Breaking News

Daily Archives: ಏಪ್ರಿಲ್ 29, 2024

ಗೃಹಲಕ್ಷ್ಮೀ ಯೋಜನೆ 80 ಸಾವಿರ ಅರ್ಜಿ ತಿರಸ್ಕಾರ

ಗೃಹಲಕ್ಷ್ಮೀ ಯೋಜನೆಯ ಮೂಲಕ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು 2 ಸಾವಿರ ರೂಪಾಯಿ ಹಣ ಬ್ಯಾಂಕ್‌ ಖಾತೆಗೆ ಜಮೆ ಆಗುತ್ತಿದೆ. ಆದ್ರೆ ಇದುವರೆಗೆ ಹಣ ಪಡೆದು ಕೊಂಡ ಎಲ್ಲರಿಗೂ ಕೂಡ ಗೃಹಲಕ್ಷ್ಮೀಯೋಜನೆಯ ಹಣ ಸಿಗುತ್ತೆ ಅನ್ನೋ ಗ್ಯಾರಂಟಿ ಇಲ್ಲ. ಅದ್ರಲ್ಲೂ ಯೋಜನೆಗೆ ಅರ್ಜಿ ಸಲ್ಲಿಸಿದ 80 ಸಾವಿರ ಮಹಿಳೆಯರ ಅರ್ಜಿ ತಿರಸ್ಕಾರಗೊಂಡಿದೆ. ಕರ್ನಾಟಕದಲ್ಲಿ ಸುಮಾರು ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಮೂಲಕ ಹಣವನ್ನು ಪಡೆದುಕೊಂಡಿರುವ 26 ಸಾವಿರ ಮಹಿಳೆಯರ ಖಾತೆಗೆ ಇನ್ಮುಂದೆ …

Read More »

ರಾಜ್ಯದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ: ಪ್ರಧಾನಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕರ್ನಾಟಕದಲ್ಲಿರುವ ಪ್ರಮುಖ ಸಮಸ್ಯೆಗಳ ಬಗ್ಗೆ ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, “ಕರ್ನಾಟಕದ ನರೇಗಾ ಕಾರ್ಮಿಕರಿಗೆ ಮೋದಿ ಸರ್ಕಾರ ವೇತನ ನೀಡುವುದು ಯಾವಾಗ” ಎಂದು ಪ್ರಶ್ನಿಸಿದೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಕರ್ನಾಟಕಕ್ಕೆ ಸಂಬಂಧಿಸಿದ ಹಲವಾರು ಪ್ರಶ್ನೆಗಳನ್ನು ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರದ ಮುಂದಿರಿಸಿದ್ದಾರೆ. ಜೊತೆಗೆ ಪ್ರಧಾನಿ ಮೋದಿಯ ಸುಳ್ಳಿನ ಪಟ್ಟಿಗಳ ವಿವರವನ್ನೂ …

Read More »

ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ.: ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ರಾಜ್ಯದ ರಾಜಕಾರಣ, ದೇಶದ ರಾಜಕಾರಣ ತಲೆ ತಗ್ಗಿಸುವ ಘಟನೆಯಿದು. ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸ ನಮ್ಮ ರಾಜ್ಯದಲ್ಲಿ ಆಗಿದ್ದು ಖೇದಕರ ಎಂದು ಪ್ರಜ್ವಲ್ ರೇವಣ್ಣ ವಿಡಿಯೋ ವಿಚಾರವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಗೃಹ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ರೇವಣ್ಣ ವಿಡಿಯೋ ಹರಿದಾಡುತ್ತಿವೆ. ಈ ಎಲ್ಲ ವಿಚಾರಗಳನ್ನು ಹಾಸನ ಬಿಜೆಪಿ ಮುಖಂಡ ದೇವರಾಜಗೌಡ ಡಿಸೆಂಬರ್ ‌ಸಮಯದಲ್ಲೇ ವಿಜಯೇಂದ್ರ …

Read More »

ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

ಸೋಷಿಯಲ್‌ ಮೀಡಿಯಾ ಕುರಿತು ಹಲವು ನಟ-ನಟಿಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಾತುಗಳನ್ನು ತಿರುಚುವ, ಥಂಬ್‌ನೈಲ್‌ ಮೂಲಕ ಅವಹೇಳನ ಮಾಡುವುದನ್ನು ವಿರೋಧಿಸಿದ್ದಾರೆ. ಈಗ ನಟ ಶಿವರಾಜಕುಮಾರ್‌ ಸಹ ಸೋಷಿಯಲ್‌ ಮೀಡಿಯಾ ವಿರುದ್ಧ ಕಿಡಿಕಾರಿದ್ದಾರೆ. ಶನಿವಾರ ಬೆಳಿಗ್ಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆದ “ಫಾದರ್‌’ ಚಿತ್ರದ ಮುಹೂರ್ತದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ಸೋಷಿಯಲ್‌ ಮೀಡಿಯಾ ಎನ್ನುವುದು ಆಟ ಸಾಮಾನು ಆಗಿಬಿಟ್ಟಿದೆ. ನಾವಿದ್ದ ಕಾಲ ಬಹಳ ಚೆನ್ನಾಗಿತ್ತು. ನಾವು …

Read More »

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ

ಜೆಡಿಎಸ್‌ನಿಂದ ಪ್ರಜ್ವಲ್‌ ರೇವಣ್ಣ ಉಚ್ಚಾಟನೆ ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜಾತ್ಯತೀತ ಜನತಾದಳ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಅವರನ್ನು ಉಚ್ಚಾಟನೆ ಮಾಡಿರುವುದಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಆದೇಶಿಸಿದ್ದಾರೆ.ಕರ್ನಾಟಕದಲ್ಲಿ ಪ್ರಜ್ವಲ್‌ ರೇವಣ್ಣ ಅವರ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೆ ಜಾತ್ಯತೀತ ಜನತಾದಳವು ಈ ಕ್ರಮ ಕೈಗೊಂಡಿದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವಿವಾದ …

Read More »

ಲೈಂಗಿಕ ಹಗರಣ ಪ್ರಕರಣ: ಪ್ರಜ್ವಲ್ ರೇವಣ್ಣ ದೇಶ ತೊರೆಯಲು ಬಿಜೆಪಿ ಸಹಾಯ ಮಾಡಿದೆ; ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ದೇಶ ತೊರೆದಿದ್ದಾರೆ ಎಂಬ ವರದಿಗಳ ನಡುವೆ, ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಆಪಾದಿತ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ಅವರನ್ನು ರಕ್ಷಿಸಿ ಬಿಜೆಪಿಯೇ ವಿದೇಶಕ್ಕೆ ಕಳಿಸಿದೆ ಎನ್ನಲಾಗುತ್ತಿದೆ. ಆರೋಪಿಯನ್ನು ರಕ್ಷಿಸುವುದು ಯಾವ ನ್ಯಾಯ ಎಂದು ಸೋಮವಾರ ಹೇಳಿದ್ದಾರೆ.   ಪ್ರಜ್ವಲ್ ರೇವಣ್ಣ ಅವರ ಹಿಂದಿನ ಮನೆಯ ಸಹಾಯಕರು ನೀಡಿದ ದೂರಿನ ಮೇರೆಗೆ ಭಾನುವಾರ ಲೈಂಗಿಕ ಕಿರುಕುಳ ಪ್ರಕರಣವನ್ನು ದಾಖಲಿಸಲಾಗಿದೆ. …

Read More »

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

ನಾಳೆಯಿಂದ ಪಿಯುಸಿ ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಹುಬ್ಬಳ್ಳಿ, ಏಪ್ರಿಲ್ 28: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ನಾಳೆ ಸೋಮವಾರದಿಂದ (ಏಪ್ರಿಲ್ 29) ನಡೆಯಲಿರುವ ಪೂರಕ ಪರೀಕ್ಷೆಗಳಿಗೆ (ಪರೀಕ್ಷೆ-2) ಹಾಜರಾಗುತ್ತಿದ್ದಾರೆ. ಇದೀಗ ಈ ಎಲ್ಲ ವಿದ್ಯಾರ್ಥಿಗಳಿಗೆ ರಾಜ್ಯ ಸಾರಿಗೆ ಸಂಸ್ಥೆಯು ಸಿಹಿ ಸುದ್ದಿ ನೀಡಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆ ಆಗಿರುತ್ತಾರೆ. ಹೀಗಾಗಿ ಅವರಿಗೆ ತಮ್ಮ ನಿವಾಸದಿಂದ …

