ಕಲಬುರಗಿ, ಮೇ.11: ಮದುವೆಗೆ ನಿರಾಕರಿಸಿದ್ದಕ್ಕೆ ಕಲಬುರಗಿಯಲ್ಲಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದ ಯುವತಿ ಪುಷ್ಪಾ(26) ನಿನ್ನೆ ಸಂಜೆ (ಮೇ.10) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. UPSC ಪರೀಕ್ಷೆಗೆ ಸಿದ್ದತೆ ನಡೆಸಿದ್ದ ಪುಷ್ಪಾ ನಾಲ್ಕು ವರ್ಷಗಳಿಂದ ಗಾಂಧಿನಗರ ನಿವಾಸಿ ಕಿರಣ್ ಎಂಬಾತನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದರು. ಕಳೆದ ಕೆಲ ದಿನಗಳಿಂದ ಪುಷ್ಪಾ ತನ್ನ ಪ್ರಿಯಕರ ಕಿರಣ್ಗೆ ಮದುವೆ ಮಾಡಿಕೋ ಎಂದು ಒತ್ತಾಯ ಮಾಡ್ತಿದ್ದರು. …
Read More »Monthly Archives: ಮೇ 2024
ಎನ್ಇಪಿ ರದ್ದತಿಯಿಂದ ಉನ್ನತ ಶಿಕ್ಷಣಕ್ಕೆ ಆಪತ್ತು: ಅರುಣ ಶಹಾಪುರ
ಮಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ-2020 (ಎನ್ಇಪಿ) ಭಾಗವಾಗಿದ್ದ ನಾಲ್ಕು ವರ್ಷಗಳ ಪದವಿ ಸ್ಥಗಿತಗೊಳಿಸಿ, 3 ವರ್ಷಗಳ ಪದವಿ ಕೋರ್ಸ್ಗೆ ಸುತ್ತೋಲೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ವಿದ್ಯಾರ್ಥಿಗಳಿಗೆ ಅಷ್ಟೇ ಅಲ್ಲ, ವಿಶ್ವವಿದ್ಯಾಲಯಗಳಿಗೂ ಆಪತ್ತು ತರಲಿದೆ’ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಎಚ್ಚರಿಸಿದರು. ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಷನ್ ವತಿಯಿಂದ ಶುಕ್ರವಾರ ಇಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಗೊಳಿಸದಿದ್ದರೆ ಸಂಶೋಧನೆಗಾಗಿ ಕೇಂದ್ರದಿಂದ …
Read More »ದ್ವಿಶತಕ ತಲುಪಿದ ಬೀನ್ಸ್ ದರ
ಕಾರವಾರ: ಅತಿಯಾದ ಬಿಸಿಲು, ಹೆಚ್ಚಿದ ಆರ್ದ್ರತೆಯಿಂದ ಕಂಗೆಟ್ಟಿರುವ ಕರಾವಳಿ ಭಾಗದ ಜನತೆಗೆ ತರಕಾರಿ, ಹಣ್ಣಿನ ದರದ ಬಿಸಿಯೂ ತಟ್ಟಿದೆ. ಶತಕದ ಆಸುಪಾಸಿನಲ್ಲಿದ್ದ ಬೀನ್ಸ್ ದರವು ಏಕಾಏಕಿ ದ್ವಿಶತಕ ದಾಟಿರುವುದು ಗ್ರಾಹಕರನ್ನು ಚಿಂತೆಗೀಡು ಮಾಡಿದೆ. ನಗರವೂ ಸೇರಿದಂತೆ ಜಿಲ್ಲೆಯ ಬಹುತೇಕ ಮಾರುಕಟ್ಟೆಗೆ ಬೆಳಗಾವಿ, ಹುಬ್ಬಳ್ಳಿ ಭಾಗದಿಂದ ತರಕಾರಿ, ಹಣ್ಣು ಪೂರೈಕೆ ಆಗುತ್ತಿದೆ. ಬಿಸಿಲ ಝಳ ಹೆಚ್ಚಿದ ಬಳಿಕ ಬೇಡಿಕೆಯಲ್ಲಿರುವ ತರಕಾರಿ, ಹಣ್ಣುಗಳ ದರ ವಿಪರೀತ ಏರಿಕೆ ಕಂಡಿದೆ. ಕಳೆದ ಎರಡು ವಾರಗಳಿಂದ …
Read More »ಅಶುದ್ಧ ಕುಡಿಯುವ ನೀರು ಪೂರೈಕೆ
