Breaking News

Daily Archives: ಮೇ 14, 2024

ಚಿಕ್ಕೋಡಿ | ಬೆಟ್ಟಿಂಗ್‌: ಹೊಡೆದಾಡಿಕೊಂಡ ಕಾರ್ಯಕರ್ತರು

ಚಿಕ್ಕೋಡಿ: ಲೋಕಸಭೆಗೆ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ ಎಂಬ ಕುರಿತು ಕಾಂಗ್ರೆಸ್‌ ಹಾಗೂ ಬಿಜೆಪಿ ಕಾರ್ಯಕರ್ತರಲ್ಲಿ ಬೆಟ್ಟಿಂಗ್ ಅವ್ಯಾಹತವಾಗಿ ನಡೆದಿದೆ. ಪಟ್ಟಣದ ಮದ್ಯದ ಅಂಗಡಿ ಎದುರು ಸೋಮವಾರ ಇಬ್ಬರು ಕಾರ್ಯಕರ್ತರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿದ್ದಾರೆ.ಇದರ ವಿಡಿಯೊ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.   ಈ ಬಾರಿ ಕಾಂಗ್ರೆಸ್‌ನ ಹಾಗೂ ಬಿಜೆಪಿಯ  ಮಧ್ಯೆ ನೇರ ಸ್ಪರ್ಧೆ ಏರ್ಪಟ್ಟಿದೆ. ಎರಡೂ ಕಡೆಯ ಅಭಿಮಾನಿಗಳು ಸಾವಿರ, ಹತ್ತು ಸಾವಿರ, ಲಕ್ಷ ಹೀಗೆ ಬೆಟ್ಟಿಂಗ್‌ ಕಟ್ಟಿದ್ದಾರೆ ಎಂಬ …

Read More »

ಧಾರವಾಡ; ಮೇ 14 ರಿಂದ ಮಾವು ಪ್ರದರ್ಶನ, ಮಾರಾಟ ಮೇಳ

ಧಾರವಾಡ, ಮೇ 14: ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು, ಈ ಬಾರಿಯ ಸುಡು ಬೇಸಿಗೆಯ ಪರಿಣಾಮ ನಿರೀಕ್ಷೆ ಮಾಡಿದಷ್ಟು ಮಾವಿನ ಬೆಳೆ ಬಂದಿಲ್ಲ. ಮಾರುಕಟ್ಟೆಯಲ್ಲಿ ಸದ್ದು ಮಾಡಬೇಕಿದ್ದ ಹಣ್ಣುಗಳ ರಾಜ ಅಷ್ಟಾಗಿ ಕಂಡುಬರುತ್ತಿಲ್ಲ. ವಿವಿಧ ಬಗೆಯ ಮಾವಿನ ಹಣ್ಣು ಸವಿಯುವ ಉತ್ಸಾಹದಲ್ಲಿರುವ ಜನರಿಗೆ ಸಿಹಿಸುದ್ದಿಯೊಂದಿದೆ.ಧಾರವಾಡ ಜಿಲ್ಲೆಯಲ್ಲಿ 3 ದಿನಗಳ ಮಾವು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ ಮಾಡಲಾಗಿದೆ. ರೈತರಿಂದ ನೇರವಾಗಿ ಗ್ರಾಹಕರಿಗೆ ಮಾವು ತಲುಪಲಿದೆ.

Read More »

ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ: ಭರ್ಜರಿ ಫಸಲು

ಸಂಕೇಶ್ವರ: ಯಾವುದೇ ಬೆಳೆ ಬೆಳೆಯಲು ಅವುಗಳ ಬಿತ್ತನೆಯಲ್ಲಿ ಸೂಕ್ತ ಅಂತರ ಅಗತ್ಯ. ಇದರಿಂದ ಬೆಳೆಗಳು ಉತ್ತಮವಾಗಿ ಬೆಳೆದು ಉತ್ತಮ ಫಸಲು ಬರಲು ಸಾಧ್ಯ ಎಂಬ ಅಂಶವನ್ನು ಸಂಕೇಶ್ವರದ ರೈತ ಮಲ್ಲಿಕಾರ್ಜುನ ಕಲ್ಲಪ್ಪಾ ಬಸ್ತವಾಡಿ ಅವರು ತಮ್ಮ ಹೊಲದಲ್ಲಿ ಹೈಬ್ರಿಡ್ ಜೋಳದ ಕುಣಿಗಾಳು ಬಿತ್ತನೆ ಪ್ರಾಯೋಗಿಕವಾಗಿ ಮಾಡಿ ಯಶಸ್ವಿಯಾಗಿದ್ದಾರೆ.ಇದರಿಂದ ಅವರಿಗೆ ಭರ್ಜರಿ ಫಸಲು ಬಂದಿದೆ. ಹೊಲದಲ್ಲಿ ಏನಾದರೊಂದು ಹೊಸ ಪ್ರಯೋಗ ಮಾಡುತ್ತಲೆ ಬಂದಿರುವ ಮಲ್ಲಿಕಾರ್ಜುನ ಬಸ್ತವಾಡಿ, ಈ ವರ್ಷ ಹಿಂಗಾರಿನಲ್ಲಿ ಒಂದು …

Read More »

ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ. ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ‌ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.

