ಲ: ಜಗದೀಶ ಶೆಟ್ಟರ್‌

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಟೀಕಿಸಲು ಕಾಂಗ್ರೆಸ್‌ನವರ ಬಳಿ ಅಸ್ತ್ರವಿಲ್ಲ. ಹಾಗಾಗಿ ನನ್ನನ್ನೇ ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಆದರೆ, ಬೆಳಗಾವಿ ಕ್ಷೇತ್ರದಲ್ಲಿನ ವಿವಿಧ ಭಾಷಿಕರು ಬಿಜೆಪಿ ಬೆಂಬಲಿಸುತ್ತಿದ್ದಾರೆ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.   ಇಲ್ಲಿನ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸ್ಥಳವನ್ನು ಶುಕ್ರವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಇದು …

Read More »

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!   ಬೆಂಗಳೂರು: ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ . ಅವರು ತಮ್ಮ ಪತ್ನಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರ ಜೊತೆಗೆ ಮತದಾನ ಮಾಡಿದ್ದಾರೆ.77 ವರ್ಷ ವಯಸ್ಸಿನ ಐಟಿ ದಿಗ್ಗಜ ನಾರಾಯಣ ಮೂರ್ತಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. …

Read More »

ನೇಹಾ ಕುಟುಂಬಸ್ಥರಿಗೆ ಭದ್ರತೆ, ನಿರಂಜನ್ ಹಿರೇಮಠ್‌ಗೆ ಅಂಗರಕ್ಷಕರ ನಿಯೋಜನೆ

ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣದ (Neha Hiremath Murder Case) ತನಿಖೆ ಚುರುಕುಗೊಂಡಿದೆ. ಈಗಾಗಲೇ ಸಿಐಡಿ (CID) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿ ಫಯಾಜ್‌ (Fayaz) ವಿಚಾರಣೆ ನಡೆಸಿದ್ದಾರೆ. ಈ ನಡುವೆ ನೇಹಾ ಕುಟುಂಬಕ್ಕೆ ಸರ್ಕಾರದಿಂದ ಭದ್ರತೆ ನೀಡಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿದ್ದ ಸಂದರ್ಭದಲ್ಲಿ ತಮಗೆ, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಹೀಗಾಗಿ ತಮಗೆ ಭದ್ರತೆ ಬೇಕು ಅಂತ ನೇಹಾ ತಂದೆ …

Read More »