Breaking News

Monthly Archives: ಮೇ 2024

ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ

12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿರುವ ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಮೇ 7 ರಂದು ಆರಂಭವಾಗಲಿದೆ. ಇಂದು ಒಟ್ಟು 93 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಗುಜರಾತ್‌ನ ಸೂರತ್ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆದ್ದಿದೆ ಎಂಬುವುದು ಉಲ್ಲೇಖನೀಯ. ಏಪ್ರಿಲ್ 19 ಮತ್ತು ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಯ ಎರಡು ಹಂತಗಳು ಪೂರ್ಣಗೊಂಡ ನಂತರ, 18 ನೇ ಲೋಕಸಭೆಯ ಮೂರನೇ ಹಂತದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. …

Read More »

3 ದಿನಗಳೊಳಗೆ ರೈತರ ಖಾತೆಗೆ ಪರಿಹಾರ ಮೊತ್ತ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ₹3,454.22 ಕೋಟಿಯನ್ನು ಸೋಮವಾರದಿಂದಲೇ ರೈತರ ಖಾತೆಗಳಿಗೆ ಜಮೆ ಮಾಡುವ ಪ್ರಕ್ರಿಯೆ ಆರಂಭಿಸಿದ್ದು, ಮುಂದಿನ 2- 3 ದಿನಗಳಲ್ಲಿ ಎಲ್ಲ ರೈತರ ಖಾತೆಗಳಿಗೂ ಹಣ ಜಮೆ ಆಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರದಿಂದ ಬಾಕಿ ಪರಿಹಾರದ ಹಣ ಪಡೆಯಲು ಕಾನೂನು ಹೋರಾಟ ಮುಂದುವರಿಸುವುದಾಗಿ ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರ ಏ.26ರಂದು ₹3,454.22 ಕೋಟಿಯನ್ನು ರಾಜ್ಯಕ್ಕೆ ಬಿಡುಗಡೆ ಮಾಡಿದೆ. …

Read More »

ಇಲ್ಲಿ ಮತ ಚಲಾಯಿಸಿ ಬಂದವರಿಗೆ ಸಿಗುತ್ತೆ ಫ್ರೀ ಐಸ್ ಕ್ರೀಮ್!

ಹುಬ್ಬಳ್ಳಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದವರಿಗೆ ಡೈರಿಸ್ ಕಂಪನಿಯಿಂದ ಉಚಿತವಾಗಿ ಐಸ್ ಕ್ರೀಮ್ ವಿತರಿಸಲು ಕಂಪನಿಯ ಮಾಲಕರು ಮುಂದಾಗಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮಾಲಕರಾದ ಅಕ್ಷಯ ಢಾಣಕ ಶಿರೂರ ಮತ್ತು ಅಕ್ಷಯ ಸರಾಫ, ಮತ ಚಲಾವಣೆಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ.ಮಂಗಳವಾರ ಬೆಳಗ್ಗೆ 11:00ರಿಂದ ರಾತ್ರಿ11:00 ಗಂಟೆ ವರೆಗೆ ಇಲ್ಲಿನ ವಿದ್ಯಾನಗರ ಶಿರೂರ ಪಾರ್ಕ್ ಮತ್ತು ಕೇಶ್ವಾಪುರದ ನಮ್ಮ ಔಟ್‌ಲೆಟ್‌ಗಳಲ್ಲಿ ಉಚಿತವಾಗಿ ಒಂದು …

Read More »

ಖರ್ಗೆ ಅಳಿಯನ ಕಾಲೇಜಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – ಬಿಜೆಪಿ ಮುಖಂಡ ದಾಖಲೆ ಬಿಡುಗಡೆ!!

