Breaking News

Monthly Archives: ಮೇ 2024

ಕೂಲ್‌ ಕನ್ನಡತಿ ಅಕ್ಕ ಅನು ದಿಢೀರ್ ಸಿಟ್ಟಾಗಿದ್ದೇಕೆ?

ಸಾಮಾನ್ಯವಾಗಿ ಸಾಮಾಜಿಕ ಜಾಲತಾಣ ಬಳುಸುವವರಿಗೆ ಕನ್ನಡತಿ ಅಕ್ಕ ಅನು ಚಿರಪರಿಚಿತರು. ಸದಾ ಪ್ಯಾಂಟ್‌-ಶರ್ಟ್ ಧರಿಸಿ ತಲೆಗೆ ತುರುಬೋ ಅಥವಾ ಜುಟ್ಟೋ ಕಟ್ಟಿ ರಣ ಬಿಸಿಲಿಲೆನ್ನದೇ ಸರ್ಕಾರಿ ಶಾಲೆಗಳಿಗೆ ಬಣ್ಣ ಬಳಿಯುವ ಕಾರ್ಯದಲ್ಲೇ ಕಾಣಿಸಿಕೊಳ್ಳುವ ಅಕ್ಕ ಅನು ಅವರ ಕಾರ್ಯ ಇಂದಿನ ಯುವ ಜನತೆಗೆ ಮಾದರಿ. ಸರ್ಕಾರಿ ಶಾಲೆಗಳು, ಪಾಳು ಬೀಳುತ್ತಿರುವ ದೇವಸ್ಥಾನ ಹಾಗೂ ಪಾರಂಪರಿಕ ಕಟ್ಟಡಗಳಿಗೆ ಬಣ್ಣ ಹಚ್ಚಿ ಹೊಸ ಲುಕ್‌ ನೀಡುವ ಅಕ್ಕ ಅನು ಅವರನ್ನು ಕಂಡರೆ ಕನ್ನಡಿಗರಿಗೆ …

Read More »

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್: ಅನುಮಾನ ಮೂಡಿಸಿದ ಎಸ್​ಐಟಿ ನಡೆ

ಹಾಸನ, ಮೇ.26: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಪೆನ್ ಡ್ರೈವ್ ಕೇಸ್‌ (Pendrive) ಸಂಬಂಧ ಎಸ್​ಐಟಿ ಪೊಲೀಸರ ನಡೆ ಮೇಲೆ ಅನುಮಾನ ಮೂಡುತ್ತಿದೆ. ಎಫ್​ಐಆರ್​​ನಲ್ಲಿ ಉಲ್ಲೇಖಿಸಿದ್ದ ಐವರು ಪ್ರಮುಖ ಆರೋಪಿಗಳನ್ನು ಎಸ್​ಐಟಿ ಬಂಧಿಸಿಲ್ಲ. ಹೀಗಾಗಿ ಎಸ್​ಐಟಿ (SIT) ತನಿಖಾ ವೈಖರಿ ಅಚ್ಚರಿ ಮೂಡಿಸಿದೆ. ಪ್ರಕರಣದಲ್ಲಿ ಆರು, ಏಳು, ಎಂಟನೇ ಆರೋಪಿಗಳೆಂದು ಮೂವರನ್ನು ಬಂಧಿಸಲಾಗಿದೆ. ಪ್ರೀತಂಗೌಡ ಆಪ್ತ ಲಿಖಿತ್ ಗೌಡ, ಕಚೇರಿ ಸಹಾಯಕ ಚೇತನ್ ಹಾಗೂ ವಕೀಲ ದೇವರಾಜೇಗೌಡನನ್ನು ಬಂಧಿಸಲಾಗಿದೆ. ಆದರೆ …

Read More »

ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ

ಬೆಂಗಳೂರು, ಮೇ 26: ನಟೋರಿಯಸ್​ ಕೊಲೆಗಾರ ಗಿರೀಶ್​ನನ್ನು ಬೆಂಗಳೂರಿನ (Bengaluru) ಬನಶಂಕರಿ ಠಾಣೆ ಪೊಲೀಸರು (Police) ಬಂಧಿಸಿದ್ದಾರೆ. ಆರೋಪಿ ಗಿರೀಶ್​​ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದನು. ಕುಡಿದು ಬಂದು ರಸ್ತೆ ಬದಿ ಮಲಗಿದ್ದವರನ್ನು ಆರೋಪಿ ಗಿರೀಶ್ ಕೊಲೆ ಮಾಡುತ್ತಿದ್ದನು. ಕುಡಿದ ಮತ್ತಿನಲ್ಲಿ ಮೇ 12ರಂದು ಜಯನಗರ 7ನೇ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದನು. ​ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. …

Read More »

