Breaking News

Monthly Archives: ಏಪ್ರಿಲ್ 2024

ರೈತರ ಸಾಲ ಮನ್ನಾ ಮಾಡಲು ಕೇಂದ್ರದ ಅನುದಾನ ಬೇಕಿಲ್ಲ: ಬಂಡೆಪ್ಪ ಕಾಶೆಂಪುರ

ಬೆಳಗಾವಿ: ‘ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪ್ರಕಟಿಸಿದ 25 ಗ್ಯಾರಂಟಿಗಳಲ್ಲಿ ‘ರೈತರ ಸಾಲ ಮನ್ನಾ’ ಕೂಡ ಸೇರಿಸಲಾಗಿದೆ. ನಿಮಗೆ ನಿಜವಾಗಿ ರೈತರ ಬಗ್ಗೆ ಕಾಳಜಿ ಇದ್ದರೆ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ರೈತರ ಸಾಲ ಮನ್ನಾ ಮಾಡಬಹುದಿತ್ತು ಅಲ್ಲವೇ?’ ಎಂದು ಜೆಡಿಎಸ್‌ ರಾಷ್ಟ್ರೀಯ ಕೋರ್‌ ಸಮಿತಿ ಸದಸ್ಯ ಬಂಡೆಪ್ಪ ಕಾಶೆಂಪುರ ಟೀಕಿಸಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು, ‘ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ವೇಳೆ, ರೈತರ ಸಾಲ ಮನ್ನಾ ಮಾಡಿದ್ದರು. ರಾಜ್ಯ …

Read More »

ಬಿಜೆಪಿ ಟೀಕಿಸಲು ಕಾಂಗ್ರೆಸ್‌ ಬಳಿ ವಿಷಯವಿಲ್ಲ: ಜಗದೀಶ ಶೆಟ್ಟರ್‌

ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಟೀಕಿಸಲು ಕಾಂಗ್ರೆಸ್‌ನವರ ಬಳಿ ಅಸ್ತ್ರವಿಲ್ಲ. ಹಾಗಾಗಿ ನನ್ನನ್ನೇ ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ. ಆದರೆ, ಬೆಳಗಾವಿ ಕ್ಷೇತ್ರದಲ್ಲಿನ ವಿವಿಧ ಭಾಷಿಕರು ಬಿಜೆಪಿ ಬೆಂಬಲಿಸುತ್ತಿದ್ದಾರೆ’ ಎಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಜಗದೀಶ ಶೆಟ್ಟರ್‌ ಹೇಳಿದರು.   ಇಲ್ಲಿನ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿರುವ ಸ್ಥಳವನ್ನು ಶುಕ್ರವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ‘ಇದು …

Read More »

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!

ಅನಾರೋಗ್ಯದ ನಡುವೆಯೂ ಆಸ್ಪತ್ರೆಯಿಂದ ಬಂದು ಮತ ಚಲಾಯಿಸಿದ ಇನ್ಫೋಸಿಸ್ ಎನ್. ಆರ್. ನಾರಾಯಣ ಮೂರ್ತಿ!   ಬೆಂಗಳೂರು: ಇನ್ಫೋಸಿಸ್ ಸಂಸ್ಥೆಯ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ . ಅವರು ತಮ್ಮ ಪತ್ನಿ ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿ ಅವರ ಜೊತೆಗೆ ಮತದಾನ ಮಾಡಿದ್ದಾರೆ.77 ವರ್ಷ ವಯಸ್ಸಿನ ಐಟಿ ದಿಗ್ಗಜ ನಾರಾಯಣ ಮೂರ್ತಿ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. …

Read More »

