ಹುಬ್ಬಳ್ಳಿ: ಬಿರು ಬಿಸಿಲಿನಿಂದ ಎಲ್ಲೆಡೆ ಜಲಮೂಲಗಳು ಬತ್ತಿದ್ದು, ಪ್ರಾಣಿ ಪಕ್ಷಿಗಳು ಹನಿ ನೀರಿಗೂ ಪರದಾಡುವಂತಾಗಿದೆ. ಧಾರವಾಡದ ವೈಲ್ಡ್ಲೈಫ್ ವೆಲ್ಫೇರ್ ಸೊಸೈಟಿಯ ಸದಸ್ಯರು ಸ್ವಂತ ಖರ್ಚಿನಲ್ಲಿ ಕಾಡಿನಲ್ಲಿ ನೀರಿನ ವ್ಯವಸ್ಥೆ ಮಾಡಿ, ಪ್ರಾಣಿಪಕ್ಷಿಗಳಿಗೆ ನೀರಿನ ದಾಹ ನೀಗಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ‘ಧಾರವಾಡ ತಾಲ್ಲೂಕಿನ ಹೊಲ್ತಿಕೋಟಿ, →ಬಣದೂರು ಚೆಕ್ಪೋಸ್ಟ್, ಮಾವಿನಕೊಪ್ಪದ ಕಾಡಿನ 5 ಕಡೆ ಒಂದೂವರೆ ತಿಂಗಳಿನಿಂದ ನೀರು ಪೂರೈಸುತ್ತಿದ್ದೇವೆ. 8 ಅಡಿ ಅಗಲ, 6 ಅಡಿ ಉದ್ದ, 2 ಅಡಿ ಆಳದ ಗುಂಡಿ …
Read More »Daily Archives: ಮೇ 9, 2024
ಸಿದ್ಧಾರೂಢ ಮಿಷನ್ಗೆ ಬೆಳ್ಳಿ
ಹುಬ್ಬಳ್ಳಿ: 1998 ರಲ್ಲಿ ಹುಬ್ಬಳ್ಳಿಯಲ್ಲಿ ಅಸ್ತಿತ್ವಕ್ಕೆ ಬಂದ ಬೆಂಗಳೂರು ದಕ್ಷಿಣ ತಾಲ್ಲೂಕಿನ ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಇದೇ ಮೇ 10 ರಿಂದ 12 ರ ವರೆಗೆ 25 ನೇ ವರ್ಷದ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಶಾಂಡಿಲ್ಯಾಶ್ರಮದ ಚಂದ್ರಶೇಖರ್ ಸ್ವಾಮಿಗಳಿಂದ ಉದ್ಘಾಟನೆಗೊಂಡು ರಾಮೋಹಳ್ಳಿಯಲ್ಲಿ ನೆಲೆಯೂರಿದ ಈ ಸಂಸ್ಥೆ ಹಲವು ಸಾಧನೆ ಮಾಡುವಲ್ಲಿ ಯಶಸ್ವಿಯಾಗಿದೆ. ಇದರ ಸಂಸ್ಥಾಪಕ ಅಂದಿನ ವಿದ್ವಾನ್ ಎಸ್. ಪ್ರಭುಲಿಂಗದೇವರು ಇಂದು ಡಾ. ಆರೂಢಭಾರತೀ ಸ್ವಾಮೀಜಿ. 2001 …
Read More »ಅಳ್ನಾವರ: 12 ರಂದು ನಿಕಾಲಿ ಕುಸ್ತಿ ಪಂದ್ಯಾವಳಿ
ಅಳ್ನಾವರ: ಗ್ರಾಮದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಟ್ಟಣದಲ್ಲಿ ಮೇ 12ರಂದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಮುಕ್ತ ನಿಕಾಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಆಯೋಜಕ ರಾಜು ಪೆಜೋಳ್ಳಿ ತಿಳಿಸಿದ್ದಾರೆ. ಕಳೆದ ವರ್ಷ ಕೂಡಾ ಬೃಹತ್ ಕುಸ್ತಿ ಪಂದ್ಯಾವಳಿ ಆಯೋಜಿಸಿ ಇಲ್ಲಿನ ಕುಸ್ತಿ ಆಸಕ್ತರ ಮನ ತಣಿಸಿದ ಪೆಜೋಳ್ಳಿ ಅವರು, ಈ ಬಾರಿ ದೊಡ್ಡ ಮಟ್ಟದ ಪಂದ್ಯಾವಳಿ ಹಮ್ಮಿಕೊಂಡಿದ್ದಾರೆ. ಭಾರತೀಯ ಭೂ ಸೇನೆಯ ಯೋಧರಾದ ಇವರು ದೇಶ …