Read More »

ಮೈ ,ಕೈ , ನೋವನ್ನ ಕಡಿಮೆ ಮಾಡಲು ಅತ್ಯುತ್ತಮ ಸಲಹೆ

ನೀವು ದೇಹದಲ್ಲಿ ಎಲ್ಲೇ ಇದ್ದರೂ ಕೇವಲ 5 ಸೆಕೆಂಡುಗಳಲ್ಲಿ ನೋವನ್ನ ಕಡಿಮೆ ಮಾಡಲು ಅತ್ಯುತ್ತಮ ಸಲಹೆ ಇದು. ಸಾಮಾನ್ಯವಾಗಿ, ನಮ್ಮಲ್ಲಿ ಹೆಚ್ಚಿನವರಿಗೆ ಮೈ ಕೈ ನೋವು ಅನುಭವಿಸುತ್ತಿರುತ್ತಾರೆ. ಅಂತಹ ನೋವುಗಳು ಬಂದಾಗ ಅನೇಕ ಜನರು ನೋವು ನಿವಾರಕಗಳನ್ನು ಬಳಸುತ್ತಾರೆ. ನೋವು ನಿವಾರಕಗಳ ಬಳಕೆಯಿಂದ ಕೆಲವು ಅಡ್ಡಪರಿಣಾಮಗಳು ಇವೆ. ಆದ್ದರಿಂದ, ಅದನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಪ್ರಯತ್ನಿಸಬೇಕು. ದೇವರಿಗೆ ಬಳಸುವ ಕರ್ಪೂರವು ನೋವುಗಳನ್ನ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೇಹದಲ್ಲಿ ಸ್ನಾಯು …

Read More »

ಮೇ 07 ರಂದು ‘ಲೋಕಸಭಾ ಚುನಾವಣೆ’ಗೆ 2 ನೇ ಹಂತದ ಮತದಾನ : ರಾಜ್ಯದ ಈ ಜಿಲ್ಲೆಗಳಲ್ಲಿ ‘ಸರ್ಕಾರಿ ರಜೆ’ ಘೋಷಣೆ

ಬೆಂಗಳೂರು : ಲೋಕಸಭಾ ಚುನಾವಣೆಗೆ ಎರಡನೇ ಹಂತದ ಮತದಾನ ನಡೆಯಲಿದೆ. ಅಂದು ಎಲ್ಲಾ ಕಾರ್ಮಿಕರು, ಅರ್ಹ ಮತದಾರರು ಮತದಾನ ಮಾಡೋದಕ್ಕಾಗಿ ರಾಜ್ಯ ಸರ್ಕಾರದಿಂದ ಸಾರ್ವತ್ರಿಕ ರಜೆ ಘೋಷಣೆ ಮಾಡಿ ಆದೇಶಿಸಿದೆ. ಮೇ 07 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಂವಿಧಾನಾತ್ಮಕ ಅಥವಾ ಶಾಸನಾತ್ಮಕ …

Read More »

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ-2 ಪರೀಕ್ಷೆ ಆರಂಭ ಬೆಂಗಳೂರು: 2023 -24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ -2 ಎಪ್ರಿಲ್ 29 ರಿಂದ ರಾಜ್ಯದಾತ್ಯಂತ ಆರಂಭವಾಗಲಿದೆ. 84,933 ಬಾಲಕರು, 64,367 ಬಾಲಕಿಯರು ಸೇರಿ ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಇದೇ ಮೊದಲ ಬಾರಿಗೆ ಮೂರು ಬಾರಿ ಪರೀಕ್ಷೆ ಬರೆದು ಯಾವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಬರುತ್ತದೆಯೋ ಅದನ್ನು ಉಳಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಈಗಾಗಲೇ ಪರೀಕ್ಷೆ …

Read More »