ನೇಹಾ ಕುಟುಂಬಸ್ಥರಿಗೆ ಭದ್ರತೆ, ನಿರಂಜನ್ ಹಿರೇಮಠ್‌ಗೆ ಅಂಗರಕ್ಷಕರ ನಿಯೋಜನೆ

ಹುಬ್ಬಳ್ಳಿ: ನೇಹಾ ಹಿರೇಮಠ್ ಹತ್ಯೆ ಪ್ರಕರಣದ (Neha Hiremath Murder Case) ತನಿಖೆ ಚುರುಕುಗೊಂಡಿದೆ. ಈಗಾಗಲೇ ಸಿಐಡಿ (CID) ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಆರೋಪಿ ಫಯಾಜ್‌ (Fayaz) ವಿಚಾರಣೆ ನಡೆಸಿದ್ದಾರೆ. ಈ ನಡುವೆ ನೇಹಾ ಕುಟುಂಬಕ್ಕೆ ಸರ್ಕಾರದಿಂದ ಭದ್ರತೆ ನೀಡಲಾಗಿದೆ. ನಿನ್ನೆ ಸಿಎಂ ಸಿದ್ದರಾಮಯ್ಯ (CM Siddaramaiah) ಭೇಟಿ ನೀಡಿದ್ದ ಸಂದರ್ಭದಲ್ಲಿ ತಮಗೆ, ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಇದೆ. ಹೀಗಾಗಿ ತಮಗೆ ಭದ್ರತೆ ಬೇಕು ಅಂತ ನೇಹಾ ತಂದೆ …

Read More »

ಪೊಲೀಸರು-ಗ್ರಾಮಸ್ಥ’ರ ನಡುವೆ ಗಲಾಟೆ: ‘ಮತ ಯಂತ್ರ’ ಪೀಸ್‌ ಪೀಸ್‌

ಚಾಮರಾಜನಗರ: ಜಿಲ್ಲೆಯ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ. ಯಾವುದೇ ಮೂಲ ಸೌಕರ್ಯವಿಲ್ಲವೆಂದು ರೊಚ್ಚಿಗೆದ್ದ ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆ ಮೇಲೆ ದಾಳಿ ಮಾಡಿ ಮತಯಂತ್ರಗಳನ್ನು ಪೀಸ್ ಪೀಸ್ ಮಾಡಿದ್ದಾರೆ.   ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು …

Read More »

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ;C.M.

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ವಿಜಯಪುರ: ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ವಿಜಯಪುರ ನಗರ ದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ -02 ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ತಮ್ಮ ಪಕ್ಷದ ಅಭ್ಯರ್ಥಿಯಾದ ರಾಜು ಹಲಗೂರು ರವರ ಪರವಾಗಿ ಮಾತಾಯಾಚನೆ ಮಾಡಿ ನಂತರ ಮತದಾರರನ್ನು …

Read More »

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಜೋಶಿ

ಹುಬ್ಬಳ್ಳಿ : ಮುಸ್ಲಿಂ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಅವರು ನಿಸ್ಸೀಮರು. ಅವರು ಬಂದ ನಂತರ ಪತ್ರ ಬರೆದಿದ್ದಾರೆ. ಸಂವಿಧಾನದಲ್ಲಿ ಎಲ್ಲಿಯೂ ಧರ್ಮಧರಿತ ಮೀಸಲಾತಿಯಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಹೇಳಿ SC ST OBC ಮೀಸಲಾತಿ ಕಬಳಿಸಿ ಅವರ ವೋಟ್ ಬ್ಯಾಂಕ್ ಗೆ ಕೊಡತೀದಾರೆ. ಇದು ಅತ್ಯಂತ ಅಪಾಯಕಾರಿ. ದೇಶದ ಸಂವಿಧಾನದಲ್ಲಿ ಎಲ್ಲು …

Read More »

ಚಿಕ್ಕಮಗಳೂರು. ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ.