Read More »ಹುಬ್ಬಳ್ಳಿ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ಗೆ ಶ್ರೀನಯಾ ಸೇರ್ಪಡೆ
ಹುಬ್ಬಳ್ಳಿ: ಇಲ್ಲಿನ ಬಾಲಕಿ ಶ್ರೀನಯಾ ಹೊಂಗಲ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸೇರ್ಪಡೆಯಾಗಿದೆ. 4 ರಿಂದ 7 ವರ್ಷದ ಮಕ್ಕಳ ವಿಭಾಗದಲ್ಲಿ 13 ಪ್ರಾಣಿಗಳು, 9 ಸಾಮಾಜಿಕ ವ್ಯಕ್ತಿಗಳು, ಮಾನವ ದೇಹದ 11 ಅಂಗಾಂಗಗಳು, 12 ಕನ್ನಡ ಅಕ್ಷರ ಹಾಗೂ ಪದಗಳು, 5 ಶ್ಲೋಕಗಳು, ಮೂರು ಅಕ್ಷರದ 29 ಪದಗಳನ್ನು ಮತ್ತು 5 ಲೆಕ್ಕಗಳನ್ನು ಬಿಡಿಸುವ ಮೂಲಕ ಸಾಧನೆ ಮಾಡಿದ್ದಾಳೆ. ವಿದ್ಯಾನಗರದ ಕೆಎಲ್ಇ ಬ್ಯಾನಿಯನ್ ಶಾಲೆಯ ವಿದ್ಯಾರ್ಥಿನಿಯಾಗಿರುವ ಶ್ರೀನಯಾ, ಶ್ರೀಧರ …
Read More »ಒಣಮೇವು ಸಾಗಿಸುತ್ತಿದ್ದ ಟ್ರ್ಯಾಕ್ಟರ್ಗಳಿಗೆ ಬೆಂಕಿ
ಬೈಲಹೊಂಗಲ: ತಾಲ್ಲೂಕಿನ ಹಿಟ್ಟಣಗಿ ಗ್ರಾಮದಿಂದ ಮೇವು ಹೊತ್ತುಕೊಂಡು ಇಂಚಲ ರಸ್ತೆ ಮಾರ್ಗವಾಗಿ ರಾಯಬಾಗ ಕಡೆ ಗೋವಿನಜೋಳದ ಒಣಮೇವು ಸಾಗಿಸುತ್ತಿದ್ದ ಮೂರು ಟ್ರ್ಯಾಕ್ಟರ್ಗಳಿಗೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿದ ಪರಿಣಾಮ ಲಕ್ಷಾಂತರ ಮೌಲ್ಯದ ಒಣಮೇವು ಸುಟ್ಟು ಕರಕಲಾದ ಘಟನೆ ಇಂಚಲ ರಸ್ತೆಯ ಹತ್ತಿರ ಬುಧವಾರ ಘಟನೆ ಸಂಭವಿಸಿದೆ. ಸುದ್ದಿ ತಿಳಿದು ತಕ್ಷಣ ಅಗ್ನಿಶಾಮಕ ಠಾಣಾಧಿಕಾರಿ ತಿಪ್ಪಣ್ಣಾ ನಾವದಗಿ ನೇತೃತ್ವದ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು 3 ಗಂಟೆಗಳ ಕಾಲ …
Read More »ನಾವು ಒಬ್ಬರ ಮೇಲೊಬ್ಬರು ಇದ್ದೇವು; ಈ ರೀತಿಯ ರೋಮ್ಯಾನ್ಸ್ ಮಾಡಿದ್ದು ಮೊದಲು: ನಟಿ ಶ್ರುತಿ ಶರ್ಮಾಗೆ ದದ್ದುಗಳಾಗಿದ್ದೇಕೆ?
