Breaking News

Daily Archives: ಮೇ 27, 2024

BPL Card: ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ

BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ ಹೊರೆಯಾಗಬಾರದೆಂಬ ಉದ್ದೇಶದಿಂದ ಈ ಪಡಿತರ ಚೀಟಿಯನ್ನು ಮಾಡಲಾಗಿದೆ. ಆದರೆ ಕೆಲವರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳದೆ, ಉದಾಸೀನ ತೋರುತ್ತಿದ್ದಾರೆ ಎನ್ನುವ ಅರೋಪಗಳು ಕೇಳಿಬರುತ್ತಿರುವ ಹಿನ್ನೆಲೆ ಆಹಾರ ಇಲಾಖೆ ಒಂದು ದೃಢ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಮೂರು ತಿಂಗಳಿನಿಂದ ಪಡಿತರ …

Read More »

ಲೋಕಸಭೆ ಚುನಾವಣೆ ಮತ ಎಣಿಕೆ ; ಜೂ. 4 ರಂದು ಬೆಂಗಳೂರಲ್ಲಿ ‘ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆ ಜೂ. 4 ರಂದು ಬೆಂಗಳೂರಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಏ.26 ಮತ್ತು ಮೇ 7 ರಲ್ಲಿ ಎರಡು ಹಂತದ ಚುನಾವಣೆ ನಡೆದಿತ್ತು. ಜೂನ್ 4 ರಂದು ಮತ ಎಣಿಕೆ ನಡೆಯುವ ಹಿನ್ನೆಲೆ ಸಾರ್ವಜನಿಕ ಆಸ್ತಿ ಪಾಸ್ತಿಗೆ ನಷ್ಟವುಂಟು ಮಾಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.   ಮಾರಕಾಸ್ತ್ರಗಳನ್ನು ಹಿಡಿದು …

Read More »

ಹುಬ್ಬಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು..!

ಹುಬ್ಬಳ್ಳಿ : ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ.   ಮೃತರನ್ನು ನಾಗರಾಜ ಹಂಚಿನಮನಿ (48) ಎಂದು ಗುರುತಿಸಲಾಗಿದೆ. ನಾಗರಾಜ ಹಂಚಿನಮನಿ ಅವರು ಹುಬ್ಬಳ್ಳಿಯ ಲಿಂಗರಾಜ ನಗರದ ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.   ಉಣಕಲ್ ಹತ್ತಿರ ಅವರು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ …

Read More »

ಚಿಕ್ಕೋಡಿಯಲ್ಲಿ ಯಾರ ಪಾಲಾಗಲಿದೆ ಗೆಲುವಿನ ಪಟ್ಟ?

ಚಿಕ್ಕೋಡಿ, ಮೇ 27: ಬೆಳಗಾವಿ ಜಿಲ್ಲೆ ತಾಲೂಕು ಕೇಂದ್ರವಾಗಿರುವ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಭಾರಿ ಎರಡು ಪ್ರಮುಖ ಪಕ್ಷಗಳು ತೀವ್ರ ಪೈಪೋಟಿ ಒಡ್ಡಿದವು. ಮೇ 7ರಂದು ಚುನಾವಣೆ ನಡೆದಿದ್ದು, ಬರೋಬ್ಬರಿ ಈ ಕ್ಷೇತ್ರವೊಂದರಲ್ಲೇ ಶೇಕಡಾ 78.66 ರಷ್ಟು ಮತದಾನ ಆಗಿದೆ. ಹಾಗಾದರೆ ಈ ಬಾರಿ ಗೆಲುವು ಯಾರಿಗೆ? ಕಾಂಗ್ರೆಸ್‌-ಬಿಜೆಪಿಗೆ ಇರುವ ಪೂರಕ ಅಂಶಗಳ ಏನು?. ಚಿಕ್ಕೋಡಿಯಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಕಾಂಗ್ರೆಸ್‌ನಿಂದ ಕರ್ನಾಟಕದ ಹಾಲಿ …

