ನಟ ಸಲ್ಮಾನ್ ಖಾನ್ (Salman Khan) ಅವರು ಮುಂದಿನ ಸಿನಿಮಾದ ತಯಾರಿಯಲ್ಲಿ ಬ್ಯುಸಿ ಆಗಿದ್ದಾರೆ. ಈ ಬಾರಿ ಅವರು ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ‘ಸಿಕಂದರ್’ (Sikandar) ಎಂದು ಶೀರ್ಷಿಕೆ ಇಡಲಾಗಿದೆ. ಸಲ್ಮಾನ್ ಖಾನ್ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿರುವ ಈ ಸಿನಿಮಾದ ಬಗ್ಗೆ ಒಂದು ಎಗ್ಸೈಟಿಂಗ್ ನ್ಯೂಸ್ ಕೇಳಿಬಂದಿದೆ. ‘ಸಿಕಂದರ್’ ಸಿನಿಮಾದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್ (Sathyaraj) ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ಈ …
Read More »Daily Archives: ಮೇ 26, 2024
ಪದ್ಮಶ್ರೀ ಪುರಸ್ಕೃತ ರಾಜೀವ್ ತಾರಾನಾಥ್ರ ಆರೋಗ್ಯ ವಿಚಾರಿಸಿದ ಹೆಚ್ಸಿ ಮಹದೇವಪ್ಪ
ಮೈಸೂರು, ಮೇ.26: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸರೋದ್ ವಾದಕ ರಾಜೀವ್ ತಾರಾನಾಥ್(Rajeev Taranath)ರವರು ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಇಂದು(ಮೇ.26) ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ(H.C Mahadevappa) ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ವಿಶ್ವ ಶ್ರೇಷ್ಠ ಸರೋದ್ ವಾದಕರಾಗಿರುವ ಪದ್ಮಶ್ರೀ ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಚೇತರಿಕೆಗೆ ಆಗಲೆಂದು ಶುಭ ಹಾರೈಸಿದರು. ಆರೋಗ್ಯದ ಕುರಿತು ವೈದ್ಯರಿಂದ ಮಾಹಿತಿ ಇನ್ನು ವಯೋ ಸಹಜ ಆರೋಗ್ಯ ಸಮಸ್ಯೆಗಳಿಂದ …
Read More »ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಚಾಕುವಿನಿಂದ ಇರಿದು ಹಲ್ಲೆ
ಗದಗ, ಮೇ 26: ಭಜನಾ ಮಂಡಳಿಗೆ ಸೇರಿಸಿಕೊಳ್ಳದ್ದಕ್ಕೆ ಸಿಟ್ಟಿಗೆದ್ದು ಹಾಡ ಹಗಲೇ ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ (knife) ಇರಿದು ಹಲ್ಲೆ (attack) ಮಾಡಿರುವಂತಹ ಘಟನೆ ಗದಗದ ಟಾಂಗಾ ಕೂಟ್ ಬಳಿ ನಡೆದಿದೆ. ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ವಿನಾಯಕ ಕಬಾಡಿಯಿಂದ ಗೋವಿಂದರಾಜ ಶಿರಹಟ್ಟಿ ಮೇಲೆ ಹಲ್ಲೆ ಮಾಡಲಾಗಿದೆ. ಆರೋಪಿ ವಿನಾಯಕನನ್ನು ವಶಕ್ಕೆ ಪಡೆದು ಪೊಲೀಸರಿಂದ ವಿಚಾರಣೆ ಮಾಡಲಾಗುತ್ತಿದೆ. ಗದಗ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಹಲ್ಲೆಗೊಳಗಾದ ಗೋವಿಂದರಾಜ ಶಿರಹಟ್ಟಿ ಇಸ್ಕಾನ್ ಕೀರ್ತನೆ ಸಂಘ ನಡೆಸುತ್ತಿದ್ದರು. ಇದೇ ಸಂಘದಿಂದ ವಿನಾಯಕನನ್ನ …
Read More »T20 World Cup 2024: ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರು!
