Breaking News

Monthly Archives: ಮೇ 2024

ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದ ಬಳಿಕ ವಶಪಡಿಸಿಕೊಂಡ ಹಣ ಏನಾಗುತ್ತದೆ?

ಬೆಂಗಳೂರು, ಮೇ 28: ಜಾರಿ ನಿರ್ದೇಶನಾಲಯ (ED) ಆರ್ಥಿಕ ಅಪರಾಧಗಳು, ಮನಿ ಲಾಂಡರಿಂಗ್, ಭ್ರಷ್ಟಾಚಾರ ಇತ್ಯಾದಿಗಳನ್ನು ಒಳಗೊಂಡ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಹಲವು ರಾಜಕಾರಣಿಗಳು ಮತ್ತು ಅಧಿಕಾರಿಗಳ ನಿವೇಶನಗಳ ಮೇಲೆ ಇಡಿ ದಾಳಿ ನಡೆಸಿ ನಗದು ಮತ್ತು ದೋಷಾರೋಪಣೆಯ ದಾಖಲೆಗಳನ್ನು ವಶಪಡಿಸಿಕೊಂಡಿರುವ ಹಲವು ನಿದರ್ಶನಗಳಿವೆ. ಈಗ, ಇಡಿ ವಸೂಲಿ ಮಾಡಿದ ನಗದು ಏನಾಗುತ್ತದೆ ಎಂಬ ಪ್ರಶ್ನೆ ಉದ್ಭವಿಸುತ್ತದೆ. ವರದಿಗಳ ಪ್ರಕಾರ, ತನಿಖಾ ಸಂಸ್ಥೆಯು ಹಣವನ್ನು ವಶಪಡಿಸಿಕೊಳ್ಳಲು ಅಧಿಕಾರವನ್ನು ಹೊಂದಿದೆ. ಆದರೆ …

Read More »

ಆದಾಯ ತೆರಿಗೆ ಪಾವತಿ’ದಾರರೇ ಗಮನಿಸಿ: ಮೇ.31ರೊಳೆಗೆ ‘ಪ್ಯಾನ್’ಗೆ ಆಧಾರ್ ಲಿಂಕ್ ಮಾಡದಿದ್ರೇ, ದುಪ್ಪಟ್ಟು TDS ಫಿಕ್ಸ್

ನವದೆಹಲಿ: ಮೇ 31 ರೊಳಗೆ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವಂತೆ ಆದಾಯ ತೆರಿಗೆ ಇಲಾಖೆ ತೆರಿಗೆದಾರರಿಗೆ ಜ್ಞಾಪನೆ ನೀಡಿದೆ. ಒಂದು ವೇಳೆ ಲಿಂಕ್ ಮಾಡದೇ ಇದ್ದರೇ ದುಪ್ಪಟ್ಟು ಟಿಡಿಎಸ್ ಕಟ್ ಆಗಲಿದೆ ಅಂತ ಎಚ್ಚರಿಸಿದೆ. ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ ಐಟಿ ಇಲಾಖೆ, ಮೂಲದಲ್ಲಿ ಹೆಚ್ಚಿನ ತೆರಿಗೆ ಕಡಿತಗಳನ್ನು (Tax Deductions at Source -TDS) ತಪ್ಪಿಸಲು ಈ ಗಡುವನ್ನು ಪೂರೈಸುವುದು ಮುಖ್ಯ ಎಂದು ಹೇಳಿದೆ. …

Read More »

ಹೆಚ್​​.ಡಿ.ರೇವಣ್ಣಗೆ ಮತ್ತೆ ಸಂಕಷ್ಟ

ಬೆಂಗಳೂರು: ಲೈಂಗಿಕ ಕಿರುಕುಳ ಹಾಗೂ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಜಾಮೀನು ಪಡೆದು ಟೆಂಪಲ್​​ ರನ್​​ ಮಾಡುತ್ತಿರುವ ಮಾಜಿ ಸಚಿವ ಹೆಚ್​​.ಡಿ.ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಕಿಡ್​​​ನ್ಯಾಪ್​​ ಕೇಸ್​​​ ಎರಡಕ್ಕೂ ಸಂಬಂಧಿಸಿ ರೇವಣ್ಣಗೆ ಈಗಾಗಲೇ ಸೆಷೆನ್ಸ್​​ ಕೋರ್ಟ್​​​​​ ಜಾಮೀನು ಮಂಜೂರು ಮಾಡಿತ್ತು.   ಈ ಜಾಮೀನನ್ನು ರದ್ದುಗೊಳಿಸುವಂತೆ ಎಸ್​​​ಐಟಿ ಇಂದು ಹೈಕೋರ್ಟ್​​​​​​​ಗೆ ಅರ್ಜಿ ಸಲ್ಲಿಸಿದೆ. ಎಸ್​​ಐಟಿ ವಿಚಾರಣೆಯನ್ನು ಹೈಕೋರ್ಟ್​​ ಮೇ.31ರಂದು ಮಾಡುವ ಸಾಧ್ಯತೆ ಇದೆ.  