Read More »

ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

ಬೆಳಗಾವಿ : ಆಟವಾಡುವ ಸಂದರ್ಭದಲ್ಲಿ ಮನೆಯ ಸಂಪ್ ಒಳಗೆ ಬಿದ್ದ 2 ವರ್ಷದ ಮಗು ಸಾವಣಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಮೃತ ಮಗು ಸಾಯೀಶಾ ಸಂದೀಪ್ ಬಡವನಾಚೆ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾದ ಕಾರಣ ಪೋಷಕರು ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರು ಮಗು‌ ಸಿಗದ ಕಾರಣ ನೀರಿನ ಸಂಪ್ ನೋಡಿದಾಗ ಘಟನೆ ತಿಳಿದುಬಂದಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ಮಗವನ್ನು ಪೋಷಕರು ಕರೆದೊಯ್ದಿದ್ದರು, ಆಸ್ಪತ್ರೆಗೆ ದಾಖಲಿಸುವ …

Read More »

ಸಿಲಿಂಡರ್ ಸ್ಫೊಟಗೊಂಡ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದ ಹೆಬ್ಬಾಳ್ಕರ್

ಬೆಳಗಾವಿ :‌ ಬೆಳಗಾವಿಯ ಸುಳಗಾ (ಯು) ಗ್ರಾಮದಲ್ಲಿ ಸಿಲಿಂಡರ್ ಸ್ಫೊಟಗೊಂಡು ದಂಪತಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮೃತರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಗ್ರಾಮದ ಕಲ್ಲಪ್ಪ ಪಾಟೀಲ್ ಮತ್ತು ಸುಮನ್ ಪಾಟೀಲ್ ಸಿಲಿಂಡರ್ ಸ್ಫೋಟದಿಂದ ಸಾವಿಗೀಡಾಗಿದ್ದಾರೆ. ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು, ವಯಕ್ತಿಕವಾಗಿ ಆರ್ಥಿಕ ನೆರವು ನೀಡಿದರು. ಅಲ್ಲದೇ ಸರ್ಕಾರದಿಂದ ಪರಿಹಾರ ದೊರಕಿಸಿ ಕೊಡುವ ಭರವಸೆ ನೀಡಿದರು.ಈ …

Read More »

ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ ; ಮೇ.‌ 31 ಕ್ಕೆ ಎಸ್ಐಟಿ ಮುಂದೆ ಹಾಜರಾಗುವ ನಿರ್ಧಾರ

ಬೆಂಗಳೂರು : ಅಶ್ಲೀಲ ವೀಡಿಯೋ ವಿಚಾರವಾಗಿ ತಲೆಮರೆಸಿಕೊಂಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಧ್ಯ ಪ್ರತ್ಯಕ್ಷವಾಗಿದ್ದು, ಬರುವ ಮೇ. 31 ರಂದು ಎಸ್ಐಟಿ ಮುಂದೆ ಹಾಜರಾಗುವೆ ಎಂದು ಹೇಳಿದ್ದಾರೆ. ಈ ಕುರಿತು ವೀಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಪ್ರಜ್ವಲ್ ರೇವಣ್ಣ. ಪೂರ್ವ ನಿಗದಿತ ಪ್ರವಾಸದ ಹಿನ್ನಲೆಯಲ್ಲಿ ನಾನು ಚುನಾವಣೆ ನಂತರ ವಿದೇಶಿ ಪ್ರವಾಸಕ್ಕೆ ಹೊರಟಿದ್ದೆ. ಇದಾದ ನಂತರ ನಾಲ್ಕು ದಿನಗಳಾದ ಮೇಲೆ ನನ್ನ ಮೇಲೆ ಪ್ರಕರಣ ದಾಖಲಾಗಿದ್ದು ತಿಳಿದುಬಂದಿದೆ.   …

Read More »