ಬೆಂಗಳೂರು : ಡಾ. ಬಿ.ಆರ್‌.ಅಂಬೇಡ್ಕರ್‌ ಮೆಡಿಕಲ್‌ ಕಾಲೇಜು (Dr B R Ambedkar medical collage) , ಅಂಬೇಡ್ಕರ್‌ ದಂತ ವೈದ್ಯಕೀಯ ಕಾಲೇಜು (Dental collage), ಮಾತೃಶ್ರೀ ರಮಾಬಾಯಿ ನರ್ಸಿಂಗ್‌ ಕಾಲೇಜು (Nursing collage) ಸೇರಿದಂತೆ ಮತ್ತಿತರ ಉನ್ನತ ಶೈಕ್ಷಣಿಕ ವಿದ್ಯಾಸಂಸ್ಥೆಗಳಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಜೆಪಿ (BJP) ಮುಖಂಡ ಎನ್‌.ಆರ್‌.ರಮೇಶ್‌ ಆರೋಪಿಸಿದ್ದಾರೆ.ಈ ಕುರಿತು ದಾಖಲೆಗಳನ್ನು ಬಿಡುಗಡೆ ಮಾಡಿರುವ ಎನ್‌.ಆರ್‌.ರಮೇಶ್‌, ಈ ಕಾಲೇಜುಗಳು ಎಐಸಿಸಿ(AICC) ಅಧ್ಯಕ್ಷ ಮಲ್ಲಿಕಾರ್ಜುನ …

Read More »

ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯ ಪ್ರವೇಶ ಮಾಡಲ್ಲ ಎಂದ ಸಿಎಂ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಎಸ್‌ಐಟಿ ನಡೆಸುತ್ತಿರುವ ತನಿಖೆಯಲ್ಲಿ ಸರ್ಕಾರ ಯಾವುದೇ ಕಾರಣಕ್ಕೂ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎಸ್‌ಐಟಿ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುತ್ತಿದೆ ಎಂದು ವಿಪಕ್ಷಗಳ ಆರೋಪದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, “ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ …

Read More »

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ನಿಪ್ಪಾಣಿ, ಮೂಡಲಗಿ, ಯರಗಟ್ಟಿ ಹಾಗೂ ಸವದತ್ತಿ ಬೆಳಗಾವಿ ನಗರ ಹಾಗೂ ಗ್ರಾಮೀಣ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ. ಖಾನಾಪುರ ತಾಲ್ಲೂಕಿನಲ್ಲಿ ಮಾತ್ರ ಪಿಯು ಕಾಲೇಜುಗಳಿಗೆ ಬುಧವಾರ (ಜು‌.26) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.     ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ರಜೆಯನ್ನು ಘೋಷಿಸಲಾಗಿರುತ್ತದೆ. ಖಾನಾಪುರ ‌ತಾಲ್ಲೂಕಿನಲ್ಲಿ ಮಾತ್ರ ಶಾಲೆಗಳ ಜತೆಗೆ ಪಿಯು …

Read More »

ಚುನಾವಣಾ ಪ್ರಚಾರದಲ್ಲಿ ತೊಡಗಿದ ಸರ್ಕಾರಿ ಅಧಿಕಾರಿಗಳು

ಬೆಳಗಾವಿ : ಸರ್ಕಾರಿ ಸೇವೆ ಮಾಡುತ್ತ ಜನರ ಸಂಕಷ್ಟಕ್ಕೆ ನಿಲ್ಲಬೇಕಾದ ಅಧಿಕಾರಿಗಳೇ ಚುನಾವಣಾ ಪ್ರಚಾರಕ್ಕೆ ತೊಡಗಿದ್ದು ದುರದೃಷ್ಟಕರ ಸಂಗತಿ. ಜಿಲ್ಲೆಯ ಕೆಲ ಅಧಿಕಾರಿಗಳು ಒಂದು ಪಕ್ಷದ ಮುಖಂಡರಂತೆ ವರ್ತನೆ ಮಾಡುತ್ತಿದ್ದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ಪ್ರಕರಣಗಳು ಸರ್ವೇ ಸಾಮಾನ್ಯ ಆಗಿವೆ. ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಚುನಾವಣಾ ಆಯೋಗದ ಗಮನಕ್ಕೆ ಅಧಿಕಾರಿಗಳ ಕೆಟ್ಟ ವರ್ತನೆ ಗಮನಕ್ಕೆ ಬರದಿರುವುದು ವಿಪರ್ಯಾಸ. ಸರ್ಕಾರಿ …

Read More »

ಬೆಂಗಳೂರಲ್ಲಿ ಇಂದು ಟ್ರಾಫಿಕ್ ಜಾಮ್, ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗ ಸಲಹೆ ನೀಡಿದ ಪೊಲೀಸರು