ನವದೆಹಲಿ: ಹೀರಾಮಂಡಿ ನಟಿ ಶ್ರುತಿ ಶರ್ಮಾ ಅವರು ನೆಟ್ಫ್ಲಿಕ್ಸ್ ಸರಣಿಯಲ್ಲಿನ ಪಾತ್ರಕ್ಕಾಗಿ ಹೇರಳವಾದ ಪ್ರೀತಿ ಮತ್ತು ಮೆಚ್ಚುಗೆಯನ್ನು ಪಡೆಯುತ್ತಿದ್ದಾರೆ. ಸೈಮಾ ಪಾತ್ರದಲ್ಲಿ ಅವರ ಅಭಿನಯಕ್ಕೆ ವಿವಿಧ ವಲಯಗಳಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಸೈಮಾ ಅವರು ಶಾಹಿ ಮಹಲ್ನ ಅಡಿಗೆಮನೆಗಳಲ್ಲಿ ಕೆಲಸ ಮಾಡುತ್ತಾರೆ ಮತ್ತು ಪ್ರದರ್ಶನದಲ್ಲಿ ಅಲಂಜೇಬ್ನ ವಿಶ್ವಾಸಾರ್ಹ ವಿಶ್ವಾಸಿಗಳಲ್ಲಿ ಒಬ್ಬರಾಗಿ ಕಾರ್ಯನಿರ್ವಹಿಸುತ್ತಾರೆ.ಪ್ರದರ್ಶನದಲ್ಲಿ, ಸೈಮಾ (ಶ್ರುತಿ ಶರ್ಮಾ) ಮಲ್ಲಿಕಾಜಾನ್ನ ಡ್ರೈವರ್ ಇಕ್ಬಾಲ್ (ರಜತ್ ಕೌಲ್ ನಿರ್ವಹಿಸಿದ್ದಾರೆ) ಜತೆಗೆ ಪ್ರಣಯ ಸಂಬಂಧದಲ್ಲಿದ್ದಾರೆ. ಎಂಟರ್ಟೈನ್ಮೆಂಟ್ ಲೈವ್ಗೆ …
Read More »ಮಾಲಕರ ತರಾಟೆಯ ಬಳಿಕ ಲಕ್ನೋ ತಂಡದ ನಾಯಕತ್ವ ತೊರೆದ ರಾಹುಲ್?