Read More »

ಹೋರ್ಡಿಂಗ್‌ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ

ಮುಂಬಯಿ: ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮೇಲೆ ದೈತ್ಯ ಜಾಹೀರಾತು ಫಲಕ ಬಿದ್ದ ಪ್ರಕರಣದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಅಲ್ಲದೆ 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸೋಮವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ, ಅಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ, ಇದೆ ವೇಳೆ ಪಂತನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಇರುವ ಪೆಟ್ರೋಲ್ ಬಂಕ್ …

Read More »

ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ

ಮುಂಬಯಿ: ಕಳೆದ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಮುಂಬೈ ಹಾಗೂ ಬಾಲಿವುಡ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 14 ರಂದು ನಡೆದ ಈ ಘಟನೆಯಿಂದ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಈ ಪ್ರಕರಣವನ್ನು ನಿರಂತರವಾಗಿ ತನಿಖೆ ನಡೆಸುತ್ತಿದೆ, ಇದೀಗ ಈ ಪ್ರಕರಣದಲ್ಲಿ ಪೊಲೀಸರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ. ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ …

Read More »

ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ (Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.

Read More »

ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ?

ಬೆಳಗಾವಿ: ನಗರದ ಹೊರ ವಲಯದ ಕಣಬರ್ಗಿಯಲ್ಲಿ ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಸ್ಥಳೀಯ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಣಬರ್ಗಿ ಬಸ್‌ ನಿಲ್ದಾಣದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಆದರೆ ರಸ್ತೆ ನಿರ್ಮಾಣ ಕೊನೆಯ ಹಂತಕ್ಕೆ ತಲುಪಿದ್ದರೂ ಮುಗಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಣಬರ್ಗಿಯ …

Read More »

ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ

ಧಾರವಾಡ: ಅಗ್ನಿಯನ್ನು ದೇವರ ಸ್ವರೂಪವಾಗಿ ಕಾಣುವವರೇ ಅದರ ಮೇಲೆ ಬರಿಗಾಲಿನಲ್ಲಿ ಓಡಾಡುತ್ತಾ ತುಳಿಯುತ್ತಾರೆ. ಅದರ ಬದಲು ಸ್ವಲ್ಪ ಹೊತ್ತು ಅದರ ಮೇಲೆ ಮಲಗತ್ತೀರಾ ಎಂದು ತೋಂಟದ ಶ್ರೀ ನಿಜಗುಣಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಕವಿವಿಯಲ್ಲಿ ನಡೆದ ‘ಬಸವಣ್ಣ-ಸಾಂಸ್ಕೃತಿಕ ನಾಯಕ’ ಕುರಿತಾದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಅಗ್ನಿಯನ್ನು ದೇವರ ಮಾಡಿ, ಅದರ ಮೇಲೆಯೇ ಓಡುತ್ತಾರೆ. ಇದಕ್ಕೇನು ಅನ್ನಬೇಕು. ಅದರ ಬದಲು ಸ್ವಲ್ಪ ಹೊತ್ತು ಮಲಗಿಬಿಟ್ಟರೆ ಅಗ್ನಿಯ ನಿಜಸ್ವರೂಪ ಕೂಡ ತಿಳಿಯುತ್ತದೆ ಎಂದರು. …

Read More »

ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು

ಗೋಕರ್ಣ: ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಅನಾದಿ ಕಾಲದಿಂದ ಪೂಜೆ ಮಾಡುತ್ತ ಬಂದಿರುವ ಕುಟುಂಬವೊಂದಕ್ಕೆ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸ್‌ ದೂರು ದಾಖಲಿಸಲಾಗಿದೆ. ಮೇ 9ರಂದು ಬೆಳಗ್ಗೆ ರವಿ ಮಹಾದೇವ ಅಡಿ ಹಾಗೂ ಕುಟುಂಬಸ್ಥರು ದೇವಸ್ಥಾನಕ್ಕೆ ಬಂದಾಗ 11 ಮಂದಿ ಅಡ್ಡಗಟ್ಟಿ ನಿಂದಿಸಿ ದರು. ನಿಮಗೆ ಪೂಜೆಯ ಯಾವುದೇ ಹಕ್ಕಿಲ್ಲ ಎಂದು ಹೇಳಿ ಗರ್ಭಗುಡಿಯಿಂದ ಹೊರಹಾಕಿ, ಮತ್ತೆ ದೇವಸ್ಥಾನದ ಕಡೆಗೆ ಬಾರದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕೃಷ್ಣ ಗಣಪತಿ ಜಂಬೆ, …

Read More »