T20 World Cup 2024: ಮಾಧ್ಯಮ ವರದಿಗಳ ಪ್ರಕಾರ, ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯದಿಂದ ಆರ್ಸಿಬಿ ಹೊರಬಿದ್ದ ನಂತರ ವಿರಾಟ್ ಕೊಹ್ಲಿ ಗಾಯದಿಂದ ಬಳಲುತ್ತಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕೊಹ್ಲಿ ತಮ್ಮ ವಿರಾಮವನ್ನು ವಿಸ್ತರಿಸಲು ಬಿಸಿಸಿಐಗೆ ಮನವಿ ಮಾಡಿದ್ದರು. ಬಿಸಿಸಿಐ ಕೂಡ ವಿರಾಟ್ ನಿರ್ಧಾರವನ್ನು ಗೌರವಿಸಿದ್ದು, ಕೊಹ್ಲಿ ಅಮೆರಿಕಕ್ಕೆ ತೆರಳುವ ದಿನಾಂಕವನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ.ಉಳಿದ ಆಟಗಾರರು ಎರಡನೇ ಬ್ಯಾಚ್ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ವಿರಾಟ್ ಕೊಹ್ಲಿ ಮಾತ್ರ …
Read More »ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ ಹೇಳಿದ್ದಿಷ್ಟು
ಹುಬ್ಬಳ್ಳಿ, ಮೇ.26: ‘ನಾನು ಇವತ್ತು ಸಿಐಡಿ(CID) ಅಧಿಕಾರಿಗಳ ಸಮಯ ಕೇಳಿದ್ದೆ. ಹೀಗಾಗಿ ಅಧಿಕಾರಿಗಳ ಭೇಟಿ ಮಾಡಲು ಬಂದಿದ್ದೆ ಎಂದು ನೇಹಾ ತಂದೆ ನಿರಂಜನ ಹಿರೇಮಠ ಹೇಳಿದ್ದಾರೆ. ಸಿಐಡಿ ವಿಚಾರಣೆ ಬಳಿಕ ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು, ‘ ಅನೇಕ ದಿನಗಳಿಂದ ನಾನು ಭೇಟಿ ಮಾಡಲು ಆಗಿರಲಿಲ್ಲ. ಹಾಗಾಗಿ ಇವತ್ತು ಸಮಯ ಕೇಳಿದ್ದೆ. ನೇಹಾ ಕೊಲೆ ಕೇಸ್ ವಿಚಾರವಾಗಿ ಕೆಲವು ಮಾಹಿತಿ ಕೊಟ್ಟಿದ್ದೇನೆ. ಇದುವರೆಗೂ ನೇಹಾ ಕೇಸ್ನಲ್ಲಿ ಒಬ್ಬರನ್ನ ಮಾತ್ರ ಅರೆಸ್ಟ್ ಮಾಡಿದ್ದಾರೆ. ಈ ಕುರಿತು …
Read More »ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ
ಕ್ರಮ ಕೈಗೊಳ್ಳದಿದ್ದರೆ ಡ್ರಗ್ಸ್ ಮಾಫಿಯಾದಲ್ಲಿ ಕರ್ನಾಟಕ ಪಂಜಾಬ್ ಅನ್ನು ಮೀರಿಸಲಿದೆ: ಪ್ರಲ್ಹಾದ್ ಜೋಶಿ ಬೆಂಗಳೂರು: ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾದಕ ದ್ರವ್ಯ ದಂಧೆ ವಿರುದ್ಧ ತಕ್ಷಣ ಮತ್ತು ಕಠಿಣ ಕ್ರಮ ಕೈಗೊಳ್ಳದಿದ್ದರೆ, ರಾಜ್ಯವು ಡ್ರಗ್ಸ್ ಹಾವಳಿಯಲ್ಲಿ ಪಂಜಾಬ್ ಅನ್ನು ಮೀರಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಶನಿವಾರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಬೆಂಗಳೂರು, ಮಂಗಳೂರು ಭಾಗದಲ್ಲಿ ಡ್ರಗ್ಸ್ ದಂಧೆ ನಡೆಯುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿದ್ದು, …
Read More »ಚನ್ನಗಿರಿ ಲಾಕಪ್ ಡೆತ್: ಪೊಲೀಸ್ ಠಾಣೆ ಧ್ವಂಸ ಪ್ರಕರಣದ ತನಿಖೆ ಸಿಐಡಿಗೆ!