ಹೈದರಾಬಾದ್: ಕಳೆದ ಎರಡು ಸೀಸನ್ ಗಳಲ್ಲಿ ಪ್ಲೇ ಆಫ್ ತಲುಪಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿಯ ಐಪಿಎಲ್ ನಲ್ಲಿ ಪ್ಲೇ ಆಫ್ ರೇಸ್ ನಿಂದ ದೂರ ದೂರ ಸಾಗುತ್ತಿದೆ. ಸೀಸನ್ ಕೊನೆಯಾಗುತ್ತಿದ್ದಂತೆ ಎಲ್ಎಸ್ ಜಿ ತಂಡವು ಹೀನಾಯವಾಗಿ ಸೋಲುತ್ತಿದೆ. ಬುಧವಾರ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಅತ್ಯಂತ ಹೀನಾಯವಾಗಿ ಸೋಲುಕಂಡ ಲಕ್ನೋ ಪ್ಲೇ ಆಫ್ ರೇಸ್ ನಿಂದ ಮತ್ತಷ್ಟು ದೂರ ಸಾಗಿದೆ. ಹೈದರಾಬಾದ್ ವಿರುದ್ಧದ ಪಂದ್ಯದ …
Read More »ದೇಶ ಆಳಿದ ಕುಟುಂಬ ಸದಸ್ಯನ ದುಷ್ಕೃತ್ಯ ಬೇಸರ ತರಿಸಿದೆ’: ಕೆ.ಎಂ.ಶಿವಲಿಂಗೇಗೌಡ
ಹಾಸನ: ದೇಶ ಆಳಿದ ಕುಟುಂಬ ಸದಸ್ಯನಿಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ದುಷ್ಕೃತ್ಯ ನಡೆದಿರುವುದು ನಮಗೂ ಬೇಸರ ತರಿಸಿದೆ ಎಂದು ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಹಾಗೂ ಅಶ್ಲೀಲ ವಿಡಿಯೋಗಳಿರುವ ಪೆನ್ಡ್ರೈವ್ ಹಂಚಿಕೆ ಆರೋಪ ಸಂಬಂಧ ತನಿಖೆ ನಡೆಸುತ್ತಿರುವ ಎಸ್ಐಟಿ ಹಾಗೂ ರಾಜ್ಯ ಸರ್ಕಾರದ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕೆ, ಆರೋಪ ಹೊರಿಸುವುದನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಗೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಸಿದರು. …
Read More »ಪೆನ್ಡ್ರೈವ್ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್ಗೆ ಪತ್ರ
ಗದಗ: ಪೆನ್ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯಗಳನ್ನು ವಿಚಾರಣೆ ದಿನಗಳಂದು ಯುವಜನ ಮತ್ತು ಕ್ರೀಡಾ ಇಲಾಖೆಯ ಗುರುನಾನಕ ಭವನಕ್ಕೆ ಸ್ಥಳಾಂತರಿಸಲು ಹೈಕೋರ್ಟ್ ರಿಜಿಸ್ಟ್ರಾರ್ಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂ ಧಿಸಿದಂತೆ ಈಗಾಗಲೇ ಎಸ್ಐಟಿ ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ. ಕೋವಿಡ್ ಕಾಲದಲ್ಲಿ ಕ್ರಿಮಿನಲ್ ಪ್ರಕರಣ ಸೇರಿ ವಿವಿಧ ಪ್ರಕರಣಗಳ ಪ್ರತ್ಯೇಕ ವಿಚಾರಣೆ ನಡೆಸಿದ ಮಾದರಿಯಲ್ಲೇ ಪೆನ್ಡ್ರೈವ್ …
Read More »ಉದ್ಯೋಗ ಅರಸಿ ಬಂದಿದ್ದ ಕಲಬುರಗಿಯ ಯುವಕ ಆತ್ಮಹತ್ಯೆ
ಮಹದೇವಪುರ: ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ಕಲಬುರಗಿ ಮೂಲದ ಯುವಕನೊರ್ವ ಬಿಲ್ಡಿಂಗ್ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬೇಡ್ಕರ್ ನಗರ ಗುಟ್ಟದಲ್ಲಿ ಜರುಗಿದೆ. ಜೇವರ್ಗಿ ಬುಟ್ನಾಳ್ ನ ಅರುಣ್ ಕುಮಾರ್ (28)ಆತ್ಮಹತ್ಯೆ ಮಾಡಿಕೊಂಡ ಯುವಕ. ಇಂಜಿನಿಯರಿಂಗ್ ಪದವಿ ಪೂರೈಸಿರುವ ಅರುಣ್ ಉದ್ಯೋಗ ಆರಸಿ ಮೂರು ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ. ವೈಟ್ ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದ ಗುಟ್ಟದಲ್ಲಿರುವ ಪಿಜಿ ಯಲ್ಲಿ ತನ್ನ …
Read More »