ಬೆಂಗಳೂರು: ಲೋಕಸಭಾ ಚುನಾವಣೆ 2024 ರ ಮೂರನೇ ಹಂತದ ಕಾರಣ ಮೇ 6 ಮತ್ತು 7 ರಂದು ಮೆಟ್ರೋಪಾಲಿಟನ್ ಪ್ರದೇಶದ ಹಲವಾರು ಸ್ಥಳಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಎಂದು ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆ ನೀಡಿದ್ದಾರೆ. ಮಂಗಳವಾರ ಹೆಚ್ಚಿನ ಸಂಖ್ಯೆಯ ಜನರು ಮತ ಚಲಾಯಿಸಲು ತಮ್ಮ ಊರುಗಳಿಗೆ ಹೋಗುತ್ತಿರುವುದರಿಂದ ಮೆಜೆಸ್ಟಿಕ್ ಸುತ್ತಲೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ ಎಂದು ಸಂಚಾರ ಸಲಹೆಗಾರ ಹೇಳಿದ್ದಾರೆ. ಮೇ 7 ರಂದು ಕರ್ನಾಟಕದ …

Read More »

ದೇವರಹಿಪ್ಪರಗಿ: ಸಾರಿಗೆ ನಿಯಂತ್ರಕರಿಲ್ಲದ ಬಸ್ ನಿಲ್ದಾಣ

ದೇವರಹಿಪ್ಪರಗಿ: ನೂತನವಾಗಿ ನಿರ್ಮಾಣಗೊಂಡ ಬಸ್ ನಿಲ್ದಾಣದಲ್ಲಿ ಸಾರಿಗೆ ನಿಯಂತ್ರಕರಿಲ್ಲದೇ ಕೊಠಡಿ ಬಿಕೋ ಎನ್ನುವಂತಿದ್ದು, ವಿವಿಧೆಡೆ ತೆರಳುವ ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡುವಂತಾಗಿದೆ. ಪಟ್ಟಣ ಹಾಗೂ ತಾಲ್ಲೂಕು ಕೇಂದ್ರ ಸ್ಥಳದ ಬಸ್ ನಿಲ್ದಾಣ ನೂತನವಾಗಿ ನಿರ್ಮಾಣಗೊಂಡು ಕಂಗೊಳಿಸುತ್ತಿದೆ.ಆದರೆ ಅಗತ್ಯ ಸಿಬ್ಬಂದಿಯಿಲ್ಲದೆ ಭಣಗುಡುತ್ತಿದೆ. ಮುಖ್ಯವಾಗಿ ಬಸ್ ನಿಲ್ದಾಣದಲ್ಲಿ ಕಳೆದ ಎರಡು ದಿನಗಳಿಂದ ಸಾರಿಗೆ ನಿಯಂತ್ರಕರು ಇಲ್ಲದೆ ಕೊಠಡಿಯನ್ನು ಮುಚ್ಚಲಾಗಿದೆ. ಬಸ್‌ಗಳ ಮಾಹಿತಿ ತಿಳಿಯಲು ಪ್ರಯಾಣಿಕರು ಪರದಾಡಿ ಇತರರನ್ನು ಕೇಳುವಂತಾಗಿದೆ. ಸ್ಥಳೀಯ ಬಸ್ …

Read More »

ಗಮನ ಸೆಳೆಯುವ ಸಾಂಪ್ರದಾಯಿಕ, ಸಖಿ ಮತಗಟ್ಟೆ

ಗಜೇಂದ್ರಗಡ: ಸಮೀಪದ ರಾಜೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 93ರಲ್ಲಿ ಹಳ್ಳಿಗಾಡಿನ ಲಂಬಾಣಿ ಸಮುದಾಯದ ಜೀವನ ಶೈಲಿಯ ವಿಭಿನ್ನ ಕಲಾಕೃತಿಗಳನ್ನು ಚಿತ್ರಿಸಿ, ಮತಗಟ್ಟೆ ಅಲಂಕರಿಸುವ ಮೂಲಕ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವಿಶೇಷ ಪ್ರಯತ್ನ ಮಾಡಿವೆ. ರಾಜೂರ ಗ್ರಾಮದಲ್ಲಿ ನಾಲ್ಕು ಮತಗಟ್ಟೆಗಳಿದ್ದು, ಅದರಲ್ಲಿ 93ನೇ ಮತಗಟ್ಟೆ ವಿಶೇಷ ಮತಗಟ್ಟೆಯನ್ನಾಗಿ ಗುರುತಿಸಲಾಗಿದ್ದು, ಈ ಮತಗಟ್ಟೆಯಲ್ಲಿ ಲಂಬಾಣಿ ಸಮುದಾಯದ ಜನರು ಹೆಚ್ಚಿರುವ ಕಾರಣ …

Read More »