Breaking News

Daily Archives: ಜೂನ್ 3, 2024

ನನಗೆ ಯಾವ ಬೆದರಿಕೆನೂ ಇಲ್ಲ, ನಾಗೇಂದ್ರ ರಾಜೀನಾಮೆ ನಾವು ಕೇಳಿಲ್ಲ: ಸಿಎಂ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ಆಗಿರುವ ಹಗರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ (Minister Nagendra) ರಾಜೀನಾಮೆ ನಾವು ಕೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಆಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಹಾಲಿ ಸಚಿವ ನಾಗೇಂದ್ರ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಯಾವ ಬೆದರಿಕೆನೂ ಇಲ್ಲ, ನಾಗೇಂದ್ರ ರಾಜೀನಾಮೆ ನಾವು ಕೇಳಿಲ್ಲ. ಎಸ್‌ಐಟಿ ವರದಿ ಇನ್ನೂ ಬಂದಿಲ್ಲ. ಎಸ್‌ಐಟಿ ರಚನೆ ಮೊನ್ನೆ ಆಗಿರುವುದಲ್ವೇನ್ರಿ ? ಅವರು …

Read More »

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲ್ಲೋದು ನಾವೇ: ಡಿಸಿಎಂ ಡಿಕೆಶಿ

ರಾಮನಗರ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಸಹೋದರ ಡಿ.ಕೆ ಸುರೇಶ್ ಪರವಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆಲುವಿನ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂಬುದಾಗಿ ಹೇಳಿದರು. ಈ ಮೂಲಕ ಸಹೋದರ ಡಿ.ಕೆ ಸುರೇಶ್ ಗೆಲ್ಲುವ ಬಗ್ಗೆ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. “ಮೋದಿ ಅವರ ನೂರು ದಿನಗಳ …

Read More »

ಚನ್ನಮ್ಮನ ಕಿತ್ತೂರು | ಶೌಚಕ್ಕೆ ವಿದ್ಯಾರ್ಥಿನಿಯರ ಪರದಾಟ

ಚನ್ನಮ್ಮನ ಕಿತ್ತೂರು: ಗ್ರಾಮಾಂತರ ಪ್ರದೇಶದ ಪ್ರಥಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಎಂಬ ಹೆಗ್ಗಳಿಕೆ ಹೊಂದಿರುವ ಇಲ್ಲಿನ ಸರೋಜಾತಾಯಿ ಮಾರಿಹಾಳ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯು ವಿದ್ಯಾರ್ಥಿನಿಯರ ಸಂಖ್ಯೆಗೆ ಅಗತ್ಯವಾಗಿರುವ ಮೂತ್ರಾಲಯ ವ್ಯವಸ್ಥೆಯನ್ನು ಹೊಂದಿಲ್ಲ. ಹೀಗಾಗಿ ಅವರು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ‘ವರ್ಷದಿಂದ ವರ್ಷಕ್ಕೆ ಏರುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಸರ್ಕಾರ ಮೂತ್ರಾಲಯ ಸೌಲಭ್ಯ ಕಲ್ಪಿಸಬೇಕಿತ್ತು. ಈ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಗಮನ ಹರಿಸಲು ಹೋಗಿಲ್ಲ’ ಎಂದು ದೂರುತ್ತಾರೆ ಪಾಲಕರು. ‘ಬಾಲಕಿಯರ ಪ್ರೌಢಶಾಲೆಯ ಬಳಿಯೇ …

Read More »

ವಿಜಯನಗರ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ವರುಣ; ಹೊಸಪೇಟೆಯಲ್ಲಿ 8.6 ಸೆಂ.ಮೀ.ಮಳೆ

ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆ ಸುರಿಯಿತು. ಹೊಸಪೇಟೆ ಪ್ರವಾಸಿ ಮಂದಿರದ ಬಳಿ 8.64 ಸೆಂ.ಮೀ. ಮಳೆಯಾಗಿದೆ. ಗುಡುಗು, ಸಿಡಿಲಿನೊಂದಿಗೆ ರಾತ್ರಿ 1 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸು ಸಾಮಾನ್ಯವಾಗಿತ್ತು. ಹೊಸಪೇಟೆ ನಗರದಲ್ಲಿ ಸುಮಾರು ಮೂರು ಗಂಟೆ ಸಾಧಾರಣ ಮಳೆ ಸುರಿಯಿತು. ನಗರದ 18ನೇ ವಾರ್ಡ್‌ನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ, ನೀಲಮ್ಮ ಚಿದಾನಂದಪ್ಪ ಎಂಬುವವರು ತಮ್ಮ ಮನೆಯೊಳಗೆ …

Read More »

ವಿಜಯನಗರ ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿದ ವರುಣ; ಹೊಸಪೇಟೆಯಲ್ಲಿ 8.6 ಸೆಂ.ಮೀ.ಮಳೆ

ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿ ಉತ್ತಮ ಮಳೆ ಸುರಿಯಿತು. ಹೊಸಪೇಟೆ ಪ್ರವಾಸಿ ಮಂದಿರದ ಬಳಿ 8.64 ಸೆಂ.ಮೀ. ಮಳೆಯಾಗಿದೆ. ಗುಡುಗು, ಸಿಡಿಲಿನೊಂದಿಗೆ ರಾತ್ರಿ 1 ಗಂಟೆ ಸುಮಾರಿಗೆ ಮಳೆ ಆರಂಭವಾಯಿತು. ಮಳೆಯ ಬಿರುಸು ಸಾಮಾನ್ಯವಾಗಿತ್ತು. ಹೊಸಪೇಟೆ ನಗರದಲ್ಲಿ ಸುಮಾರು ಮೂರು ಗಂಟೆ ಸಾಧಾರಣ ಮಳೆ ಸುರಿಯಿತು. ನಗರದ 18ನೇ ವಾರ್ಡ್‌ನಲ್ಲಿ ಕೆಲವು ಮನೆಗಳಿಗೆ ನೀರು ನುಗ್ಗಿದೆ, ನೀಲಮ್ಮ ಚಿದಾನಂದಪ್ಪ ಎಂಬುವವರು ತಮ್ಮ ಮನೆಯೊಳಗೆ …

Read More »

ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಿಂಕ್ ಸಮವಸ್ತ್ರ ಧರಿಸಿದ ವ್ಯಕ್ತಿ ಸಿಕ್ಸರ್ ಅನ್ನು ಬೌಲರ್ ತಲೆಯ ಮೇಲೆ ಹೊಡೆದು ನಂತರದ …

Read More »

ಎಕ್ಸಿಟ್‌ ಪೋಲ್‌ ಬಳಿಕ ಸೋನಿಯಾ ಗಾಂಧಿ ಮೊದಲ ಪ್ರತಿಕ್ರಿಯೆ?

18ನೇ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಗಿದಿದೆ. ಚುನಾವಣೋತ್ತರ ಸಮೀಕ್ಷೆಗಳು ಸಹ ಹೊರ ಬಿದ್ದಿವೆ. ಈ ಬಗ್ಗೆ ಹಲವು ಪಕ್ಷಗಳು ಮುಖಂಡರು ತಮ್ಮ ತಮ್ಮ ಅಭಿಪ್ರಾಯವನ್ನು ನೀಡಿದ್ದಾರೆ. ಆದರೆ ಈ ಬಗ್ಗೆ ಸೋನಿಯಾ ಗಾಂಧಿ ಮಾತ್ರ ಮೌನಕ್ಕೆ ಶರಣಾಗಿದ್ದಾರು. ಅವರು ಸಹ ಸೋಮವಾರ ಈ ಬಗ್ಗೆ ತಮ್ಮ ಮಾತುಗಳನ್ನು ತಿಳಿಸಿದ್ದಾರೆ. ಹಲವು ಸಂಸ್ಥೆಗಳು ನಡೆಸಿರುವ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ ಹಿನ್ನಡೆ ಅನುಭಸಿದೆ ಎಂದು ತಿಳಿಸಿವೆ. ಅಲ್ಲದೆ ಬಿಜೆಪಿ ಹ್ಯಾಟ್ರಿಕ್‌ ಸಾಧನೆ …

Read More »

ಎಂ.ಪಿ. ರೇಣುಕಾಚಾರ್ಯಗೆ ಕೊಲೆ ಬೆದರಿಕೆ ಕರೆ!