ನವಲಗುಂದ: ತಾಲ್ಲೂಕಿನ ಗುಡಿಸಾಗರ ಗ್ರಾಮದ ಜನರಿಗೆ ಕುಡಿಯಲು ಯೋಗ್ಯವಲ್ಲದ ನೀರನ್ನು ಪೂರೈಸಲಾಗುತ್ತಿದ್ದು, ಇದರಿಂದ ಹಲವು ಆರೋಗ್ಯ ಸಮಸ್ಯೆಗಳಿಗೆ ಸ್ಥಳೀಯರು ತುತ್ತಾಗಿದ್ದಾರೆ. ಗ್ರಾಮಸ್ಥರಿಗೆ ಪ್ರತಿ ದಿನ ನಲ್ಲಿ ಮೂಲಕ ಪೂರೈಸುತ್ತಿರುವ ನೀರು ಕುಡಿಯಲು ಯೋಗ್ಯವಾಗಿಲ್ಲ. ಗ್ರಾಮಸ್ಥರು ಪಕ್ಕದ ನಾಗನೂರ ಅಥವಾ ನವಲಗುಂದ ಪಟ್ಟಣಕ್ಕೆ ಬಂದು ಕುಡಿಯುವ ನೀರು ತೆಗೆದುಕೊಂಡು ಹೋಗುತ್ತಿದ್ದಾರೆ. ಇಲ್ಲಿನ ಕೆರೆಯ ನೀರು ಶುದ್ಧವಾಗಿಲ್ಲ. ಇದೇ ನೀರನ್ನು ಗ್ರಾಮ ಪಂಚಾಯಿತಿಯಿಂದ ಗ್ರಾಮದ ಜನರಿಗೆ ನಿತ್ಯ ಸರಬರಾಜು ಮಾಡಲಾಗುತ್ತಿದೆ. ಗಲೀಜು ಆಗಿರುವ …
Read More »ಬಿಜೆಪಿ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಸಚಿವ ಎಂ.ಬಿ. ಪಾಟೀಲ್
ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪತನಗೊಳ್ಳಲಿದೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಸಚಿವ ಎಂ.ಬಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಬೀಳಿಸಬೇಕೆಂದರೆ ಅರವತ್ತು ಶಾಸಕರು ಬೇಕು.ಆದರೆ ಬಿಜೆಪಿ ಶಾಸಕರುಗಳೇ ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇನ್ನು ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಒಂದು ಲಕ್ಷ ಮತಗಳ …
Read More »ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ
ಕಲಬುರಗಿ, : ಕಲಬುರಗಿಯಲ್ಲಿ (Kalaburagi) ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ (Congress) ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ ಸಂಗಾಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಹತ್ಯೆ (Murder) ಮಾಡಿದ ಬಗ್ಗೆ ವರದಿಯಾಗಿದೆ. ಜಾವೀದ್ ಚಿನ್ನಮಳ್ಳಿ (27) ಎಂಬವರನ್ನು ಹತ್ಯೆಗೈದ ದುಷ್ಕರ್ಮಿಗಳು ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ. ದುಷ್ಕರ್ಮಿಗಳು ಜಾವೀದ್ರನ್ನು ಅಮಾವಾಸ್ಯೆ ದಿನ ಪಾರ್ಟಿ ಮಾಡಲು ಕರೆದೊಯ್ದಿದ್ದರು. ಜಮೀನಿನಲ್ಲಿ ಪಾರ್ಟಿ ಮಾಡಿದ್ದರು. ನಂತರ ಹತ್ಯೆ ಮಾಡಿ ಬಾವಿಗೆ ಎಸೆದಿದ್ದಾರೆ. ಕಾಂಗ್ರೆಸ್ ಪರ …
Read More »ಣಬಿಸಿಲಿಗೆ ತತ್ತರಿಸಿದ ಕೋಳಿ ಸಾಕಾಣಿಕೆ ಉದ್ಯಮ,
