ರಟ್ಟಗೇರಿ (ಗುಡಗೇರಿ): ‘ನಮ್ಮ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದಂತೆ ಪಂಚ ಗ್ಯಾರಂಟಿಯನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದಾರೆ. ಇದರಿಂದ ಬಡವರಿಗೆ ನೆರವಾಗುತ್ತದೆ’ ಎಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಷಣ್ಮುಖ ಶಿವಳ್ಳಿ ಹೇಳಿದರು. ಕುಂದಗೋಳ ತಾಲ್ಲೂಕಿನ ಮಂಡಿಗನಾಳ, ರಟ್ಟಗೇರಿ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿನೋದ ಅಸೂಟಿ ಅವರ ಪರವಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು. ‘ಬಿಜೆಪಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನೀಡಿದ ಭರವಸೆಗಳು ಇನ್ನು ಭರವಸೆಯಾಗೆ ಉಳಿದಿದೆ. …
Read More »Monthly Archives: ಏಪ್ರಿಲ್ 2024
ಪಕ್ಷಿಗಳ ಬಾಯಾರಿಕೆ ನೀಗಿಸಿ
ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಉದ್ಯಾನ ವಿಭಾಗ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಹಯೋಗದಲ್ಲಿ ಹಸಿರು ಉದ್ಯಾನ, ಬೊಟಾನಿಕಲ್ ಉದ್ಯಾನ ಹಾಗೂ ವಿವಿಧ ಸ್ನಾತಕೋತ್ತರ ವಿಭಾಗಗಳ ಎದುರು ಪಕ್ಷಿಗಳಿಗೆ ಧಾನ್ಯ ಹಾಗೂ ನೀರು ಇಡುವ ಕಾರ್ಯಕ್ಕೆ ಭಾನುವಾರ ಕುಲಪತಿ ಕೆ.ಬಿ.ಗುಡಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಆವರಣದಲ್ಲಿ 128 ವಿವಿಧ ಪಕ್ಷಿಗಳು ಇರುವುದನ್ನು ಗುರುತಿಸಲಾಗಿದೆ. ಬೇಸಿಗೆಯ ಬಿರು ಬಿಸಿಲಿನಿಂದ ಬಳಲುತ್ತಿರುವ ಪಕ್ಷಿಗಳಿಗೆ ಧಾನ್ಯ ಹಾಗೂ ನೀರುಣಿಸುವ ಕಾರ್ಯಕ್ಕೆ …
Read More »ಹನುಮಾನ್ ಚಾಲೀಸ ಪಠಣಕ್ಕೆ ನಿರ್ಬಂಧ ಇದೆಯೇ?: ಪ್ರಲ್ಹಾದ ಜೋಶಿ
ಹುಬ್ಬಳ್ಳಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಜ್ಯವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆ’ ಎಂದು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಆರೋಪಿಸಿದರು. ಬೆಂಗಳೂರಿನ ನಗರ್ತಪೇಟೆಯಲ್ಲಿ ಅಂಗಡಿಯಲ್ಲಿ ಹನುಮಾನ್ ಚಾಲೀಸ ಹಾಕಿದ್ದಕ್ಕೆ ಹಲ್ಲೆಗೊಳಗಾಗಿದ್ದ ವ್ಯಕ್ತಿಯ ಮೇಲೆ ಎಫ್ಐಆರ್ ದಾಖಲಿಸಿದ್ದಕ್ಕೆ ಭಾನುವಾರ ಇಲ್ಲಿ ಪ್ರತಿಕ್ರಿಯಿಸಿದ ಅವರು, ‘ನಿಮ್ಮ ತುಷ್ಟೀಕರಣದ ರಾಜ್ಯದಲ್ಲಿ ಹನುಮಾನ್ ಚಾಲೀಸ ಪಠಣ ಮಾಡಲು ನಿರ್ಬಂಧ ಇದೆಯೇ? ಇದು ಖಂಡನೀಯ. ಕೂಡಲೇ ಪ್ರಕರಣ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು. …
Read More »ನಿರ್ವಹಣೆ ಕೊರತೆ: ಪಾಳುಬಿದ್ದ 150ಕ್ಕೂ ಹೆಚ್ಚು ಗರಡಿಮನೆ