ದಾವಣಗೆರೆ: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆ ಬಳಿ ದಾಂಧಲೆ ಪ್ರಕರಣದ ತನಿಖೆಯನ್ನು ಇದೀಗ ಸಿಐಡಿಗೆ ವಹಿಸಲಾಗಿದೆ. ಮಟ್ಕಾ ನಡೆಸುತ್ತಿದ್ದ ಆರೋಪದಲ್ಲಿ ಚನ್ನಗಿರಿ ಪೊಲೀಸರು ಅದಿಲ್ ಎಂಬಾತನನ್ನ ವಶಕ್ಕೆ ಪಡೆದಿದ್ದರು. ಠಾಣೆಯಲ್ಲಿ ಅದಿಲ್ ಕುಸಿದು ಬಿದ್ದಿದ್ದು ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದನು. ಈ ವಿಷಯ ತಿಳಿಯುತ್ತಿದ್ದಂತೆ ಉದ್ವಿಗ್ನಗೊಂಡ ಮೃತನ ಸಂಬಂಧಿಕರು ಮತ್ತು ನೂರಾರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದು ಅಲ್ಲೆ ಠಾಣೆಯ ಮೇಲೆ ಕಲ್ಲು …
Read More »ರಾಜ್ಯದಲ್ಲಿರುವ ಅಕ್ರಮ ಶಾಲೆಗಳ ಪಟ್ಟಿ ಕೊಡಿ: ಪೋಷಕರ ಆಗ್ರಹ
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು(ಡಿಎಸ್ಇಎಲ್) ರಾಜ್ಯದಲ್ಲಿನ ಅಧಿಕೃತ ಅನುದಾನ ರಹಿತ ಶಾಲೆಗಳ ದೀರ್ಘ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ ಇಲಾಖೆಯ ಅನುಮತಿ ಪಡೆಯದ ಶಾಲೆಗಳ ಪಟ್ಟಿಯನ್ನು ನೀಡದಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಶಿಕ್ಷಣ ಇಲಾಖೆ ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮ್ಮ ಮಕ್ಕಳ ಶಾಲೆಗಳ ಹೆಸರನ್ನು ಪತ್ತೆಹಚ್ಚಲು ಅನೇಕ ಪೋಷಕರು ಕಷ್ಟಪಡುತ್ತಿದ್ದಾರೆ. ಏಕೆಂದರೆ BEO ಗಳು ಅಪ್ಲೋಡ್ ಮಾಡಿದ ಕೆಲವು ಪಟ್ಟಿಗಳು PDF ಸ್ವರೂಪದಲ್ಲಿರುವ ಫೋಟೋಗಳಾಗಿದ್ದು, ಅವುಗಳಲ್ಲಿ ಹಲವು ಮಸುಕಾಗಿವೆ. …
Read More »ಗಡ್ಕರಿ ಸೋಲಿಗೆ ಫಡ್ನವೀಸ್, ಶಾ ಸಂಚು- ಸಂಜಯ್ ರಾವತ್
ಮುಂಬೈ: ಲೋಕಸಭೆ ಚುನಾವಣೆಯಲ್ಲಿ ನಿತಿನ್ ಗಡ್ಕರಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಕೆಲಸ ಮಾಡಿದ್ದಾರೆ ಎಂದು ಶಿವಸೇನೆ-ಯುಬಿಟಿ ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ. ನಾಗ್ಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಗಡ್ಕರಿ ಅವರ ಪ್ರಚಾರ ಮಾಡಲು ಫಡ್ನವೀಸ್ ಗೆ ಇಚ್ಚೆ ಇರಲಿಲ್ಲ. ಆದರೆ, ಕೇಂದ್ರ ಸಚಿವರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ತಿಳಿದಾಗ ಫಡ್ನವೀಸ್ ಇಚ್ಛೆಯಿಲ್ಲದೆ ಪ್ರಚಾರ ಮಾಡಿದ್ದರು …
Read More »ಹೆಲ್ಮೆಟ್ ಧರಿಸಿಲ್ಲವೆಂದು ಲಾರಿ ಚಾಲಕನಿಗೆ ದಂಡ ಹಾಕಿದ ಪೊಲೀಸರು!
ಕಾರವಾರ, : ಟಿಪ್ಪರ್ ಲಾರಿ ಚಾಲಕರೊಬ್ಬರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಹೊನ್ನಾವರ ಸಂಚಾರ ಠಾಣೆ ಪೊಲೀಸರು (honnavar traffic Police) ವಿಥೌಟ್ ಹೆಲ್ಮೆಟ್ ದಂಡ ಹಾಕಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಚಂದ್ರಕಾಂತ್ ಹಳ್ಳೇರ ಎನ್ನುವರು ಮರಳು ತುಂಬಿದ ಟಿಪ್ಪರ್ ಲಾರಿಯನ್ನು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಹೊನ್ನಾವರ ಸಂಚಾರಿ ಪೊಲೀಸರು, ಅಳ್ಳಂಕಿ ಎಂಬಲ್ಲಿ ತಡೆದು 500 ರೂಪಾಯಿ ದಂಡ ಹಾಕಿ ರಶೀದಿ ನೀಡಿದ್ದಾರೆ. ಬಳಿಕ ಚಾಲಕ ರಶೀದಿಯನ್ನು ನೋಡಿ ಒಂದು ಕ್ಷಣ …
Read More »