ಚಿಕ್ಕಮಗಳೂರು: ವಿದೇಶದಿಂದ ಬಂದು ದಂಪತಿಗಳು ಮತದಾನ ಮಾಡುವ ಮೂಲಕ‌ ತಮ್ಮ ಹಕ್ಕು ಚಲಾಯಿಸಿದರು. ಕಡೂರು ತಾಲೂಕು ಪಂಚೇನಹಳ್ಳಿಯ ಸಾಫ್ಟ್‌ವೇರ್ ಇಂಜಿನಿಯರ್ ಮಧು ಮತ್ತು ಅವರ ಪತ್ನಿ ಪಿಳ್ಳೇನಹಳ್ಳಿಯ ತನುಶ್ರೀ ಅವರು ದುಬೈನಲ್ಲಿ ವಾಸವಾಗಿದ್ದು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ದೂರದ ದುಬೈನಿಂದ ಬಂದು ಮತ ಚಲಾಯಿಸಿದ್ದಾರೆ. ದುಬೈನಲ್ಲಿ ಮಧು ಸಾಫ್ಟ್ ವೇರ್ ಇಂಜಿನಿಯರ್ ವೃತ್ತಿಯಲ್ಲಿದ್ದು ಪತ್ನಿ ತನುಶ್ರೀ ಗೃಹಿಣಿಯಾಗಿ ದ್ದಾರೆ. ಮಧು ತನ್ನ ಊರಾದ ಪಂಚೇನಹಳ್ಳಿಯಲ್ಲಿನ ಮತಗಟ್ಟೆಯಲ್ಲಿ‌ ಮತ ಚಲಾಯಿಸಿದರು. ಪತ್ನಿ ತನುಶ್ರೀ …

Read More »

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ ಉಡುಪಿ: ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಟ ರಕ್ಷಿತ್ ಶೆಟ್ಟಿ ಮತದಾನ ಮಾಡಿದರು. ಬೆಂಗಳೂರಿನಲ್ಲಿದ್ದ ನಟ ರಕ್ಷಿತ್ ಶೆಟ್ಟಿ ಮತದಾನಕ್ಕಾಗಿ ಉಡುಪಿಯ ಕುಕ್ಕಿಕಟ್ಟೆಗೆ ಬಂದು ತಂದೆ ಶ್ರೀಧರ್ ಶೆಟ್ಟಿ, ತಾಯಿ ರಂಜನಿ ಶೆಟ್ಟಿ ಅವರೊಂದಿಗೆ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ವೇಳೆ ಮಾತನಾಡಿದ ಅವರು ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಅರಿವು ಮೂಡಿಸಿದರು.

Read More »

ಹೊರಬಂದು ಮತ ಹಾಕಿ : ನಿರ್ಮಲಾ ಸೀತಾರಾಮನ್‌ ಮನವಿ

ಬೆಂಗಳೂರು,ಏ.26- ಪ್ಲೀಸ್‌ ಮನೆಯಿಂದ ಹೊರಗೆ ಬಂದು ಮತ ಚಲಾಯಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮನವಿ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಜಯನಗರದ ಮತಗಟ್ಟೆಯಲ್ಲಿ ಮತದಾನ ಮಾಡಿದ ಬಳಿಕ ಮಾತನಾಡಿದ ಅವರು, ಜನರು ಸ್ಥಿರತೆಯನ್ನು ಬಯಸುತ್ತಿದ್ದಾರೆ. ಭಾರತ ಅಭಿವೃದ್ಧಿ ಕಾಣಲು ಬಯಸುತ್ತಿದ್ದಾರೆ. 10 ವರ್ಷದ ಕೇಂದ್ರ ಸರ್ಕಾರದ ಸಾಧನೆ ಜನರ ಮನಸ್ಸಿನಲ್ಲಿದೆ. ಮತದಾನದಲ್ಲಿ ಜನರ ಉತ್ಸಾಹ ನೋಡಬಹುದು ಎಂದರು. ಮುಖವಾಗಿ ಹಿರಿಯ ನಾಗರಿಕರು ಕ್ಯೂನಲ್ಲಿ ನಿಂತು ಮತದಾನ …

Read More »