ಹುಬ್ಬಳ್ಳಿ: ‘ಧಾರವಾಡದ ಪೈಲ್ವಾನ್ರ ಅಂದ್ರ ಹಗರಂತ ಮಾಡಿದ್ರೇನ..? ಕೊಲ್ಹಾಪುರ, ಪುಣಾ, ಬಾಂಬೆ.. ಹಿಂಗ ಎಲ್ಲಿಗೇ ಕುಸ್ತಿ ಆಡಾಕ ಹೋದ್ರ ಕಣದಾಗ ನಂಬರ್ ಹಚ್ಚಲಾರದ ಬರ್ತಿರಲಿಲ್ಲ. ಕುಸ್ತಿಗಿ ರಾಜ್ಯದಾಗ ಧಾರವಾಡ ಜಿಲ್ಲಾ ಹೆಸರಾಗಿತ್ತ.. ಆದ್ರ ಈಗ ಹಂಗ ಉಳಿದಿಲ್ಲರೀ’…! ಹೀಗೆ ನೋವಿನಿಂದ ಹೇಳುತ್ತಾರೆ ಕುಸ್ತಿ ಪೈಲ್ವಾನರು. ನಿರ್ವಹಣೆ ಕೊರತೆಯಿಂದ ಪಾಳು ಬಿದ್ದು ಇತಿಹಾಸದ ಪುಟ ಸೇರುತ್ತಿರುವ ಗರಡಿ ಮನೆಗಳೇ ಇದಕ್ಕೆ ಕಾರಣ ಎಂಬುದು ಅವರ ಬೇಸರ. ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ಮನೆಗೊಬ್ಬರು …
Read More »ಪಕ್ಷೇತರ ಅಭ್ಯರ್ಥಿಯಾಗಿ ದಿಂಗಾಲೇಶ್ವರ ಶ್ರೀ ಕಣಕ್ಕೆ:
ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ನಿರ್ಧರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸೋಮವಾರ ಈ ವಿಷಯ ತಿಳಿಸಿದ ಅವರು, ‘ಎರಡೂ ರಾಷ್ಟ್ರೀಯ ಪಕ್ಷಗಳು ಎಲೆಕ್ಷನ್ ಫಿಕ್ಸಿಂಗ್ ಮಾಡಿಕೊಂಡಿವೆ ಎಂದು ಜನರು ಮಾತನಾಡುತ್ತಿದ್ದಾರೆ. ಇದು ಮತದಾರರಿಗೆ ಮಾಡುವ ಮೋಸ’ ಎಂದರು. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ಪ್ರಲ್ಹಾದ ಜೋಶಿ ವಿರುದ್ಧ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. …
Read More »ಬತ್ತಿದ ಜೀವನದಿ; ಹೆಚ್ಚಿದ ದುಗುಡ
ಚಿಕ್ಕೋಡಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯಲ್ಲಿ ನೀರಿನ ಪ್ರಮಾಣ ತೀವ್ರ ಕುಸಿತ ಕಂಡಿದೆ. ಇದರಿಂದ ಮನುಷ್ಯರು ಮಾತ್ರವಲ್ಲ; ಜಲಚರಗಳಿಗೂ ಆತಂಕ ಎದುರಾಗಿದೆ. ಚಿಕ್ಕೋಡಿ ಉಪವಿಭಾಗದ ಎಲ್ಲ ಪ್ರದೇಶಗಳಲ್ಲೂ ಕುಡಿಯುವ ನೀರಿಗೆ, ಬಳಕೆಗೆ, ಹೊಲ- ಗದ್ದೆಗಳಿಗೆ, ಜಾನುವಾರುಗಳಿಗೂ ಸಂಕಷ್ಟ ಎದುರಾಗಿದೆ. ಚಿಕ್ಕೋಡಿ, ರಾಯಬಾಗ, ಕಾಗವಾಡ, ಅಥಣಿ ತಾಲ್ಲೂಕು ವ್ಯಾಪ್ತಿಯ ನೂರಾರು ಗ್ರಾಮಗಳು ಕೃಷ್ಣಾ ನದಿಯನ್ನು ಅವಲಂಬಿಸಿವೆ. ಉಪ ವಿಭಾಗ ವ್ಯಾಪ್ತಿಯಲ್ಲಿ 10 ಸಣ್ಣ ಪುಟ್ಟ ಬ್ಯಾರೇಜ್ಗಳಿದ್ದು, ಇನ್ನು 10 ದಿನಗಳಲ್ಲಿ ಬ್ಯಾರೇಜ್ನಲ್ಲಿ ಸಂಗ್ರಹವಾಗಿರುವ …
Read More »ಹಿರೇಬಾಗೇವಾಡಿ: 25 ವರ್ಷಗಳ ಬಳಿಕ ನಡೆಯುತ್ತಿರುವ ಗ್ರಾಮದೇವಿ ಜಾತ್ರೆ