ದಾವಣಗೆರೆ : ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ದುಷ್ಕರ್ಮಿಗಳು ಕರೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಇದ್ದಾಗಲೇ ಎಂ.ಪಿ.ರೇಣುಕಾಚಾರ್ಯಗೆ ಫೋನ್‌ ಕರೆ ಮಾಡಿರುವ ಅಪರಿಚಿತರು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಕೂಡಲೇ ರೇಣುಕಾಚಾರ್ಯ ಅವರು ಹೊನ್ನಾಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Read More »

ಕೊಪ್ಪಳ ಜಿಲ್ಲೆಯಾದ್ಯಂತ ಉತ್ತಮ ಮಳೆ, ತುಂಬಿ ಹರಿದ ಹಳ್ಳಕೊಳ್ಳ

ಕೊಪ್ಪಳ: ಭಾನುವಾರ ಮಧ್ಯರಾತ್ರಿಯಿಂದ ಸೋಮವಾರದ ಬೆಳಗಿನ ಜಾವದ ತನಕ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಕುಷ್ಟಗಿ ತಾಲ್ಲೂಕಿನ ಹೆಸರೂರು ಬಳಿಯ ಚೆಕ್ ಡ್ಯಾಮ್ ತುಂಬಿದ್ದು, ಇದೇ ತಾಲ್ಲೂಕಿನ ತಾವರಗೇರಾ ನಂದಾಪೂರ ರಸ್ತೆಯಲ್ಲಿ ಕೆರೆಯ ನೀರು ಹರಿದಿದೆ. ಕೊಪ್ಪಳ ತಾಲ್ಲೂಕಿನ ಅಳವಂಡಿ ಸಮೀಪದ ಘಟ್ಟಿರಡ್ಡಿಹಾಳ ಗ್ರಾಮದಿಂದ ಕವಲೂರು ಸಂಪರ್ಕಿಸುವ ರಸ್ತೆಯ ಮಧ್ಯದಲ್ಲಿರುವ ಹಿರೇಹಳ್ಳವೂ ತುಂಬಿ ಹರಿದಿದೆ. ಕಳೆದ ವರ್ಷ ಮಳೆಯ ದರ್ಶನವಿಲ್ಲದೆ ಪರದಾಡಿದ್ದ ಜನರಿಗೆ ಈ ಬಾರಿ ಮೇಲಿಂದ ಮೇಲೆ …

Read More »

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿ: ಇಬ್ಬರು ದುರ್ಮರಣ

ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನಪ್ಪಿರುವ ಘಟನೆ ಶಹಾಪುರ ಹತ್ತಿಗೂಡು ಬ್ರಿಡ್ಜ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಕಲಬುರಗಿಯಿಂದ ಬೆಂಗಳೂರಿಗೆ ಹೊರಟಿದ್ದ ಬಸ್ ಶಹಾಪುರ ಮಾರ್ಗವಾಗಿ ತಾಲೂಕಿನ ಹತ್ತಿಗುಡೂರು ಬ್ರಿಡ್ಜ್ ಬಳಿ ಸಂಚರಿಸುವಾಗ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬಸ್ ನಲ್ಲಿದ್ದ 37 ಪ್ರಯಾಣಿಕರ ಪೈಕಿ ಕಲಬುರಗಿಯ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದಾರೆ. ಭಾಗಲಕೋಟ ಭಾಗದ ಬಸ್ ಚಾಲಕ ಯಾದಗಿರಿ, ಕಲಬುರಗಿ, ಶಹಾಪುರ ರಸ್ತೆ …

Read More »