Read More »

ಕರ್ನಾಟಕ ಈಗ ಕೂಲ್.. ಕೂಲ್; ಈ ಎಲ್ಲಾ ಜಿಲ್ಲೆಗಳಲ್ಲಿ ಭರ್ಜರಿ ಮಳೆ.!

ಏಪ್ರಿಲ್ 2024ರಲ್ಲಿ ಒಂದೊಂದು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಈ ಬೆನ್ನಲ್ಲೇ ಇದೀಗ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ & ಬೆಂಗಳೂರು ನಗರವು ಸೇರಿ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗೆ ಮಳೆಯ ಸಿಂಚನ ಆಗಲಿದೆ.ಆದರೂ ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ & ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಸದ್ಯ ಸಿಲಿಕಾನ್​ ಸಿಟಿ ಬೆಂಗಳೂರು ಸೇರಿದಂತೆ, ಕರ್ನಾಟಕದ …

Read More »

ಟಿಕೆಟ್‌ ಕೇಳೋದು ತಪ್ಪಾ? ಕಮಲವೇ ಉಸಿರು ಎಂದವರಿಗೆ ಪಕ್ಷದಿಂದ ಗೇಟ್‌ಪಾಸ್‌: ಬಿಜೆಪಿಯಲ್ಲಿ ಏನಾಗುತ್ತಿದೆ?

ಬೆಂಗಳೂರು, ಮೇ 28: ಬಿಜೆಪಿಯೇ ಉಸಿರು ಎಂಬ ಕಮಲ ಕಲಿಗಳನ್ನ ಪಕ್ಷದಿಂದ ಹೊರ ಹಾಕಿದ್ದಾರೆ. ಬಿಜೆಪಿಯ ಶಿಸ್ತಿನ ಸಿಪಾಯಿಗಳು ಟಿಕೆಟ್‌ ಕೇಳಿದ್ದಕ್ಕೆ ಪಕ್ಷ ಅವರನ್ನ ತನ್ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ. ಬಿಜೆಪಿ ಪಕ್ಷ ಕಟ್ಟಿದವರಲ್ಲಿ ಒಬ್ಬರಾದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್‌ ಈಶ್ವರಪ್ಪ ಹಾಗೂ ಹಿಂದು ಹುಲಿ ರಘುಪತಿ ಭಟ್‌ ಅವರನ್ನ ಪಕ್ಷ ಉಚ್ಚಾಟಿಸಿದೆ. ಹೌದು, ಟಿಕೆಟ್‌ ಕೇಳೋದು ತಪ್ಪಾ? ಈ ಪ್ರಶ್ನೆಗೆ ಉತ್ತರ ಮಾತ್ರವಿಲ್ಲ. ಪಕ್ಷವೇ ಉಸಿರು, ಬಿಜೆಪಿಯೇ …

Read More »

ದಸರಾ ಆನೆ ಅರ್ಜುನ’ನ ಸಮಾಧಿ ವಿರೂಪಗೊಳಿಸಿದವರ ವಿರುದ್ಧ ‘FIR ದಾಖಲು’

ಹಾಸನ: ಕಾಡಾನೆಯನ್ನು ಸೆರೆ ಹಿಡಿಯೋ ಕಾರ್ಯಾಚರಣೆಯ ವೇಳೆ ಕಾದಾಟದಲ್ಲಿ ದಸಹಾ ಆನೆ ಅರ್ಜುನ ಸಾವನ್ನಪ್ಪಿತ್ತು. ಈ ಆನೆಯ ಸಮಾಧಿಯನ್ನು ಅದೇ ಸ್ಥಳದಲ್ಲಿ ಮಾಡಲಾಗಿತ್ತು. ಇಂತಹ ಸಮಾಧಿಯನ್ನು ಕೆಲ ಕಿಡಿಗೇಡಿಗಳು ವಿರೋಪಗೊಳಿಸಿದ್ದರು. ಅಂತವರ ವಿರುದ್ಧ ಈಗ ಎಫ್‌ಐಆರ್ ದಾಖಲಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ವಲಯ ಅರಣ್ಯದಲ್ಲಿ ದಸರಾ ಆನೆ ಅರ್ಜುನನ್ನು ಸಮಾಧಿ ಮಾಡಲಾಗಿತ್ತು. ಈ ಸಮಾಧಿಯನ್ನು ತಾವು ದರ್ಶನ್ ಅಭಿಮಾನಿ ಎಂದು ಹೇಳಿಕೊಂಡು ಸ್ಮಾರಕ ನಿರ್ಮಾಣಕ್ಕೆ ಮುಂದಾಗಿದ್ದರು. ಇದಕ್ಕಾಗಿ …

Read More »

ಪೋಲಿಸ್ ಠಾಣೆಯಲ್ಲಿ ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ ಸಿಬ್ಬಂದಿಗಳು!