ಹಿರೇಬಾಗೇವಾಡಿ: 25 ವರ್ಷಗಳ ನಂತರ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಗೆ ಹಿರೇಬಾಗೇವಾಡಿ ಸಜ್ಜಾಗುತ್ತಿದ್ದು, ಊರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. 1998ರ ಮೇ ತಿಂಗಳಲ್ಲಿ ಹಿರೇಬಾಗೇವಾಡಿಯಲ್ಲಿ ಜಾತ್ರೆ ನಡೆದಿತ್ತು. ಈ ಬಾರಿ ಏಪ್ರಿಲ್ 12ರಿಂದ ಮೇ 3ರವರೆಗೆ ಜಾತ್ರೆ ನಡೆಯಲಿದ್ದು, 21 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾತ್ರೆ ಪ್ರಯುಕ್ತ, ಗ್ರಾಮಸ್ಥರು ತಮ್ಮ ಮನೆಗಳಿಗೆ ಸುಣ್ಣ-ಬಣ್ಣ ಬಳಿದು ಅಲಂಕರಿಸುತ್ತಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡವರು, ತ್ವರಿತವಾಗಿ ಮುಗಿಸುವುದರಲ್ಲಿ ನಿರತವಾಗಿದ್ದಾರೆ. ಇನ್ನೂ ಕೆಲವರು …
Read More »ಯುಗಾದಿ ಬಳಿಕ ರಾಜ್ಯದಲ್ಲಿ ಒಳ್ಳೆ ಬೆಳೆ, ಮಳೆಯಾಗುತ್ತೆ ; ಕೋಡಿಮಠ ಶ್ರೀ ಭವಿಷ್ಯ
ಬೆಂಗಳೂರು: ರಾಜ್ಯದ ಬಗ್ಗೆ ಈ ಹಿಂದೆ ಅನೇಕ ರೀತಿಯ ಭವಿಷ್ಯವನ್ನು ಕೋಡಿಮಠದ ಶ್ರೀಗಳು ಹೇಳಿದ್ದರು. ಇದೀಗ ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ್ದಾರೆ. ಅದೇ ಯುಗಾದಿ ನಂತ್ರ ಒಳ್ಳೆಯ ಮಳೆಯಾಗಿ ಬೆಳೆ ಬಂದ್ರೇ, ಧಾರ್ಮಿಕ ಮುಖಂಡನ ಸಾವು ಕೂಡ ಆಗಲಿದೆ ಎಂಬುದಾಗಿದೆ. ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆ ಬೆಳೆ ಮತ್ತು ಮಳೆಯಾಗುವ ಲಕ್ಷಣಗಳಿವೆ ಎಂದು ಭವಿಷ್ಯ ನುಡಿದರು. ಇನ್ನು ಇದೇ ವೇಳೆ ರಾಜ್ಯ ರಾಜಕೀಯ ಬಗ್ಗೆ ಯುಗಾದಿ ಕಳೆದ ನಂತರ …
Read More »ಸಿಎಂ ತವರಿನಲ್ಲೇ ಚುನಾವಣಾ ಬಹಿಷ್ಕಾರ
ಮೈಸೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವೆ ಎಂದು ಪಣತೊಟ್ಟಿರುವ ಸಿಎಂ ಸಿದ್ದರಾಮಯ್ಯಗೆ ಇದೀಗ ಭಾರೀ ಮುಖಭಂಗ ಉಂಟಾಗಿದ್ದು, ನಮಗೆ ಚುನಾವಣೆಯೇ ಬೇಡ, ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸುನಿಲ್ ಬೋಸ್ ಪರ ಮತ ಕೇಳಲು ಹೋದ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು, ಹೋಗಿ ಹೋಗಿ ನಾವು …
Read More »ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ
ಪ್ರಧಾನಿ ಮೋದಿಯವರಿಂದಾಗಿ ಭಾರತಕ್ಕೆ ವಿಶ್ವ ಮನ್ನಣೆ ಮೋದಿಯವರನ್ನು ಸೋಲಿಸಲು ನಮ್ಮ ವಿರೋಧಿಗಳಿಗೆ ಶತ್ರು ರಾಷ್ಟ್ರಗಳ ಬೆಂಬಲ- ಎನ್ಡಿಎ ಅಭ್ಯರ್ಥಿ ಜಗದೀಶ್ ಶೆಟ್ಟರ್ ನಾಗನೂರ ಪಟ್ಟಣದಲ್ಲಿ ಅರಭಾವಿ ಮತಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಶೆಟ್ಟರ್ ಶೆಟ್ಟರ್ ಅವರಿಗೆ ಸಾಥ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸತ್ ಸದಸ್ಯೆ ಮಂಗಲ ಅಂಗಡಿ ಮೂಡಲಗಿ: ವಿಶ್ವನಾಯಕನಾಗಿರುವ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಠಿ ಆಡಳಿತದಿಂದ ಭಾರತವು ಪ್ರಪಂಚದಲ್ಲಿಯೇ ಬಲಾಢ್ಯ ರಾಷ್ಟ್ರವಾಗುತ್ತಿದ್ದು, ಕ್ಷಿಪ್ರಗತಿಯಲ್ಲಿ ಸಾಗುತ್ತಿರುವ …
Read More »