ಐಪಿಎಲ್​ ಫೈನಲ್ ಪಂದ್ಯ

IPL 2024: ಐಪಿಎಲ್ ಸೀಸನ್ 17ರ ಫೈನಲ್ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯದಲ್ಲಿ ರನ್ ಸುರಿಮಳೆಯಾಗುವ ಸಾಧ್ಯತೆಯಿದೆ. ಏಕೆಂದರೆ ಫೈನಲ್​ ಪಂದ್ಯಕ್ಕಾಗಿ ಬ್ಯಾಟಿಂಗ್​ಗೆ ಸಹಕಾರಿಯಾಗುವಂತಹ ಪಿಚ್ ಅನ್ನು ಸಿದ್ಧಪಡಿಸುತ್ತಿರುವುದಾಗಿ ಎಂಎ ಚಿದಂಬರಂ ಮೈದಾನದ ಕ್ಯುರೇಟರ್ ತಿಳಿಸಿರುವುದಾಗಿ ಐಪಿಎಲ್​ ವೀಕ್ಷಕ ವಿವರಣೆಗಾರ ಕೆವಿನ್ ಪೀಟರ್ಸನ್ ಹೇಳಿದ್ದಾರೆ. ಹೀಗಾಗಿ ಅಂತಿಮ ಹಣಾಹಣಿಯಲ್ಲಿ …

Read More »

ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ, ಮೇ 25: ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ. ಅಂಜಲಿ, ನೇಹಾ …

Read More »

ವಿಶ್ವ ದಾಖಲೆ ಬರೆದ ವಿಶ್ವದ ಅತಿ ಎತ್ತರದ ಗೂಳಿ ರೋಮಿಯೋ

ಈ ಗೂಳಿ ಹೋಲ್‌ಸ್ಟೈನ್ ಜಾತಿಯ ಗೂಳಿಯಾಗಿದ್ದು ಇದಕ್ಕೆ ಈಗ 6 ವರ್ಷ. ಇದರ ಹೆಸರು ರೋಮಿಯೋ. ‘1.94 ಮೀಟರ್ (6 ಅಡಿ 4.5 ಇಂಚು) ಎತ್ತರವಿರುವ ಈ ಗೂಳಿ ಗಿನ್ನೆಸ್ ವಿಶ್ವ ದಾಖಲೆ ಪುಟವನ್ನು ಸೇರಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಗೂಳಿಯೊಂದು ಚರ್ಚೆಯಲ್ಲಿದೆ ಏಕೆಂದರೆ ಈ ಗೂಳಿ ಗಿನ್ನೆಸ್ ವಿಶ್ವ ದಾಖಲೆ ಪುಟವನ್ನು ಸೇರಿದೆ. ವಾಸ್ತವವಾಗಿ, 6 ವರ್ಷದ ಹೋಲ್‌ಸ್ಟೈನ್ ಸ್ಟೀರ್ ರೋಮಿಯೋ ಅನ್ನು ವಿಶ್ವದ ಅತಿ ಎತ್ತರದ ಬುಲ್ ಎಂದು ಪರಿಗಣಿಸಲಾಗಿದೆ. …

Read More »

ನಿವೃತ್ತ ಐಎಎಸ್​ ಅಧಿಕಾರಿ ಪತ್ನಿ ಶವವಾಗಿ ಪತ್ತೆ,

ನಿವೃತ್ತ ಐಎಎಸ್​ ಅಧಿಕಾರಿ ದೇವೇಂದ್ರ ನಾಥ್ ದುಬೆ ಅವರ ಪತ್ನಿ ಮೋಹಿನಿ ದುಬೆ ಶನಿವಾರ ಲಕ್ನೋದಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವೇಂದ್ರನಾಥ್ ಅವರು ಗಾಲ್ಫ್ ಆಡಲು ಹೋಗಿದ್ದರು ಆದರೆ ಅವರು ಮನೆಗೆ ಹಿಂದಿರುಗಿದಾಗ, ಅವರು ತಮ್ಮ ಮನೆಯ ಒಳಗಿನಿಂದ ಬೀಗ ಹಾಕಿರುವುದನ್ನು ಗಮನಿಸಿದರು ಬಳಿಕ ಒಳಗೆ ಹೋಗಿ ನೋಡಿದಾಗ ಪತ್ನಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ದುಬೆ ಅವರ ಮನೆಯ ಬೀರುವಿನಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ಗಮನಿಸಿದ್ದಾರೆ. …

Read More »