ಬೆಳಗಾವಿ : ಇತ್ತೀಚಿಗೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸರಕಾರಿ ಐಬಿಯಲ್ಲಿ ಗುತ್ತಿಗೆದಾರರ ಜೊತೆ ಸೇರಿ ಇಂಜಿನಿಯರ್ಗಳು ಎಣ್ಣೆ ಪಾರ್ಟಿ ಮಾಡಿದರು. ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳು ರಾತ್ರಿಯಿಡಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಠಾಣೆಯಲ್ಲಿ ನಡೆದಿರುವ ಎಣ್ಣೆ ಪಾರ್ಟಿಯ ಫೋಟೋಗಳು ಇದೀಗ ವೈರಲ್ ಆಗಿವೆ. ಟೇಬಲ್ ಮೇಲೆ ಮಧ್ಯದ ಖಾಲಿ ಬಾಟಲಿ ಇರುವ ಫೋಟೋ …

Read More »

ಚಿತ್ರದುರ್ಗ ಲೋಕಸಭೆ ಚುನಾವಣೆ ಫಲಿತಾಂಶ 2024: ಯಾರ ಪಾಲಿಗೆ ಕೋಟೆನಾಡಿನ ಗೆಲುವು..?

ಚಿತ್ರದುರ್ಗ, ಮೇ 28: ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ ಒಂದು ವಾರ ಮಾತ್ರ ಬಾಕಿ ಇದ್ದು, ಇದೀಗ ಮತದಾರರ ಚಿತ್ತ ಜೂನ್ ನಾಲ್ಕರತ್ತ ಸಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಕೋಟೆನಾಡು ಚಿತ್ರದುರ್ಗ ಯಾರ ಕೈ ಸೇರಲಿದೆ ಎನ್ನುವ ಕೂತುಹಲ ಕೆರಳಿಸಿದೆ. ಜೂನ್ 4ರಂದು ಫಲಿತಾಂಶ ಹೊರಬೀಳಲಿದ್ದು ಕಾಂಗ್ರೆಸ್ ಮತ್ತು ಎನ್.ಡಿ.ಎ ಮೈತ್ರಿ ಅಭ್ಯರ್ಥಿಗಳ ನಡುವಿನ ಗೆಲುವಿನ ಲೆಕ್ಕಾಚಾರ ಜೋರಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರ ಪರಿಶಿಷ್ಟ ಜಾತಿಯ ಮೀಸಲು …

Read More »

ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ನೀರಿನ ಹರಿವನ್ನು ಪರಿಶೀಲಿಸಿದ ರಾಹುಲ್ ಜಾರಕಿಹೊಳಿ

ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ ಕಾಲುವೆಗೆ ಹರಿಬಿಡಲಾಗುತ್ತಿರುವ ನೀರಿನ ಹರಿವನ್ನು ಇಂದು ರಾಯಬಾಗ ತಾಲೂಕಿನ ಮುಗಳಕೋಡ ಚೌಕಿ ಬಳಿ ಪರಿಶೀಲಿಸಿದರು. ಪ್ರಸ್ತುತ ಬೆಳಗಾವಿ ಹಾಗೂ ಬಾಗಲಕೋಟೆ, ಜಿಲ್ಲೆಯ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದರಿಂದ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಶ್ರೀ ಸತೀಶ ಜಾರಕಿಹೊಳಿಯವರ ನಿರ್ದೇಶನದ ಮೇರೆಗೆ , ಮೇ 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರನ್ನು ಹಿಡಕಲ್ …

Read More »

ಕನ್ಯಾಕುಮಾರಿಯಲ್ಲಿ ಪ್ರಚಾರ ಮುಗಿಯುತ್ತಿದ್ದಂತೆ ಕಡಲ ಮಧ್ಯೆ ‘ಮೋದಿ ಧ್ಯಾನ’

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೇ 30 ರಂದು ಕನ್ಯಾಕುಮಾರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮೇ 31 ರಂದು ವಿವೇಕಾನಂದ ರಾಕ್ ಮೆಮೋರಿಯಲ್ ನಲ್ಲಿ ಒಂದು ದಿನ ಧ್ಯಾನ ಮಾಡಬಹುದು. ಜೂನ್ 1 ರಂದು ಪ್ರಧಾನಿ ಧ್ಯಾನ ಮಾಡಲು ನಿರ್ಧರಿಸಿದರೆ, ಅವರು ಕನ್ಯಾಕುಮಾರಿಯಿಂದ ಹೊರಡುವ ಮೊದಲು ಎರಡನೇ ದಿನ ವಿವೇಕಾನಂದ ರಾಕ್ ಮೆಮೋರಿಯಲ್ನಲ್ಲಿ ಉಳಿಯುತ್ತಾರೆ ಎಂದು ತಿಳಿದು ಬಂದಿದೆ. ಅವರ ಭೇಟಿಗೂ ಪಕ್ಷಕ್ಕೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮಕ್ಕೂ …

Read More »