ಭೀಕರ ರಸ್ತೆ ಅಪಘಾತ; ಬಿತ್ತನೆ ಬೀಜ ಖರೀದಿಸಲು ಬಂದಿದ್ದ ರೈತರಿಬ್ಬರು ಸ್ಥಳದಲ್ಲೇ ಮೃತ್ಯು

ಗದಗ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ರೈತರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಹಳ್ಳಿಗುಡಿ ಗ್ರಾಮದ ರೈತ ಪರಸಪ್ಪ ಜೋಗಿನ ಹಾಗೂ ಪೇಠಾಲೂರ ಗ್ರಾಮದ ಮಾರುತಿ ಯಾಟಿ ಎಂದು ಗುರುತಿಸಲಾಗಿದೆ. ಬಿತ್ತನೆ ಬೀಜ ಖರೀದಿಗಾಗಿ ಇಬ್ಬರು ರೈತರು ಮುಂಡರಗಿಗೆ ಬಂದಿದ್ದರು ಖರೀದಿ ಮುಗಿಸಿ ತಮ್ಮ ಊರಿನತ್ತ ಬೈಕ್ ನಲ್ಲಿ ತೆರಳುತ್ತಿದ್ದ …

Read More »

ಪ್ರೀತಿ ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿದ್ದಾತನ ಸೆರೆ

ಬೆಳಗಾವಿ: ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ ಒಡ್ಡಿದ್ದ ಆರೋಪದಲ್ಲಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಕಿಣಯೇ ಗ್ರಾಮದ ತಿಪ್ಪಣ್ಣ ಡೋಕರೆ ಎಂಬಾತನು ತನ್ನು ಪ್ರೀತಿಯನ್ನು ನಿರಾಕರಿಸಿದ ಯುವತಿ ಮನೆ ಮೇಲೆ ಕಲ್ಲು ತೂರಾಟ ಮಾಡಿ ಕಿಟಕಿ ಗಾಜು ಪುಡಿ ಮಾಡಿದ್ದಾನೆ. ಭಯಭೀತರಾದ ಯುವತಿ ಮನೆಯವರು ಗ್ರಾಮೀಣ ಠಾಣೆಗೆ ದೂರು ನೀಡಿದ್ದು, ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ. ಇದೇ ಗ್ರಾಮದ ಬಿಕಾಂ ವಿದ್ಯಾರ್ಥಿನಿಯ ಬೆನ್ನು ಬಿದ್ದಿದ್ದ ಈತ ಮೂರು ವರ್ಷಗಳಿಂದ …

Read More »

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

ಚಿಕ್ಕೋಡಿ: ಕೃಷ್ಣಾ ನದಿಯಿಂದ ಹರಿದು ಬರುತ್ತಿದ್ದ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆ ಹಿಡಿದಿದೆ. ಇದರಿಂದ ಮಹಾರಾಷ್ಟ್ರ ಸರ್ಕಾರ ಕರ್ನಾಟಕ ರಾಜ್ಯದ ವಿರುದ್ದ ಮತ್ತೆ ಕ್ಯಾತೆ ತೆಗೆದಿದೆ ಎಂದು ರೈತರು ಆಕ್ರೋಶ ಹೊರಹಾಕಿದ್ದಾರೆ. ಕೃಷ್ಣಾ ನೀರಿನ ವಿಷಯವಾಗಿ ಮತ್ತೆ ಮಹಾರಾಷ್ಟ್ರ ಸರ್ಕಾರ ಕ್ಯಾತೆ ತೆಗೆದಿದೆ. ಕರ್ನಾಟಕಕ್ಕೆ ಹರಿದು ಬರುತ್ತಿದ್ದ ನೀರನ್ನು ಮೇ.26ರ ರವಿವಾರ ಮಹಾರಾಷ್ಟ್ರ ಸರಕಾರ ತಡೆ ಹಿಡಿದಿದೆ. ಗಡಿ ಭಾಗದ ರಾಜಾಪೂರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ …

Read More »