ಕಾಸು ಕೊಟ್ಟು ಪೊರಕೆ, ಏಟು ತಿನ್ನಲು ಮುಗಿಬಿದ್ದ ಭಕ್ತರು

ಆನೇಕಲ್, ಮೇ 25: ಕಾಸು ಕೊಟ್ಟು ಪೊರಕೆ ಮೊರದಲ್ಲಿ ಏಟು ತಿನ್ನಲು ಭಕ್ತರು (Devotees) ಮುಗಿಬಿದ್ದಿರುವಂತಹ ಅಪರೂಪದ ಘಟನೆಯೊಂದು ನಗರದಲ್ಲಿ ನಡೆದಿದೆ. ಶ್ರೀ ಧರ್ಮರಾಯಸ್ವಾಮಿ ದ್ರೌಪತಮ್ಮ ಕರಗದ (Karaga) ಅಂಗವಾಗಿ ನಡೆಯುವ ಕೋಟೆ ಜಗಳ ಎಂಬ ವಿಶಿಷ್ಟ ಧಾರ್ಮಿಕ ಆಚರಣೆಯಲ್ಲಿ ಕಾಳಿ ವೇಷಧಾರಿಯಿಂದ ಭಕ್ತರಿಗೆ ಪೊರಕೆ ಮೊರದೇಟು ನೀಡಲಾಗಿದೆ. ಬಲಿ ನೀಡಲಾದ ಮೇಕೆಯ ಶ್ವಾಸಕೋಶವನ್ನು ಬಾಯಿಯಲ್ಲಿ ಕಚ್ಚಿಕೊಳ್ಳುವ ಕಾಳಿ ವೇಶಧಾರಿ, ಸಿಕ್ಕ ಸಿಕ್ಕವರಿಗೆ ಪೊರಕೆ, ಮೊರದಲ್ಲಿ ಹೊಡೆಯುವ ದೃಶ್ಯ ಮಾತ್ರ ರೋಮಾಂಚಕಾರಿ ಆಗಿರುತ್ತದೆ. ಕೋಟೆ ಜಗಳಕ್ಕಾಗಿ ನೂರಾರು …

Read More »

ಮಾಮೂಲಿ ಕೊಡದಿದ್ದಕ್ಕೆ ನನ್ನ ಗಂಡನನ್ನು ಪೊಲೀಸರೆ ಹೊಡೆದು ಸಾಯಿಸಿದ್ದಾರೆ : ಮೃತ ಆದಿಲ್ ಪತ್ನಿ ಆರೋಪ

ದಾವಣಗೆರೆ : ಒಂದು ತಿಂಗಳು ಮಾಮೂಲಿ ಕೊಡದಿದ್ದಕ್ಕೆ ನನ್ನ ಪತಿಯನ್ನು ಪೊಲೀಸರು ಹೊಡೆದು ಸಾಯಿಸಿದ್ದಾರೆ ಎಂದು ಮೃತ ಆದಿಲ್ ಪತ್ನಿ ಹೀನಾಬಾನು ಚನ್ನಗಿರಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಮಟ್ಕಾ ಆಡುತ್ತಿದ್ದ ಎಂದು ಆರೋಪಿಸಿ ಚೆನ್ನಗಿರಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ನಿನ್ನೆ ಆದಿಲ್ಲನ್ನು ಠಾಣೆಗೆ ಕರೆದುಕೊಂಡು ಹೋಗಿದ್ದರು.

Read More »

ರಾಯಬಾಗಕ್ಕೆ ಚಿಕ್ಕೋಡಿ ಗ್ರಾಮಗಳ ಸೇರ್ಪಡೆಗೆ ವಿರೋಧ

ಚಿಕ್ಕೋಡಿ: ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯ ರಾಯಬಾಗ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮಗಳನ್ನು ರಾಯಬಾಗ ತಾಲ್ಲೂಕು ವ್ಯಾಪ್ತಿಯಲ್ಲಿ ಸೇರ್ಪಡೆಗೆ ವಿರೋಧಿಸಿ ನಾಗರಮುನ್ನೋಳಿ ಹೋಬಳಿಯ ಗ್ರಾಮಸ್ಥರು ಚಿಕ್ಕೋಡಿ ತಹಶೀಲ್ದಾರರಿಗೆ ಗುರುವಾರ ಮನವಿ ಸಲ್ಲಿಸಿದರು. ಕಳೆದ ಹಲವು ವರ್ಷಗಳಿಂದ ಚಿಕ್ಕೋಡಿ ತಾಲ್ಲೂಕು ವ್ಯಾಪ್ತಿಯಲ್ಲಿ ನಾಗರಮುನ್ನೋಳಿ, ಬಂಬಲವಾಡ, ಬೆಳಕೂಡ, ಕರೋಶಿ, ಉಮರಾಣಿ, ಹತ್ತರವಾಟ, ಜಾಗನೂರ, ಜೈನಾಪುರ, ಮುಗಳಿ, ಕರಗಾಂವ, ವಡ್ರಾಳ ಮುಂತಾದ ಗ್ರಾಮ ಪಂಚಾಯಿತಿಗಳು ಹಾಗೂ ಕಬ್ಬೂರ ಪಟ್ಟಣ ಪಂಚಾಯಿತಿ ರಾಯಬಾಗ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟಿದ್ದರೂ, …

Read More »