ಹಾವೇರಿ, : ಈ ಭಾರಿಯ ರಣಬಿಸಿಲಿಗೆ (Sunlight) ಜನ ಜಾನುವಾರು ತತ್ತರಿಸಿ ಹೋಗಿವೆ. ಅದರಲ್ಲೂ ಇತ್ತೀಚಿಗೆ ಪ್ರತಿನಿತ್ಯ 39 ರಿಂದ 40 ರಷ್ಟು ಉಷ್ಣಾಂಶ ದಾಖಲಾಗುತ್ತಿದೆ. ಇದರಿಂದ ಜನರು ಹೈರಾಣಾಗಿದ್ದು ಒಂದು ಕಡೆಯಾದರೆ, ಈ ಭಾರಿಯ ರಣಬಿಸಿಲಿಗೆ ಕೋಳಿ ಉದ್ಯಮಿದಾರರು(Poultry farming)ತತ್ತರಿಸಿ ಹೋಗಿದ್ದಾರೆ. ರಣಬಿಸಿಲಿಗೆ ಕೋಳಿಗಳು ಸಾವನ್ನಪ್ಪದ್ದು, ಮೊಟ್ಟೆಯ ಉತ್ಪಾದನೆ ಕಡಿಮೆಯಾಗುತ್ತಿದೆ. ಇದರಿಂದ ಕೋಳಿ ಉದ್ಯಮೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಭಾರಿಯ ಬಿಸಿಲಿಗೆ ಜನ, ಜಾನುವಾರುಗಳು, ಪ್ರಾಣಿ, ಪಕ್ಷಿಗಳು ಕಂಗೆಟ್ಟು ಹೋಗಿವೆ. ಇದಕ್ಕೆ ಕೋಳಿ …
Read More »ಮಕ್ಕಳ ಮೇಲೆ ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್
ಬೆಳಗಾವಿ, : ಪಟ್ಟಣದ ನ್ಯೂ ಗಾಂಧಿನಗರ ಮತ್ತು ಉಜ್ವಲ್ ನಗರದಲ್ಲಿ ನಿನ್ನೆ(ಮೇ.10) ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ ಮೊಹಮ್ಮದ್ ಖೈಫ್ ಹಾಗೂ ಹೈಜಲ್ ಎಂಬುವವರ ಮೇಲೆ ಏಕಾಏಕಿ ಬೀದಿ ನಾಯಿಗಳ (stray dogs) ಗ್ಯಾಂಗ್ ದಾಳಿ ಮಾಡಿದೆ. ಈ ವೇಳೆ ಗಮನಿಸಿದ ಹೈಜಲ್ ಕೂಡಲೇ ನಾಯಿಗಳನ್ನ ಓಡಿಸಲು ಬಂದಿದ್ದಾನೆ. ಆದರೆ, ನಾಲ್ಕೈದು ನಾಯಿಗಳು ಇರುವ ಕಾರಣಕ್ಕೆ ಆತನ ಮೇಲೆಯೂನಾಯಿಗಳು ದಾಳಿನಡೆಸಿವೆ. ಇದನ್ನ ಗಮನಿಸಿದ ಸ್ಥಳೀಯರು ಕೂಡಲೇ ಇಬ್ಬರು ಮಕ್ಕಳನ್ನ ನಾಯಿ …
Read More »BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ
ಮಾಲ್ಕನ್ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು ಎಂದು ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ. ಇಲ್ಲಿನ ಕಾಲಿಮೇಳದಲ್ಲಿ ಚುನಾವಣ ರ್ಯಾಲಿಯಲ್ಲಿ ಮಾತನಾಡಿ, ಅಸ್ಸಾಂನಲ್ಲಿ ರಾಜ್ಯ ಸರಕಾರದ ಖರ್ಚಿನಲ್ಲೇ 1 ಲಕ್ಷ ಜನರನ್ನು ಅಯೋಧ್ಯೆಗೆ ಕರೆದೊಯ್ಯಲು ನಿರ್ಧರಿಸಿದ್ದೇನೆ. ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ನೂತನ ಬಿಜೆಪಿ ಸಿಎಂ ಈ ತೀರ್ಥಯಾತ್ರೆ ಸೌಲಭ್ಯ ಒದಗಿಸುತ್ತಾರೆ ಎಂದು ತಿಳಿಸಿದರು.ಬಂಗಾಲಿ ಶಿಕ್ಷಕರ ನೇಮಕ, ಗ್ರಾಮಗಳ …
Read More »ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ
ಮೈಸೂರು: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆ ಮಾಡುತ್ತಿದೆ. ನಮ್ಮ ಪೊಲೀಸರ ಬಗ್ಗೆ ನಂಬಿಕೆಯಿದೆ. ನಿಷ್ಪಕ್ಷಪಾತ ತನಿಖೆ ಮಾಡಿ ವರದಿ ಕೊಡುತ್ತಾರೆ. ಸಿಬಿಐಗೆ ಪ್ರಕರಣ ವಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಸಿಬಿಐಗೆ ಒಂದೇ ಒಂದು ಕೇಸ್ ಕೊಡಲಿಲ್ಲ. ಬಿಜೆಪಿ ಅವರು ಸಿಬಿಐ ಗೆ ಕರಪ್ಶನ್ ಬ್ಯೂರ್ ಆಫ್ ಇನ್ವೇಸ್ಟಿಗೇಶನ್ ಎನ್ನುತ್ತಿದ್ದರು. ಚೋರ್ ಬಚಾವ್ ಸಂಸ್ಥೆ ಎಂದು ದೇವೇಗೌಡರು ಹೇಳಿದ್ದರು. …
Read More »