Breaking News

Daily Archives: ಜೂನ್ 7, 2024

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಜೂನ್ 10 ರವರೆಗೆ ವಿಸ್ತರಣೆ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಅದನ್ನು ವಿಡಿಯೋ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿಯನ್ನು ಗುರುವಾರ ಕೋರ್ಟ್ ಜೂನ್ 10ರ ವರೆಗೆ ವಿಸ್ತರಿಸಿ ಆದೇಶಿಸಿದೆ. ಪ್ರಜ್ವಲ್‌ ರೇವಣ್ಣ ಅವರ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಆರೋಪಿಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಮುಂದೆ ಹಾಜರುಪಡಿಸಿ, ಹೆಚ್ಚಿನ ತನಿಖೆಗಾಗಿ …

Read More »

ಮೋದಿ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ ಪರ್ಯಾಯ ಸ್ಥಿರ ಸರ್ಕಾರ ರಚನೆ ಯತ್ನ ಮುಂದುವರೆಸಿದ ಇಂಡಿಯಾ ಬ್ಲಾಕ್!

ನವದೆಹಲಿ: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ) ಶುಕ್ರವಾರ ಹೊಸ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದರೂ, ಬಿಜೆಪಿಗೆ ಪರ್ಯಾಯವಾಗಿ ಸ್ಥಿರ ಸರ್ಕಾರ ರಚನೆಗೆ ಪ್ರತಿಪಕ್ಷಗಳ ಮೈತ್ರಿಕೂಟ ತನ್ನ ಪ್ರಯತ್ನ ಮುಂದುವರಿಸುವುದಾಗಿ ಹೇಳಿದೆ. ಈ ಸಂಬಂಧ ಟಿಎಂಸಿ ಸಂಸದರಾದ ಅಭಿಷೇಕ್ ಬ್ಯಾನರ್ಜಿ ಮತ್ತು ಡೆರೆಕ್ ಒ’ಬ್ರಿಯಾನ್ ಅವರು ಮುಂಬೈನಲ್ಲಿ ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತು ದೆಹಲಿಯಲ್ಲಿ ಸಮಾಜವಾದಿ ಪಕ್ಷದ(ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಗುರುವಾರ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ …

Read More »

ಹುಬ್ಬಳ್ಳಿ: ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್‌

ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಹಾಗೂ ಸೊಳ್ಳೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿ ಫೋಗಿಂಗ ಹಾಗೂ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಾಲಿಕೆ ಆರೋಗ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ ಮುಂದಾಳತ್ವದಲ್ಲಿ ಆರೋಗ್ಯ ನಿರೀಕ್ಷಕರ, ಪೌರಕಾರ್ಮಿಕರ ಸಹಾಯದಿಂದ ಕ್ರಿಮಿನಾಶಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ ಎಂದು ಪಾಲಿಕೆಯ …

Read More »

ಕುಂದಗೋಳ : ಮೂರು ಶಾಲೆಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿ

ಕುಂದಗೋಳ: ತಾಲ್ಲೂಕಿನ ಮೂರು ಶಾಲೆಗಳು ಹುಬ್ಬಳ್ಳಿ-ಧಾರವಾಡ ನಾಗರಿಕ ಪರಿಸರ ಸಮಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಧಾರವಾಡ ವತಿಯಿಂದ 2023-2024ನೇ ಸಾಲಿನ ‘ಪರಿಸರ ಮಿತ್ರ ಶಾಲಾ ಪ್ರಶಸ್ತಿ’ಗೆ ಭಾಜನವಾಗಿವೆ. ‘ಕಮಡೊಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂದಗೋಳ ಪಟ್ಟಣದ ಬಿ.ವೈ.ಪಾಟೀಲ ಹಿರಿಯ ಪ್ರಾಥಮಿಕ ಶಾಲೆ ಹಾಗೂ ವಿವೇಕಾನಂದ ಇಂಗ್ಲಿಷ್‌ ಮಾಧ್ಯಮ ಶಾಲೆಗಳು ಈ ವರ್ಷದ ಪ್ರಶಸ್ತಿಗೆ ಆಯ್ಕೆಯಾಗಿವೆ. ಶಾಲೆಯಲ್ಲಿ ಇಕೋ ಕ್ಲಬ್ ರಚನೆ ಮಾಡುವುದು, ಶಾಲಾ ಆವರಣದಲ್ಲಿ ಸಸ್ಯ ಬೆಳೆಸುವಿಕೆಯಲ್ಲಿ …

Read More »

ಸರಗಳ್ಳರ ಬಂಧನ: ಚಿನ್ನಾಭರಣ ವಶ

ರಾಯಬಾಗ: ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಅಪರಾಧ ಪತ್ತೆ ವಿಭಾಗದ ಪೊಲೀಸರು ಬಂಧಿಸಿ, ₹2.25 ಲಕ್ಷ ಮೌಲ್ಯದ 3.75 ಗ್ರಾಂ ತೂಕದ ಚಿನ್ನಾಭರಣ ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಭೀಮ ನಗರ ನಿವಾಸಿಗಳಾದ ಸದ್ದಾಂ ಮೆಹಬೂಬ್ ಅವಟಿ (24), ಮಹಮ್ಮದ್ ಅಲಿ ಸಿರಾಜ ಡಾಂಗೆ (24) ಬಂಧಿತರು.   ಮೇ28ರಂದು ಚಿಂಚಲಿ ರಸ್ತೆಯ ನಿವಾಸಿ ಸುನೀತಾ ಅಪ್ಪಾಸಾಬ ಪೂಜೇರಿ ಅವರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ …

Read More »

ಎಂ.ಕೆ.ಹುಬ್ಬಳ್ಳಿ| ಭಾರಿ ಮಳೆಗೆ ರಸ್ತೆ ಜಲಾವೃತ: ಮನೆಗಳಿಗೆ ನುಗ್ಗಿದ ನೀರು

ಎಂ.ಕೆ.ಹುಬ್ಬಳ್ಳಿ: ಪಟ್ಟಣದಲ್ಲಿ ಶುಕ್ರವಾರ ಉತ್ತಮ ಮಳೆಯಾಗಿದೆ. ಮಳೆ ರಭಸಕ್ಕೆ ಚರಂಡಿಗಳು ತುಂಬಿಕೊಂಡು ನೀರು, ಚರಂಡಿ ತ್ಯಾಜ್ಯವು ರಸ್ತೆಗಳಲ್ಲಿ ಹರಿಯಿತು. ರಸ್ತೆ ಪಕ್ಕದಲ್ಲಿದ್ದ ಮನೆಗಳಿಗೂ ನೀರು ನುಗ್ಗಿದ್ದರಿಂದ ನಿವಾಸಿಗಳು ಪರದಾಡುವಂತಾಯಿತು. ಹೆದ್ದಾರಿಯ ಕೆಳಸೇತುವೆ, ಪಟ್ಟಣದ ಒಳ ಮುಖ್ಯರಸ್ತೆ ಜಲಾವೃತಗೊಂಡಿದ್ದವು. ಇದರಿಂದ ವಾಹನ ಸವಾರರು ತೊಂದರೆ ಅನುಭವಿಸುವಂತಾಯಿತು. ‘ಪ್ರತಿ ಬಾರಿ ಜೋರು ಮಳೆಯಾದಾಗ ರಸ್ತೆಗಳಲ್ಲಿ ನೀರು ತುಂಬಿಹರಿದು ಸಾಕಷ್ಟು ಸಮಸ್ಯೆ ಸೃಷ್ಟಿಯಾಗುತ್ತದೆ. ಪಟ್ಟಣ ಪಂಚಾಯ್ತಿಯು ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಪರಿಹರಿಸಬೇಕು’ ಎಂದು ನಿವಾಸಿಗಳು …

Read More »

ಅಕ್ಷರ ದಾಸೋಹ ಅಧಿಕಾರಿ ಆತ್ಮಹತ್ಯೆಗೆ ಯತ್ನ

ಲಿಂಗಸೂಗೂರು: ತಾಲೂಕಿನ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಮೌನೇಶ ಕಂಬಾರ್ ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ನಿನ್ನೆ ರಜೆ ಮಾಡಿದ ಅವರು ನಿದ್ರೆ ಮಾತ್ರೆ ಸೇವಿಸಿದ್ದಾರೆ. ಪಟ್ಟಣದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಗೆ ಕರೆದೊಯ್ಯಲಾಗಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Read More »

ಮಸೀದಿಗಳಾಗಿ ಮಾರ್ಪಾಡಾದ ದೇವಾಲಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ: ಪೇಜಾವರ ಶ್ರೀ

ಬೆಳಗಾವಿ: ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳಾಗಿ ಮಾರ್ಪಾಡು ಮಾಡಲಾದ ಕಾಶಿ ದೇವಾಲಯಗಳನ್ನು ಮರಳಿ ಪಡೆಯಲು ಕಾನೂನಾತ್ಮಕ ಹೋರಾಟ ಮಾಡಲಾಗುತ್ತಿದೆ ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು ಬೀದಿಯಲ್ಲಿ ಹೋರಾಡುವುದಕ್ಕಿಂತ ಕಾನೂನು ಹೋರಾಟ ಉತ್ತಮ ಎಂದು ನ್ಯಾಯಾಲಯಗಳು ಅಭಿಪ್ರಾಯಪಟ್ಟಿರುವ ಕಾರಣ ಅದನ್ನು ಅನುಸರಿಸಿದ್ದೇವೆ ಎಂದರು. ದೇವಾಲಯಗಳನ್ನು ಹಿಂಪಡೆಯುವ ನಮ್ಮ ಹೋರಾಟ ಎಲ್ಲ ರೀತಿಯಿಂದ ಸಮರ್ಥನೀಯ ಎಂದು ಅವರು ಈ ಹಿಂದೆ ನಮಗೆ ಆದ …

Read More »

ಬೈಕ್ ಗೆ ಡಿಕ್ಕಿ ಹೊಡೆದು ಸಾರಿಗೆ ಬಸ್ ಪಲ್ಟಿ: ಬೈಕ್ ಸವಾರ ದುರ್ಮರಣ

ಬೆಳಗಾವಿ: ಬೆಳಗಾವಿ – ಗೋಕಾಕ ರಾಜ್ಯ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದ ಸಾರಿಗೆ ಬಸ್ ಪಲ್ಟಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಶುಕ್ರವಾರ ತಾಲೂಕಿನ ಖನಗಾಂವ ಕೆ.ಎಚ್. ಗ್ರಾಮದ ಬಳಿ ಸಂಭವಿಸಿದೆ. ತಾಲೂಕಿನ ಸುಳೇಭಾವಿ ಗ್ರಾಮದ ವಿಠ್ಠಲ ದತ್ತಾ ಲೋಕರೆ (29) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.   ಬೆಳಗಾವಿಯಿಂದ ಗೋಕಾಕ ಕಡೆಗೆ ಹೊರಟಿದ್ದ ಸಾರಿಗೆ ಬಸ್ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ …

Read More »

ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ : ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು …

Read More »